“ನಿವೃತ್ತಿಯ ಬಳಿಕ ತಮ್ಮ ಪ್ರವೃತ್ತಿಯನ್ನು ಉಳಿಸಿಕೊಂಡರೆ ನಿವೃತ್ತ ಬದುಕು ಸುಂದರ” : ಪ್ರಾಂಶುಪಾಲ ಜನಾರ್ಧನ.ಕೆ.ಎನ್

ಕೆ.ಪಿ.ಎಸ್ ಬೆಳ್ಳಾರೆ ಪ್ರಾಥಮಿಕ ವಿಭಾಗದ ನಿವೃತ್ತ ಶಿಕ್ಷಕಿ ಶ್ರೀಮತಿ ಸಾವಿತ್ರಿ ಬಿ.ಎಸ್ ಇವರಿಗೆ ಬೀಳ್ಕೊಡುಗೆ ಸಮಾರಂಭ

"ಬದಲಾವಣೆ ಜಗದ ನಿಯಮ, ನಿವೃತ್ತಿ ಎಂಬುದು ಯಾವುದೇ ಉದ್ಯೋಗಿಯ ಬದುಕಿನಲ್ಲಿ ಅನಿವಾರ್ಯ. ನಿವೃತ್ತಿಯ ಬಳಿಕ ತಮ್ಮ ಪ್ರವೃತ್ತಿಯನ್ನು ಉಳಿಸಿಕೊಂಡರೆ ನಿವೃತ್ತ ಬದುಕು ಸುಂದರಮಯವಾಗುತ್ತದೆ. ಕೆ.ಪಿ.ಎಸ್ ಬೆಳ್ಳಾರೆ ಎಂಬ ನಮ್ಮ ಈ ಶಿಕ್ಷಣ ಸಂಸ್ಥೆ ಒಂದು ದೊಡ್ಡ ಕುಟುಂಬದ ರೀತಿಯ ವ್ಯವಸ್ಥೆ. ಇಲ್ಲಿ ಸಾವಿತ್ರಿಯವರು ಉತ್ತಮ ಕೆಲಸವನ್ನು ಮಾಡಿರುತ್ತಾರೆ. ಅವರನ್ನು ಅಭಿನಂದಿಸುತ್ತೇವೆ ಮತ್ತು ಅವರ ನಿವೃತ್ತಿ ಜೀವನ...

ಗುತ್ತಿಗಾರು : ಅಮರ ನಾಟ್ಯ ತರಬೇತಿ ಕೇಂದ್ರ ಉದ್ಘಾಟನೆ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಇದರ ವತಿಯಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತು ಚುರುಕುತನದ ಯಶಸ್ಸು, ಮೊಬೈಲ್ ಬಳಕೆಯಿಂದ ದೂರವಿರಿಸುವಿಕೆಯ ಪರಿಕಲ್ಪನೆಯೊಂದಿಗೆ "ಅಮರ ನಾಟ್ಯ" ತರಬೇತಿ ಕೇಂದ್ರದ ಉದ್ಘಾಟನೆ ಕಾರ್ಯಕ್ರಮವು ಜೂ.29 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಗುತ್ತಿಗಾರು ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಸ್ಥಾಪಕಾ ಧ್ಯಕ್ಷರಾದ ಸುರೇಶ್ ಕಂದ್ರಪ್ಪಾಡಿ, ಶ್ರೀ ಮಂಗಳಾ...
Ad Widget

ಎಸ್ಸೆಸ್ಸೆಫ್ ಬೆಳ್ಳಾರೆ ಸೆಖ್ಟೊರ್ ವತಿಯಿಂದ ಬುರ್ದಾ ಮಜ್ಲಿಸ್ ಮತ್ತು ಪ್ರಾರ್ಥನಾ ಸಂಗಮ

ಎಸ್ಸೆಸ್ಸೆಫ್ ಬೆಳ್ಳಾರೆ ಸೆಖ್ಟೊರ್ ವತಿಯಿಂದ ಬುರ್ದಾ ಮಜ್ಲಿಸ್ ಕಾರ್ಯಕ್ರಮ ಜೂ 28 ರಂದು ಬೆಳಗ್ಗೆ 6 ಗಂಟೆಗೆ ದಾರುಲ್ ಹಿಕ್ಮ ಎಜುಕೇಷನ್ ಸೆಂಟರ್ ಬೆಳ್ಳಾರೆ ಇಲ್ಲಿ ನಡೆಯಿತು.ಹಸನ್ ಸಖಾಫಿ ಬೆಳ್ಳಾರೆ ಪ್ರಾರ್ಥನೆ ನೆರವೇರಿಸಿದರು.ಇರ್ಷಾದ್ ಸಅದಿ ಅಧ್ಯಕ್ಷತೆಯನ್ನು ವಹಿಸಿದ್ದರು.ಬುರ್ದಾ ನೇತೃತ್ವವನ್ನು ತ್ವಾಹ ತಂಙಲ್ ವಹಿಸಿದ್ದರು ಮತ್ತು ಶಾಹಿನ್ ಬಾಬು ಸಂಗಡಿಗರಾಗಿದ್ದರು.ಆಲಿಂಗಳು ಮತ್ತು ಇಸ್ಲಾಂ ಮತ ಪ್ರವರ್ತಕರು ಉಪಸ್ಥಿತರಿದ್ದರು.ಎಸ್ಸೆಸ್ಸೆಪ್...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರವಾಗಿ ಸಾಗುತ್ತಿರುವ  ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಜೂನ್ 29 : ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಹಾಗೂ ಡಾ.ರವಿ ಕಕ್ಕೆಪದವು ಸಮಾಜ ಸೇವ ಟ್ರಸ್ಟ್ ವತಿಯಿಂದ ಪ್ರತಿ ರವಿವಾರ ನಿರಂತರವಾಗಿ ಸ್ವಚ್ಛತಾ ಅಭಿಯಾನ ನಡೆಯುತ್ತಿದ್ದು, ಜೂ.29 ರಂದು ನಡೆದ ಸ್ವಚ್ಛತಾ ಅಭಿಯಾನದಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ನ ಸುಮಾರು ಮೂವತ್ತಕ್ಕೂ ಹೆಚ್ಚು...

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ಜೂ.30) ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭ

ಶಂಕುಸ್ಥಾಪನೆ ನೆರವೇರಿಸಲಿರುವ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ

(ವರದಿ : ಉಲ್ಲಾಸ್ ಕಜ್ಜೋಡಿ)ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭವು ನಾಳೆ(ಜೂ.30) ಪೂರ್ವಾಹ್ನ 11:30ಕ್ಕೆ ತುಳಸಿ ತೋಟ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇಲ್ಲಿ ನಡೆಯಲಿದ್ದು, ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ರವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ...

ಬೆಳ್ಳಾರೆ : ಜ್ಞಾನದೀಪದಲ್ಲಿ ಪೋಷಕರ ಸಭೆ ; ಪ್ರತಿಭಾ ಪುರಸ್ಕಾರ

ಬೆಳ್ಳಾರೆಯ ಕಲ್ಪವೃಕ್ಷ ಆರ್ಕೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ತರಗತಿಗಳ ಉದ್ಘಾಟನೆ, ಪೋಷಕರ ಸಭೆ ಹಾಗೂ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾಮಧೇನು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಎಂ.ಮಾಧವ ಗೌಡ ರವರು ಕಾರ್ಯಕ್ರಮವನ್ನು...

ಹಳೆಗೇಟು: ಸಾಂಸ್ಕೃತಿಕ ಸಂಘ (ರಿ.) ಹಳೆಗೇಟು  ಇದರ ಗಣೇಶೋತ್ಸವ ಪೂರ್ವಭಾವಿ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

* ಅಧ್ಯಕ್ಷರಾಗಿ ಬಾಲಗೋಪಾಲ್ ಸೇರ್ಕಜೆ * ಕಾರ್ಯದರ್ಶಿಯಾಗಿ ಶ್ರೀಜೇಶ್ * ಖಜಾಂಜಿಯಾಗಿ ಚಿತ್ತರಂಜನ್ ಸಾಂಸ್ಕೃತಿಕ ಸಂಘ (ರಿ.) ಹಳೆಗೇಟು  ಇದರ ಗಣೇಶೋತ್ಸವ ಪೂರ್ವಭಾವಿ ಸಭೆ ಹಳೆಗೇಟಿನ ವಸಂತಕಟ್ಟೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಬಾಲಗೋಪಾಲ್ ಸೇರ್ಕಜೆ, ಉಪಾಧ್ಯಕ್ಷರಾಗಿ ಗಣೇಶ್ ಕೊಯಿಂಗೋಡಿ, ಕಾರ್ಯದರ್ಶಿಯಾಗಿ ಶ್ರೀಜೇಶ್, ಜೊತೆ ಕಾರ್ಯದರ್ಶಿಯಾಗಿ ಧನಂಜಯ ಪಂಡಿತ್,...

ಹರಿಹರ ಪಳ್ಳತ್ತಡ್ಕ : ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಯತೀಂದ್ರ ಬಾಳುಗೋಡು
ಕಾರ್ಯದರ್ಶಿಯಾಗಿ ವಿಷ್ಣು ಪಾತಿಕಲ್ಲು
ಖಜಾಂಜಿಯಾಗಿ ಶಿವಕುಮಾರ್ ಶಿವಾಲ

ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜೂ.28 ರಂದು ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಯತೀಂದ್ರ ಬಾಳುಗೋಡು, ಕಾರ್ಯದರ್ಶಿಯಾಗಿ ವಿಷ್ಣು ಪಾತಿಕಲ್ಲು ಹಾಗೂ ಖಜಾಂಜಿಯಾಗಿ ಶಿವಕುಮಾರ್ ಶಿವಾಲ ಇವರುಗಳನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಹಿಮ್ಮತ್.ಕೆ.ಸಿ, ರಾಮಕೃಷ್ಣ ನೆತ್ತಾರ, ರಾಮಚಂದ್ರ ಪಳಂಗಾಯ, ಪ್ರಸನ್ನ ಗೋರ್ತಿಲ, ಜಯಪ್ರಕಾಶ್ ಕೂಜುಗೋಡು,...

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದ 2025-26ನೇ ಸಾಲಿನ ಮಂತ್ರಿಮಂಡಲದ ಪದಗ್ರಹಣ ಸಮಾರಂಭ

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ 2025-26ನೇ ಸಾಲಿನ ಶಾಲಾ ಹಾಗೂ ಪದವಿ ಪೂರ್ವ ಕಾಲೇಜು ಮಂತ್ರಿಮಂಡಲ ರಚನೆಯಾಗಿ ಅದರ ಪದಗ್ರಹಣ ಸಮಾರಂಭವು ಇಂದು ಸಂಸ್ಥೆಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮಾಧವ ಮೂಕಮಲೆ ರವರು ಆಗಮಿಸಿ ಎಲ್ಲಾ ಮಂತ್ರಿಗಳಿಗೆ ಪದಗ್ರಹಣವನ್ನು ನೆರವೇರಿಸಿಕೊಟ್ಟರು. ಶಾಲಾ ಮುಖ್ಯ ಶಿಕ್ಷಕರು...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣಾ ಅಭಿಯಾನ

ಸುಬ್ರಹ್ಮಣ್ಯ ಜೂನ್ 27 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಪರಿಸರ ಸ್ವಚ್ಛತೆ, ಗಿಡ ನೆಡುವುದು, ಬೆಳೆಸುವುದು, ಸಂರಕ್ಷಿಸುವುದು ಹಾಗೂ ಪಕ್ಕದ ಅರಣ್ಯ ಪ್ರದೇಶಗಳಿಗೆ ತೆರಳಿ ರಸ್ತೆ ಬದಿ ಅಥವಾ ಬರಡು ಪ್ರದೇಶಗಳಲ್ಲಿ ಗಿಡ ನೆಡುವುದು, ಬೀಜ ಬಿತ್ತುವುದು, ಇತ್ಯಾದಿಗಳ ಬಗ್ಗೆ ವಿಶೇಷವಾದ ಮಾಹಿತಿಗಳನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಕ್ರಿಯಾಶೀಲ ಸದಸ್ಯರಾದ ಡಾ.ರವಿ ಕಕ್ಕೆಪದವು...
Loading posts...

All posts loaded

No more posts

error: Content is protected !!