ಕನಕಮಜಲು : ಪಾದಾಚಾರಿಗಳಿಬ್ಬರಿಗೆ ಢಿಕ್ಕಿಯಾದ ಕಾರು – ಗಂಭೀರ ಗಾಯ – ಕಾರು ನಿಲ್ಲಿಸದೇ ಚಾಲಕ ಪರಾರಿ

ಪಾದಾಚಾರಿಗಳಿಗೆ ಕಾರೊಂದು ಢಿಕ್ಕಿ ಹೊಡೆದು ಚಾಲಕ ನಿಲ್ಲಿಸದೇ ಪರಾರಿಯಾದ ಘಟನೆ ಕನಕಮಜಲಿನ ಸುಣ್ಣಮೂಲೆಯಲ್ಲಿ ಕಳೆದ ರಾತ್ರಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದು ಒರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ ನಡೆಯುತ್ತಿದ್ದು, ಕೋಡಿಯ ಜನಾರ್ದನ ಶೆಟ್ಟಿ ಹಾಗೂ ಅವರ ಮಾವ ರಾಮ...

ಉಬೈಸ್ ಗೂನಡ್ಕ ರವರಿಗೆ ರಾಷ್ಟ್ರೀಯ ಪ್ರೇರಣಾ ದೂತ ಪ್ರಶಸ್ತಿ ಪ್ರದಾನ

ಉಬೈಸ್ ಗೂನಡ್ಕ ರವರಿಗೆ ಸಿಲ್ವರ್ ಮೆಡಲ್ ಮತ್ತು ರಾಷ್ಟ್ರೀಯ ಪ್ರೇರಣಾ ದೂತ ಪ್ರಶಸ್ತಿಯನ್ನು ರಾಮಕೃl ಮಠದ ಕಾರ್ಯದರ್ಶಿ ಸ್ವಾಮಿ ಅತಿ ದೇವಾನಂದ ಮಹಾರಾಜ್, ಐಎಎಸ್ ಅಧಿಕಾರಿಗಳು ಮತ್ತು ಬಿಹಾರದ ಮಾಜಿ ಕಾರ್ಮಿಕ ಸಚಿವ ಸುರೇಂದ್ರ ರಾಂ ಅವರಿಂದ ಪ್ರದಾನ ಮಾಡಲಾಯಿತು. ಉಬೈಸ್ ಅವರು ಯೆನೆಪೋಯಾ ವಿಶ್ವವಿದ್ಯಾಲಯದಲ್ಲಿ ಸಕ್ರಿಯ NSS ಸ್ವಯಂಸೇವಕರಾಗಿ, ಚುರುಕು ವಿದ್ಯಾರ್ಥಿಯಾಗಿ ಮತ್ತು ತುರ್ತು...
Ad Widget

ಫೆ.09 ರಂದು ಪೆರುವಾಜೆಯಲ್ಲಿ ಮ್ಯಾರಥಾನ್ 2025

ರಾಜ್ಯ ಪ್ರಶಸ್ತಿ ಪುರಸ್ಕೃತ ಭಾವೈಕ್ಯ ಯುವಕ ಮಂಡಲ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲ ಹಾಗೂ ಭಾವೈಕ್ಯ ಚಿಗುರು ವೇದಿಕೆ ಪೆರುವಾಜೆ ಇದರ ಸಹಯೋಗದೊಂದಿಗೆ ಪೆರುವಾಜೆ ಮ್ಯಾರಥಾನ್ 2025 ಫೆ.09  ಆದಿತ್ಯವಾರದಂದು ಬೆಳಿಗ್ಗೆ 7.30 ಭಾವೈಕ್ಯ ಯುವಕ ಮಂಡಲ ಆವರಣದಲ್ಲಿ ನಡೆಯಲಿದೆ.‌ 14 ಮತ್ತು 17 ವರ್ಷದೊಳಗಿನಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಮ್ಯಾರಥಾನ್ ಓಟ ನಡೆಯಲಿದೆ. ಹೆಚ್ಚಿನ...

ಬಂಗ್ಲೆಗುಡ್ಡೆ : ಸ.ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ. ರಚನೆ – ಅಧ್ಯಕ್ಷರಾಗಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾಗಿ ಮೋಹನ್ ಅಂಬೆಕಲ್ಲು

ಬಂಗ್ಲೆಗುಡ್ಡೆ ಸ.ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ. ಸಭೆ ಫೆ.08 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾಗಿ ಮೋಹನ್ ಅಂಬೆಕಲ್ಲು ಅಯ್ಕೆ ಮಾಡಲಾಯಿತು.‌ಸದಸ್ಯರಾಗಿ ಚಂದ್ರಶೇಖರ ಕೋನಡ್ಕ, ಜಯಂತಿ ಕೊಂದಾಳ ತೇಜಸ್ವಿನಿ ಶಿರೂರು, ಯೋಗೀಶ್ ಅರಂಬ್ಯ, ಗೋಪಾಲಕೃಷ್ಣ, ರೋಹಿತ್ ದಬ್ಬಡ್ಕ, ಮನೋಜ್ ಪೆರ್ನಾಜೆ, ಅರ್ಪಿತಾ ಮಿತ್ತೋಡಿ, ಸುಪ್ರೀತಾ ತೋಟದಮಜಲು, ಕುಮುದಾ ಕಟ್ಟ,...

ಕಳಂಜ ಬಾಳಿಲ ಸಹಕಾರಿ ಸಂಘದ ಚುನಾವಣೆ – 11 ಸ್ಥಾನ ಪಡೆದ ಸಹಕಾರ ಭಾರತಿ, 2 ಸ್ಥಾನಕ್ಕೆ ತೃಪ್ತಿಪಟ್ಟ ಸಹಕಾರಿ ಸಮನ್ವಯ ರಂಗ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.07 ರಂದು ಚುನಾವಣೆ ನಡೆದಿದ್ದು ಒಟ್ಟು 13 ಸ್ಥಾನಗಳ ಪೈಕಿ ಸಹಕಾರ ಭಾರತಿ ಅಭ್ಯರ್ಥಿಗಳು 11 ಸ್ಥಾನ ಗೆದ್ದು ಬೀಗಿದ್ದು, ಸಹಕಾರಿ ಸಮನ್ವಯ ರಂಗ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಸಹಕಾರ ಭಾರತಿಯ ಪ್ರಭಾಕರ ಆಳ್ವ , ಅಜಿತ್ ರಾವ್ , ರವಿಪ್ರಸಾದ್ ರೈ...

ಮಿಥ್ಯ ಮಾತ್ರೆಗಳು ಮತ್ತು ನಗ್ನ ಸತ್ಯಗಳು

ಶರೀರೇ ಜರ್ಜರೀ ಭೂತೇ ವ್ಯಾಧಿ ಗ್ರಸ್ಥೆ ಕಳೇಬರೇ ಔಷಧಂ ಜಾಹ್ನವೀಃ ತೋಯಂ, ವೈದ್ಯೋ ನಾರಾಯಣೋ ಹರಿಃ. ಮನುಷ್ಯನ ದೇಹಕ್ಕೆ ರೋಗವು ತಗಲಿಕೊಂಡು, ಸರ್ವ ಕ್ರಿಯೆಗಳು ನಿಷ್ಕ್ರೀಯವಾಗಿ, ದೇಹವು ಕಳೇಬರದಂತಾದಾಗ ಸ್ವತಃ ನಾರಾಯಣನೇ ವೈದ್ಯನ ರೂಪದಲ್ಲಿ ಬರುತ್ತಾನೆ. ಮತ್ತು ಗಂಗಾಜಲವೇ ಅಮೃತವಾಗುತ್ತದೆ ಎಂಬುದು ಪುರಾತನ ಕಾಲದಿಂದಲೂ ನಾವು ನಂಬಿಕೊಂಡು ಬಂದ ಸಾರ್ವಕಾಲಿನ ಸತ್ಯ.ವೈದ್ಯ ಮತ್ತು ರೋಗಿಗಳ ಸಂಬಂಧದಲ್ಲಿ...

ದೆಹಲಿ ಚುನಾವಣೆ – ಬಿಜೆಪಿ ಜಯಭೇರಿ – ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದೆ. ದೆಹಲಿ ವಿಧಾನಸಭಾ ಕ್ಷೇತ್ರದ 70 ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನ‌ಗಳಲ್ಲಿ ಗೆಲುವು ಕಂಡಿದೆ. ವಿಜಯೋತ್ಸವದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರುಗಳಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ್ ಕಂಜಿಪಿಲಿ, ರಾಕೇಶ್...

ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೂಲಕ ಉದ್ಯೋಗ ಕ್ರಾಂತಿ ಸೃಷ್ಟಿಗೆ ಪ್ರಯತ್ನ – ಯತೀಶ ಕೆ.ಎಸ್

ತಂತ್ರಜ್ಞಾನ ಕ್ಷೇತ್ರದಲ್ಲಿ ಅಂಬೆಗಾಲಿಡುತ್ತಿರುವ ಸಂದರ್ಭದಲ್ಲಿಯೇ ಗಮನಾರ್ಹ ಸಾಧನೆಯನ್ನು ಮಾಡಿ ಹೆಸರು ಮಾಡಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದೀಗ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮೂಲಕ ಉದ್ಯೋಗ ಕ್ರಾಂತಿಯನ್ನೇ ಸೃಷ್ಟಿಸಲು ಮುಂದಾಗಿದೆ ಎಂದು ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ಥಾಪಕರು ಹಾಗೂ ಕಾರ್ಯ ನಿರ್ವಹಣಾಧಿಕಾರಿ ಯತೀಶ ಕೆ.ಎಸ್ ಹೇಳಿದರು.ಅವರು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

ಚಿದಾನಂದ ಗೌಡ ಅಂಬೆಕಲ್ಲು ನಿಧನ

ನಾಲ್ಕೂರು ಗ್ರಾಮದ ಅಂಬೆಕಲ್ಲು ಚಿದಾನಂದ ಗೌಡರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅಲ್ಪಕಾಲದ ಅಸೌಖ್ಯಕ್ಕೊಳಗಾದ ಅವರಿಗೆ 83 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ದಮಯಂತಿ, ಮಕ್ಕಳಾದ ಏಕಲವ್ಯ, ಹರ್ಷ, ತಾರಾ ಪುರುಷೋತ್ತಮ ಉಳುವಾರು,ಸಹೋದರ, ಸೊಸೆಯಂದಿರು, ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಕೊಲ್ಲಮೊಗ್ರ : ಶ್ರೀ ಅಯ್ಯಪ್ಪ ಭಜನಾ ಮಂಡಳಿ ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಹೇಮಂತ್ ದೊಲನಮನೆ, ಕಾರ್ಯದರ್ಶಿಯಾಗಿ ತೀರ್ಥರಾಮ ದೋಣಿಪಳ್ಳ ಆಯ್ಕೆ

ಕೊಲ್ಲಮೊಗ್ರದ ಶ್ರೀ ಮಯೂರ ಕಲಾಮಂದಿರದಲ್ಲಿ ನೂತನವಾಗಿ ಶ್ರೀ ಅಯ್ಯಪ್ಪ ಭಜನಾ ಮಂಡಳಿ ಫೆ. 02 ರಂದು ಉದ್ಘಾಟನೆಗೊಂಡಿತು. ಸುಳ್ಯ ತಾಲೂಕಿನ ಭಜನಾ ಪರಿಷತ್ತಿನ ಕಾರ್ಯದರ್ಶಿ ಸತೀಶ್ ಟಿ ಎನ್ ಅವರ ಮಾರ್ಗದರ್ಶನದಲ್ಲಿ ನೀಡಿದರು.ಗೌರವ ಸಲಹೆಗಾರರಾಗಿ ಸತೀಶ್ ಟಿ.ಎನ್., ಗೌರವ ಅಧ್ಯಕ್ಷರಾಗಿ ಮಾಧವ ಚಾಂತಾಳ, ಅಧ್ಯಕ್ಷರಾಗಿ ಹೇಮಂತ್ ದೊಲನ ಮನೆ, ಕಾರ್ಯದರ್ಶಿಯಾಗಿ ತೀರ್ಥರಾಮ ದೋಣಿಪಳ್ಳ ಆಯ್ಕೆಯಾದರು.ಸದಸ್ಯರುಗಳಾಗಿ ಯೋಗೀಶ್...
Loading posts...

All posts loaded

No more posts

error: Content is protected !!