ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೃಹತ್ ಹೆದ್ದಾರಿ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಜುಲೈ 04: ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕಡಬ ತಾಲೂಕು ಪಂಚಾಯತ್ ಹಾಗೂ ಮಹಾತ್ಮ ಗಾಂಧಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸುಬ್ರಹ್ಮಣ್ಯದ ಕಾಶಿಕಟ್ಟೆಯಿಂದ ಮುಖ್ಯ ರಸ್ತೆಯಾಗಿ ಕುಮಾರಧಾರ, ಕುಲ್ಕುಂದ, ವೆಂಕಟಪುರದವರೆಗೆ ಬೃಹತ್ ಹೆದ್ದಾರಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು...

ಬಾಳಿಲ : ಮಾದಕ ದ್ರವ್ಯಗಳ ಬಳಕೆ ವಿರುದ್ಧ ಅರಿವು ಕಾರ್ಯಕ್ರಮ

ಬಾಳಿಲ ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಜುಲೈ 01 ರಂದು 'ಮಾದಕ ದ್ರವ್ಯಗಳ ಬಳಕೆ ವಿರುದ್ಧ ಅರಿವು' ಕಾರ್ಯಕ್ರಮವು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಮಾದಕ ದ್ರವ್ಯ ಎಂದರೇನು? ಅದರ ದುಷ್ಪರಿಣಾಮವೇನು? ತಡೆಗಟ್ಟುವ ವಿಧಾನಗಳಾವುವು? ಹಾಗೂ ಇತರ ಮಾಹಿತಿಯನ್ನು ಗಣೇಶ ಪ್ರಸಾದ್, ಪ್ರೊಬೆಶನರಿ ಪಿಎಸ್ಐ ಪೊಲೀಸ್ ಸ್ಟೇಷನ್ ಬೆಳ್ಳಾರೆ ಇವರು ನೀಡಿದರು.  ಈ ಸಂದರ್ಭದಲ್ಲಿ ಪೊಲೀಸ್ ಸ್ಟೇಷನ್...
Ad Widget

ಬೋರುಗುಡ್ಡೆ ರಸ್ತೆ ದುರಸ್ತಿಗೆ ಆಗ್ರಹಿಸಿ ಎಸ್‌.ಡಿ.ಪಿ.ಐ ನಿಂದ ನಗರಾಭಿವೃದ್ಧಿ ಇಲಾಖೆಗೆ ದೂರು

ಸುಳ್ಯ ಪಟ್ಟಣ ಪಂಚಾಯತ್ ನ ಬೋರುಗುಡ್ಡೆ ಪ್ರದೇಶದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ಹಿಂದೆ ಮನವಿ ಸಲ್ಲಿಸಿದ್ದರು. ನಗರ ಪಂಚಾಯತ್ ಯಾವುದೇ ಕ್ರಮ ಕೈಗೊಳ್ಳದ ಕಾರಣ ಈ ಬಾರಿ ನೇರವಾಗಿ ನಗರಾಭಿವೃದ್ಧಿ ಇಲಾಖೆಗೆ ಎಸ್‌.ಡಿ.ಪಿ.ಐ ನಾವೂರು ಬ್ರಾಂಚ್ ಕಾರ್ಯದರ್ಶಿ ಮೊಹಮ್ಮದ್ ಸಾಜಿದ್ ರವರು ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಸ್ಥಳೀಯರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಿಂದೆ...

ನಿಧನ: ಎಸ್. ಜಾನಕಿ

ಅಲೆಟ್ಟಿ ಗ್ರಾಮದ ದೋಣಿಮೂಲೆ ಮನೆಯ ಸೂಂತೋಡು ದಿ. ಶಿವಣ್ಣ ಗೌಡರ ಪತ್ನಿ ಎಸ್. ಜಾನಕಿ ಎಂಬವರು ಇಂದು ಸಂಜೆ (ಜುಲೈ 4) ರಂದು ವಯೋ ಸಹಜವಾಗಿ ಸ್ವಗೃಹದಲ್ಲಿ ನಿಧನರಾದರು. ಇವರಿಗೆ 96 ವರ್ಷ ವಯಸ್ಸಾಗಿತ್ತು.ಮೃತರು ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆ,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮ

ಸುಳ್ಯ, ಜು. 4: ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು, ಸುಳ್ಯದಲ್ಲಿ ಶನಿವಾರ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್‌ನ ಅಧ್ಯಕ್ಷರಾದ ರೊ. ಮೇಜರ್ ಡೋನರ್ ಲತಾ ಮಧುಸೂದನ್ ವಹಿಸಿದ್ದರು. ಕಾಲೇಜಿನ ಸಂಚಾಲಕರಾದ ರೊ. ಪಿಪಿ ಎಂಪಿಎಚ್ಎಫ್ ಪ್ರಭಾಕರನ್ ನಾಯರ್ ವಿದ್ಯಾರ್ಥಿಗಳು ಉನ್ನತ...

ಇಂದಿನ(ಜುಲೈ 04) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ವಾರಾಂತ್ಯದಲ್ಲೂ ರಬ್ಬರ್ ಧಾರಣೆಯಲ್ಲಿ ಏರಿಕೆ ; ಅಡಿಕೆ, ಕಾಳುಮೆಣಸು ಹಾಗೂ ಕೊಬ್ಬರಿ ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 04 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...

ಸುಳ್ಯದ ಜ್ಞಾನದೀಪ ನವೋದಯ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಸಾನ್ವಿ ಬಿ.ಜಿ. ನವೋದಯ ಶಾಲೆಗೆ ಆಯ್ಕೆ

2025-26ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು 3ನೇ ಸುತ್ತಿನಲ್ಲಿ ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಸಾನ್ವಿ ಬಿ.ಜಿ. ಮುಡಿಪು ಪಿಎಂಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಸುಳ್ಯ ಬೆಟ್ಟಂಪಾಡಿಯ ಗೌರಿಶಂಕರ ಮತ್ತು ಸವಿತಾ ಕುಮಾರಿ ದಂಪತಿಗಳ ಪುತ್ರಿ ಸುಳ್ಯದ ಸೈoಟ್ ಬ್ರಿಜಿಡ್ಸ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಾನ್ವಿ ಬಿ.ಜಿ....

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:04-07-2026 ಶನಿವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ* ,ಹಿರಿಯರಿಗೆ ಗೌರವ ಕೊಡುವುದು ಈ ದಿನ ನಿಮ್ಮ ಗಮನದಲ್ಲಿ ಇರಬೇಕು, ತಂದೆಯ ಆರೋಗ್ಯದ ಕಡೆ ಗಮನವಿರಲಿ ,ವ್ಯಾಪಾರ ವ್ಯಾವಹಾರ ಮಾಡುವವರಿಗೆ ಈ ದಿನ ಅನಿರೀಕ್ಷಿತ ಲಾಭವನ್ನು ಪಡೆಯುತ್ತಿರ, ಈ ದಿನ ಧನಲಾಭವಾಗುವ ಸಾಧ್ಯತೆ ಕಂಡು ಬರುತ್ತಿದೆ, ಗಮನಿಸಿ:-ಇಂದು ಮನ ಬಂದಂತೆ ಖರ್ಚಿಗೆ ದಾರಿ ಮಾಡಿಕೊಳ್ಳದಿರಿ, ಪರಿಹಾರ:-ಗುರುಗಳ...

ಸುಳ್ಯ : ಅರಂಬೂರು ಸಿ.ಎಸ್.ಸಿ ಕೇಂದ್ರದಲ್ಲಿ ಡಿಜಿ ಪೇ ಕಾರ್ಯಕ್ರಮಕ್ಕೆ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ವಲಯದ ಅರಂಬೂರು ಸಿ.ಎಸ್.ಸಿ ಕೇಂದ್ರದಲ್ಲಿ ಡಿಜಿ ಪೇ ಕಾರ್ಯಕ್ರಮಕ್ಕೆ ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಅಧ್ಯಕ್ಷರಾದ ಪರಮೇಶ್ವರ ನೆಡ್ಚಿಲ್ ಅವರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು, ಹಾಗೂ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಿ.ಎಸ್.ಸಿ ನೋಡೆಲ್ ಅಧಿಕಾರಿಯಾದ ಹೇಮಂತ್ ಸರ್ ರವರು ಡಿಜಿ ಪೇ...

ಪಂಜ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಂಬೈ ಮಹಿಳಾ ಸಂಘದಿಂದ ಪುಸ್ತಕ ಕೊಡುಗೆ

ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ಸುಮಾರು 200 ವಿದ್ಯಾರ್ಥಿಗಳಿಗೆ ಪಂಜದ ಶ್ರೀ ದುರ್ಗಾ ಸೇವಾ ಸಂಘ ಕೇನ್ಯಾ ಇವರ ಆಶ್ರಯದಲ್ಲಿ ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್ ಮುಂಬೈ ಇವರ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್ ಮುಂಬೈ ಇದರ ಗೌರವಾಧ್ಯಕ್ಷೆ...
Loading posts...

All posts loaded

No more posts

error: Content is protected !!