ರಾಜ್ಯಮಟ್ಟದ ಸಹಕಾರಿ ಸಪ್ತಾಹದಲ್ಲಿ ಶತಮಾನ ಪೂರೈಸಿದ ಗುತ್ತಿಗಾರು ಪ್ರಾ.ಕೃ.ಪ.ಸ. ಸಂಘಕ್ಕೆ ಗೌರವ ಸನ್ಮಾನ

ಮಂಗಳೂರಿನಲ್ಲಿ ನ. 16 ರಂದು ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಶತಮಾನ ಪೂರೈಸಿದ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಸನ್ಮಾನಿಸಿ ಗೌರವಿಸಲಾಯಿತು. ಶತಮಾನ ಪೂರೈಸಿದ ಗುತ್ತಿಗಾರು ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಗೌರವ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗುತ್ತಿಗಾರು ಪ್ರಾ‌.ಕೃ.ಪ.ಸ. ಸಂಘದ ನಿರ್ದೇಶಕರುಗಳು, ಸಿಬ್ಬಂದಿಗಳು...

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗೋಪೂಜೆ

ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನ.15 ಶುಕ್ರವಾರದಂದು ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆಯ ಪ್ರಯುಕ್ತ ಶ್ರೀ ದೇವಳದ ಪ್ರಾಂಗಣದಲ್ಲಿ ಗೋಪೂಜೆ ನಡೆಯಿತು. ಕುಲ್ಕುಂದ ಪರಿಸರದ ಹಾಗೂ ಸುಬ್ರಹ್ಮಣ್ಯ ದೇವಸ್ಥಾನದ ಗೋವುಗಳಿಗೆ ಬಸವೇಶ್ವರ ದೇವಸ್ಥಾನದ ಪುರೋಹಿತರಾದ ಗಣೇಶ್ ದೀಕ್ಷಿತ್ ರವರು ಗೋಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಸವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಗಿರಿಧರ ಸ್ಕಂದ, ಉಪಾಧ್ಯಕ್ಷರಾದ ರವೀಂದ್ರ ಕುಮಾರ್...
Ad Widget

ಮರೆತು ಹೋಗುತ್ತಿರುವ ಜಾನುವರ್ ಜಾತ್ರೆ, ಕುಲ್ಕುಂದ ಜಾತ್ರೆ

ಬಾಲ್ಯದಿಂದ ನನಗೆ ತಿಳಿದಮಟ್ಟಿಗೆ ನಮ್ಮ ಸುಬ್ರಹ್ಮಣ್ಯ ಜಾತ್ರೆ ಶುರುವಾಗುತ್ತಿದ್ದಿದ್ದೇ ಸುಬ್ರಹ್ಮಣ್ಯದ ಕುಲ್ಕುಂದದಲ್ಲಿನ ಜಾನುವಾರು ಜಾತ್ರೆಯಿಂದ, ಪುರಾಣ ಇತಿಹಾಸದಲ್ಲಿ ಷಷ್ಠಿಗೂ ಇದಕ್ಕೂ ಕತೆಗಳಿವೆ, ವರ್ಣಾರ ಪಂಜುರ್ಲಿ ದೈವದ ಪಾಡ್ದನದಲ್ಲಿ ಇಂದಿಗೂ ಕುಲ್ಕುಂದ ಜಾನುವಾರು ಜಾತ್ರೆಯ ಉಲ್ಲೇಖವಿದೆ. ನಾಗರಪಂಚಮಿಯಿಂದ ಹಬ್ಬಗಳು ಶುರುವಾದರೆ ಅಷ್ಟಮಿ,ದಸರಾ, ನಂತರ ದೀಪಾವಳಿ ಹಾಗೆ ನಂತರ ಬರುವ ಹುಣ್ಣಿಮೆಯಿಂದ ಮುಂದೆಬರುವುದು ಲಕ್ಷದೀಪ ಚೌತಿ,ಪಂಚಮಿ,ಷಷ್ಠಿ ಹೀಗೆ. ದೀಪಾವಳಿಯ...

ಕಸ್ತೂರಿ ರಂಗನ್ ವರದಿ ವಿರೋಧಿಸಿ‌ ಹೋರಾಟದಲ್ಲಿ ಅನುಮತಿ ಇಲ್ಲದೆ‌ ಹೆದ್ದಾರಿ ತಡೆ – ಶಾಸಕರಾದ ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ‌‌ ಸೇರಿ 15 ಮಂದಿ ವಿರುದ್ಧ ಕೇಸು ದಾಖಲು

ಕಸ್ತೂರಿರಂಗನ್ ವರದಿ ವಿರೋಧಿಸಿ ನ.15ರಂದು ಮಧ್ಯಾಹ್ನ ಗುಂಡ್ಯದಲ್ಲಿ ನಡೆದ ಪ್ರತಿಭಟನೆ ವೇಳೆ ಮನವಿ ಸ್ವೀಕರಿಸಲು ಅಧಿಕಾರಿಗಳು ವಿಳಂಬ ಮಾಡಿದ್ದರಿಂದ ಆಕ್ರೋಶಗೊಂಡ ರೈತರು ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿದ್ದರು. ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ...

ಕುಂಡಾಡು ಪೆರಾಜೆ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕುಂಡಾಡು ಪೆರಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಶಾಲಾ ವಿದ್ಯಾರ್ಥಿ ನಾಯಕ ದೀಕ್ಷಿತ್ ಸಿ ವೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಭಾಷಣಕಾರರಾಗಿ ವಿದ್ಯಾರ್ಥಿಗಳಾದ ಮೋಕ್ಷ ಹಾಗೂ ಮೌಲ್ಯ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮನೆ, ಸದಸ್ಯರಾದ ಪೂರ್ಣಿಮಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಯತೀಶ್ ಸಿ ಯಸ್,...

ಗುತ್ತಿಗಾರು ಪ್ರಾ.ಕೃ.ಪ.ಸ ಸಂಘದ ಶತಮಾನೋತ್ಸವ ಆಚರಣೆ – ನ.17 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ – ನ.18 ರಂದು ಕ್ರೀಡಾಕೂಟ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ನ.23 ರಂದು ನಡೆಯಲಿದ್ದು, ಇದರ ಅಂಗವಾಗಿ ನ.17 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ ಹಾಗೂ ನ.18 ರಂದು ಕ್ರೀಡಾಕೂಟ ನಡೆಯಲಿದೆ. ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ, ದೇರಳಕಟ್ಟೆ-ಮಂಗಳೂರು ಇವರ ಸಹಭಾಗಿತ್ವದಲ್ಲಿ ನ.17 ರಂದು ಬೆಳಿಗ್ಗೆ 9:30 ರಿಂದ ಮದ್ಯಾಹ್ನ 1:00 ಗಂಟೆಯವರೆಗೆ ಸಂಘದ...

ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಮಕ್ಕಳ ದಿನಾಚರಣೆ

ಬೆಳ್ಳಾರೆ: ಭಾರತದ ಪ್ರಪ್ರಥಮ ಪ್ರಧಾನ ಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರೂರವರ ಜನ್ಮದಿನವಾದ ಮಕ್ಕಳ ದಿನಾಚರಣೆಯನ್ನುಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿಎಲ್ಲಾ ವಿದ್ಯಾರ್ಥಿಗಳಿಗೆ ತರಗತಿವಾರು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಶಾಲಾ ವಿದ್ಯಾರ್ಥಿಗಳು ಜವಹಾರ್ ಲಾಲ್ ನೆಹರುರವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಯು.ಹೆಚ್. ಅಬೂಬಕ್ಕರ್...

ಪುಟ್ಟಣ್ಣ ಗೌಡ ಕಾಂಚೋಡು ನಿಧನ

ಬಾಳಿಲ ಗ್ರಾಮದ ಕಾಂಚೋಡು ನಿವಾಸಿ ಪುಟ್ಟಣ್ಣ ಗೌಡ ಕಾಂಚೋಡು ಇಂದು ಅಸೌಖ್ಯದಿಂದ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ದೇವಕಿ, ಪುತ್ರರಾದ ಲಕ್ಷ್ಮೀಶ ಕಾಂಚೋಡು, ರಮೇಶ ಕಾಂಚೋಡು, ಪುತ್ರಿ ಶ್ರೀಮತಿ ಮಮತಾ ಗಣೇಶ್ ಪಾಂಬಾರ್, ಸೊಸೆ ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು ಹಾಗೂ ಸಹೋದರ, ಸಹೋದರಿಯರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು...

ಕೊಲ್ಲಮೊಗ್ರ : ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಬಾಲಸುಬ್ರಹ್ಮಣ್ಯ ಭಟ್ ಅವಿರೋಧ ಆಯ್ಕೆ

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ನಲ್ಲಿ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಾಲಸುಬ್ರಹ್ಮಣ್ಯ ಎನ್.ಜಿ. ಕೊಳಗೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮಯ್ಯ ಕೆ. ಕೊಂದಾಳ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಪದ್ಮಯ್ಯ ಕೆ.ಕೊಂದಾಳ ಹಿಂಪಡೆದ ಹಿನ್ನೆಲೆಯಲ್ಲಿ ಬಾಲಸುಬ್ರಹ್ಮಣ್ಯ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಲಸುಬ್ರಹ್ಮಣ್ಯ ಭಟ್ ಎನ್.ಜಿ....

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಪೂರ್ವಾಹ್ನದ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಅಪರಾಹ್ನ ಸಭಾ ಕಾರ್ಯಕ್ರಮ ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಹೊಂಬೆಳಕು ಬಳಗ (ರಿ.) ನಾಲ್ಕೂರ್ ವತಿಯಿಂದ 'ಸ್ವಚ್ಛ ಪರಿಸರ ' ವಿಷಯವಾಗಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ ಚಿತ್ರ ಬರೆಯುವ ಸ್ಪರ್ಧೆ,...
Loading posts...

All posts loaded

No more posts

error: Content is protected !!