ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರದಲ್ಲಿ ಭಾವ ತೀರ ಯಾನ ರನ್ನಿಂಗ್ – ಏ.06ರಂದು ಸಂಜೆ 3.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.06ರಂದು ಆದಿತ್ಯವಾರ ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಾ ಯಂತ್ರದ ಉದ್ಘಾಟನಾ ಕಾರ್ಯಕ್ರಮ ಕಾಂಗ್ರೆಸ್ ನಾಯಕರ ಒತ್ತಡದಿಂದ ರದ್ದು – ವೆಂಕಟ್ ವಳಲಂಬೆ ಖಂಡನೆ

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಯಂತ್ರ ಉದ್ಘಾಟನಾ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ನಾಯಕರ ಒತ್ತಡದಿಂದ ರದ್ದುಗೊಳಿಸಿರುವುದನ್ನು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಖಂಡಿಸಿದ್ದಾರೆ. ಆರೋಗ್ಯ ಜನಸಾಮಾನ್ಯರ ಅಗತ್ಯತೆಯಲ್ಲೊಂದು ಈ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಯಂತ್ರ ಉದ್ಘಾಟನೆಯಾಗಬೇಕಿತ್ತು ಆದರೆ ಸರ್ಕಾರದಿಂದ ನಾಮ ನಿರ್ದೇಶನಗೊಂಡ ಕಾಂಗ್ರೆಸ್ ನ ಗ್ಯಾರಂಟಿ ಅನುಷ್ಠಾನ...
Ad Widget

ರಶ್ಮಿ ನೆಕ್ಕಿಲರಿಗೆ 3ನೇ ರ‌್ಯಾಂಕ್

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ 20ನೇ ಘಟಿಕೋತ್ಸವದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಕುಮಾರಿ ರಶ್ಮಿರವರು ಇತಿಹಾಸ ವಿಭಾಗದಲ್ಲಿ ಮೈಸೂರು ಮುಕ್ತ ವಿಶ್ವವಿದ್ಯಾನಿಲಯಕ್ಕೆ 3ನೇ ರ‌್ಯಾಂಕ್  ಪಡೆದಿದ್ದಾರೆ. ಇವರು ಕಲ್ಲುಗುಂಡಿ ದಂಡೆಕಜೆಯ ನೆಕ್ಕಿಲ ಶ್ರೀ ಎಲ್ಯಣ್ಣ ಗೌಡ ಹಾಗೂ ಶ್ರೀಮತಿ ನಳಿನಿ ದಂಪತಿಗಳ ದ್ವಿತೀಯ ಪುತ್ರಿಯಾಗಿದ್ದು, 1ನೇ ತರಗತಿಯಿಂದ 7ನೇ...

ಗುತ್ತಿಗಾರು : ಕೆ.ಎಸ್.ಎಸ್. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ದಿನಾಂಕ 04/04/25ರಿಂದ 10/04/2025 ರಂದು ವಿಶೇಷ ವಾರ್ಷಿಕ ಶಿಬಿರವನ್ನು ಪದವಿ ಪೂರ್ವ ಕಾಲೇಜು ಗುತ್ತಿಗಾರಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್...

ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ವೈದ್ಯಕೀಯ ಅಧಿಕಾರಿಯಾಗಿ ಡಾ| ನಂದಕುಮಾರ್ ಬಾಳಿಕಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘ 29 ವರ್ಷಗಳಿಂದ ಸೇವೆ ಸಲ್ಲಿಸಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ವಯೋನಿವೃತ್ತಿ ಹೊಂದಿರುವ ಡಾ| ನಂದಕುಮಾರ್ ಬಾಳಿಕಳ ರವರು ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.ಕೆ.ವಿ.ಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ನಿರ್ದೇಶಕರು ಹಾಗೂ ಎ.ಓ.ಎಲ್.ಇ ಅಧ್ಯಕ್ಷರೂ...

ಸುಳ್ಯ :  ಆರೋಗ್ಯ ರಕ್ಷಾ ಸಮಿತಿಯ ಸಭೆ

ಸುಳ್ಯ ತಾಲೂಕು ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿ ಸಾಮಾನ್ಯ ಸಭೆ ಏ. 01 ರಂದು ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಹೀದ್ ಪಾರೆ ಚಂದ್ರನ್ ಕೂಟೇಲ್, ಅಬ್ದುಲ್ ರಝಾಕ್,  ರಾಧಾಕೃಷ್ಣ ಪಾರಿವಾರಕಾನ, ಸುರೇಶ್ ಕಾಮತ್ ಗಿರೀಶ್ ಪಡ್ದoಬೈಲ್, ಸಂಜೀವ ಬಡ್ಡೆಕಲ್ಲು, ತಾಲೂಕು...

ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯಕ್ರಮ ಅನುಷ್ಠಾನದ ಉಸ್ತುವಾರಿಗಳಾಗಿ  ಕೆ.ಪಿ.ಜಾನಿ ನೇಮಕ

ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಕೆ.ಪಿ.ಜಾನಿಯವರನ್ನು ಮೈಸೂರು ವಿಭಾಗೀಯ ವ್ಯಾಪ್ತಿಯಲ್ಲಿ ಬರುವ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಕಾರ್ಮಿಕ ಕಲ್ಯಾಣ ಮಂಡಳಿಯ ಉಸ್ತುವಾರಿಗಳಾಗಿ ಕಾರ್ಮಿಕ ಸಚಿವರಾದ  ಸಂತೋಷ್ ಲಾಡ್ ಅವರ ಸೂಚನೆಯ ಮೇರೆಗೆ ನೇಮಕಗೊಳಿಸಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ ಡಿ....

ಮುರೂರು ಶ್ರೀಕೃಷ್ಣ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದೂವರೆ ಲಕ್ಷ ಅನುದಾನ ಮಂಜೂರು

ಮಂಡೆಕೋಲು ಗ್ರಾಮದ ಮುರೂರು ದ್ವಾರಕಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ ಒಂದೂವರೆ ಲಕ್ಷ ಧನಸಹಾಯ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡರವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ದಾನಗಳಿಗೆ ಹೆಸರುವಾಸಿಯಾಗಿದ್ದು ಕಳೆದ 800 ವರ್ಷಗಳಿಂದ...

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ – ಏ.04ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶುಕ್ರವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ – ಏ.04ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶುಕ್ರವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.
Loading posts...

All posts loaded

No more posts

error: Content is protected !!