ಅಲೆಟ್ಟಿ ವಾಲ್ಮೀಕಿ ವಸತಿ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಆಲೆಟ್ಟಿ ಯಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಶಿಕ್ಷಕಿ ಇಂದಿರಾದೇವಿ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಕಾವ್ಯ ಎಂ., ಶಿಕ್ಷಕ ವೃಂದದವರು, ಅಡುಗೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯವರು, ಆಲೆಟ್ಟಿ ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೋಷಕ...

ಸುಳ್ಯ ನಗರ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ – ಮಹಾತ್ಮ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯ ತಾಲೂಕು ತಹಶೀಲ್ದಾರ್ ಮಂಜುಳಾ ಧ್ವಜಾರೋಹಣ ನೆರವೇರಿಸಿದರು. ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ ಸಂದೇಶ ನೀಡಿದರು. ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಜಯಕರ ಮಡ್ತಿಲ, ಇಂಜಿನಿಯರ್ ವೆಂಕಟೇಶ್,...
Ad Widget

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಅನ್ಸಾರಿಯಾ ಎಜುಕೇಶನ್ ಸೆಂಟರ್‌ನ ಪ್ರದಾನ ಕಾರ್ಯದರ್ಶಿ ಹಾಜಿ ಅಬ್ದುಲ್ ಲತೀಫ್ ಹರ್ಲಡ್ಕ ಧ್ವಜಾರೋಹಣ ನೆರವೇರಿಸಿದರು. ಶಾಲಾ ಸಂಚಾಲಕ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಸಂಯೋಜಕ ಶಾಫಿ ಕುತ್ತಾಮೊಟ್ಟೆ, ನಿಕಟ ಪೂರ್ವ ಸಂಚಾಲಕ...

ಆಟಿ ಪ್ರಕೃತಿಯೊಂದಿಗೆ ಹೇಗೆ ಜೀವಿಸಬೇಕು ಎಂಬುದನ್ನು ತಿಳಿಸುತ್ತದೆ: ರಮಾ ವೈ.ಕೆ.

ಸುಳ್ಯ: ಆಟಿ ತಿಂಗಳು ಪ್ರಕೃತಿಯೊಂದಿಗೆ ಹೊಂದಿಕೊಂಡು ಹೇಗೆ ಬದುಕಬೇಕು ಎಂಬುದನ್ನು ತಿಳಿಸುವ ಕಾಲಘಟ್ಟವಾಗಿದೆ. ಪ್ರಕೃತಿಯು ನಮಗೆ ಯಾವ ಆಹಾರ ಸೇವಿಸಬೇಕು, ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತದೆ. ಪ್ರಕೃತಿಗೆ ಸದಾ ಗೌರವ ನೀಡಬೇಕು. ಅದು ದೇವರು ನಮಗೆ ನೀಡಿರುವ ಅಮೂಲ್ಯ ವರವಾಗಿದೆ ಎಂದು ನಿವೃತ್ತ ಪ್ರಾಂಶುಪಾಲೆ ರಮಾ ವೈ.ಕೆ....

ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 80ನೇ ಸ್ವಾತಂತ್ರ್ಯ ಸಂಭ್ರಮ; ಗ್ರಾಮ ಗ್ರಾಮ ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಭಾಗೀರಥಿ ಮುರುಳ್ಯ

ಸುಳ್ಯ: ಭ್ರಷ್ಟಾಚಾರ ಮುಕ್ತ ನಾಗರಿಕ ಸಮಾಜ ನಿರ್ಮಾಣವಾದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ. ಎಲ್ಲ ಶಾಲೆಗಳಲ್ಲೂ ಶಿಕ್ಷಕರ ಹುದ್ದೆಗಳು ಭರ್ತಿಯಾದಾಗ ಶಿಕ್ಷಣ ಪರಿಪೂರ್ಣವಾಗುತ್ತದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ...

ಆ. 29ರಂದು ರಂಗಮನೆಯಲ್ಲಿ ಯಕ್ಷ ಸಂಭ್ರಮ | ಬೆಳ್ಳಿ ಸಂಭ್ರಮಕ್ಕೆ ಚಾಲನೆ; ದಿಗ್ಗಜರಿಂದ ‘ಭೀಷ್ಮ ವಿಜಯ’ ತಾಳಮದ್ದಳೆ, ಪ್ರಶಸ್ತಿ ಪ್ರದಾನ

ಸುಳ್ಯ: ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆ. 29ರಂದು ಯಕ್ಷ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಜೆ 6 ಗಂಟೆಗೆ ಪ್ರಸಿದ್ಧ ಅರ್ಥಧಾರಿಗಳಿಂದ ‘ಭೀಷ್ಮ ವಿಜಯ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಇದೇ ಸಂದರ್ಭದಲ್ಲಿ ರಂಗಮನೆಯ 25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಕರ್ನಾಟಕ ರಾಜ್ಯ...

ಚೊಕ್ಕಾಡಿ ವಿದ್ಯಾಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕುಕ್ಕುಜಡ್ಕ: ಚೊಕ್ಕಾಡಿ ವಿದ್ಯಾಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಗಸ್ಟ್ 15ರಂದು ಸಂಭ್ರಮದಿಂದ ಆಚರಿಸಲಾಯಿತು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ನಿರಂಜನ ಕೋಡ್ತುಗುಳಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಸ್ಮರಿಸಿಕೊಳ್ಳುವುದು ಇಂದು ಅಗತ್ಯವಾಗಿದೆ. ವಿದ್ಯಾರ್ಥಿಗಳು ಜೀವನದಲ್ಲಿ...

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ತೊಡಿಕಾನ: ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ. ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಷ ಗಲ್ಲಡ್ಕ ಹಾಗೂ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ...

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಆ.18ರಂದು ನಾಗರಪಂಚಮಿ

ಬಾಳಿಲ: ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ ಸೇವೆ ಆ.18ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ.ನಾಗತಂಬಿಲ ಸೇವೆ ಮಾಡಿಸುವ ಭಕ್ತರು ಬೆಳಿಗ್ಗೆ 10 ಗಂಟೆಯ ಮುಂಚಿತವಾಗಿ ಹೂವು, ಹಾಲು ಹಾಗೂ ಸೀಯಾಳಗಳನ್ನು ತಂದು ಒಪ್ಪಿಸಿ ರಶೀದಿ ಪಡೆದುಕೊಳ್ಳುವಂತೆ ದೇವಾಲಯದ ಧರ್ಮದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಾಂಧಿನಗರ 80 ನೇ ಸ್ವಾತಂತ್ರ್ಯೋತ್ಸವ – ಸೌಹಾರ್ದತೆ, ಮಾನವೀಯತೆ ದೇಶದ ಅಭಿವೃದ್ಧಿ ಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ : ಅಹ್ಸನಿ

ಸುಳ್ಯ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದ್ರಸ, ಮುಹಿಯ್ಯದ್ದೀನ್ ಜುಮ್ಮಾ ಮಸ್ಜಿದ್ ತರ್ಭಿಯತುಲ್ ಇಸ್ಲಾಂ ಜಮಾಅತ್ ಕಮಿಟಿ ಆಶ್ರಯದಲ್ಲಿ 80 ನೇ ಸ್ವಾತಂತ್ರ್ಯ ದಿನಾಚಣೆಯ ನ್ನು ಸಡಗರ ಸಂಭ್ರಮ ದಿಂದ ಆಚರಿಸಲಾಯಿತುಜುಮ್ಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆ ಎಂ ಎಸ್ ಮಹಮ್ಮದ್ ಧ್ವಜಾರೋಹಣ ನೆರವೇರಿಸಿದರುಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ದುವಾ ಪ್ರಾರ್ಥನೆ ಮಾಡಿದರುಮುದರ್ರಿಸರಾದ ಶಿಹಾಬುದ್ದೀನ್...
Loading posts...

All posts loaded

No more posts

error: Content is protected !!