- Thursday
- August 13th, 2026
ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ - ಪ್ರಮೀಳಾ ಟಿ ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯ ಪಟ್ಟರು....
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನ 06ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ಮರ್ಕಂಜ ರೆಂಜಾಳದ ಶ್ರೀ ವಿನಾಯಕ ಸಭಾಭವನದಲ್ಲಿ ನಡೆಯಿತು. ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲರಾದ...
ಅರಂತೋಡು ಸ.ಉ. ಹಿ. ಪ್ರಾ. ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಮಂಥನ್ ಅವರು ಶಾಟ್ ಪುಟ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದ ಶಾಟ್ ಪುಟ್ ಸ್ಪರ್ಧೆಯಲ್ಲಿ ಮಂಥನ್ ಅವರು ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈತ ಸುಳ್ಯದ ಗಣೇಶ್ ಮತ್ತು ಅಶ್ವಿನಿ ದಂಪತಿಗಳ ಪುತ್ರ. ದೈಹಿಕ...
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ, ವಿಜಯ ಗ್ರಾಮ ಸಮಿತಿ ನಾಲ್ಕೂರು, ಆತ್ಮ ರೈತ ಮಿತ್ರ ಸ್ವಸಹಾಯ ಸಂಘ ನಾಲ್ಕೂರು ಇವುಗಳ ಆಶಯದಲ್ಲಿ ರೈತರ ಪಹಣಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಎಂದು ಹಾಲೆಮಜಲಿನ ವೆಂಕಟೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬ್ಯಾಂಕ್ ಆಫ್ ಬರೋಡ ಸುಬ್ರಮಣ್ಯ ಶಾಖೆಯ ವ್ಯವಸ್ಥಾಪಕರಾದ ವಿಶ್ವರ್ಥ್ ಕುಮಾರ್ ಕೆಎಸ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ದಿನಾಂಕ 04/11/2024 ರಂದು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ ಟಿ ವಹಿಸಿದ್ದರು. ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೂಪ ಜೆ ರೈ ಅತಿಥಿಯಾಗಿದ್ದರು. ಕನ್ನಡ...
ಕೊಲ್ಲಮೊಗ್ರು ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 41 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ಅ.30 ರಂದು ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ ಹೊನ್ನಪ್ಪ ರವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವು ನ.04 ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಮಕ್ಕಳು, ಪೋಷಕರು, ಅಂಗನವಾಡಿ ಸಹಾಯಕಿಯರು ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ನಮ್ಮೆಲ್ಲಾ ಕನ್ನಡಿಗರ ಮೇಲಿದೆ ಎಂದು ಜನಪದ ಸಂಶೋಧಕ, ಸಾಹಿತಿ ಡಾ. ಸುಂದರ ಕೇನಾಜೆ ನುಡಿದರು. ಇವರು ಸುಳ್ಯ ತಾಲುಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹೋಬಳಿ ಘಟಕ ಹಾಗು ಸಂಧ್ಯಾರಶ್ಮಿ ಸಾಹಿತ್ಯ ಸಂಘಗಳು ಜಂಟಿಯಾಗಿ ನಡೆಸಿದ ಕನ್ನಡ ರಾಜ್ಯೋತ್ಸವ...
ನವೆಂಬರ್ 23 ರಂದು ನಡೆಯಲಿರುವ 27ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನವೆಂಬರ್ 03 ರಂದು ಅರಂತೋಡು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ನಿವೃತ್ತ ಪ್ರಾಂಶುಪಾಲರಾದ ಕೆ.ಆರ್ ಗಂಗಾಧರ್, ಸ್ವಾಗತ ಸಮಿತಿಯ ಅಧ್ಯಕ್ಷರುಗಳಾದ ಕೇಶವ ಅಡ್ತಲೆ,...
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರವರು 2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಕೆ. ಗೋಕುಲ್ ದಾಸ್ ರವರಿಗೆ ಇಂದು ತಮ್ಮ ಕಚೇರಿಯಲ್ಲಿ ಗೌರವಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಡಾ. ಲೀಲಾಧರ್ ಡಿ.ವಿ. ಉಪಸ್ಥಿತರಿದ್ದರು.
ಪುತ್ತೂರಿನ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮೆಸ್ಕಾಂ ಸಹಕಾರದಿಂದ ವಿದ್ಯುತ್ ಕಂಬ ಹತ್ತುವ ತರಬೇತಿ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ರೈ ಉದ್ಘಾಟಿಸಿ ಮಾತನಾಡಿ ಮುಂದೆ ನಡೆಯುವ ನೇಮಕಾತಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದ.ಕ.ಜಿಲ್ಲೆಯವರು ಆಯ್ಕೆಯಾಗಲಿ ಎಂದರು. ಸುಮಾರು 400 ಮಂದಿ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದಾರೆ.
Loading posts...
All posts loaded
No more posts
