- Tuesday
- August 11th, 2026
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.07ರಂದು ಸೋಮವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಸುಳ್ಯ:ಗೌಡರ ಯುವ ಸೇವಾ ಸಂಘದ ತಾಲೂಕು ಮಹಿಳಾ ಘಟಕದ ವತಿಯಿಂದ ಸುಳ್ಯ ತಾಲೂಕು ಮಟ್ಟದ ಮಕ್ಕಳ ಚೆಸ್ ಸ್ಪರ್ಧೆ ಎ.22ರಂದು ಕೊಡಿಯಾಲಬೈಲಿನ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದುವತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸ್ಪರ್ಧೆಯ ವಿವರ ನೀಡಿದರು. ಅವರು 1ರಿಂದ 10ನೇ ತರಗತಿಯವರೆಗಿನ...
ಮಿತ್ತಮಜಲು ಸಮೀಪ ವಿದ್ಯುತ್ ಕಂಬಕ್ಕೆ ಕಾರೊಂದು ಗುದ್ದಿದ ಘಟನೆ ಕಳೆದ ರಾತ್ರಿ ನಡೆದಿದೆ. ಕಾರು ಗುದ್ದಿದ ರಭಸಕ್ಕೆ ಕಂಬ ಮುರಿದಿದೆ. ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದು ನಂಬರ್ ಪ್ಲೇಟ್ ಬಿದ್ದು ಸಿಕ್ಕಿದೆ ಎನ್ನಲಾಗಿದೆ.
ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆ ಅಂಗವಾಗಿ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ಧ್ವಜರೋಹಣ ಕಾರ್ಯಕ್ರಮ ಹಮ್ನಿಕೊಳ್ಳಲಾಗಿದ್ದು ಅದರ ಅಂಗವಾಗಿ ದೇವಚಳ್ಳ ಗ್ರಾಮದ ದೇವ ಬೂತ್ ನಲ್ಲಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ದೇವ ಬೂತ್ ಅಧ್ಯಕ್ಷರಾದ ಲಕ್ಷ್ಮೀಶ ಅಡ್ಡನಪಾರೆ ಯವರ ಮನೆಯಲ್ಲಿ ಪಕ್ಷದ ಧ್ವಜರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ರಮೇಶ್ ಪಡ್ಪು, ಬೂತ್...
ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಸಭೆ ಎ. 5ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಶುಭಾಶ್ಚಂದ್ರ ಕೊಳ್ನಾಡು ಮಾತನಾಡಿ ಪಂಚಾಯತ್ ರಾಜ್ ಸಂಘಟನೆಯನ್ನು...
ಹರಿಹರ ಪಳ್ಳತ್ತಡ್ಕ ಗ್ರಾಮದ ಮುಂಡಾಜೆ ಲಿಂಗಪ್ಪ ಗೌಡ ರವರು ಏ.05 ರಂದು ರಾತ್ರಿ 10:00 ಗಂಟೆ ಸುಮಾರಿಗೆ ನಿಧನರಾದರು.ಮೃತರಿಗೆ 95 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಭಾಗೀರಥಿ, ಪುತ್ರ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಪೃಥ್ವಿಚಂದ್ರ ಮುಂಡಾಜೆ, ಪುತ್ರಿ ಶ್ರೀಮತಿ ಪ್ರತಿಮಾ ವಾಸುದೇವ ಗಬ್ಲಡ್ಕ, ಸೊಸೆ ಚಂದ್ರಲತಾ ದಿವಾಕರ ಮುಂಡಾಜೆ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು-ಮಿತ್ರರನ್ನು...
ಪಂಜ ಜಳಕದಹೊಳೆ ಬಳ್ಳಕ್ಕ ಗುತ್ತಿಗಾರು ಸಂಪರ್ಕಿಸುವ ರಸ್ತೆಯಲ್ಲಿ ಜಳಕದಹೊಳೆ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಹೊಳೆಗೆ ಮಣ್ಣು ಹಾಕಿ ಬದಲಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಇದೀಗ ಮಳೆಯಿಂದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದ್ದು ಸೇತುವೆ ಮೇಲೆ ದ್ವಿಚಕ್ರ ವಾಹನ ಹೊರತು ಪಡಿಸಿ ಇತರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಸುಳ್ಯದ ಡಾ. ಹರಿಕೃಷ್ಣ ರೈ ಯವರು ಬೆಂಗಳೂರಿನ ಜಿ.ಇ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಸೀನಿಯರ್ ಪ್ರಾಡಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ನಿನ್ನೆ ಎ.4 ರಂದು ಅಮೇರಿಕಾದ ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕೀ ನಗರದಲ್ಲಿ ನಡೆದ ಜಿ ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ 2025 ರಲ್ಲಿ ಭಾಗವಹಿಸಿ, ಅವರು ಪ್ರದರ್ಶಿಸಿದ " ಎಂ.ಆರ್.ಐ ಸ್ಕ್ಯಾನರ್...
ಮುಪ್ಪೇರ್ಯ ಗ್ರಾಮದ ಮೂಲೆಮಜಲು ದೋಳ ಗರಡಿಯಲ್ಲಿ ಕಾಲಾವಧಿ ನಡೆಯುವ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ ನಡೆಯಿತು. ಏ.4ರಂದು ಬೆಳಿಗ್ಗೆ ಕೊಡಮಂತಾಯ ದೈವಕ್ಕೆ ನೇಮ, ಬ್ರಹ್ಮರ ಉತ್ಸವ ನಡೆಯಿತು.ಸಂಜೆ ಬೈದರ್ಕಳ ಭಂಡಾರ ತೆಗೆದು ಶ್ರೀ ರಾಮ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಬಳಿಕ ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ಬ್ರಹ್ಮ ಬೈದರ್ಕಳ ಗರಡಿ ಇಳಿಯುವುದು, ಮಾನಿ ಬಾಲೆ...
Loading posts...
All posts loaded
No more posts
