ಮಳೆಯ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ; ನಾಳೆ(ಜು.02) ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಮತ್ತು...

ಇಂದಿನ(ಜುಲೈ 01) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಹೊಸ ತಿಂಗಳ ಮೊದಲ ದಿನವೇ ರಬ್ಬರ್ ಧಾರಣೆಯಲ್ಲಿ ಚೇತರಿಕೆ ; ಅಡಿಕೆ ಸ್ಥಿರ ; ಕಾಳುಮೆಣಸು ದರ ಕೊಂಚ ಇಳಿತ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 01 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...
Ad Widget

ಸುಳ್ಯ ಪಿ.ಎಲ್.ಡಿ ಬ್ಯಾಂಕ್ ನಿಂದ ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ “ಸಹಕಾರ ವಾರ” ಆಚರಣೆ ಹಾಗೂ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ

ಸುಳ್ಯ ಪಿ.ಎಲ್.ಡಿ ಬ್ಯಾಂಕ್ ವತಿಯಿಂದ ಕೇಂದ್ರ ಸರ್ಕಾರದ "ಸಹಕಾರ ವಾರ" ಕಾರ್ಯಕ್ರಮದ ಅಂಗವಾಗಿ ಶಾಲಾ ಅವರಣದಲ್ಲಿ ನಾನಾ ಹಣ್ಣಿನ ಗಿಡಗಳನ್ನು ನೆಡಲಾಯಿತು.  ಸುಳ್ಯ ಪಿ.ಎಲ್.ಡಿ ಬ್ಯಾಂಕ್‌ನ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ದಿಲೀಪ್ ಹೆಚ್.ಹೆಚ್, ಸುಳ್ಯ ವ್ಯವಸ್ಥಾಪಕಿ ಉಷಾ ಸುವರ್ಣ, ಸಿಬ್ಬಂದಿಗಳಾದ ದಾಮೋದರ, ಅಶ್ವಿತ್, ಶಾಲಾ...

ಸುಳ್ಯದ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ “ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ”

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಡಿಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದಾದ್ಯಂತ ಆನ್ಲೈನ್ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಸುಳ್ಯದ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಪೂಜ್ಯ ವೀರೇಂದ್ರ ಹೆಗ್ಗಡೆಯವರು “ಜನಜಾಗೃತಿ ಮೂಲಕ...

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ತು ಚುನಾವಣೆ

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತು ಚುನಾವಣೆಯನ್ನು ನಡೆಸಲಾಯಿತು. ಈ ಚುನಾವಣೆಯನ್ನು ಆಧುನಿಕ ತಂತ್ರಜ್ಞಾನದ ನೆರವಿನಿಂದ ಮೊಬೈಲ್ ಅಪ್ಲಿಕೇಶನ್ ಬಳಸಿ ಇಲೆಕ್ಟ್ರಾನಿಕ್ ಮತಯಂತ್ರ(EVM) ಮಾದರಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಗೌರವ...

ಡಾ. ಹರಿಣಾಕ್ಷಿ ಎಂ.ಡಿ ಸೇವಾ ನಿವೃತ್ತಿ

ಡಾ. ಹರಿಣಾಕ್ಷಿ ಎಂ.ಡಿ ಅವರು ಜೂನ್ 30ರಂದು 1990ರಿಂದ 2026ರ ತನಕದ ಸುದೀರ್ಘ 36 ವರ್ಷಗಳ ಬೋಧನಾ ವೃತ್ತಿಯಿಂದ ನಿವೃತ್ತಿ ಹೊಂದಿದ್ದಾರೆ. ಪುತ್ತೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಗಿ ಸೇವೆ ಆರಂಭಿಸಿದ್ದ ಅವರು ಮುಂದೆ ಪುತ್ತೂರಿನ ವಿವೇಕಾನಂದ ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು, ಪುತ್ತೂರಿನ ಸರಕಾರಿ ಪ್ರಥಮ...

“ಸಮಾಜ ಸೇವೆಯೇ ರೋಟರಿಯ ಮುಖ್ಯ ಧ್ಯೇಯ” : ರೋ. ಜಯಪ್ರಕಾಶ್ ; ಕುಂತೂರು ಶಾಲೆಗೆ ಕೊಡುಗೆ ಹಸ್ತಾಂತರ

ಜೂನ್ 30 : “ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ಮುಖ್ಯವಾಗಿ ಸಮಾಜ ಸೇವೆಗಾಗಿ ಹುಟ್ಟಿಕೊಂಡಿದ್ದು, ಸಮಾಜದಲ್ಲಿರುವ ದೀನದಲಿತರ, ಅಶಕ್ತರ ಸೇವೆಯನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಅದರೊಂದಿಗೆ ಶಾಲಾ ಕಾಲೇಜುಗಳು, ಅಂಗನವಾಡಿ ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಆ ರೀತಿಯಾಗಿ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ರೋಟರಿ ಸಂಸ್ಥೆಯು ತನ್ನದೇ ಆದ ಚಾಪನ್ನು...

ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; “ದುಶ್ಚಟಮುಕ್ತ ಬದುಕಿನಿಂದ ಯುವಜನಾಂಗದ ಅಭ್ಯುದಯ” : ವಿಮಲಾ ರಂಗಯ್ಯ ಅಭಿಮತ

ಸುಬ್ರಹ್ಮಣ್ಯ : “ದುಶ್ಚಟಮುಕ್ತ ಬದುಕಿನಿಂದ ಯುವ ಜನಾಂಗ ಅಭ್ಯುದಯವಾಗಲು ಸಾಧ್ಯವಿದೆ. ವಿದ್ಯಾರ್ಜನೆಯ ಅವಧಿಯಲ್ಲಿಯೇ ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಜಾಗೃತರಾಗಬೇಕು. ಇದು ಓದು ಬರಹಗಳನ್ನು ಸೇರಿದಂತೆ ನಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡುತ್ತದೆ ಎಂಬ ಪರಿಜ್ಞಾನ ಎಳವೆಯಲ್ಲಿಯೇ ಮೂಡುವಂತೆ ಮಾಡುವುದು ಅತ್ಯವಶ್ಯಕ. ಧೂಮಪಾನ, ಮದ್ಯಪಾನ ಇತ್ಯಾದಿಗಳು ನಮ್ಮ ಬದುಕಿನ ಅತೀ ದೊಡ್ಡ ಶತ್ರುಗಳು ಎಂಬ ಅರಿವು ನಮ್ಮ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಸ್ಪತ್ರೆ ಸಮಸ್ಯೆ : ಜುಲೈ 10ಕ್ಕೆ ಬೃಹತ್ ಪ್ರತಿಭಟನೆ ಎಚ್ಚರಿಕೆ – 10 ದಿನಗಳ ಗಡುವು

ಕುಕ್ಕೆ ಸುಬ್ರಹ್ಮಣ್ಯ, ಜೂನ್ 30 : ಕುಕ್ಕೆ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ, ಐನೆಕಿದು ಹಾಗೂ ಏನೆಕಲ್ಲು ಭಾಗದ ಜನತೆಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಆಗ್ರಹಿಸಿ ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ. ಈ ಸಂಬಂಧ ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಭವನದಲ್ಲಿ ನಡೆದ ಹೋರಾಟ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ...

ಕವನ : ನಿರ್ದಿಗಂತವಲ್ಲ ನಮ್ಮ ಆಯಸ್ಸು…

ಕಲ್ಪನೆಯ ಕಣ್ಣಿಗೆ ಕಾಣುವುದೆಲ್ಲವೂ ಕನಸು, ಕಂಡ ಕನಸುಗಳನ್ನು ನನಸು ಮಾಡಿಕೊಳ್ಳಲು ಇರಬೇಕು ಧೈರ್ಯವಂತಿಕೆಯ ಮನಸ್ಸು...ಪರಿಕಲ್ಪನೆಯ ದೃಷ್ಟಿಗೆ ಕಂಡಿದ್ದೆಲ್ಲವೂ ಯಶಸ್ಸು, ಅಸಾಧ್ಯದಲ್ಲೂ ಸಾಧ್ಯತೆಯನ್ನು ಹುಡುಕಲು ಇರಬೇಕು ಬುದ್ಧಿವಂತಿಕೆಯ ಮನಸ್ಸು...ಕಂಡ ಕನಸಿನ ಹಿಂದೆ ಓಡುತ್ತಲೇ ಇರಬೇಕು ತುಂಬುತ್ತಾ ದೇಹಕ್ಕೂ-ಮನಸ್ಸಿಗೂ ಹುಮ್ಮಸ್ಸು, ಕಷ್ಟಪಟ್ಟಾಗಲೇ ಸಿಗುವುದು ಬದುಕಿನಲ್ಲಿ ನಿಜವಾದ ಯಶಸ್ಸು, ಇಂದು ಬೇಡ-ನಾಳೆ ಮಾಡೋಣ ಎನ್ನಲು ನಿರ್ದಿಗಂತವಲ್ಲ ಈ ನಮ್ಮ ಆಯಸ್ಸು,...
Loading posts...

All posts loaded

No more posts

error: Content is protected !!