- Thursday
- August 6th, 2026
ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಸಾಹಿತಿ ಕೆ.ಆರ್ ತೇಜಕುಮಾರ್ ಬಡ್ಡಡ್ಕರವರಿಗೆ ಕಾಂಗ್ರೆಸ್ ಮುಖಂಡರು ಡಿ.05ರಂದು ಸಂಜೆ ಬಡ್ಡಡ್ಕದ ಲ್ಲಿರುವ ಅವರ ಮನೆಗೆ ತೆರಳಿ ತಾಯಿ ಶ್ರೀಮತಿ.ಕೆ ಸಾವಿತ್ರಿಯವರ ಸಮ್ಮುಖದಲ್ಲಿ ಅಭಿನಂದಿಸಿ ಶುಭ ಹಾರೈಸಿದರು. “ಡಿ.30ರಂದು ಕುಕ್ಕುಜಡ್ಕದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ, ಕಾದಂಬರಿಕಾರ ತೇಜಕುಮಾರ್ ಬಡ್ಡಡ್ಕ ರವರು ಆಯ್ಕೆಯಾಗಿರುವುದು...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ನೇತೃತ್ವದಲ್ಲಿ ಜ.17 ಮತ್ತು 18 ರಂದು ಪಂಜದಲ್ಲಿ ರಾಜ್ಯ ಮಟ್ಟದ ಯುವ ಸಂಭ್ರಮ 2026 ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ಪ್ರಶಸ್ತಿ, ಸಾಂಘಿಕ ಪ್ರಶಸ್ತಿ, ಪಂಚಸಪ್ತತಿ -2025 ಪ್ರಶಸ್ತಿ ವಿತರಣೆ, ರಾಜ್ಯಮಟ್ಟದ ಜನಪದ ಸ್ಪರ್ಧೆ ಹಾಗೂ ಕೃಷಿ ಮೇಳ, ಆಹಾರ ಮೇಳ, ವಾಹನ ಮೇಳ, ವಾಹನ ಸಾಲ...
ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ.10 ಬುಧವಾರದಂದು “ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ಪ್ರದರ್ಶನ” ಕಾರ್ಯಕ್ರಮ ನಡೆಯಲಿದ್ದು, ಪೂರ್ವಾಹ್ನ 8:30ಕ್ಕೆ ಧ್ವಜಾರೋಹಣ ಹಾಗೂ ಪೂರ್ವಾಹ್ನ 9:00 ಗಂಟೆಗೆ ಸಭಾ ಕಾರ್ಯಕ್ರಮ ನೆರವೇರಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ...
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿ ಮೂಲ ಸ್ಥಾನದಲ್ಲಿ ಶ್ರೀ ಕಾಚುಕುಜುಂಬ ದೈವದ ದೈವಸ್ಥಾನ ಪುನ: ನಿರ್ಮಾಣಗೊಂಡು ಪುನಃ ಪ್ರತಿಷ್ಠಾ ಕಲಶ ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ. 05 ರಂದು ಮುಂಜಾನೆ 10: 29ರಿಂದ 11:30ರ ತನಕದ ಮಕರ...
ಪಂಜ ಗ್ರಾಮ ಪಂಚಾಯತ್ ನ ಬಿಲ್ ಸಂಗ್ರಹದಲ್ಲಿ ಲಕ್ಷಾಂತರ ರೂ. ಅವ್ಯವಹಾರದ ಆರೋಪದ ಮೇಲೆ ಅಮಾನತುಗೊಂಡಿರುವ ಪಂಚಾಯತ್ ಬಿಲ್ ಸಂಗ್ರಾಹಕ ಬಾಬು.ಎ ರವರು "ತನ್ನನ್ನು ಅವ್ಯವಹಾರದ ಆರೋಪ ಹೊರಿಸಿ ಏಕಾಏಕಿ ನೋಟೀಸ್ ಜಾರಿಗೊಳಿಸಿ ಜಾತಿ ನಿಂದನೆ, ಜೀವ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ಬೈದು ಮಾನಸಿಕ ಕಿರುಕುಳವನ್ನು ನೀಡಿರುತ್ತಾರೆ” ಎಂದು ಆರೋಪಿಸಿ ಹೇಳಿಕೆ ನೀಡಿದ್ದಾರೆ. “ನಾನು...
ಗುತ್ತಿಗಾರು : ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಮುಳಿಯಲ್ಲಿ ನಡೆದಿದೆ.ಗುತ್ತಿಗಾರಿನ ಚಿಕ್ಮುಳಿ ನಿವಾಸಿ ಶೇಷಪ್ಪ ಗೌಡರ ಪುತ್ರಿ ಕುಕ್ಕೆ ಸುಬ್ರಹ್ಮಣ್ಯದ ಕಾಲೇಜು ವಿದ್ಯಾರ್ಥಿನಿ ಪೂಜಾ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಳು. ಅಸ್ವಸ್ಥಗೊಂಡ ಬಳಿಕ ವಿಷಯ ಗೊತ್ತಾಗಿ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ...
ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 46ನೇ ವರ್ಷದ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಡಿಸೆಂಬರ್ 6 ಶನಿವಾರ ಸಂಸ್ಥೆಯ ಐಶ್ವರ್ಯ ಮದುವೆ ಗದ್ದೆ ಸಭಾಭವನದಲ್ಲಿ ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಚಿದಾನಂದ.ಕೆ.ವಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಸಂಸ್ಥೆಯ ಆಡಳಿತ ಮಂಡಳಿ ಪ್ಯಾಪುಲರ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ...
ಕೇರಳದ ತ್ರಿಶೂರ್ ನಲ್ಲಿ ಡಿ.04 ರಂದು ನಡೆದ ಅಸ್ಮಿತ ಖೇಲೋ ಇಂಡಿಯಾ ಮಹಿಳಾ ರಾಷ್ಟ್ರೀಯ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ನಾಲ್ಕೂರು ಗ್ರಾಮದ ಮರಕತ ಧರ್ಮಪಾಲ ಮತ್ತು ಶ್ರೀಮತಿ ದಾಕ್ಷಾಯಿಣಿ ದಂಪತಿಗಳ ಪುತ್ರಿ ಕುಮಾರಿ ಸ್ವಾತಿ ಎಂ.ಡಿ ಇವರು ತೃತೀಯ ಸ್ಥಾನವನ್ನು ಗಳಿಸಿಕೊಂಡು ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ.
ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ದೇರಳಕಟ್ಟೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯ ಮಠ ಇವರ ಉಪಸ್ಥಿತಿಯಲ್ಲಿ...
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000/- ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ...
Loading posts...
All posts loaded
No more posts
