- Friday
- August 14th, 2026
ಅಧಿಕಾರಿಗಳ ಸಭೆ ನಡೆಸುವುದರಲ್ಲೆ ಕಾಲ ಕಳೆಯುತ್ತಿರುವ ಸರಕಾರ ಎಚ್ಚೆತ್ತುಕೊಳ್ಳಬೇಕಿದೆ ಜನತೆ, ಕಾರ್ಯಕರ್ತರು - ಚೌಟ ಲೋಕಸಭಾ ಚುನಾವಣೆಯಲ್ಲಿ ನೋಟ ಅಭಿಯಾನದಾರರಿಗೆ ಟಕ್ಕರ್ ಯಾವುದೇ ಅನುದಾನ ನೀಡದೇ ಗುದ್ದಲಿ ಪೂಜೆ ಮಾಡದ ಸರಕಾರ ಎಂದರೇ ಅದು ಸಿದ್ಧರಾಮಯ್ಯ ಸರಕಾರ ಎಂದು ಕಾಂಗ್ರೆಸ್ ವಿರುದ್ದ ಸಂಸದ ಕ್ಯಾ ಬ್ರಿಜೇಶ್ ಚೌಟ ಕಿಡಿಕಾರಿದರು.ಅವರು ಸುಳ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಕಾರ್ಯಕರ್ತರನ್ನು...
ಸುಳ್ಯ : ಸುಳ್ಯ ಬಿಜೆಪಿ ಮಂಡಲ ಸಮಿತಿ ವಿಶೇಷ ಕಾರ್ಯಕಾರಿಣಿ ಸಭೆಯು ಸುಳ್ಯ ದುರ್ಗಾಪರಮೇಶ್ವರಿ ಸಭಾಂಗಣದಲ್ಲಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಅಧ್ಯಕ್ಷತೆಯಲ್ಲಿ ಉದ್ಘಾಟನೆಗೊಂಡಿತು. ವಿಶೇಷ ಕಾರ್ಯಕಾರಿ ಸಭೆಯನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ದೀಪ ಬೆಳಗಿ ಉದ್ಘಾಟಿಸಿದರು. ಸಭಾ ವೇದಿಕೆಯಲ್ಲಿ ಸಂಸದರಾದ ಕ್ಯಾ ಬ್ರಿಜೇಶ್ ಚೌಟ , ಶಾಸಕಿ ಭಾಗೀರಥಿ ಮುರುಳ್ಯ , ರವೀಂದ್ರ...
ಪೇರಡ್ಕ ಜುಮಾ ಮಸೀದಿಗೆ ಪೇರಡ್ಕ ಜಮಾಯತ್ ದುಬೈ ಸಮಿತಿಯ ಅಧ್ಯಕ್ಷರು ಅನಿವಾಸಿ ಉದ್ಯಮಿಗಳಾದ ಪಿ.ಎಂ.ರಹೀಮ್ ಪೇರಡ್ಕ ಕೊಡುಗೆಯಾಗಿ ನೀಡಿದ ಕಂಪ್ಯೂಟರ್,ಪ್ರಿಂಟರ್,ಕುಡಿಯುವ ನೀರಿನ ವ್ಯವಸ್ಥೆಯನ್ನು ಅಲ್ ಹಾಜ್ ಸಯ್ಯದ್ ಜೈನುಲ್ ಅಭಿದೀನ್ ತಂಗಳ್ ಕುಂನ್ನುಂಗೈ ದುಗ್ಗಲಡ್ಕ ಉದ್ಘಾಟನೆ ಮಾಡಿ,ಕೊಡುಗೆ ನೀಡಿದ ರಹೀಮ್ ಪೇರಡ್ಕರವರ ಕುಟುಂಬಕ್ಕೆ ವಿಶೇಷ ಪ್ರಾರ್ಥನೆ ಮಾಡಿ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಜುಮಾ ಮಸೀದಿ...
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವು ಎರಡು ದಿನಗಳ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ, ಭಜನೆ ಹಾಗೂ ವಿವಿಧ ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ನಡೆದು ಸೆ.08 ರಂದು ಅದ್ದೂರಿ ಶೋಭಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಸೆ. 07 ರಂದು ಗಣಪತಿ ಪ್ರತಿಷ್ಠೆಯೊಂದಿಗೆ ಆರಂಭಗೊಂಡು ಸಾಮೂಹಿಕ ಗಣಪತಿ ಹವನ, ಅಕ್ಷರಾಭ್ಯಾಸ...
ಸುಬ್ರಹ್ಮಣ್ಯ, ಸೆ. 7 : ಸುಬ್ರಹ್ಮಣ್ಯ ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಹಾಗೂ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಜಂಟಿಯಾಗಿ ಇಂದು ರವಿವಾರ ಕುಮಾರಧಾರ ಹಾಗೂ ಕುಲ್ಕುಂದ ರಸ್ತೆ ಬದಿಗಳಲ್ಲಿ ಇದ್ದ ತ್ಯಾಜ್ಯ ವಸ್ತುಗಳು, ಕಸ-ಕಡ್ಡಿಗಳು, ಪ್ಲಾಸ್ಟಿಕ್ ಇತ್ಯಾದಿಗಳನ್ನು ಶೇಖರಿಸಿ ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್, ಸೀನಿಯರ್...
ನಾಲ್ಕೂರು ಗ್ರಾಮದ ಬಳ್ಳಡ್ಕ ಪ್ರಶಾಂತ್ ಎಂಬವರ ಪತ್ನಿ ಸಂಧ್ಯಾ(29) ಅಲ್ಪ ಕಾಲದ ಅಸೌಖ್ಯದಿಂದ ಸೆ.7ರಂದು ನಿಧನರಾದರು. ಮೃತರು ಪತಿ, ಪುತ್ರ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಸುಬ್ರಹ್ಮಣ್ಯ: ಶ್ರೀ ಕ್ಷೇತ್ರದ ಉತ್ತಾರಾದಿ ಮಠದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ 54ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಶನಿವಾರ ರಾತ್ರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಕಾರ್ಯಕ್ರಮಗಳು ಕಲಾಸಕ್ತರ ವಿಶೇಷ ಮನ್ನಣೆಗೆ ಪಾತ್ರವಾಯಿತು.ಸುಬ್ರಹ್ಮಣ್ಯದ ಎಸ್ಎಸ್ಪಿಯು ಕಾಲೇಜಿನ ಸಾಂಸ್ಕೃತಿಕ ತಂಡದಿಂದ ಪ್ರದರ್ಶಿಸಲ್ಪಟ್ಟ ಜನಪದೀಯ ನೃತ್ಯ ಸಿಂಚನ ಸರ್ವ ಕಲಾಭಿಮಾನಿಗಳ ಮನಸೂರೆಗೊಂಡಿತು.ಸುಮಾರು 1.30 ಗಂಟೆಗಳ ಕಾಲ ನಡೆದ...
ಸುಬ್ರಹ್ಮಣ್ಯ:ಶ್ರೀ ಕ್ಷೇತ್ರದ ಉತ್ತಾರಾದಿ ಮಠದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ 54ನೇ ವರ್ಷದ ಗಣೇಶೋತ್ಸವವು ಭಕ್ತಿ ಸಡಗರದಿಂದ ಆರಂಭವಾಯಿತು. ಚೌತಿಯ ದಿನ ಶ್ರೀ ಮಹಾಗಣಪತಿಗೆ ರಜತ ಕಿರೀಟ ಮತ್ತು ಬೆಳ್ಳಿಯ ಪಾಶಾಂಕುಶ ಸಮರ್ಪಣೆ ನೆರವೇರಿತು.ಪುರೋಹಿತ ರಮಾನಂದ ಭಟ್ ವಿವಿಧ ವೈದಿಕ ವಿದಿ ವಿಧಾನಗಳೊಂದಿಗೆ ಶ್ರೀ ದೇವರಿಗೆ ಬೆಳ್ಳಿಯ ಆಭರಣಗಳನ್ನು ತೊಡಿಸಿದರು.1 ಕೆಜಿ 474...
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.12ರಂದು ಗುರುವಾರ ಹೊಸ್ತಾರೋಗಣೆ(ನವಾನ್ನ ಪ್ರಸಾದ) ನೆರವೇರಲಿದೆ. ಈ ನಿಮಿತ್ತ ಪ್ರಾತ:ಕಾಲ 5.15 ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7.30 ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿರುವುದು. ಬೆಳಗ್ಗೆ 8 ರ ಬಳಿಕ ದೇವಳದ ನೌಕರರಿಗೆ ಮತ್ತು ಸ್ಥಳೀಯ...
ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದ ಮಕ್ಕಳಿಂದ ಸುದರ್ಶನ ವಿಜಯ ಭಾರ್ಗವ ವಿಜಯ ಯಕ್ಷಗಾನ ಕಾರ್ಯಕ್ರಮ ನಡೆಯಿತು. ಗ್ರಾಮದ ಮಕ್ಕಳು ಪುಟ್ಟಪುಟ್ಟ ಹೆಜ್ಜೆಯನ್ನು ಹಾಕಿ ಕುಣಿದು ತಮ್ಮದೇ ರೀತಿಯಲ್ಲಿ ಅವರವರ ಪಾತ್ರವನ್ನು ಅದ್ಭುತವಾಗಿ ಪ್ರಸಂಗಿಸಿ ಪ್ರೇಕ್ಷಕರ ಮನತಣಿಸಿದರು. ಗ್ರಾಮದ ಎಲ್ಲಾ ಮಕ್ಕಳ ಬಗ್ಗೆ ಸಾರ್ವಜನಿಕರು ಅಭಿಮಾನ ವ್ಯಕ್ತಪಡಿಸಿದರು. ಯೋಗೀಶ್ ಶರ್ಮಾ ರವರ ಭಾಗವತಿಕೆಯಲ್ಲಿ...
Loading posts...
All posts loaded
No more posts
