- Wednesday
- August 12th, 2026
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಜನ ನಿರ್ದೇಶಕರ ಸ್ಥಾನಕ್ಕೆ ಜ.19 ರಂದು ಚುನಾವಣೆ ನಡೆಯಲಿದ್ದು, ಜ.07 ಅಂದರೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದೆ.ಸಾಮಾನ್ಯ ಕ್ಷೇತ್ರಕ್ಕೆ 06, ಹಿಂದುಳಿದ ವರ್ಗ 'ಎ' ಗೆ 01, ಹಿಂದುಳಿದ ವರ್ಗ 'ಬಿ' ಗೆ 01, ಪರಿಶಿಷ್ಟ ಜಾತಿ ಮೀಸಲು 01, ಪರಿಶಿಷ್ಟ ಪಂಗಡ...
ಐವರ್ನಾಡು ಮಾಡತಕ್ಕಾನ ಸ್ಪೋರ್ಟ್ಸ್ ಕ್ಲಬ್ ಇದರ ಮಹಾಸಭೆಯು ಜ. 5ರಂದು ಕ್ಲಬ್ಬಿನ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷರಾದ ಚೇತನ್ ಪರ್ಲಿಕಜೆ ಸಭೆಯ ಅಧ್ಯಕ್ಷತೆಯಲ್ಲಿ ವಹಿಸಿದ್ದರು. ಕಾರ್ಯದರ್ಶಿ ರಾಘವೇಂದ್ರ ಪಾತಿಕಲ್ಲು ಲೆಕ್ಕಪತ್ರ ಮಂಡಿಸಿದರು. 2025ನೇ ಸಾಲಿನ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ವಿ.ಕೆ ಕಲಂದರ್ ಷರೀಫ್ ಹಾಗೂ ಕಾರ್ಯದರ್ಶಿಯಾಗಿ ಚರಣ್ ಪರ್ಲಿಕಜೆ ಇವರನ್ನು ಆಯ್ಕೆ ಮಾಡಲಾಯಿತು....
ಕೊಲ್ಲಮೊಗ್ರು ಬಂಗ್ಲೆಗುಡ್ಡೆ ಶಾಲೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ, ಪೋಷಕ ವೃಂದ, ಶಿಕ್ಷಕ ವೃಂದ,ಹಿರಿಯವಿದ್ಯಾರ್ಥಿ ಸಂಘ,ಊರ ಮತ್ತು ಪರವೂರ ವಿದ್ಯಾಭಿಮಾನಿಗಳ ಸಹಭಾಗಿತ್ವದೊಂದಿಗೆ ಶಾಲಾ ವಾರ್ಷಿಕೋತ್ಸವ ಮತ್ತು ಶ್ರೀಮತಿ ನಳಿನಿ ಹೊನ್ನಪ್ಪ ಕೊಂದಾಳ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಇವರಿಗೆ ಗುರುವಂದನಾ ಕಾರ್ಯಕ್ರಮ ಜ.4 ರಂದು ನಡೆಯಿತು.. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಎನ್.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರು. ಶ್ರೀಮತಿ ಮೋಹಿನಿ...
ಎಲಿಮಲೆಯ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇದರ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಅಭಿವೃದ್ಧಿ ಕೆಲಸ ಭರದಿಂದ ನಡೆಯುತ್ತಿದೆ. ಶಾಲಾ ಪರಿಸರವನ್ನು ಸುಂದರವಾಗಿಸಲು ಗಾರ್ಡನ್ ನಿರ್ಮಿಸಲಾಗಿದೆ. ರಂಗಮಂದಿರದ ಛಾವಣಿ ನಿರ್ಮಾಣ ಭರದಿಂದ ನಡೆಯುತ್ತಿದೆ. ಜ.08 ರಂದು ಶಾಲಾ ಶತಮಾನೋತ್ಸವದ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ.8 ರಂದು ಪೂ.10 ಗಂಟೆಗೆ ಶಾಲೆಯಲ್ಲಿ ಗಣ್ಯರ...
ಕೊಯಿಲ ಗ್ರಾಮ ಪಂಚಾಯತ್ ನ ಆಡಳಿತ ಸಮಿತಿ, ಸಿಬ್ಬಂದಿ ವರ್ಗ, ಸಂಜೀವಿನಿ ಒಕ್ಕೂಟದ ಸುಮಾರು 38 ಜನರ ತಂಡ ಅಧ್ಯಯನಕ್ಕಾಗಿ ಅರಂತೋಡು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದೆ. ಅಧ್ಯಯನ ತಂಡ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಗ್ರಾಮ ಪಂಚಾಯತ್ ನ ಸ್ವಚ್ಛತಾ ಘಟಕದ ಸ್ವಚ್ಛತಾ ಸಂಕೀರ್ಣ, ಅಮೃತ ಉದ್ಯಾನವನ, ಜಿಮ್ ಕೇಂದ್ರ,...
ಪ್ರಥಮ ಬಾರಿಗೆ ಕೊಡ ಮಾಡಿದ ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ ಕೊಡಮಾಡಿದ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಜನವರಿ 3 ಮತ್ತು 4 ರಂದು ನಡೆದ...
ಕುಂಬರ್ಚೋಡು ಮುಹಿಯದ್ದೀನ್ ಜುಮಾ ಮಸೀದಿ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆ ದಾರುಲ್ ಉಲೂಮ್ ಮದರಸದಲ್ಲಿ ಡಿ.27ರಂದು ನಡೆಯಿತು.ಮಸೀದಿಯ ಅಧ್ಯಕ್ಷರಾದ ಹನೀಫ್ ಹಾಜಿ ಕೆ ಎಂ ಸಭಾಧ್ಯಕ್ಷತೆಯನ್ನು ವಹಿಸಿದ್ದರು.ಸ್ಥಳೀಯ ಮಸೀದಿ ಖತಿಬರಾದ ಅಶ್ರಫ್ ಮುಸ್ಲಿಯಾರ್ ದುವಾ ನೆರೆವೇರಿಸಿದರು.ವೇದಿಕೆಯಲ್ಲಿ ಸಲಹಾ ಸಮಿತಿಸದಸ್ಯರಾದ ಆಮು ಹಾಜಿ,,ಮದರಸ ಮುಹಲ್ಲಿಮ್ ರವೂಫ್ ಆಡೂರು ಉಪಸ್ಥಿತರಿದ್ದರು.ಪ್ರದಾನಕಾರ್ಯದರ್ಶಿಯಾದ ಅಬ್ದುಲ್ಖಾದರ್ ಅಕ್ಕರೆ ಕಳೆದ...
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆಯ ಬದಿಯಲ್ಲಿ ಪಂಚಾಯತ್ ವಠಾರದಿಂದ ಬೆಂಗಮಲೆವರೆಗೆ ನಡೆಯಿತು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರು, ಹಾಗೂ ಪ್ರಾಥಮಿಕ ಕೃಷಿ ಪತ್ತಿನ...
ಸುಬ್ರಹ್ಮಣ್ಯ ಜ.4: ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳ ಬೋಧನೆ, ಸಮಯ ಪಾಲನೆ, ಸುತ್ತೋಲೆ ಹಾಗೂ ಪಠ್ಯೇತರ ಚಟುವಟಿಕೆಗಳ ಅನುಕೂಲಕ್ಕಾಗಿ ಸೂಚನಾ ಪಲಕವನ್ನು ಕೊಡುಗೆಯಾಗಿ ನೀಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ಬ್ ನ ಅಧ್ಯಕ್ಷರಾದ ಶ್ರುತಿ ಮಂಜುನಾಥ್ ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಹಾಗೂ...
ಸುಬ್ರಹ್ಮಣ್ಯ ಜ.5: ಕುಕ್ಕೆ ಸುಬ್ರಹ್ಮಣ್ಯದಲ್ಲಿಂದು ಕಿರುಷಷ್ಟಿ ಮಹೋತ್ಸವದ ಅಂಗವಾಗಿ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಳದ ಒಳಾಂಗಣ ಹೊರಾಂಗಣ ಹಾಗೂ ಕ್ಷೇತ್ರದ ಎಲ್ಲಾ ಕಡೆಗಳಲ್ಲಿಯೂ ಭಕ್ತ ಸಂದಣಿ ಹಾಗೂ ವಾಹನ ಸಂದಣಿ ಕಂಡು ಬಂತು. ಕುಕ್ಕೆಯಲ್ಲಿ ಚಂಪಾ ಷಷ್ಟಿ ವಾರ್ಷಿಕ ಜಾತ್ರೋತ್ಸವ ಕಳೆದು ಒಂದು ತಿಂಗಳ ನಂತರದ ಕಿರು ಷಷ್ಟಿಯಲ್ಲಿ ಕೂಡ ದೂರದೂರುಗಳಿಂದ ಭಕ್ತರು ಕ್ಷೇತ್ರಕ್ಕೆ...
Loading posts...
All posts loaded
No more posts
