- Tuesday
- August 11th, 2026
ಸರಕಾರದ "ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ"ಯನ್ನು ಸಹಕಾರಿ ಸಂಘದ ಮೂಲಕ ಸದಸ್ಯರಿಗೆ ಜಾರಿಗೊಳಿಸಲಾಗಿದ್ದು, ಸುಳ್ಯ ಮತ್ತು ಪುತ್ತೂರು ತಾಲೂಕು ಮಟ್ಟದಲ್ಲಿ ಯಾವುದೇ ಯಶಸ್ವಿನಿ ನೋಂದಾಯಿತ ಆಸ್ಪತ್ರೆಗಳು ಇಲ್ಲದೇ ಇರುವುದರಿಂದ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನ ಸಿಗದೇ ವಂಚಿತರಾಗುತ್ತಿದ್ದಾರೆ. ಸುಳ್ಯ ತಾಲೂಕಿನಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಪುತ್ತೂರು ತಾಲೂಕಿನ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ...
ಸುಳ್ಯ ಭೂ ಅಭಿವೃದ್ಧಿ (LD) ಬ್ಯಾಂಕ್ ಅಧ್ಯಕ್ಷರಾಗಿ ಜಯರಾಮ್ ರೈ ಜಾಲ್ಸೂರು ಹಾಗೂ ಉಪಾಧ್ಯಕ್ಷರಾಗಿ ಅವಿನಾಶ್ ಕುರುಂಜಿ ಮತ್ತು ಕೋಶಾಧಿಕಾರಿಯಾಗಿ ಸುಬ್ರಹ್ಮಣ್ಯ ಭಟ್ ಆಯ್ಕೆಯಾದರು. ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರುಗಳಾದ ವಿನಯಕುಮಾರ್ ಕಂದಡ್ಕ, ಕುಸಮಾಧರ ಎ.ಟಿ., ಸುವರ್ಣಿನಿ ಎಸ್., ಸೋಮನಾಥ...
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು(ಜ.24) ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ಪೂರ್ವಾಹ್ನ 11.00 ಗಂಟೆಗೆ ಎಲಿಮಲೆ ಯಲ್ಲಿ ದೇವಚಳ್ಳ ಶಾಲಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ 1.00 ಗಂಟೆಗೆ ಕಾರ್ಯಕರ್ತರೊಂದಿಗೆ ಸಹಭೋಜನದಲ್ಲಿ ಪಾಲ್ಗೊಂಡು ಬಳಿಕ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಮಧ್ಯಾಹ್ನ 2.00 ಗಂಟೆಯಿಂದ 4.00 ಗಂಟೆಯವರೆಗೆ ಸಂಸದ...
ಪೆರುವಾಜೆ: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಸಂಪನ್ನಗೊಂಡಿದ್ದು ಈ ಹಿನ್ನೆಲೆಯಲ್ಲಿ ರಥಬೀದಿಯ ಇಕ್ಕೆಲಗಳಲ್ಲಿ ಅಳವಡಿಸಿದ ಬಂಟಿಂಗ್ಸ್,ಕಂಬಗಳ ತೆರವು ಕಾರ್ಯವೂ ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ವತಿಯಿಂದ ಜ.23 ರಂದು ರಾತ್ರಿ ಕರಸೇವೆ ಮೂಲಕ ನಡೆಯಿತು. ಕಳೆದ 30 ದಿನಗಳಿಂದ ಕ್ಷೇತ್ರದಲ್ಲಿ ಮುಕ್ಕೂರು ಶ್ರೀ ಉಳ್ಳಾಲ್ತಿ ಭಕ್ತವೃಂದದ ವತಿಯಿಂದ ನಿರಂತರ ಕರಸೇವೆ ಹಮ್ಮಿಕೊಂಡಿದ್ದು ಸರಿ...
ಇತ್ತೀಚೆಗೆ ಗುತ್ತಿಗಾರಿನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕೊಲ್ಲಮೊಗ್ರದ ವ್ಯಕ್ತಿಯನ್ನು ಸುಬ್ರಹ್ಮಣ್ಯ ಪೋಲೀಸರು ಸಿಸಿಟಿವಿ ಪೂಟೇಜ್ ಆಧಾರದಲ್ಲಿ ಬಂಧಿಸಿದ್ದರು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರಲ್ಲಿ ಸಂಶಯ ಮನೆ ಮಾಡಿದ್ದು, ಆತನನ್ನು ಪಿಕ್ಸ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಪೋಲೀಸರ ತನಿಖೆಯ ಬಳಿಕವೇ ನಿಜಾಂಶ ಬಯಲಾಗಬೇಕಿದೆ. ಆತ ಕಳ್ಳತನ ಮಾಡುವಂತಹ ವ್ಯಕ್ತಿ ಅಲ್ಲ, ಸಿಸಿಟಿವಿ ಯಲ್ಲಿ...
ಸುಳ್ಯ: ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಜಿ.ಪಂ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು . ಸಭೆಯ ಪ್ರಾರಂಭದಲ್ಲಿಯೇ ಅಧಿಕಾರಿಗಳು ಕಾಮಗಾರಿಗಳ ಪ್ರಗತಿಗಳ ಬಗ್ಗೆ ವಿವರಣೆ ಪಡೆದಾಗ ಅಧಿಕಾರಿಗಳು ಅಸಮರ್ಪಕ ಉತ್ತರ ನೀಡಿದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳು ಅನುದಾನ ಉಳಿಕೆ ಮತ್ತು ಶೇಕಾಡವಾರು ಕಡಿಮೆ ಇರುವುದನ್ನು ಗಮನಿಸಿ ಗರಂ ಆದ ಜಿ.ಪಂ ಉಪಕಾರ್ಯದರ್ಶಿ...
ಹರಿಹರ ಪಳ್ಳತ್ತಡ್ಕ ಗ್ರಾಮದ ಕುಕ್ಕುಂದ್ರಡ್ಕ ನಿವಾಸಿ ಕೃಷ್ಣ ಗೌಡ ವಾಡ್ಯಪ್ಪನ ಮನೆ ರವರು ಇಂದು(ಜ.22) ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ 75 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಹೊನ್ನಮ್ಮ, ಪುತ್ರ ನವೀನ್, ಪುತ್ರಿಯರಾದ ಯಶೋಮತಿ, ಧನ್ಯ ಹಾಗೂ ಅಳಿಯಂದಿರು, ಸೊಸೆ, ಮೊಮ್ಮಕ್ಕಳು, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದ ವಿಶೇಷ ಚಾಪನ್ನು ಮೂಡಿಸಿರುವ V4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಎಂಬಿ ಫೌಂಡೇಶನ್ನ ಎಂ.ಬಿ. ಸದಾಶಿವ ಸಹಯೋಗದಲ್ಲಿ 'ಅರೆಭಾಷೆ ಕಾಮಿಡಿ' ರಿಯಾಲಿಟಿ ಶೋ ನಡೆಯಲಿದ್ದು ರಿಯಾಲಿಟಿ ಶೋಗೆ ತಂಡಗಳ ಆಯ್ಕೆಗೆ ಫೆ.16ರಂದು ಸುಳ್ಯದ ಲಯನ್ಸ್ ಸಭಾಭವನದಲ್ಲಿ ಆಡಿಷನ್ ನಡೆಯಲಿದೆ...
ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿ ಆಮ್ಲೆಟ್ ವ್ಯಾಪಾರ ನಡೆಸುತ್ತಿರುವ ಕೇಶವ ಕಡೋಡಿ ಅವರ ಅಂಗಡಿಗೆ ಶನಿವಾರ ರಾತ್ರಿ ಕಳ್ಳರು ಬೀಗ ಒಡೆದು ನುಗ್ಗಿ ಜಾಲಾಡಿದ್ದಾರೆ. ಆದಿತ್ಯವಾರ ಸಂಜೆ ಅಂಗಡಿಗೆ ಬಂದಾಗ ವಿಷಯ ಗೊತ್ತಾಗಿದೆ. ಗೂಡಂಗಡಿಯ ಬಾಗಿಲು, ಬೀಗ ಒಡೆದು ಹಾನಿಯಾಗಿದ್ದು ಕಳ್ಳರು ಸ್ಥಳೀಯರೇ ಇರಬೇಕೆಂಬ ಅನುಮಾನ ಮೂಡುವಂತಾಗಿದೆ..
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಸಮಾಜ ಸೇವಕರು, ಉದ್ಯಮಿಗಳು ಹಾಗೂ ಸೂರು ಇಲ್ಲದವರಿಗೆ ಸೂರು ನಿರ್ಮಾಣದ ರೂವಾರಿ ಮಹಮ್ಮದ್ ಕುಕ್ಕುವಳ್ಳಿ ಅವರು ಇಂದು ಅರಂತೋಡಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಅರಂತೋಡು ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ನ ವಿಖಾಯತಂಡದ ಸದಸ್ಯ ತಾಜುದ್ಧೀನ್ ಅರಂತೋಡು ಶಾಲು ಹೊದಿಸಿ,...
Loading posts...
All posts loaded
No more posts
