ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ – ನೂತನ ಡಿಸಿ ಯಾಗಿ ದರ್ಶನ್ ಎಚ್.ವಿ‌.

ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೇರಿದಂತೆ ರಾಜ್ಯ ಸರಕಾರ ಜೂ.17 ರಂದು ಮಾಡಿದ ಆದೇಶದಲ್ಲಿ ಹದಿನಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಮುಲ್ಲೈ ಮುಹಿಲನ್ ಇವರನ್ನು ನೋಂದಣಿ ಮತ್ತು ಅಂಚೆಚೀಟಿಗಳ ಆಯುಕ್ತರಾಗಿ ವರ್ಗಾಯಿಸಿ ಆದೇಶಿಸಿದೆ.ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡದ ನೂತನ...

ದ.ಕ.‌ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ನಾಳೆ (ಜೂ.18) ಸುಳ್ಯಕ್ಕೆ – ವಿವಿಧ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ.‌ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ನಾಳೆ (ಜೂ.18 ರಂದು ) ಸುಳ್ಯಕ್ಕೆ ಆಗಮಿಸಲಿದ್ದು ವಿವಿಧ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸುಳ್ಯ ತಾಲ್ಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಛೇರಿ ಕಟ್ಟಡ, ಸುಳ್ಯ ತಾಲ್ಲೂಕು ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್  block public health lab (BPHL)...
Ad Widget

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜೂ.18 ರಂದು ಜಿಲ್ಲಾ ಪಂಚಾಯತ್ ಸುಳ್ಯ ಉಪವಿಭಾಗದ ಕಾರ್ಯಾಲಯ ಉದ್ಘಾಟನೆ – ಕಾಂಗ್ರೆಸ್ ನಿಯೋಗದಿಂದ ಪೂರ್ವತಯಾರಿ ಬಗ್ಗೆ ಪರಿಶೀಲನೆ

ಜೂ. 18 ರಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ. ಕ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ರವರು ಸುಳ್ಯದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ನೇರವಾರಿಸಲಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆಯಂತೆ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜಿಲ್ಲಾ...

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಗಾರ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದಲ್ಲಿ ಜೂ.14 ರಂದು ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮ ನಡೆಯಿತು. ಈ ತರಬೇತಿ ಕಾರ್ಯಗಾರವನ್ನು ಶ್ರೀ ಅಜಿತ್ ಕುಮಾರ್ ಸದಸ್ಯರು, ವ್ಯವಸ್ಥಾಪನ ಸಮಿತಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕುಮಾರಿ ಶ್ರೀಯ ಎಂ ಎಸ್ ಹತ್ತನೇ ತರಗತಿ ವಹಿಸಿದ್ದಳು. ಈ ಈ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ...

ಕುಕ್ಕುಜಡ್ಕ : ಅಮರ ಸಂಘಟನಾ  ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ

ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಚೊಕ್ಕಾಡಿ ಎಜ್ಯುಕೇಶನ್ ಸೊಸೖಟಿ(ರಿ.) ಕುಕ್ಕುಜಡ್ಕ ಇದರ ವಿದ್ಯಾಸಂಸ್ಥೆಯಾದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣಾ ಕಾರ್ಯಕ್ರಮಜೂನ್ 15ರಂದು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕುಸುಮಾಧರ ಮುಕ್ಕೂರು ಅಧ್ಯಕ್ಷರು ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇವರು ವಹಿಸಿದ್ದರು,...

ಧ್ವನಿಮಾಯೆ ಕಲಾವಿದೆ ಸುಳ್ಯದ ಸಾಯಿಶ್ರುತಿ ಪಿಲಿಕಜೆ ಝೀ ಕನ್ನಡ ವಾಹಿನಿಯ “ಮಹಾನಟಿ ರಿಯಾಲಿಟಿ ಶೋ” ಗೆ ಆಯ್ಕೆ

ಧ್ವನಿಮಾಯೆ ಕಲಾವಿದೆ, ಬಹುಮುಖ ಪ್ರತಿಭೆ ಸುಳ್ಯ ತಾಲೂಕು ಕುಕ್ಕುಜಡ್ಕದ ಸಾಯಿಶ್ರುತಿ ಪಿಲಿಕಜೆ ರವರು ಝೀ ಕನ್ನಡ ವಾಹಿನಿಯ “ಮಹಾನಟಿ ರಿಯಾಲಿಟಿ ಶೋ ಸೀಸನ್-2” ಕ್ಕೆ ಆಯ್ಕೆಯಾಗಿದ್ದು, ಗೋಲ್ಡನ್ ಟಿಕೆಟ್ ಪಡೆದುಕೊಂಡಿದ್ದಾರೆ.ಪ್ರತೀ ಶನಿವಾರ ಹಾಗೂ ಭಾನುವಾರ ರಾತ್ರಿ 7:30ಕ್ಕೆ ಈ ರಿಯಾಲಿಟಿ ಶೋ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.ಅಮರಮುಡ್ನೂರು ಗ್ರಾಮದ ಶಿವಸಾಯಿ ಭಟ್ ಮತ್ತು ದಿ.ಸುಜ್ಯೋತಿ ದಂಪತಿಯ...

ದ.ಕ. ಜಿಲ್ಲೆಯಾದ್ಯಂತ ನಿರಂತರ ಸುರಿಯುತ್ತಿರುವ ಮಳೆ – ಇಂದು (ಜೂ.17) ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ

ದ.ಕ.ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಜೂ.17 ರಂದು ಸುಳ್ಯ ತಾಲೂಕಿನ ಪ್ರಾಥಮಿಕ, ಪ್ರೌಢ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್  ಆದೇಶಿಸಿದ್ದಾರೆ.

ಸುಳ್ಯ : ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ

ದ. ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಇದರ ವತಿಯಿಂದ ಜೂ 15ರಂದು ಪರಿಶಿಷ್ಟ ಜಾತಿ ಸಮುದಾಯದ ಕಾಲೇಜು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ದ.ಕ. ಜಿಲ್ಲಾ ಕಾಂಗ್ರೆಸ್ ಪ.ಜಾ. ವಿಭಾಗದ ಅಧ್ಯಕ್ಷರಾದ ದಿನೇಶ್ ಮೂಳೂರು ರವರ ನೇತೃತ್ವದಲ್ಲಿ ಸುಳ್ಯ ಯುವಜನ...

ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆಯ 11ನೇ ವಾರ್ಷಿಕ ಮಹಾಸಭೆ 52.75 ಲಕ್ಷರೂ. ನಿವ್ವಳ ಲಾಭ : ಸದಸ್ಯರಿಗೆ ಶೇ. 10 ಲಾಭಾಂಶ ಹಂಚಿಕೆ

ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆಯ ಯಶಸ್ವಿ ದಶಕ ಪೂರ್ತಿಯ 11ನೆಯ ವಾರ್ಷಿಕ ಮಹಾಸಭೆ ಮಂಗಳೂರಿನ ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ರವಿವಾರ ನಡೆಯಿತು. ಅಧ್ಯಕ್ಷ ಜಿ.ಆರ್. ಪ್ರಸಾದ್ ಅವರು ಸಂಸ್ಥೆಯ ಕಳೆದ ಆರ್ಥಿಕ ವರ್ಷದ ಆರ್ಥಿಕ ವರದಿ ಮಂಡಿಸಿ, ಸಂಸ್ಥೆಗೆ ಕಳೆದ ಆರ್ಥಿಕ ವರ್ಷದಲ್ಲಿ 66.64 ಲಕ್ಷ ರೂ. ಒಟ್ಟಾರೆ ಲಾಭವಿದ್ದು, 52.75 ಲಕ್ಷ ರೂ. ನಿವ್ವಳ...

ನಾಳೆ (ಜೂ. 17) ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ದಿನಾಂಕ: 17.06.2025 (ಮಂಗಳವಾರ) ಪೂರ್ವಾಹ್ನ 10:00 ರಿಂದ ಸಾಯಂಕಾಲ 3:00 ಗಂಟೆಯವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು, 33ಕೆವಿ ಮಾಡಾವು-ಕಾವು ಮತ್ತು 33ಕೆವಿ ಮಾಡಾವು - ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಮಾಡಾವು ಹಾಗೂ 33/11ಕೆವಿ ಬೆಳ್ಳಾರೆ, ಗುತ್ತಿಗಾರು,...
Loading posts...

All posts loaded

No more posts

error: Content is protected !!