- Saturday
- August 15th, 2026
ಯಾದವ ಸಭಾ ಪ್ರಾದೇಶಿಕ ಸಮಿತಿ ಮಂಡೆಕೋಲು ಹಾಗೂ ಯಾದವ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಡೆಕೋಲು ಇದರ ಸಹಯೋಗದೊಂದಿಗೆ ಆ.26 ರಂದು ಶ್ರೀ ಕೃಷ್ಣ ಜನಾಷ್ಟಮಿ ಕಾರ್ಯಕ್ರಮವು ಯಾದವ ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮವು ಪ್ರಾತಃಕಾಲದಲ್ಲಿ ಶ್ರೀ ಗಣಪತಿ ಹವನ ಮತ್ತು ಶ್ರೀಕೃಷ್ಣ ಕಲ್ಫೋತ್ತ ಪೂಜೆಯೊಂದಿಗೆ ಪ್ರಾರಂಭವಾಯಿತು ಬೆಳಿಗ್ಗೆ ಗಂಟೆಗೆ 10ರಿಂದ 11ಗಂಟೆಯವರೆಗೆ ಭಜನಾ ಸಂಕೀರ್ತನೆ ಆ...
ಬೆಳೆ ದಾಖಲಾತಿ ಮಾಡುವ ವಿಧಾನ ಹೇಗೆ ಮತ್ತು ಯಾವ ಕ್ಯೂಆರ್ ಕೋಡ್ ಬಳಸಬೇಕು ಹಾಗಿದ್ದರೆ ಸಂಪೂರ್ಣ ಮಾಹಿತಿ ಇಲ್ಲಿದೆ. ಸುಳ್ಯ:2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ರೈತರು ತಮ್ಮ ಆಂಡೋಯ್ಡ್ ಮೊಬೈಲಿನ ಮೂಲಕ ತಮ್ಮ ಜಮೀನಿನಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಸುಳ್ಯ ಸಹಾಯಕ...
ಚಲನ ಚಿತ್ರ ಸಂಗೀತ ಕರೋಕೆ ವಿ.ಕೆ ಬ್ರದರ್ಸ್ ಹಾಸನ, ಇವರು ಮಂಗಳೂರಿನ ಕ್ರೂಸ್ ಮತ್ತು ಡೈನ್ ಲೋಬೋ ರಿವರ್ವೇವ್ನಲ್ಲಿ ಆ.25ರಂದು ನಡೆದ ಗಾಯಕರುಗಳ ಚಲನಚಿತ್ರ ಕರೋಕೆಯನ್ನು ಹಾಡಿ ಸುಳ್ಯದ ವಿಜಯಕುಮಾರ್ರವರು 'ಹಾಡು ಬಾ ಸಂಗೀತ ಗಾನ ಪ್ರಶಸ್ತಿ' ಪತ್ರ ಪಡೆದಿರುತ್ತಾರೆ ಹಾಗೂ ಇವರು ಸುಳ್ಯದ ಟಿ.ಎ.ಪಿ.ಸಿ.ಎಮ್.ಎಸ್ ನಲ್ಲಿ ಉದ್ಯೋಗಿಯಾಗಿದ್ದಾರೆ.
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಸೆ.07 ಮತ್ತು ಸೆ. 08 ರಂದು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮ : ಸೆ. 07 ಶನಿವಾರ ಬೆಳಿಗ್ಗೆ ಗಂಟೆ 9-00ಕ್ಕೆ ಗಣಪತಿ ಪ್ರತಿಷ್ಠೆ, ಬೆಳಿಗ್ಗೆ ಗಂಟೆ 9-15ರಿಂದ ಸಾಮೂಹಿಕ...
ಸುಳ್ಯ ನಗರದ ಕೇರ್ಪಳಕ್ಕೆ ಹಾದು ಹೋಗುವ ಹಾಸ್ಟೆಲ್ ಬಳಿ ಫುಟ್ ಪಾತ್ ನಲ್ಲಿ ದೊಡ್ಡ ದೊಡ್ಡ ಗಾತ್ರದ ಪೈಪ್ ಗಳನ್ನು ತಂದು ಹಾಕಿದ್ದು ಪಾದ ಸಂಚಾರಿಗಳಿಗೆ ತೊಂದರೆ ಉಂಟಾಗುತ್ತಿದೆ. ಇದಕ್ಕೆ ಸಂಬಂಧಪಟ್ಟ ಇಲಾಖೆ ಗಮನ ಹರಿಸುವರೇ? ಹಾಗೂ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವರೇ? ಎಂದು ಕಾದು ನೋಡಬೇಕಾಗಿದೆ.
ಮೆಸ್ಕಾಂ ಗ್ರಾಮಾಂತರ ಉಪ ವಿಭಾಗದ ಈಶ್ವರಮಂಗಲ ಶಾಖೆಯಲ್ಲಿ ಮೆಕ್ಯಾನಿಕ್ ಗ್ರೇಡ್ ॥ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಶ್ ಕೆ.ಎಸ್.ರವರು ಕಛೇರಿ ಮೇಲ್ವಿಚಾರಕರಾಗಿ ಭಡ್ತಿಗೊಂಡು ಸುಳ್ಯ ಉಪ ವಿಭಾಗದ ಆರಂತೋಡು ಶಾಖೆಗೆ ವರ್ಗಾವಣೆಗೊಂಡಿದ್ದಾರೆ.ಇವರು ಪುತ್ತೂರು, ಕುಂಬ್ರ ಶಾಖೆಯಲ್ಲಿ ಸಹಾಯಕ ಪವರ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಳೆದ 17 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. 2007 ಸೆಪ್ಟೆಂಬರ್ 12ರಂದು...
ವಿಶ್ವ ಹಿಂದೂ ಪರಿಷತ್ - ಭಜರಂಗದಳ ಸುಳ್ಯ ಪ್ರಖಂಡ ಶ್ರೀ ಕೃಷ್ಣ ಭಜನಾ ಮಂದಿರ ಮೇನಾಲ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಮೇನಾಲ ಭಜನಾ ಮಂದಿರದಲ್ಲಿ ಆಚರಿಸಲಾಯಿತು. ಆ. 25ರಂದು ವಿವಿಧ ಕ್ರೀಡಾಕೂಟ ವನ್ನು ನಡೆಸಲಾಯಿತು. ಇದರ ಉದ್ಘಾಟನೆಯನ್ನು ಸುಳ್ಯದ ಶಾಸಕರಾದ ಕು. ಭಾಗೀರಥಿ ಮುರುಳ್ಯ ನೆರವೇರಿಸಿದರು. ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್...
(ವರದಿ : ಉಲ್ಲಾಸ್ ಕಜ್ಜೋಡಿ)ಕರಾವಳಿ ಜಿಲ್ಲೆಗಳಲ್ಲಿ ಅಡಿಕೆ, ತೆಂಗು ಕೃಷಿಯೊಂದಿಗೆ ಕಾಳುಮೆಣಸು ಬೆಳೆಯಲಾಗುತ್ತಿದ್ದು, ಕರಾವಳಿ ಭಾಗದ ಬಹುಮುಖ್ಯ ಬೆಳೆಗಳಲ್ಲಿ ಕಾಳುಮೆಣಸು ಕೂಡ ಒಂದಾಗಿದೆ. ಕಾಳುಮೆಣಸು ಬಳ್ಳಿಯಲ್ಲಿ ಹೂವು ಬೆಳೆದ ವಿಸ್ಮಯಕಾರಿ ಘಟನೆಯೊಂದು ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿ ಎಂಬಲ್ಲಿ ನಡೆದಿದ್ದು, ಕೃಷಿಕರಾದ ಕಿಶೋರ್ ಕುಮಾರ್ ಕಜ್ಜೋಡಿ ಎಂಬುವವರು ತಮ್ಮ ತೋಟದಲ್ಲಿ ನೆಡುವ ಸಲುವಾಗಿ...
ತೊಡಿಕಾನ ಗ್ರಾಮದ ಹರ್ಲಡ್ಕ ಎಂಬಲ್ಲಿ ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರ್ಲಡ್ಕ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ರುಕ್ಮಯ್ಯ ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ೪೫ ವರ್ಷ ವಯಸ್ಸಾಗಿತ್ತು.ಮೃತರು ತಂದೆ, ತಾಯಿ, ಹಾಗೂ ಪತ್ನಿ ರಮ್ಯ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.
Loading posts...
All posts loaded
No more posts
