- Tuesday
- August 11th, 2026
ಫೆ 08 ರಂದು ಕನಕಮಜಲಿನ ಸುಣ್ಣಮೂಲೆಯಲ್ಲಿ ಪಾದಾಚಾರಿಗಳ ಸಾವಿಗೆ ಕಾರಣವಾಗಿದ್ದ ವಾಹನ ಪತ್ತೆ ಹಚ್ಚುವಲ್ಲಿ ಪೋಲೀಸರು ಯಶಸ್ವಿಯಾಗಿದ್ದು ಇಂದು ಕಾರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಭೇದಿಸಲು ಪೋಲೀಸರು ವ್ಯಾಪಕ ತನಿಖೆ ಆರಂಭಿಸಿದ್ದರು. ಜಾಲ್ಸೂರಿನಿಂದ ಹಿಡಿದು ಸುಳ್ಯದ ತನಕ ಎಲ್ಲಾ ರಸ್ತೆ ಕಾಣುವ ಸಿಸಿ ಟಿವಿ ಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಒಂದು ಇಕೋ ಕಾರು ಸಂಶಯಾಸ್ಪದವಾಗಿ...
ಚೈತ್ರ ಯುವತಿ ಮಂಡಲ ಅಜ್ಜಾವರ , ಪ್ರತಾಪ ಯುವಕ ಮಂಡಲ ಅಜ್ಜಾವರ ಹಾಗೂ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ತುಳುನಾಡಿನ ವಿಶಿಷ್ಟ ಪರ್ಬವಾದ ಕೆಡ್ಡಸ ಆಚರಣೆ ಕಾರ್ಯಕ್ರಮ ಮಾವಿನಪಳ್ಳದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ವಹಿಸಿದ್ದರು. ಕೆಡ್ಡಸ ಆಚರಣೆಯ ಮಹತ್ವದ ಬಗ್ಗೆ ಮಾಹಿತಿಯನ್ನು ಶ್ರೀ ಶಾಸ್ತಾವೇಶ್ವರ ದೇವಸ್ಥಾನ...
ಜೀವನದಿಯಾಗಿರುವ ಪಯಸ್ವಿನಿ ಸುಳ್ಯದ ನಗರ ಹಾಗೂ ಅಜ್ಜಾವರ ಗ್ರಾಮದಲ್ಲಿನ ಜನರ ಕುಡಿಯುವ ನೀರಿಗೆ ವಿಷಪ್ರಾಶನವಾಗಿದ್ದು ಇದೀಗ ಮೀನು ಸೇರಿದಂತೆ ಹಲವು ಜಲಚರಗಳ ಮಾರಣಹೋಮವೇ ನಡೆದು ಹೋಗಿದೆ. ಫೆ.9ರಂದು ಸುಳ್ಯದ ಪಯಸ್ವಿನಿ ನದಿಯ ನಾಗಪಟ್ಟಣ, ಭಸ್ಮಡ್ಕ ವ್ಯಾಪ್ತಿಯಲ್ಲಿ ಸಾವಿರಾರು ಮೀನುಗಳು ಸಾವಿಗೀಡಾಗಿದ್ದು, ದಿ.10 ರಂದು ಮುಂಜಾನೆ ಮತ್ತೆ ಕಾಂತಮಂಗಲ ದಲ್ಲಿಯೂ ಮೀನುಗಳು ಸತ್ತು ತೇಲಲಾರಂಭಿಸಿದವು. ನದಿ ನೀರಿನಲ್ಲಿ...
ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷ ದೈವ ದೈವಸ್ಥಾನದ ಜಾತ್ರಾ ಮುಹೂರ್ತ ಅಂಗವಾಗಿ ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಕಾರ್ಯಕ್ರಮ ಶಂಖಚೂಡ ಕ್ಷೇತ್ರದಲ್ಲಿ ಫೆ.10 ರಂದು ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಆಡಳಿತ ಮೊಕ್ತೇಸರರಾದ ಕಾಳಿಕಾ ಪ್ರಸಾದ್ ಮುಂಡೋಡಿ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ...
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.11 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...
ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ವತಿಯಿಂದ ಪಿಎಂ ಪೋಷಣ್ ಅಭಿಯಾನದಡಿ ಕೆಪಿಎಸ್ ಪ್ರೌಢ ಶಾಲೆ ಬೆಳ್ಳಾರೆಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಅಡುಗೆ ತಯಾರಿ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಪ್ರಾಥಮಿಕ ಶಾಲೆಯ ಅಡುಗೆ ಸಿಬ್ಬಂದಿಗಳಾದ ಗಿರಿಜಾ ಕೆ, ಜಾನಕಿ ಹಾಗೂ ಸಾವಿತ್ರಿ ತಂಡ ಸತತ ನಾಲ್ಕನೇ ಬಾರಿ ಪ್ರಶಸ್ತಿ ಪಡೆದುಕೊಂಡಿದೆ. ಕೆಪಿಎಸ್ ಪ್ರೌಢ...
ಐ ಎಫ್ ಸಿ ಗುತ್ತಿಗಾರು ಆಯೋಜಿಸಿದ ಜಿಲ್ಲಾ ಮಟ್ಟದ ಐ ಎಫ್ ಸಿ ರನ್ ಮ್ಯಾರಥಾನ್ ಗೆ ಫೆ.9 ರಂದು ವಳಲಂಬೆ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು. ದೀಪ ಪ್ರಜ್ವಲಿಸುವ ಮೂಲಕ ಗುತ್ತಿಗಾರು ವರ್ತಕರ ಸಂಘದ ಅಧ್ಯಕ್ಷ ಶಿವರಾಮ ಕರುವಾಜೆ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಮಾಜಿ ಮಂಡಲ ಪ್ರಧಾನರಾದ ಮುಳಿಯ...
ಕನಕಮಜಲಿನ ಸುಣ್ಣಮೂಲೆ ಬಳಿ ಅಪಘಾತ ನಡೆಸಿ ಇಬ್ಬರು ಪಾದಚಾರಿಗಳ ಸಾವಿಗೆ ಕಾರಣವಾದ ವಾಹನವನ್ನು ಪತ್ತೆ ಹಚ್ಚುವಲ್ಲಿ ಸುಳ್ಯ ಪೋಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯದ ಬೀರಮಂಗಲದ ವ್ಯಕ್ತಿಯೊಬ್ಬರಿಗೆ ಸೇರಿದ ಇಕೋ ವಾಹನ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಳಿಕ ತನಿಖೆ ಮುಂದುವರೆಸಿದ್ದು ಕಾರಿನ ಚಾಲಕ ಮತ್ತು ಮಾಲಿಕರನ್ನು ವಿಚಾರಣೆ ನಡೆಸಲಾಗುತ್ತಿದ್ದು, ನಾಳೆ ಮುಂಜಾನೆ ಕಾರನ್ನು ಸೀಝ್ ಮಾಡಲಾಗುವುದು ಎಂದು ಪೋಲಿಸ್ ಉನ್ನತ...
ಸುಬ್ರಹ್ಮಣ್ಯ ಫೆ.8 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ವತಿಯಿಂದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಶನಿವಾರ ಸರ್ವೈಕಲ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರು ಹಾಜರಿದ್ದರು.ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ ಡಾ. ನಂದಕುಮಾರ್ ಕ್ಯಾನ್ಸರ್ ರೋಗದ ಹಿನ್ನೆಲೆ, ವಿವಿಧ...
ಕನಕಮಜಲಿನಲ್ಲಿ ಪಾದಾಚಾರಿಗಳಿಗೆ ಕಾರೊಂದು ಢಿಕ್ಕಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಅವರಿಬ್ವರು ಮೃತಪಟ್ಟ ಘಟನೆ ವರದಿಯಾಗಿದೆ. ಫೆ.08 ರಂದು ರಾತ್ರಿ ಅಪಘಾತ ನಡೆದ ಬಳಿಕ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದ. ಸ್ಥಲೀಯರು ಗಾಯಾಳುಗಳನ್ಬು ಆಸ್ಪತ್ರೆಗೆ ಸಾಗಿಸಿದ್ದರು. .ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ...
Loading posts...
All posts loaded
No more posts
