- Tuesday
- August 4th, 2026
ಸುಳ್ಯದ ನಾವೂರಿನ ಶ್ರೀ ಕಲ್ಕುಡ ದೈವಸ್ಥಾನದ ಜೀರ್ಣೋದ್ದಾರ ಕಾರ್ಯದ ಅಂಗವಾಗಿ ಮರದ ಕೆತ್ತನೆ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಪುನರ್ ಪ್ರತಿಷ್ಠಾ ಕಾರ್ಯಕ್ಕೆ ಭಕ್ತಾದಿಗಳು ಸಹಕರಿಸುವಂತೆ ಕೋರಿ ಮನವಿ ಪತ್ರ ಬಿಡುಗಡೆ ಜ.14 ರಂದು ದೈವಸ್ಥಾನದಲ್ಲಿ ನಡೆಯಿತು.ದೈವಸ್ಥಾನದ ಆಡಳಿತ ಸಮಿತಿಯ ಧರ್ಮದರ್ಶಿ ಪಿ.ಕೆ ಉಮೇಶ್ ರವರು ಪ್ರಾರ್ಥನೆ ನೆರವೇರಿಸಿದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು...
ಬೆಳ್ಳಾರೆ ಗ್ರಾಮದ ಬೂಡು ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಮತ್ತು ಸಪರಿವಾರ ದೈವಗಳ ನೇಮೋತ್ಸವವು ಮಾ. 14 ಹಾಗೂ 15ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಜ.14ರಂದು ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿ ಬೂಡು ಇಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಬೆಳ್ಳಾರೆ ಜಲದುರ್ಗಾ ದೇವಿ ಅರ್ಥ್ ಮೂವರ್ಸ್ ಮತ್ತು ಬೋರ್ವೆಲ್ಸ್ ಮಾಲಕರಾಗಿರುವ ಪದ್ಮನಾಭ ಬೂಡು...
ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಸುಳ್ಯ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇವರ ಸಹಯೋಗ ದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಗುಚ್ಛ ದ ರೈತರಿಗೆ ಸಾವಯವ ಕೃಷಿ, ಪಿ.ಜಿ.ಎಸ್ ದೃಡೀಕರಣ ಹಾಗೂ ಬೆಳೆ ರೋಗ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮ ಹಾಗೂ ಮಾಹಿತಿ...
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದದಲ್ಲಿ ಡಿ.16ರಿಂದ ಆರಂಭಗೊಂಡ ಧನುಪೂಜೆಯು ಜ.14 ರಂದು ಸಂಪನ್ನಗೊಂಡಿತು.ಶ್ರೀ ದೇವರಿಗೆ ಪ್ರಾತಃಕಾಲ ರುದ್ರಾಭಿಷೇಕ, ಧನು ಪೂಜೆ, ಮಹಾಪೂಜೆ ಸೇವೆಗಳು, ಭಜನಾ ಸಂಕೀರ್ತನೆ ನಡೆಯಿತು. ಸೀಮೆಯ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಪ್ರತೀ ದಿನ ಬೆಳಗ್ಗಿನ ಫಲಾಹಾರದ ವ್ಯವಸ್ಥೆ ಇತ್ತು .ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ...
ಸುಬ್ರಹ್ಮಣ್ಯ : ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.3 ಮತ್ತು 4 ರಂದು ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ. ಈ ನಿಮಿತ್ತ ಮಕರ ಸಂಕ್ರಮಣದ ದಿನವಾದ ಬುಧವಾರ ದೈವಸ್ಥಾನದಲ್ಲಿ ಕೊಳ್ಳಿ ಮುಹೂರ್ತ ನೆರವೇರಿತು. ಆರಂಭದಲ್ಲಿ ದೈವಸ್ಥಾನದಲ್ಲಿ ತಂಬಿಲ ನಡೆಯಿತು. ನಂತರ ಪೂಜೆ ನೆರವೇರಿತು. ಬಳಿಕ ವಿವಿಧ ವೈದಿಕ ವಿದಿ ವಿಧಾನಗಳನ್ನು ನೆರವೇರಿಸಿ ಕೊಳ್ಳಿ...
ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಸಂಸದ ಬ್ರಿಜೇಶ್ ಚೌಟರವರು ಪ್ರದೇಶ ಅಭಿವೃದ್ಧಿ ಅನುದಾನದ 5 ಲಕ್ಷ ರೂಪಾಯಿಯಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣಗೊಂಡ ರಸ್ತೆಯ ಉದ್ಘಾಟನೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ. ಚಂದ್ರಶೇಖರ್ ಕಿರಿಭಾಗ ಉದ್ಘಾಟಿಸಿದರು.ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ತೆಂಗಿನಕಾಯಿ ಒಡೆದರು. ಈ ಸಂದರ್ಭದಲ್ಲಿ ಹರಿಹರ ಪಲ್ಲತಡ್ಕ ಗ್ರಾ.ಪಂ...
ದೇವಚಳ್ಳ ಗ್ರಾಮದ ಮಾವಿನಕಟ್ಟೆ-ಕಂದ್ರಪ್ಪಾಡಿ ರಸ್ತೆಯು ಪ್ರಗತಿಪಥ ಯೋಜನೆ(ಎ.ಡಿ.ಬಿ)ಯಲ್ಲಿ ಆಯ್ಕೆಯಾಗಿದ್ದು, ಮಾವಿನಕಟ್ಟೆಯಿಂದ ದೇವದವರೆಗೆ 2.8 ಕೀ.ಮಿ ರಸ್ತೆ ಅಭಿವೃದ್ಧಿಗೊಳ್ಳಲಿದ್ದು, ಆ ನಿಟ್ಟಿನಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಇವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ಪಿ.ಎಂ.ಜಿ.ಎಸ್.ವೈ ಯೋಜನಾ ಉಪ ವಿಭಾಗ ಪುತ್ತೂರು ಇದರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚೇತನ್ ಕುಮಾರ್, ಕೌಶಿಕ್ ಕನ್ಸಲ್ಟೆಂಟ್...
ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರು ಪಲ್ಟಿಯಾಗಿ ವಾಹನದಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಜ.14ರಂದು ಬೆಳಿಗ್ಗೆ ವರದಿಯಾಗಿದೆ.ವೀರಾಜಪೇಟೆಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಒಮಿನಿ ಕಾರು ದೇವರಕೊಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಮಗು ಸೇರಿ ನಾಲ್ಕು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ...
ಗುತ್ತಿಗಾರು ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆಗೆ ಪಿ.ಎಂ.ಶ್ರೀ ಅನುದಾನದಿಂದ 17 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಶಾಲಾ ಕೊಠಡಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಹಾಗೂ ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಶೌಚಾಲಯ ಮತ್ತು ನೂತನ ಬೊರ್ ವೇಲ್ ಅನ್ನು ಉದ್ಘಾಟಿಸಿದರು. ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಮೂಕಮಲೆ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ವೆಂಕಟ್...
ಕೊಯನಾಡು ಸಮೀಪ ಟ್ಯಾಂಕರ್ ನ ಹಿಂಭಾಗಕ್ಕೆ ಸ್ಕೂಟಿ ಢಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಇದೀಗ ನಡೆದಿದೆ. ಸುಳ್ಯ ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಟ್ಯಾಂಕರ್ ನ ಹಿಂಭಾಗಕ್ಕೆ ಕೊಯನಾಡು ದೇವಸ್ಥಾನದ ಸಮೀಪ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರನ್ನು ಆಂಬುಲೆನ್ಸ್ ಮೂಲಕ ಸುಳ್ಯ ಕೆವಿಜಿ ಆಸ್ಪತ್ರೆಗೆ ತಂದು ದಾಖಲಿಸಲಾಯಿತಾದರೂ ಸ್ಕೂಟಿ ಸವಾರ ಕೊಯನಾಡು...
Loading posts...
All posts loaded
No more posts
