ಪಂಬೆತ್ತಾಡಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲ (ರಿ)ಪಂಬೆತ್ತಾಡಿ. ಅಕ್ಷತಾ ಯುವತಿ ಮಂಡಲ (ರಿ) ಪಂಬೆತ್ತಾಡಿ. ಅಮೃತಾ ಮಹಿಳಾ ಮಂಡಲ(ರಿ)ಪಂಬೆತ್ತಾಡಿ ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಪಂಬೆತ್ತಾಡಿ ಶಾಲೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿಗಳು ನೆರವೇರಿಸಿದರುಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಧಕ್ಷಾ ಎಂ ವಹಿಸಿದ್ದರು ಜಂಟಿ ಸಂಸ್ಥೆಯ ಪರವಾಗಿ ಶಾಲಾ ಮಕ್ಕಳಿಗೆ ಮತ್ತು...

ಎಣ್ಮೂರು: ಮಕ್ಕಳ ದಿನಾಚರಣೆ ಅಂಗವಾಗಿ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳ ಫೋಟೋ ಸ್ಪರ್ಧೆ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿನ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ ಫೋಟೋ ಸ್ಪರ್ಧೆಯನ್ನು ನಡೆಸಲಾಯಿತು. ಸ್ಕೌಟ್ಸ್ ಗೈಡ್ಸ್ ವಿಭಾಗದ 21 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ 9Aನೇ ತರಗತಿಯ ಕೃತಿಕಾ ರೈ ಪ್ರಥಮ, 10ನೇ ತರಗತಿಯ ಮಾನ್ಯ ಎನ್.ಎಸ್ ದ್ವಿತೀಯ ಮತ್ತು 9Bನೇ ತರಗತಿಯ ಅಬಿರಾ ತೃತೀಯ ಬಹುಮಾನ ಪಡೆಡುಕೊಂಡರು....
Ad Widget

ಪೆರುವಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ ವತಿಯಿಂದ ಜೇಸಿಐ ಬೆಳ್ಳಾರೆಯ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಪೆರುವಾಜೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಅಂಗನವಾಡಿ ಪುಟಾಣಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಅಂಗನವಾಡಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಪೆರುವಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಬಹುಮಾನ ವಿತರಿಸಿದರು. ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ಆಟಿಕೆ ಸಾಮಗ್ರಿಗಳನ್ನು ಕೊಡುಗೆಯಾಗಿ...

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ರೆಂಜಾಳ ಶಾಸ್ತಾವು ಯುವಕ ಮಂಡಲ

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲ ಬೆಂಬಲ ವ್ಯಕ್ತಪಡಿಸಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ರಾಜೇಶ್ ಬೇರಿಕೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ಧ ನ.15 ರಂದು ನಡೆಯುವ ಪ್ರತಿಭಟನೆಗೆ ಸುಳ್ಯ ಬಿಜೆಪಿ ಬೆಂಬಲ

ಸಾಮಾನ್ಯ ಬಡವರ ಬದುಕನ್ನು ಕಸಿದುಕೊಳ್ಳುವ ಕಸ್ತೂರಿ ರಂಗನ್ ವರದಿ ಅನುಷ್ಠಾನವದ ಹಿನ್ಬೆಲೆಯಲ್ಲಿ ಮಲೆನಾಡು ಹಿತಕಕ್ಷಣಾ ವೇದಿಕೆಯ ಮೂಲಕ ನಡೆಯುವ ರಾಜಕೀಯ ರಹಿತ ಹೋರಾಟಕ್ಕೆ ಸುಳ್ಯ ಬಿಜೆಪಿ ಬೆಂಬಲ ನೀಡಲಿದೆ. ಯಾವುದೇ ಸರಕಾರವಿರಲಿ ಇಂತಹ ದುಸ್ಸಾಹಸಕ್ಕೆ ಕೈಹಾಕಬಾರದು. ಯೋಜನೆಯ ಅನುಷ್ಠಾನದ ಹೆಸರಿನಲ್ಲಿ ಬಡವರನ್ನು ಬೀದಿಗೆ ತಳ್ಳುವ ಕಾರ್ಯ ಆಗಬಾರದು.‌ ಇದನ್ನು ಕೈಬಿಟ್ಟು ತಕ್ಷಣ ರಾಜ್ಯಸರಕಾರ ಕೇಂದ್ರ ಸರಕಾರಕ್ಕೆ...

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಅಂಗನವಾಡಿ ಕೇಂದ್ರ ಬೆಳ್ಳಾರೆ ಮತ್ತು ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯು 14 ನವೆಂಬರ್ 2024 ಗುರುವಾರ ಬೆಳಿಗ್ಗೆ ಜರುಗಿತು ಕಾರ್ಯಕ್ರಮವನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ ಎಲ್ ರೈ ಉದ್ಘಾಟಿಸಿದರು ಬೆಳ್ಳಾರೆ ಗ್ರಾಮ ಪಂಚಾಯತ್ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಉಷಾ ಪ್ರಸಾದ್ ರೈ ಮತ್ತು...

ಕ್ಯಾಂಪ್ಕೋ ಸಂಸ್ಥೆಯಿಂದ ಧನಸಹಾಯ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆಯ `ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಆಲಂಕಾರು ಶಾಖೆಯ ಸದಸ್ಯರಾದ ಉಮೇಶ್ ರೈ ಬಲ್ಪೋಡಿ ಇವರ ಧರ್ಮ ಪತ್ನಿ ದಿ.ಶ್ರೀಮತಿ ಶಶಿಕಲಾ ಇವರ ಆಕಸ್ಮಿಕ ಮರಣ ಪರಿಹಾರದ ಸಹಾಯಧನದ ಚೆಕ್ ರೂಪಾಯಿ 50,000/- ವನ್ನು ನ. 14ರಂದು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲ ಇವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಲಂಕಾರು ಸೊಸೈಟಿಯ ನಿರ್ದೇಶಕರಾದ ಜಿ ಪಿ...

ಸುಬ್ರಹ್ಮಣ್ಯ : ಅಂಗನವಾಡಿ ಪುಟಾಣಿಗಳಿಗೆ ಪುಸ್ತಕ ಹಾಗೂ ಕ್ರಯನ್ಸ್ ವಿತರಣೆ

ಸುಬ್ರಹ್ಮಣ್ಯ ನ.14: ಮಕ್ಕಳ ದಿನಾಚರಣೆ ಪ್ರಯುಕ್ತ ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಪುಸ್ತಕ ಕ್ರಯನ್ಸ್ ಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಲಿಜನ್ ನ ಸ್ಥಾಪಕ ಅಧ್ಯಕ್ಷರಾದ ವಿಶ್ವನಾಥ ನಡುತೋಟ ನೀಡಿದ ಕೊಡುಗೆಯನ್ನು ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಲಿಜನ್ ಅಧ್ಯಕ್ಷರಾದ ಡಾ.ರವಿ ಕಕ್ಕೆಪದವು, ಕಾರ್ಯದರ್ಶಿ...

ಪೆರಾಜೆ : ಬಿಳಿಯಾರಿನ ಯುವಕ ಆತ್ಮಹತ್ಯೆ

ಪೆರಾಜೆ ಬಿಳಿಯಾರು ನಿವಾಸಿ ಸೀತಾರಾಮ ಎಂಬವರ ಪುತ್ರ ಪುನೀತ್ (ಗಣೇಶ್) (25)ಎಂಬ ಯವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.13 ರಂದು ರಾತ್ರಿ ವರದಿಯಾಗಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ತಂದೆ,ತಾಯಿ ಹಾಗೂ ಸಹೋದರ ದಿನೇಶ ರನ್ನು ಅಗಲಿದ್ದಾರೆ.

ಪೆರಾಜೆ : ಯುವಕ ಆತ್ಮಹತ್ಯೆ

ಪೆರಾಜೆ ಬಿಳಿಯಾರು ಬಳಿ 26 ವರುಷದ ಪುನೀತ್ (ಗಣೇಶ್) ಎಂಬ ಯವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ
Loading posts...

All posts loaded

No more posts

error: Content is protected !!