ಭಾರೀ ಮಳೆ ಹಿನ್ನಲೆ ನಾಳೆ(ಆ.08) ಪುತ್ತೂರು ಉಪವಿಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ – ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದಾಧ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿಯ ಪ್ರಕಾರವಾಗಿ ಪುತ್ತೂರು ತಾಲೂಕು, ಬೆಳ್ತಂಗಡಿ ತಾಲೂಕು, ಸುಳ್ಯ ತಾಲೂಕು, ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ...

ಚೊಕ್ಕಾಡಿಯಲ್ಲಿ ಆ.9ರಂದು ಕೆಸರುಗದ್ದೆ ಕ್ರೀಡಾಕೂಟ

ಚೊಕ್ಕಾಡಿ, ಆ.7: ಗರುಡ ಯುವಕ ಮಂಡಲ (ರಿ.) ಚೊಕ್ಕಾಡಿ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಜಂಟಿ ಆಶ್ರಯದಲ್ಲಿ, ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯದ ಸಹಯೋಗದೊಂದಿಗೆ ಆಗಸ್ಟ್ 9ರಂದು ಚೆನ್ನಪರಿ–ಅಚ್ಚಿಪಳ್ಳ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ–2026 ನಡೆಯಲಿದೆ.ಬೆಳಿಗ್ಗೆ 8 ಗಂಟೆಯಿಂದ ವಿವಿಧ ಕ್ರೀಡಾಸ್ಪರ್ಧೆಗಳು ಆರಂಭಗೊಳ್ಳಲಿದ್ದು, ಪೂರ್ವಾಹ್ನ 9.30ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದೆ. ಶ್ರೀ...
Ad Widget

ಇಂದಿನ(ಆಗಸ್ಟ್ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ದರದಲ್ಲಿ ಜಿಗಿತ – ಅಡಿಕೆ, ಕೊಬ್ಬರಿ, ಕಾಳುಮೆಣಸು ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ಆಗಸ್ಟ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಆ.9ರಂದು ಜೈ ತುಲುನಾಡ್ ಬೆಂಗಳೂರು ವತಿಯಿಂದ ತುಳುನಾಡ ಆಟಿ ಸಂಭ್ರಮ

ಬೆಂಗಳೂರು:2021 ನೇ ಸಾಲಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ "ವಿಶೇಷ ಸಂಘಟನಾ ಪುರಸ್ಕಾರ" ಪ್ರಶಸ್ತಿ ಪುರಸ್ಕೃತ ಜೈ ತುಲುನಾಡ್ ಬೆಂಗಳೂರು (ರಿ.) ವತಿಯಿಂದ ಆಗಸ್ಟ್ 9, 2026 (ಭಾನುವಾರ) ರಂದು ತುಳುನಾಡ ಆಟಿ ಸಂಭ್ರಮ ಬೆಂಗಳೂರಿನ ಬಿಳೇಕಹಳ್ಳಿಯ ವಿಜಯ ಬ್ಯಾಂಕ್ ಲೇಔಟ್‌ನ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 7.15ಕ್ಕೆ ಅಯ್ಯಪ್ಪ...

ನಿಧನ : ಸೀಂಕು ಗೌರಿಹೊಳೆ ಬೆಳ್ಳಾರೆ

ಬೆಳ್ಳಾರೆ ಗ್ರಾಮದ ಗೌರಿಹೊಳೆ ಹತ್ತಿರದ ನಿವಾಸಿಯಾದ ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ನೌಕರ ದಿ. ಮುದರ ಇವರ ಪತ್ನಿ ಸೀಂಕು ನಿಧನ ಹೊಂದಿದ್ದಾರೆ. ಅವರಿಗೆ 70 ವರುಷ ವಯಸ್ಸಾಗಿತ್ತು. ಇವರಿಗೆ 4 ಜನ ಮಕ್ಕಳಿದ್ದು ಎರಡು ಹೆಣ್ಣು, ಎರಡು ಗಂಡು ಮಕ್ಕಳು ಸೇರಿದಂತೆ ಸೊಸೆಯಂದಿರು,ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಗುತ್ತಿಗಾರು : ಕಂಪೌಂಡ್ ಕುಸಿತ

ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿರುವ ನಿವೃತ್ತ ಯೋಧ ಮಹೇಶ್ ಕೊಪ್ಪತ್ತಡ್ಕ ಅವರ ಮನೆಯ ಹಿಂಬದಿಯ ಕಂಪೌಂಡ್ ಭಾರಿ ಮಳೆಯಿಂದ ಆ.07 ರಂದು ಕುಸಿದು ಬಿದ್ದಿದೆ.

ಮುಚ್ಚಿಲದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ : ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್‌ಗೆ ಸಾರ್ವಜನಿಕರ ಮೆಚ್ಚುಗೆ

ಆ.07 : ಮುಚ್ಚಿಲ ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾದ ಜಮಾಲ್ ಪಡಿಪ್ಪಿನಂಗಡಿ ಅವರ ನೇತೃತ್ವದಲ್ಲಿ ಕ್ಲಬ್‌ನ ಸದಸ್ಯರು ಹಾಗೂ ಯುವಕರ ತಂಡವು ಮುಚ್ಚಿಲ-ಪಡ್ಪಿನಂಗಡಿ ಪರಿಸರದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. ಕಾರ್ಯಕ್ರಮದ ಅಂಗವಾಗಿ ರಸ್ತೆಯ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಿ, ಬೆಳೆದಿದ್ದ ಕಾಡು-ಗಿಡಗಳನ್ನು ತೆರವುಗೊಳಿಸಲಾಯಿತು. ಇದರಿಂದ ಪರಿಸರದ ಸ್ವಚ್ಛತೆ ಕಾಪಾಡುವ ಜೊತೆಗೆ ಸಾರ್ವಜನಿಕರಿಗೆ ಸುಗಮ...

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಕಚೇರಿಯಲ್ಲಿ ಡಾ. ಕುರುಂಜಿ ವೆಂಕಟ್ರಮಣ ಗೌಡರ ಸಂಸ್ಮರಣೆ | ಸುಳ್ಯದಲ್ಲಿ ಕೆವಿಜಿ ಯವರ ಹೆಸರು ಶಾಶ್ವತ ನೆಲೆಸಲು ಸುಳ್ಯ ಹಬ್ಬ ಸಮಿತಿ ಚಟುವಟಿಕೆ ಪೂರಕ: ಎನ್.ಎ. ರಾಮಚಂದ್ರ

ಆಧುನಿಕ ಸುಳ್ಯದ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 13 ನೇ ವಾರ್ಷಿಕ ಪುಣ್ಯ ಸ್ಮರಣೆಯ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ದ ವತಿಯಿಂದ ಸಂಘದ ಕಚೇರಿಯಲ್ಲಿ ಸಂಸ್ಮರಣಾ ಕಾರ್ಯಕ್ರಮ ಜರಗಿತು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ನುಡಿ ನಮನ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ದಿವಂಗತ ಡಾ. ಕುರುಂಜಿ ವೆಂಕಟ್ರಮಣ ಗೌಡರ 13ನೇ ವರ್ಷದ ಪುಣ್ಯತಿಥಿ ಆಚರಣೆ

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣಗೌಡರ 13ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಗಸ್ಟ್ 7ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ. ಯವರು ಕುರುಂಜಿ ವೆಂಕಟ್ರಮಣಗೌಡರ ತತ್ವ...

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ “ರಾಷ್ಟ್ರೀಯ ಕೈಮಗ್ಗ ದಿನ-ಸ್ವಾತಂತ್ರ್ಯ ಹೋರಾಟದಲ್ಲಿ ಕೈಮಗ್ಗ ಹಾಗೂ ಸ್ವದೇಶಿ ಆಂದೋಲನದ ಪಾತ್ರ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ ಆ.08 ಶುಕ್ರವಾರದಂದು ರಾತ್ರಿ 8:30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ...
Loading posts...

All posts loaded

No more posts

error: Content is protected !!