- Thursday
- July 30th, 2026
ದಿನಾಂಕ : 22 ಜೂನ್ 2026ವಾರ : ಸೋಮವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷ ರಾಶಿ : ಇಂದು ನಿಮ್ಮ ಸಾಧಾರಣ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು. ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ ಬಟ್ಟೆಯು ಇರಲಿ. ಕಾರ್ಯವಾಗದಿದ್ದಾಗ ಬೇಸರ, ಹತಾಶೆ ಕಾಣಿಸುವುದು. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆ...
ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ಮನಸ್ಸಿನ ಏಕಾಗ್ರತೆ, ಅರೋಗ್ಯವಂತರಾಗಿರಲು ಅನುಸರಿಸಬೇಕಾದ ಧ್ಯಾನ, ಮುದ್ರಗಳನ್ನು ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ವಿದ್ಯಾರ್ಥಿ ಸಂಪ್ರೀತ್ ಉಪನ್ಯಾಸ ನೀಡಿದರು. ದೀಪಾ, ಅಮೃತ ಪ್ರಾತ್ಯಕ್ಷಿಕೆ ಮೂಲಕ ಯೋಗ ನಡೆಸಿಕೊಟ್ಟರು. ಶ್ರೀನಿವಾಸ್ ಸಹಕರಿಸಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಮಿಥಾಲಿ ಪಿ. ರೈ, ವಿದ್ಯಾರ್ಥಿ ಕ್ಷೇಮಾಧಿಕಾರಿ...
ಚೊಕ್ಕಾಡಿ : ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗ ಕಾರ್ಯಕ್ರಮವನ್ನು ಚೊಕ್ಕಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾ ಅವರು ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳನ್ನು ನಡೆಸಿಕೊಟ್ಟು, ಯೋಗದ ಮಹತ್ವದ ಕುರಿತು ಮಾಹಿತಿ ನೀಡಿದರು. ಯೋಗವನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರ...
ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನವು ನೀಡುವ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಜಿಲ್ಲೆಯ ಪ್ರೇರಣಾದಾಯಿ ಉದ್ಯಮಿ ಹಾಗೂ ಕೃಷಿ ಕ್ಷೇತ್ರದ ಸಂಶೋಧಕರಾದ ಪುತ್ರೂರಿನ ಎಸ್.ಆರ್.ಕೆ. ಲ್ಯಾಡರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೇಶವ ಅಮೈ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜೂ.27 ರಂದು ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ರೈತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ...
ಯೇನೆಕಲ್ಲು ಗ್ರಾಮದ ಹಿರಿಯರಾದ ಶ್ರೀ ಗಿರಿಯಪ್ಪ ಗೌಡ ಬಾಲಾಡಿ ಅವರ ನಿವಾಸಕ್ಕೆ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಬಿಜಿಪಿ ಕಾರ್ಯಕರ್ತರಾದ ಶ್ರೀ ಗಿರಿಯಪ್ಪ ಗೌಡ ಬಾಲಾಡಿ ಮತ್ತು ಶ್ರೀ ಶೂರಪ್ಪ ಗೌಡ ಬಾಲಾಡಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಂತರ "ಅಮ್ಮನ ಹೆಸರಿನಲ್ಲಿ ಒಂದು ಗಿಡ" ನೆಡುವ...
ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ದಲ್ಲಿ ನೋ ಬ್ಯಾಗ್ ಡೇ (ಸಂಭ್ರಮ ಶನಿವಾರ) ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಗರ ಪಂಚಾಯತ್ ನ ವಿಕಲಚೇತನರ ಇಲಾಖೆಯ ಮೇಲ್ವಿಚಾರಕರು ಹಾಗೂ ಸಂಪನ್ಮೂಲ ವ್ಯಕ್ತಿ ಪ್ರವೀಣ್ ನಾಯಕ್ ವಿಶೇಷ ಚೇತನ ವಿದ್ಯಾರ್ಥಿಗಳಿಗೆ, ವ್ಯಕ್ತಿಗಳಿಗೆ ಸಿಗುವ ಸಕಲ ಸವಲತ್ತುಗಳ ಬಗ್ಗೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ ನೀಡಿದರು....
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೋಲ್ಚಾರು ಇಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವು ಸಂವಿಧಾನ ಗೀತೆಯ ಗಾಯನದೊಂದಿಗೆ ಗೌರವಯುತವಾಗಿ ಆರಂಭಗೊಂಡಿತು.ಕಾರ್ಯಕ್ರಮವನ್ನು ಸುಳ್ಯ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶ ಸಿ. ಚಿರಾಗ್ ಅವರು ಉದ್ಘಾಟಿಸಿದರು. ಶಾಲಾ ಪಾಲನಾ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕರುಣಾಕರ ಅವರು ಕಾರ್ಯಕ್ರಮದ...
ಬೆಳ್ಳಾರೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 18 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಎಸ್ಡಿಪಿಐ ಬೆಳ್ಳಾರೆ ಬ್ಲಾಕ್ ಸಮಿತಿ ವತಿಯಿಂದ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಸುಳ್ಯ ವಿಧಾನಸಭಾ ಕೋಶಾಧಿಕಾರಿ ಅಬ್ದುಲ್ ರಹಮಾನ್ ಬೆಳ್ಳಾರೆ ಧ್ವಜಾರೋಹಣಗೈದರು. ಎಸ್ಡಿಪಿಐ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಶರೀಫ್ ನಿಂತಿಕಲ್ ಸಂದೇಶ ಭಾಷಣ ಮಾಡಿದರು.ಇದೇ ಸಂದರ್ಭದಲ್ಲಿ ನಿನ್ನೆ...
ಜ್ಯೋತಿ ಪ್ರೌಢಶಾಲೆ ಪೆರಾಜೆಯಲ್ಲಿ ಮೊಬೈಲ್ ಆಪ್ ಮೂಲಕ ವಿದ್ಯಾರ್ಥಿ ಸರಕಾರವನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ಮುಖಾಂತರ ರಚನೆ ಮಾಡಲಾಯಿತು. ಶಾಲಾನಾಯಕನಾಗಿ 10ನೇ ತರಗತಿಯ ಸನತ್ ಬಿ.ಜೆ, ಉಪನಾಯಕನಾಗಿ 9ನೇ ತರಗತಿಯ ಜಿತನ್ ಕೆ.ವಿ ವಿರೋಧ ಪಕ್ಷದ ನಾಯಕನಾಗಿ ಆದರ್ಶ ಟಿ.ಎ(10) ಸಭಾಪತಿಯಾಗಿ ಆಕಾಶ್ ಪಿ.ಜಿ(10) ಆಯ್ಕೆಯಾದರು. ಸಾಂಸ್ಕೃತಿಕ ಮಂತ್ರಿಯಾಗಿ ರಕ್ಷಿತಾ(9), ಉಪ ಸಾಂಸ್ಕೃತಿಕ ಮಂತ್ರಿಯಾಗಿ ಧನುಷ್...
ಮಂಗಳೂರಿನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಜೂನ್ 20ರಂದು ಸುಳ್ಯ ವಿಧಾನಸಭಾ ಕ್ಷೇತ್ರದಾಧ್ಯಂತ ಪ್ರವಾಸ ಕೈಗೊಂಡರು. ಕಾರ್ಯಕರ್ತರ ಸಭೆಗಳು, ಪಾರ್ಟಿಗಾಗಿ ದುಡಿದ ಹಿರಿಯ ಕಾರ್ಯಕರ್ತರ ಭೇಟಿ, ಪ್ರಧಾನಿ ಮೋದಿಯವರ ಆಶಯದಂತೆ "ತಾಯಿಯ ಹೆಸರಲ್ಲೊಂದು ಗಿಡ ನೆಡುವ ಕಾರ್ಯಕ್ರಮ" ಹೀಗೆ ಬೆಳಿಗ್ಗೆ 9.00 ರಿಂದ ರಾತ್ರಿ 11:00ಗಂಟೆಯ ತನಕ ನಿರಂತರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ರಾತ್ರಿ 10:00 ಗಂಟೆಯ...
Loading posts...
All posts loaded
No more posts
