ಕುಮಾರ್ ಪೆರ್ನಾಜೆ, ಸೌಮ್ಯ ದಂಪತಿಗಳು ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿಗೆ ಆಯ್ಕೆ

ವಿಶಿಷ್ಟ ವಿಶೇಷ ಬರಹಗಾರ, ಖ್ಯಾತ ಜೇನು ಕೃಷಿಕರಾದ ಕುಮಾರ್ ಪೆರ್ನಾಜೆ ಮತ್ತು ಶ್ರೀಮತಿ ಸೌಮ್ಯ ಆವರು ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ. ಆ.03 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು...

ಬೆಳ್ಳಾರೆ : ಸ್ನೇಹಿತರ ಕಲಾಸಂಘದವರಿಂದ ಅಟ್ಟಿ ಮಡಿಕೆ, ಮೊಸರು ಕುಡಿಕೆ ಹಾಗೂ ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ನೇಹಿತರ ಕಲಾಸಂಘ  ಬೆಳ್ಳಾರೆ ಇವರ ವತಿಯಿಂದ ಆಗಸ್ಟ್ 15ರಂದು ನಡೆಯಲಿರುವ ಅಟ್ಟಿ ಮಡಿಕೆ ಮೊಸರು ಕುಡಿಕೆ ಹಾಗೂ ಆಗಸ್ಟ್ 17ರಂದು ಶ್ರೀ ಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು  ಜುಲೈ 30ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ  ಪದ್ಮನಾಭ ಬೀಡು, ಕಾರ್ಯದರ್ಶಿ...
Ad Widget

ರಕ್ಷಾ ನಾಗರಿಕ ಬಳಗ ಮೊಗ್ರ ಇವರಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಹಾಗೂ ಆರ್ಥಿಕ ನೆರವು

ಮೊಗ್ರ ಕಿನ್ನಿಕುಮೇರಿ ಪರಿಸರದಲ್ಲಿ ಸೇವಾ ಸಂಘಟನೆಯಾಗಿ ಕಾರ್ಯ ನಿರ್ವಹಿಸುತ್ತಿರುವ ರಕ್ಷಾ ನಾಗರಿಕ ಬಳಗದ ವತಿಯಿಂದ ಮೊಗ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.ಸಂಘಟನೆಯ ಅಧ್ಯಕ್ಷರಾದ ಲಯನ್ ನಾಗೇಶ್ ತೆಂಕಪ್ಪಾಡಿಯವರು ಸಮವಸ್ತ್ರ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಯದರ್ಶಿ ಜೇಸಿ ಜೀವನ್ ಮಲ್ಕಜೆ, ಕೋಶಾಧಿಕಾರಿ ದಯಾನಂದ ಕಿನ್ನಿಕುಮೇರಿ, ಪದಾಧಿಕಾರಿಗಳಾದ ಲಯನ್ ಕರುಣಾಕರ ಎಣ್ಣೆಮಜಲು, ಉಮೇಶ್ ಮಕ್ಕಿ,...

ಅರಂತೋಡು : ಅಗ್ನಿ ದುರಂತಕ್ಕೆ ತುತ್ತಾದ ಪಂಚಾಯತ್ ಘನ ತ್ಯಾಜ್ಯ ವಿಲೇವಾರಿ ಘಟಕದ ಪುನರ್ ನಿರ್ಮಾಣಕ್ಕೆ ಸಹಕಾರಿ ಸಂಘದಿಂದ 1 ಲಕ್ಷ ರೂಪಾಯಿ ಧನ ಸಹಾಯ ಘೋಷಣೆ

ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆರಂತೋಡು ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜು.09 ರಂದು ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದಿತ್ತು. ಇದರ ಪುನರ್ ನಿರ್ಮಾಣಕಾಗಿ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ಹಾಗೂ  ಜನಪ್ರತಿನಿಧಿಗಳ ಭೇಟಿ ಮಾಡಿ ಮನವಿ ಮಾಡಿದ್ದರು. ಇದೀಗ ಆರಂತೋಡು -ತೊಡಿಕಾನ...

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮವು ಅರಂಬೂರಿನ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಾಸುದೇವ ಗೌಡ ಕುಡೆಕಲ್ಲು ಅವರು ಉದ್ಘಾಟಿಸಿ ಮಾತನಾಡುತ್ತಾ ”ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಘಟನೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಆಟಿ ಎನ್ನುವಂತದ್ದು ಹಿಂದೆ ಬಹಳ ಕಷ್ಟಕರವಾದ ದಿನವಾಗಿತ್ತು.  ಇಂತಹ ಕಷ್ಟಕರವಾದ ದಿನಗಳಲ್ಲೂ...

ಬೆಳ್ಳಾರೆ : ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಪದಸ್ವೀಕಾರ ಸಮಾರಂಭ

“ಸಾಮಾಜಿಕ ಸೇವೆಯಿಂದ ಮಾನಸಿಕ ನೆಮ್ಮದಿ” : ಪುರಂದರ ರೈ

“ಇಂಟರ್ಯಾಕ್ಟ್ ಕ್ಲಬ್ ಮೂಲಕ ಮಕ್ಕಳಿಗೆ ಎಳವೆಯಲ್ಲಿಯೇ ಸಾಮಾಜಿಕ ಸೇವೆಯನ್ನು ಕಲಿಸಿಕೊಡಲಾಗುತ್ತದೆ. ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಆಲೋಚನೆಗಳು ಬೆಳೆಯಲು ಸಹಕಾರಿಯಾಗುತ್ತದೆ, ಜೊತೆಗೆ ಮಾನಸಿಕ ನೆಮ್ಮದಿಯೂ ಸಿಗುತ್ತದೆ” ಎಂದು ರೋಟರಿ ಕ್ಲಬ್ ನ ಜಿಲ್ಲಾ ಪೂರ್ವ ಸಹಾಯಕ ಗವರ್ನರ್ ಪುರಂದರ ರೈ ಮಿತ್ರಂಪಾಡಿ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನಡೆದ...

ಸುಳ್ಯ ವಲಯ ಫೊಟೋಗ್ರಾಫರ್ ಅಸೋಸಿಯೇಶನ್‌ ಅಧ್ಯಕ್ಷರಾಗಿ ಶಶಿ ಗೌಡ ಕೊಯಿಂಗೋಡಿ ಪುನರಾಯ್ಕೆ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕೆ.ಜಿ., ಕೋಶಾಧಿಕಾರಿಯಾಗಿ ಶ್ರೀಮತಿ ವಸಂತಿ ಹರೀಶ್ ಆಯ್ಕೆ

ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ 2024-25 ಸಭೆಯು ಜು. 22ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ವಲಯ ಅಧ್ಯಕ್ಷ ರಾದ ಶಶಿಗೌಡ ಕೊಯಿಂಗೋಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ವಲಯದ ಸ್ಥಾಪಕಾಧ್ಯಕ್ಷರಾದ ಗೋಪಾಲ್ ಸುಳ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್...

ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹಾರಕ್ಕೆ ಜಿಲ್ಲಾ ಬಿ.ಜೆ.ಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿ.ಜೆ.ಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್...

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಕೃಷ್ಣಾಷ್ಟಮಿ ಪ್ರಯುಕ್ತ “ಮಕ್ಕಳ ಫೋಟೋಸ್ಪರ್ಧೆ 2025” ಪೋಸ್ಟರ್ ಬಿಡುಗಡೆ

ಆ.13 ಕೊನೆಯ ದಿನಾಂಕ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್.ದ.ಕ ಮತ್ತು ಉಡುಪಿ ಜಿಲ್ಲೆ(ರಿ.), ಸುಳ್ಯ ವಲಯ ಪ್ರಸ್ತುತಪಡಿಸುವ ಕೃಷ್ಣಾಷ್ಟಮಿ ಸಂಭ್ರಮದ ಮಕ್ಕಳ ಫೋಟೋಸ್ಪರ್ಧೆ 2025 "ಕೃಷ್ಣ /ರಾಧಾ ಕಲರವ" ಇದರ ಪೋಸ್ಟರ್ ಅನ್ನು ಸುಳ್ಯದ ಆಸ್ತಾ ಸ್ಟುಡಿಯೋದಲ್ಲಿ ಬಿಡುಗಡೆಗೊಳಿಸಲಾಯಿತು.ವಲಯದ ಅಧ್ಯಕ್ಷರಾದ ಶಶಿ ಗೌಡ, ಸ್ಥಾಪಕಾಧ್ಯಕ್ಷರಾದ ಗೋಪಾಲ್ ಕೃಷ್ಣ, ಉಪಾಧ್ಯಕ್ಷರಾದ ಪ್ರಶಾಂತ್ ಶ್ರೇಣಿ, ಕೋಶಾಧಿಕಾರಿ ವೆಂಕಟೇಶ್‌, ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್.ಪಿ...

ಸುಳ್ಯ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

“ಅವಕಾಶಗಳ ಸದ್ಭಳಕೆಯಿಂದ ವಿದ್ಯಾರ್ಥಿಗಳಿಗೆ ಯಶಸ್ಸು” : ಸತೀಶ್ ಕುಮಾರ್.ಕೆ.ಆರ್

“ಕಾಲೇಜು ಜೀವನ ವಿದ್ಯಾರ್ಥಿಗಳ ಪಾಲಿಗೆ ಬಂಗಾರವಾದ ಜೀವನದ ಜೊತೆಗೆ ಬಂಗಾರದಂತ ಅವಕಾಶಗಳು ಲಭಿಸುತ್ತದೆ. ಈ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ವಿದ್ಯಾರ್ಜನೆಯ ಸಮಯದಲ್ಲಿ ಶ್ರಮಪಟ್ಟು ಸಾಧನೆ ಮಾಡಿದರೆ ಆ ಸಾಧನೆ ಮುದೊಂದು ದಿನ ಬದುಕಿಗೆ ದಾರಿದೀಪವಾಗಬಹುದು” ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿನ ಪ್ರಾಂಶುಪಾಲರಾದ ಸತೀಶ್ ಕುಮಾರ್.ಕೆ.ಆರ್...
Loading posts...

All posts loaded

No more posts

error: Content is protected !!