ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮನ್‌ಮೋಹನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು...

ಡಿ.28ರಂದು 8ನೇ ವರ್ಷದ ಮಂಗಳೂರು ಕಂಬಳ ವೈಭವ : ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು 8ನೇ ವರ್ಷದ 'ಮಂಗಳೂರು ಕಂಬಳ' ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು, 'ಡಿ. 28ರಂದು ಬೆಳಿಗ್ಗೆ...
Ad Widget

ಜಗದೀಶ್  ಹಾಗೂ ನಂದಕುಮಾರಿ ವಿವಾಹ ಮುಂದೂಡಲಾಗಿದೆ

ದಿನಾಂಕ 02.01.2025 ನೇ ಗುರುವಾರ ರೆಂಜಾಳದ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ಸನ್ನಿಧಿಯ ವಿನಾಯಕ ಸಭಾಭವನದಲ್ಲಿ ನಡೆಯಬೇಕಿದ್ದ ಜಗದೀಶ್  ಹಾಗೂ ನಂದಕುಮಾರಿ ಇವರ ವಿವಾಹವು ಕಾರಣಾಂತರಗಳಿಂದ ಮುಂದೂಡಲಾಗಿದೆ ಡಂದು ಮರ್ಕಂಜ ಗ್ರಾಮದ ಪುಷ್ಪಾವತಿ ಆಜಡ್ಕ ಕಾಯರ  ತಿಳಿಸಿದ್ದಾರೆ.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ – ಸಂಘಟನೆಗಳಿಂದ ಪತ್ರಕರ್ತರ ಬಲವರ್ಧನೆ: ತಹಶೀಲ್ದಾರ್ ಮಂಜುಳಾ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ಘಟಕದ 2024 - 25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಡಿ.26 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ಜಿಲ್ಲಾ ಗೌರವಾಧ್ಯಕ್ಷ ,ಸುದ್ದಿ ಬಿಡುಗಡೆ ಸಂಪಾದಕ ಹರೀಶ್ ಬಂಟ್ವಾಳ್ ರವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿದರು.ನೂತನ ಅಧ್ಯಕ್ಷರಾದ ಜಯಶ್ರೀ ಕೊಯಿಂಗೋಡಿ,ಕಾರ್ಯದರ್ಶಿಯಾದ ಗಣೇಶ್...

ಜೇಸಿಐ ವಲಯ 15ರ ವ್ಯವಹಾರ ಡೈರೆಕ್ಟರಿಯ ವಲಯ ಸಂಯೋಜಕರಾಗಿ ಜಗದೀಶ್ ರೈ ಪೆರುವಾಜೆ ಆಯ್ಕೆ

ಬೆಳ್ಳಾರೆ ಜೇಸಿಐ ಘಟಕದ 2024ನೇ ಸಾಲಿನ ಅಧ್ಯಕ್ಷ ಜೆ.ಎಫ್.ಎಂ ಜಗದೀಶ್ ರೈ ಪೆರುವಾಜೆ ಜೇಸಿಐ ಭಾರತದ ವಲಯ 15ರ 2025ನೇ ಸಾಲಿನ ವ್ಯವಹಾರ ಡೈರೆಕ್ಟರಿಯ ವಲಯ ಸಂಯೋಜಕರಾಗಿ ಕುಂದಾಪುರದಲ್ಲಿ ನಡೆದ ವಲಯಾಡಳಿತ ಮಂಡಳಿಯ ಪದಪ್ರದಾನ ಸಮಾರಂಭದಲ್ಲಿ ಆಯ್ಕೆಯಾಗಿದ್ದಾರೆ.  ಪ್ರತಿಷ್ಠಿತ ಜೇಸಿಐ ಬೆಳ್ಳಾರೆ ಘಟಕದ 2024ನೇ ಸಾಲಿನ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸಿರುವ ಇವರಿಗೆ ಸಮುದಾಯ...

ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ಡಾ. ಕೆವಿಜಿ ಸಂಸ್ಮರಣೆ ಮತ್ತು ಪುಷ್ಪ ನಮನ

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 96 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿಸೆಂಬರ್ 26 ರಂದು ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ದೀಪ ಬೆಳಗಿ...

ಮಾವಿನಕಟ್ಟೆ ದೇವ ರಸ್ತೆ ಬದಿ ಬೆಳೆದಿರುವ ಗಿಡಗಂಟಿ – ಸಂಚಾರಕ್ಕೆ ತೊಂದರೆ

ಮಾವಿನಕಟ್ಟೆ ದೇವ ರಸ್ರೆಯುದ್ದಕ್ಕೂ ಗಿಡಗಂಟಿ ಬೆಳೆದು ರಸ್ತೆ ಇಕ್ಕಟ್ಟಾಗಿದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ.‌ ದೇವ ಕಂದ್ರಪ್ಪಾಡಿ ರಸ್ತೆ ಸಂಚಾರ ಬ್ಲಾಕ್ ಆಗಿರುವುದರಿಂದ ದೇವ ಮಾವಿನಕಟ್ಟೆ ರಸ್ತೆಯಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತಿದೆ. ಯಾವುದೇ ಅಪಘಾತಗಳು ಸಂಭವಿಸುವ ಮೊದಲು  ಜಿ.ಪಂ.ರಸ್ತೆಯನ್ನು ಸಂಬಂಧಪಟ್ಟವರು ಗಮನ‌ ಹರಿಸಿ ಕ್ರಮ ಕೈಗೊಳ್ಳುವಂತೆ ನಾಗರಿಕರು ಒತ್ತಾಯಿಸಿದ್ದಾರೆ.‌

ಸೈಕ್ಲಿಂಗ್‍ನಿಂದ ಆರೋಗ್ಯ ಭಾಗ್ಯ

ಒಬ್ಬ ವ್ಯಕ್ತಿ ಜೀವನ ಪರ್ಯಂತ ಆರೋಗ್ಯವಂತನಾಗಿರಬೇಕಾದಲ್ಲಿ ಆತನು ದೈಹಿಕ ಮತ್ತು ಮಾನಸಿಕವಾಗಿ ಯಾವತ್ತೂ ಉಲ್ಲಸಿತನಾಗಿರುವುದು ಅತೀ ಅಗತ್ಯ. ನಿರಂತರ ದೈಹಿಕ ಕಸರತ್ತು ಅಥವಾ ವ್ಯಾಯಾಮದಿಂದ ಅಪಾಯಕಾರಿ ರೋಗಗಳಾದ ಹೃದಯಾಘಾತ, ಕ್ಯಾನ್ಸರ್, ಸ್ಥೂಲಕಾಯ, ಮಧುಮೇಹ, ಅಧಿಕರಕ್ತದೊತ್ತಡ, ಗಂಟು ನೋವು, ಮಾನಸಿಕ ಖಿನ್ನತೆ ಮುಂತಾದವುಗಳನ್ನು ಬಹಳ ಸುಲಭವಾಗಿ ತಡೆಗಟ್ಟಬಹುದು. ಅತೀ ಕಡಿಮೆ ಖರ್ಚಿನಲ್ಲಿ ದೊರಕಬಹುದಾದ ಅತ್ಯಂತ ಪರಿಣಾಮಕಾರಿಯಾದ ವ್ಯಾಯಾಮ...

ಪಂಜ : ರಿಕ್ಷಾ ಚಾಲಕ ಮನೋಜ್ ಕುಮಾರ್ ಅನಾರೋಗ್ಯದಿಂದ ಮೃತ್ಯು

ಪಂಜ ಆಟೋ ರಿಕ್ಷಾ ಚಾಲಕರ ಸಂಘದ ಸದಸ್ಯ, ಬಳ್ಪ ಗ್ರಾಮದ ಕಾಂಜಿ ವಾಸುದೇವ ಗೌಡ ಮತ್ತು ಶ್ರೀಮತಿ ದೇವಕಿ ದಂಪತಿಗಳ ಪುತ್ರ ಮನೋಜ್ ಕುಮಾರ್ (32) ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಆಸ್ಪತ್ರೆಯಲ್ಲಿ ಡಿ.25 ರಾತ್ರಿ ನಿಧನರಾದರು.. ಪಂಜದಲ್ಲಿ ಅನೇಕ ವರ್ಷಗಳಿಂದ ಆಟೋ ರಿಕ್ಷಾ ಬಾಡಿಗೆ ನಡೆಸುತ್ತಿದ್ದ ಅವರು ಕೆಲವು ವರ್ಷಗಳಿಂದ ಪಂಜದಲ್ಲಿ ಗೂಡ್ಸ್ ರಿಕ್ಷಾ...

ಮರ್ಕಂಜ : ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು – ವಿಜಯೋತ್ಸವ

ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಹರೀಶ್ ಕಂಜಿಪಿಲಿ, ನೂತನ ನಿರ್ದೆಶಕರಾಗಿ ಆಯ್ಕೆಯಾದ ಚೆನ್ನಕೇಶವ. ಡಿ, ದಯಾನಂದ ಪಿ, ಮೋನಪ್ಪ ಪೂಜಾರಿ.ಡಿ, ವೆಂಕಟ್ರಮಣ ಗೌಡ ಕೆ, ನವೀನ. ಕೆ., ಅಕ್ಷತಾ.ಕೆ.ಸಿ, ಲತಾ ಹೆಚ್.,...
Loading posts...

All posts loaded

No more posts

error: Content is protected !!