ವಳಲಂಬೆ : 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

ವಳಲಂಬೆಯಲ್ಲಿ 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಹರಿಶ್ಚಂದ್ರ ಕೇಪಳಕಜೆಯವರ ಅಧ್ಯಕ್ಷತೆಯಲ್ಲಿ ಜು.14 ರಂದು ನಡೆಯಿತು.ಸಭೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ,  ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ದಿಗಂತ್ ಕಡ್ತಲ್ಕಜೆ, ಕೋಶಾಧಿಕಾರಿ ವೆಂಕಟರಮಣ ಹೊಸೊಳಿಕೆ, ಪ್ರಮುಖರಾದ ವೆಂಕಟ್ ವಳಲಂಬೆ ಹಾಗೂ ವಿವಿಧ ಸಮಿತಿಗಳ...

ನಡುಗಲ್ಲು : ನಾಳೆ(ಜು.15) ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ, ಕಾರ್ಯಕರ್ತರ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕರಿಸಲಿರುವ ಸಂಸದರು

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ನಾಳೆ(ಜು.15) ರಂದು ಸುಳ್ಯ ತಾಲೂಕಿನ ನಡುಗಲ್ಲಿಗೆ ಭೇಟಿ ನೀಡಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ ಮಾಡಲಿರುವ ಸಂಸದರು ಬೆಳಿಗ್ಗೆ 11:00 ಗಂಟೆಗೆ ನಡುಗಲ್ಲು ಯುವಕ ಮಂಡಲದ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆ ನಡೆಸಿ ನಂತರ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಸಾರ್ವಜನಿಕ...
Ad Widget

ಶಕ್ತಿ ಯೋಜನೆಗೆ 500 ಕೋಟಿ ಬಲ – ಸುಳ್ಯದಲ್ಲಿ ಸಂಭ್ರಮಾಚರಣೆ – ಸುಳ್ಯ ಕೂರ್ನಡ್ಕಕ್ಕೆ ರೂಟ್ ನಲ್ಲಿ ನೂತನ ಬಸ್ ಸೇವೆ ಆರಂಭ

ಶಕ್ತಿ ಯೋಜನೆಯಡಿಯಲ್ಲಿ ಕರ್ನಾಟಕದ 500 ಕೋಟಿಗೂ ಅಧಿಕ ಉಚಿತ ಟಿಕೆಟ್ ಮೂಲಕ ಮಹಿಳೆಯರು ಪ್ರಯಾಣಿಸಿದ ಈ ಸುಸಂದರ್ಭದಲ್ಲಿ ಶಕ್ತಿ ಸಂಭ್ರಮಾಚರಣೆ ಹಾಗೂ ಹೊಸ ಬಸ್ ರೂಟ್ ಗಳಿಗೆ ಚಾಲನೆ ಕಾರ್ಯಕ್ರಮ ಸುಳ್ಯದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಯಿತು. ಸುಳ್ಯ ಆಲೆಟ್ಟಿ ಬಡ್ಡಡ್ಕ ಕೂರ್ನಡ್ಕ ಮಾರ್ಗದಲ್ಲಿ ನೂತನ ಸಂಚಾರ ಆರಂಭಗೊಂಡಿತು. ಮಹಿಳಾ ಪ್ರಯಾಣಿಕರಿಗೆ ಗೌರವಾರ್ಥವಾಗಿ ಗುಲಾಬಿ ಹೂವು,...

ಸುಳ್ಯ: ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಅಂಗವಾಗಿ ನಡೆಯುವ ಮೊಸರು ಕುಡಿಕೆ ಮತ್ತು ಶೋಭಾಯಾತ್ರೆಯ ಉತ್ಸವ ಸಮಿತಿ ರಚನೆ

ಅಧ್ಯಕ್ಷರಾಗಿ ಬಾಲಚಂದ್ರ ಅಡ್ಕಾರ್
ಪ್ರದಾನ ಕಾರ್ಯದರ್ಶಿಯಾಗಿ ಭಾನುಪ್ರಕಾಶ್ ಪೆರುಮುಂಡ
ಕೋಶಾಧಿಕಾರಿಯಾಗಿ ನವೀನ್ ಎಲಿಮಲೆ

ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪಿಸಲ್ಪಟ್ಟ ವಿಶ್ವ ಹಿಂದೂ ಪರಿಷದ್ ನ ಸ್ಥಾಪನ ದಿನದ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ  ಪೂರ್ವಭಾವಿ ಸಭೆಯು ಜು.14 ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.‌ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಅಂಗವಾಗಿ ಆ.19...

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪುತ್ತೂರು ಶಾಸಕರ ರಾಜಕೀಯ ಹಸ್ತಕ್ಷೇಪ ಸಲ್ಲದು – ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಇತ್ತೀಚಿನ ದಿನಗಳಲ್ಲಿ ಸುಳ್ಳು ಮತ್ತು ಇಲ್ಲಸಲ್ಲದ ವಿಚಾರಗಳನ್ನು ಮುಂದಿಟ್ಟು ಜನರನ್ನು ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಇವರು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಂಘಟನೆಯಿಂದ ಬೆಳೆದು ಪ್ರಯೋಜನ ಪಡೆದುಕೊಂಡು ನಾನು ಕಟ್ಟರ್ ಬಿ.ಜೆ.ಪಿಯೆಂದು ಜನರನ್ನು ಮೋಸ ಮಾಡಿದ್ದು, ಸುಳ್ಯದ ಜನತೆಗೆ ತಿಳಿದಿದೆ. ಈಗ ಅವಕಾಶವನ್ನು...

ಸುಳ್ಯ : ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮವು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮರುಳ್ಯ ರವರ ಅಧ್ಯಕ್ಷತೆಯಲ್ಲಿ ಜು.14ರಂದು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆಯಿತು. ಗ್ರಾಮ ಆಡಳಿತಾಧಿಕಾರಿಗಳಿಗೆ ಶಾಸಕರು ಲ್ಯಾಪ್ ಟಾಪ್ ವಿತರಿಸಿದರು.‌ ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ನೀರಬಿದಿರೆ, ನಗರ ಪಂಚಾಯತ್ ಸದಸ್ಯರಾದ ಶ್ರೀಮತಿ ಶೀಲಾವತಿ, ತಾಲೂಕು...

ಬೆಳ್ಳಾರೆ : ಕಲಾ ಮಂದಿರ್ ನಲ್ಲಿ ಕೀಬೋರ್ಡ್ ಮತ್ತು ಸುಗಮ ಸಂಗೀತ ತರಗತಿಗಳು ಆರಂಭ

ಬೆಳ್ಳಾರೆಯ ದೇವಿ ಹೈಟ್ಸ್ ನಲ್ಲಿರುವ ಕಲಾ ಮಂದಿರ್ ಡ್ಯಾನ್ಸ್ ಕ್ರಿವ್ ಸಂಸ್ಥೆಯಲ್ಲಿ ಲಹರಿ ಸಂಗೀತ ಕಲಾ ಕೇಂದ್ರದ ಕೀ ಬೋರ್ಡ್ ಮತ್ತು ಸುಗಮ ಸಂಗೀತ ತರಗತಿಗಳು ಉದ್ಘಾಟನೆಗೊಂಡಿತು. ಬೆಳ್ಳಾರೆ ಜೆಸಿಐ ಅಧ್ಯಕ್ಷರಾದ ಪ್ರದೀಪ್ ಕುಮಾರ್ ರೈ ಬೀಡು  ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಲಾ ಮಂದಿರ್ ನಿರ್ದೇಶಕ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ ಪ್ರಮೋದ್ ಕುಮಾರ್...

ಪುತ್ತೂರು : ಮುಂಗಾರು ಕವಿಗೋಷ್ಠಿಯಲ್ಲಿ ಕವನ ವಾಚನ

ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಸಹಕಾರದೊಂದಿಗೆ ಪ್ರಗತಿ ಎಜ್ಯುಕೇಶನ್ ಫೌಂಡೇಶನ್(ರಿ.) ಪುತ್ತೂರು ಇದರ ಆಶ್ರಯದಲ್ಲಿ ದಿ.ಚಿದಾನಂದ ಕಾಮತ್ ಕಾಸರಗೋಡು ಸ್ಮರಣಾರ್ಥ ಜು.13ರಂದು ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ನಡೆದ ಮುಂಗಾರು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು "ಮನುಷ್ಯನಾಟಕ್ಕೆ ಮಳೆ ನಿಲ್ಲಲಿ" ಎಂಬ ಶೀರ್ಷಿಕೆಯ ಕವನ...

ಸುಳ್ಯ : ರೋಟರಿ ಸ್ಕೂಲ್ ನಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ

ಪ್ರಯೋಜನ ಪಡೆದ 176 ಜನ

ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿಯ ಜೂನಿಯರ್ ರೆಡ್ ಕ್ರಾಸ್ ಘಟಕ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ "ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ" ವು ಜುಲೈ 13 ಆದಿತ್ಯವಾರದಂದು ರೋಟರಿ ಹೈಯರ್ ಪ್ರೈಮರಿ ಸ್ಕೂಲ್ ರಥಬೀದಿ ಸುಳ್ಯದಲ್ಲಿ ಅತ್ಯಂತ  ಯಶಸ್ವಿಯಾಗಿ ನಡೆಯಿತು. ರೋಟರಿ  ಚಾರಿಟೇಬಲ್ ಟ್ರಸ್ಟ್ ನ...

ಅರಂಬೂರು : “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಜುಲೈ 27ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದಲ್ಲಿ ನಡೆಯಲಿರುವ “ಆಟಿಲಿ ಒಂದ್ ದಿನ”  ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ ಕಾರ್ಯಕ್ರಮವು ಜುಲೈ 12ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗೌಡ ಘಟಕದ ಅಧ್ಯಕ್ಷರಾದ ಮನೋಹರ ಅರಂಬೂರು, ಮಹಿಳಾ ಘಟಕದ ಅಧ್ಯಕ್ಷರಾದ ಡಾ.ಅನುರಾಧಾ ಕುರುಂಜಿ,...
Loading posts...

All posts loaded

No more posts

error: Content is protected !!