ಅರಂತೋಡು : ಅಟೋ ರಿಕ್ಷಾ ಪಲ್ಟಿ – ಪ್ರಯಾಣಿಕರಿಗೆ ಗಾಯ

ಅರಂತೋಡಿನ‌ ಅಡಿಮಾರಡ್ಕ ಎಂಬಲ್ಲಿ ಅಟೋ ರಿಕ್ಷಾ ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ. ರಿಕ್ಷಾ ಚಾಲಕ ವಿಶ್ವನಾಥ ಗೌಡ ಉಕ್ರಾಜೆ ( ಕರ್ಕುಂಜ) ಅಪಾಯದಿಂದ ಪಾರಾಗಿದ್ದಾರೆ.‌ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಸುಳ್ಯದ ಐ ಆರ್ ಸಿ ಎಂ ಡಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಮಿಥಾಲಿ ಯು.ಎಲ್. ಗೆ ಪ್ರಶಸ್ತಿ

ಬೆಂಗಳೂರಿನ ಟಿ.ಆರ್.ಎಸ್ ಶಿಕ್ಷಣ ಸಂಸ್ಥೆ ಮತ್ತು ಪುತ್ತೂರಿನ ಐ ಆರ್ ಸಿ ಎಮ್ ಡಿ ಶಿಕ್ಷಣ ಸಂಸ್ಥೆ ಜಂಟಿಯಾಗಿ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯನ್ನು ಡಿಸೆಂಬರ್ 8 2024 ರಂದು ಪುತ್ತೂರಿನಲ್ಲಿ ನಡೆಸಲಾಯಿತು. ಈ ಸ್ಪರ್ಧೆಯಲ್ಲಿ 250 ಕ್ಕೂ ಮಿಕ್ಕಿ ಪ್ರತಿಭಾವಂತ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಬಾಕಸ್  ಸ್ಪರ್ಧೆಯಲ್ಲಿ ಭಾಗವಹಿಸುವವರ ವೇಗ ನಿಖರತೆ ಮತ್ತು ಮಾನಸಿಕ ಚುರುಕುತನವನ್ನು...
Ad Widget

ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸನ್ಮಾನಕ್ಕೆ ಆಯ್ಕೆಯಾದ ಸುಬ್ರಾಯ ಸಂಪಾಜೆ

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸುಬ್ರಾಯ ಸಂಪಾಜೆಯವರು ಸನ್ಮಾನ ಪಡೆಯಲಿದ್ದಾರೆ. ಸುಳ್ಯದ ಸಂಪಾಜೆಯವರಾದ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸಂಪಾಜೆಯಲ್ಲಿ ಪೂರೈಸಿದ ಸುಬ್ರಾಯರು ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ಬಿ.ಎ. ಓದಿ ಮುಂದೆ ಮಂಗಳೂರು ವಿಶ್ವ ವಿದ್ಯಾಲಯದಿಂದ ಕನ್ನಡ ಎಂ.ಎ. ಪದವಿ ಪಡೆದರು....

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ ಹಾಕಿದ ಘಟನೆಯನ್ನು ಪ್ರೆಸ್ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿಯಲ್ಲಿ ಜೀವ ಬೆದರಿಕೆ ಹಾಕಿದ ಘಟನೆಯ ಬಗ್ಗೆ ಸುಳ್ಯ ಪ್ರೆಸ್ ಕ್ಲಬ್ ಖಂಡಿಸಿದೆ. ಡಿ.13ರಂದು ಮಿಥುನ್ ತನ್ನ ತಾಯಿಯ ಜತೆ ಬಿಎಸ್‌ಎನ್‌ಎಲ್ ಕಚೇರಿಗೆ ಹೋಗಿ ತಾಯಿಯ ಮೊಬೈಲ್ ಸಿಮ್‌ ಸರಿ ಪಡಿಸಿ ಬಂದಿದ್ದು, ಬಿಎಸ್‌ಎನ್‌ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್‌.ಎನ್.ಎಲ್...

ನಿರಂಜನ್ ಕಡ್ಲಾರುರವರ ಸಾಹಿತ್ಯದಲ್ಲಿ ರಚನೆಯಾದ “ಜಗನ್ಮಾತೆ ಕಾಳಿಕಾಂಬೆ” ಎಂಬ ಕನ್ನಡ ಭಕ್ತಿಗೀತೆ ಬಿಡುಗಡೆ

ಶಕ್ತಿರೂಪಿಣಿಯಾಗಿರತಕ್ಕಂತಹ ಶ್ರೀ ಕಾಳಿಕಾ ಮಾತೆಯ 'ಜಗನ್ಮಾತೆ ಕಾಳಿಕಾಂಬೆ' ಎಂಬ ಕನ್ನಡ ಭಕ್ತಿಗೀತೆಯು ಮಂಗಳೂರಿನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಹಮ್ಮಿಕೊಂಡ ವಿಶ್ವಕರ್ಮ ಕಲಾ ಸಿಂಚನ ಸಾಂಸ್ಕೃತಿಕ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಶ್ರೀ ಕೆ ಕೆ ಆಚಾರ್ಯ, ಶ್ರೀ ವಿಶ್ವಕರ್ಮ ಕಲಾ ಪರಿಷತ್ತಿನ ಗೌರವಾಧ್ಯಕ್ಷರಾದ...

ನಿರಂಜನ್ ಕಡ್ಲಾರುರವರ ಸಾಹಿತ್ಯದಲ್ಲಿ ರಚನೆಯಾದ “ಜಗನ್ಮಾತೆ ಕಾಳಿಕಾಂಬೆ” ಎಂಬ ಕನ್ನಡ ಭಕ್ತಿಗೀತೆ ಬಿಡುಗಡೆ

ಶಕ್ತಿರೂಪಿಣಿಯಾಗಿರತಕ್ಕಂತಹ ಶ್ರೀ ಕಾಳಿಕಾ ಮಾತೆಯ 'ಜಗನ್ಮಾತೆ ಕಾಳಿಕಾಂಬೆ' ಎಂಬ ಕನ್ನಡ ಭಕ್ತಿಗೀತೆಯು ಮಂಗಳೂರಿನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಹಮ್ಮಿಕೊಂಡ ವಿಶ್ವಕರ್ಮ ಕಲಾ ಸಿಂಚನ ಸಾಂಸ್ಕೃತಿಕ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಶ್ರೀ ಕೆ ಕೆ ಆಚಾರ್ಯ, ಶ್ರೀ ವಿಶ್ವಕರ್ಮ ಕಲಾ ಪರಿಷತ್ತಿನ ಗೌರವಾಧ್ಯಕ್ಷರಾದ...

ಸುಳ್ಯ : ಅಕ್ರಮ ಮರಳು ಅಡ್ಡೆಗೆ ತಹಶೀಲ್ದಾರ್ ದಾಳಿ – ಮರಳು ಸಾಗಿಸುತ್ತಿದ್ದ ವಾಹನಕ್ಕೆ ತಡೆ

ಅಜ್ಜಾವರ ಗ್ರಾಮದ ದೊಡ್ಡರಿಯಿಂದ ಮರಳು ಹೇರಿಕೊಂಡು ಹೋಗುತ್ತಿದ್ದ ವಾಹನವನ್ನು ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ತಡೆದು ವಾಹನ ವಶ ಪಡಿಸಿಕೊಂಡ ಘಟನೆ ಇದೀಗ ವರದಿಯಾಗಿದೆ. ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಅಮರ ಸುದ್ದಿ ವರದಿ ಪ್ರಕಟಿಸಿ ಎಚ್ಚರಿಸಿತ್ತು. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಅಮರ ಸುದ್ದಿ ವರದಿಗಾರನಿಗೆ ಜೀವ ಬೆದರಿಕೆ – ವಿಕಾಸ್ ಮೀನಗದ್ದೆ ವಿರುದ್ಧ ಪೋಲೀಸ್ ಹಾಗೂ ಬಿಎಸ್ ಎನ್ ಎಲ್ ಅಧಿಕಾರಿಗಳಿಗೆ ದೂರು

ಸುಳ್ಯ ಬಿಎಸ್‌ಎನ್ ಎಲ್ ಕಸ್ಟಮರ್ ಸರ್ವಿಸ್ ಸೆಂಟರ್‌ನ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿ ಮೂಲಕ ಬೆದರಿಕೆ ಹಾಕಿದ್ದು, ಈ ಬಗ್ಗೆ ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರು ಡಿ. 14ರಂದು ಸುಳ್ಯ ಪೋಲೀಸರಿಗೆ ದೂರು ನೀಡಿದ್ದಾರೆ. ಬಿಎಸ್‌ಎನ್‌ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್.ಎನ್.ಎಲ್ ಸಿಮ್‌ ಗೆ ಹೆಚ್ಚುವರಿ ಹಣ ಪಡೆದುಕೊಳ್ಳುತ್ತಿರುವ ಬಗ್ಗೆ...

ಹರಿಹರ ಪಳ್ಳತ್ತಡ್ಕ : ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಗ್ರಾಮಸ್ಥರ ಸಭೆ

ಪಶ್ಚಿಮ ಘಟ್ಟ ಹಾಗೂ ಜನವಸತಿ ಪ್ರದೇಶಗಳಿಗೆ ಗಡಿ ಗುರುತು ಮಾಡಿ ಜಂಟಿ ಸರ್ವೇ ಮಾಡಬೇಕು : ಕಿಶೋರ್ ಶಿರಾಡಿ ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಡಿ.15 ರಂದು ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ಹರಿಹರ, ಕಲ್ಮಕಾರು, ಕೊಲ್ಲಮೊಗ್ರು ಹಾಗೂ ಬಾಳುಗೋಡು ಸೇರಿದಂತೆ ನಾಲ್ಕು ಗ್ರಾಮಗಳ ಗ್ರಾಮಸ್ಥರ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...

ಗಂಗಾಧರ ಬೆಳ್ಚಪ್ಪಾಡ ದೇವ ಕನ್ನಡಕಜೆ ನಿಧನ

ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಗಂಗಾಧರ ಬೆಳ್ಚಪ್ಪಾಡ (63) ಅಲ್ಪಕಾಲದ ಅಸೌಖ್ಯದಿಂದ ಡಿ.15 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ನಾಟಿವೈಧ್ಯೆ ಶ್ರೀಮತಿ ಸೀತಾರತ್ನ, ಪುತ್ರ ರಕ್ಷಿತ್, ಪುತ್ರಿ ಶ್ರೀಮತಿ ವಿದ್ಯಾ ರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!