ನವೀನ್ ಚಾತುಬಾಯಿಯವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ ಪ್ರದಾನ

ಐವರ್ನಾಡಿನ ಪ್ರಗತಿಪರ ಕೃಷಿಕರಾದ ಸಿ.ಕೆ. ನವೀನ್ ಚಾತುಬಾಯಿಯವರಿಗೆ ಬೆಂಗಳೂರಿನ ಫ್ಲೋರಿಡಾ ಸಂಸ್ಥೆಯಿಂದ ಕರ್ನಾಟಕ ಜ್ಯೋತಿ ಅವಾರ್ಡ್ -2025 ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಬೆಂಗಳೂರಿನ ಫ್ಲೋರಿಡಾ ಶಿಕ್ಷಣ ಸಂಸ್ಥೆಯ ಸಿಲ್ವರ್ ಜುಬಿಲಿ ಕಾರ್ಯಕ್ರಮದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ನವೀನ್ ರವರಿಗೆ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ 2025ರ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 02-06-2025ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ಅಗದ ತಂತ್ರ, ಸ್ವಸ್ಥವೃತ್ತ ವಿಭಾಗದ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿಯವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ತಂಬಾಕು ಸೇವನೆಯ ದುಷ್ಪರಿಣಾಮಗಳು,...
Ad Widget

ಸುಳ್ಯ : ಟಿ ಎ ಪಿ ಸಿ ಎಂ ಎಸ್ ನ ನೂತನ ಗೋದಾಮು ಕಟ್ಟಡಕ್ಕೆ ಗುದ್ದಲಿಪೂಜೆ

ಸುಳ್ಯದ ಟಿ ಎ ಪಿ ಸಿ ಎಂ ಎಸ್ ಲಿ. ನ ನೂತನ ಗೋದಾಮು ಕಟ್ಟಡಕ್ಕೆ ಭೂಮಿ ಪೂಜೆಯನ್ನು ಜೂ.02 ರಂದು ನೆರವೇರಿಸಲಾಯಿತು.‌  ಸೂಡ ಅಧ್ಯಕ್ಷ ಮುಸ್ತಾಫಾ ಸುಳ್ಯ ದೀಪ ಬೆಳಗಿಸಿ ಶುಭಹಾರೈಸಿದರು.‌ ಟಿಎಪಿಸಿಎಂಎಸ್ ನ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಉಪಾಧ್ಯಕ್ಷ ಪಿ.ಎಸ್.ಗಂಗಾಧರ್, ಸೋಮಶೇಖರ ಕೊಯಿಂಗಾಜೆ, ಸಂಶುದ್ದೀನ್ ಎಸ್., ರಾಜೀವಿ ರೈ, ಸುರೇಶ್ ಅಮೈ, ಶ್ರೀಮತಿ...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಜಾಲ್ಸೂರು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎಂ. ದೀಪಬೆಳಗಿಸಿ ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿದರು. ಅತಿಥಿಗಳಾಗಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಜತೆ ಕಾರ್ಯದರ್ಶಿ ಜಯರಾಮ ರೈ , ನಿರ್ದೇಶಕ ಮೋನಪ್ಪ ಎಂ, ಸುಂದರ...

ಅರಂತೋಡು : ಪ್ರಾಥಮಿಕ ಶಾಲಾ ಬಳಿ ರಸ್ತೆಗೆ ಬಾಗಿದ್ದ ಅಪಾಯಕಾರಿ ಮರ ತೆರವು

ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ ಬಳಿ ರಸ್ತೆಗೆ ಬಾಗಿ ಮರವೊಂದು ಅಪಾಯ ಆಹ್ವಾನಿಸುತ್ತಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿರುವ ಮರವನ್ನು  ತೆರವುಗೊಳಿಸುವಂತೆ ಒತ್ತಾಯಿಸಿ ಅಮರ ಸುದ್ದಿ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಆರಣ್ಯ ಇಲಾಖೆ ಅಪಾಯ ಅಹ್ವಾನಿಸುತ್ತಿದ್ದ ಮರವನ್ನು ತೆರಗೊಳಿಸಿದ್ದಾರೆ

ಕೊಲ್ಲಮೊಗ್ರು : ಕೆ.ವಿ.ಜಿ ಪ್ರೌಢಶಾಲೆಯ ಶಿಕ್ಷಕರಾದ ವೆಂಕಟ್ರಮಣ ಕೊಪ್ಪಡ್ಕ ಸೇವಾ ನಿವೃತ್ತಿ

ಕೊಲ್ಲಮೊಗ್ರು ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯ ಸಹಶಿಕ್ಷಕರಾದ ಕೆ.ಕೆ ವೆಂಕಟ್ರಮಣ ಕೊಪ್ಪಡ್ಕ ರವರು ಸೇವಾ ನಿವೃತ್ತಿಯನ್ನು ಹೊಂದಿದ್ದು, ಸುಧೀರ್ಘ 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಇವರು ಕಲ್ಮಕಾರು ಗ್ರಾಮದ ಕೊಪ್ಪಡ್ಕ ದಿ| ಕುಶಾಲಪ್ಪ.ಕೆ.ಎಸ್ ಹಾಗೂ ದಿ| ಹೊನ್ನಮ್ಮ ದಂಪತಿಗಳ ಪುತ್ರ.ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ ಶಾಲೆ ಕಲ್ಮಕಾರು ಇಲ್ಲಿ ಪಡೆದಿದ್ದು, ಪ್ರೌಢಶಾಲಾ ಶಿಕ್ಷಣವನ್ನು...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಛಾಯಾ ಮಾನಸ ಗಿಡ ವಿತರಣೆ

ಸುಬ್ರಹ್ಮಣ್ಯ ಮೇ 30 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗುರುವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಛಾಯಾ ಮಾನಸ ಗಿಡಗಳನ್ನು ವಿತರಣೆ ಮಾಡಲಾಯಿತು. ಛಾಯಾ ಮಾನಸ ಪ್ಲಾಂಟ ಗಳನ್ನು ಮಾಡುವುದರಿಂದ ಇದರ ಪ್ರಾಮುಖ್ಯತೆ ಏನೆಂದರೆ ಇದರಲ್ಲಿ ಮ್ಯಾಗ್ನಿಷಿಯಮ್, ಕ್ಯಾಲ್ಸಿಯಂ ಹಾಗೂ ಕಬ್ಬಿನಾಂಶಗಳಿರುತ್ತವೆ. ಇದು ಡಯಾಬಿಟಿಸ್ ರೋಗಿಗಳಿಗೆ ಅತ್ಯುತ್ತಮವಾದ ಔಷಧ. ಅಲ್ಲದೆ ಇದರಲ್ಲಿ ರೋಗ ನಿರೋಧಕ...

ಬಾಳಿಲ:ಪ್ರತಿಭಾ ಪುರಸ್ಕಾರ 2025

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ ಮೇ 30ರಂದು 2024 -25ನೇ ಎಸ್ ಎಸ್ ಎಲ್ ಸಿ ಬ್ಯಾಚಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ವೇದಿಕೆಯಲ್ಲಿ ಸಭಾಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ ( ರಿ.) ಬಾಳಿಲ ಇದರ ಅಧ್ಯಕ್ಷರಾದ ಯು ರಾಧಾಕೃಷ್ಣರಾವ್ ವಹಿಸಿದ್ದರು. ರಾಜ್ಯಮಟ್ಟದಲ್ಲಿ ಹತ್ತನೇ ರಾಂಕ್ ಗಳಿಸಿದ ಉತ್ತಮ್ ಕೆ ಇವರನ್ನು ಸನ್ಮಾನಿಸಲಾಯಿತು. ವಿದ್ಯಾಸಂಸ್ಥೆಯ ಹಿರಿಯ...

ದಕ್ಷಿಣ ಕನ್ನಡ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಸಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಮುಂದೆ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯು ತುರ್ತು ಕ್ರಮಗಳನ್ನು ಕೈಗೊಂಡಿದೆ.ಆದ್ದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ,...

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ವ್ಯಾಪಕ ಮಳೆ ; ಇಂದು(ಮೇ.30) ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು(ಮೇ.30) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!