- Saturday
- September 12th, 2026
ದ.ಕ.ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 08257-233527 ಫೋನ್ ಮಾಡಬಹುದು.
ಕಳೆದ ಎರಡು ವರ್ಷಗಳ ಹಿಂದೆ ಕೊಡಗು ಹಾಗೂ ಜೋಡುಪಾಲದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಭೂಕುಸಿತಕ್ಕೆ ನಿರಾಶ್ರಿತರಾದ ನೆರೆ ಸಂತ್ರಸ್ತರಿಗೆ ಪ್ರಾಕೃತಿಕ ವಿಕೋಪದಡಿಯಲ್ಲಿ 800 ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಕಳೆದ ಬಾರಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಹಣವನ್ನು ಬಿಡುಗಡೆ ಮಾಡಿ ಕಾಮಗಾರಿಗೆ ವೇಗದ ಚಾಲನೆ ನೀಡಿದರು .ಅದರ ಪರಿಣಾಮವಾಗಿ ಕೊಡಗಿನ ಸೋಮವಾರಪೇಟೆ...
ಎಂ ಎಸ್ ಎಂ ಇ ಸೂಕ್ಷ್ಮ ಸಣ್ಣ ಮಧ್ಯಮ ಉದ್ಯಮಗಳಿಗೆ ಕೇಂದ್ರ ಸರ್ಕಾರದ ಕರೋನಾ ಪರಿಹಾರ ಯೋಜನೆಯಡಿ ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಗಾರ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಇಂದುನಡೆಯಿತು. ಕಾರ್ಯಗಾರದ ನೇತೃತ್ವವನ್ನು ಎಂಬಿ ಫೌಂಡೇಶನ್ ಅಧ್ಯಕ್ಷ ಎಂಬಿ ಸದಾಶಿವ ವಹಿಸಿದ್ದರು. ಸುಳ್ಯ ಕಾರ್ಪೊರೇಷನ್ ಬ್ಯಾಂಕ್ ,ಬ್ಯಾಂಕ್ ಆಫ್ ಬರೋಡ, ಫೆಡರಲ್ ಬ್ಯಾಂಕ್,...
ಸುಬ್ರಹ್ಮಣ್ಯ ಮತ್ತು ಕಡಬದಲ್ಲಿರುವ ಆರೆಂಜ್ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಗ್ರಾಹಕರು ಖರೀದಿಸುವ ವಸ್ತುಗಳ ಜತೆಗೆ ಉಚಿತವಾಗಿ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ನೀಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.
ಬಹುಕಾಲದ ನಿರೀಕ್ಷೆಯಲ್ಲಿರುವ ಸಂಪಾಜೆ ಗ್ರಾಮ ಪಂಚಾಯತ್ ಘನತ್ಯಾಜ್ಯ ಘಟಕದ ಬೇಡಿಕೆ ಸಾರ್ವಜನಿಕರಲ್ಲಿದ್ದು ಇದೀಗ ಇಂದು ಸ್ಥಳ ಪರಿಶೀಲನೆ ಮಾಡಲು ಅರಣ್ಯ ಸಂರಕ್ಷಣಾಧಿಕಾರಿ ಕರಿಕಲನ್ ಸಂಪಾಜೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆಯನ್ನು ನಡೆಸಿ ಬೇಡಿಕೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳ ಒದಗಿಸಲು...
ಕೊಡಿಯಾಲಬೈಲಿಂದ ಕಂದಡ್ಕ ಹಾಗೂ ಉಬರಡ್ಕಮಿತ್ತೂರು ವರೆಗಿನ ಹೆಚ್ ಟಿ ಲೈನ್ ಕ್ಲಿಯರೆನ್ಸ್ ಮೇ. ೩೧ ರಂದು ನಡೆಯಿತು. ಸುಮಾರು ೨೫ ಕ್ಕೂ ಹೆಚ್ಚೂ ಬಳಕೆದಾರರು ಭಾಗವಹಿಸಿ ಮೆಸ್ಕಾಂ ಜೊತೆ ಕೈ ಜೋಡಿಸಿದರು. ಈ ಪ್ರದೇಶದಲ್ಲಿ ಹಾದು ಹೋಗುವ ಸುಬ್ರಹ್ಮಣ್ಯ ಮತ್ತು ಕೇನ್ಯ ಪೀಡರ್ ನ ಲೈನ್ ತಾಗುವ ಗೆಲ್ಲುಗಳನ್ನು ಕಡಿದು ಸ್ವಚ್ಚಗೊಳಸಿದರು. ಉಬರಡ್ಕದ ಗ್ರಾಮಸ್ಥರು ಪ್ರತಿ...
ರಾಜ್ಯ ಸರಕಾರ ಕೊರೊನಾ ಸೋಂಕು ಹರಡುತ್ತಿರುವ ಬೆನ್ನಲ್ಲೇ ಶಾಲೆಗಳನ್ನು ಆರಂಭಿಸಲು ಆದೇಶ ಹೊರಡಿಸಿದೆ. ರಾಜ್ಯ ಸರಕಾರದ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪೋಷಕರು ಸಹಿ ಸಂಗ್ರಹ ಅಭಿಯಾನ ಜೊತೆಗೆ ಆನ್ ಲೈನ್ ಅಭಿಯಾನವನ್ನು ಕೈಗೊಂಡಿದ್ದಾರೆ. ಪೋಷಕರ ಅಭಿಯಾನಕ್ಕೀಗ ಬಾರೀ ಬೆಂಬಲ ವ್ಯಕ್ತವಾಗಿದೆ.ಜೂನ್ 5ರಿಂದಲೇ ಶಾಲೆಗಳನ್ನು ಪುನರಾರಂಭ ಮಾಡುವ ಕುರಿತು ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು,...
ಅರಂತೋಡಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡ ಸುಮಾರು ಐವತ್ತಕ್ಕೂ ಅಧಿಕ ಮಂದಿಗೆ ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ವಿಧಿಸಿರುವ ಘಟನೆ ನಡೆದಿದೆ.ಮಲೇಷ್ಯಾದಿಂದ ಬಂದು ಮಂಗಳೂರಿನಲ್ಲಿ ಹೋಟೆಲ್ ಕ್ವಾರಂಟೈನಲ್ಲಿದ್ದ ವೈಧ್ಯ ರಿಪೋರ್ಟ್ ಬರುವ ಮುನ್ನ ಅರಂತೋಡು ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ಅರಂತೋಡಿನಲ್ಲಿರುವ ವೇಳೆ ವರದಿ ಬಂದ ಹಿನ್ನಲೆಯಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿದ ೫೨ಕ್ಕೂ ಅಧಿಕ ಮಂದಿಗೆ...
ಕೊರೊನಾ ತಡೆಗಟ್ಟಲು ಇಲ್ಲಿನ ಆಡಳಿತ ವ್ಯವಸ್ಥೆ ಹರಸಾಹಸ ಪಡುತ್ತಿರುವಾಗ ಗಾಂಧಿನಗರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ, ಸುಳ್ಯದ ಇಕ್ಬಾಲ್ ಜಿ ಎ ರವರ ಪುತ್ರ ಮೊಹಮ್ಮದ್ ಶಿಬಿಲಿ ತನ್ನ ಕೈ ಚಳಕದ ಮೂಲಕ ಸ್ಯಾನಿಟೈಝರ್ ಸ್ಟ್ಯಾಂಡ್ ತಯಾರಿಸುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸ್ಟ್ಯಾಂಡ್ನ ಪ್ರಾತ್ಯಕ್ಷಿಕೆ - ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡುವುದು ಮತ್ತು...
ಹರಿಹರಪಲ್ಲತ್ತಡ್ಕ ಕಿರಿಭಾಗ ಬಾಳುಗೋಡು ರಸ್ತೆಯಲ್ಲಿರುವ ಕೊಪ್ಪತ್ತಡ್ಕ ಕಿರು ಸೇತುವೆ ತಡೆಬೇಲಿ ಕಿತ್ತು ಹೋಗಿದ್ದು ಸ್ವಲ್ಪವೇ ಉಳಿದಿದೆ,ಒಂದು ಭಾಗದ ತಡೆಗೋಡೆ ಕೂಡ ಕುಸಿಯುವ ಭೀತಿಯಲ್ಲಿದೆ.ಈ ಸೇತುವೆ ಕಿರಿದಾಗಿದ್ದು ಒಂದು ಲಘು ವಾಹನ ಮಾತ್ರ ಸಂಚರಿಸಲು ಅವಕಾಶವಿದೆ. ಈ ರಸ್ತೆಯಲ್ಲಿ ದಿನದಲ್ಲಿ ನೂರಾರು ವಾಹನಗಳು ಸಂಚರಿಸುತ್ತವೆ. ಶಾಲಾ,ಕಾಲೇಜು ವಿದ್ಯಾರ್ಥಿಗಳು ಕೂಡ ನಡೆದುಕೊಂಡು ಹೋಗುತ್ತಾರೆ. ಮಳೆಗಾಲದಲ್ಲಿ ತುಂಬಿ ಹರಿಯುವ ವೇಳೆ...
Loading posts...
All posts loaded
No more posts
