ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಸಭೆಯಲ್ಲಿ ಸದಸ್ಯರಾದ ಜಾನಿ.ಕೆ.ಪಿ ಭಾಗಿ

ಆ 26: ವಿಕಾಸ ಸೌಧದಲ್ಲಿ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಮಂಡಳಿ ಹಾಗೂ ಖಾಸಗಿ ಕಂಪನಿ ಮತ್ತು ಕೈಗಾರಿಕೆಗಳ ಸಹಭಾಗಿತ್ವದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತೀಕರಿಸಿದ ಕೌಶಲ್ಯ...

ದೇವ : 34 ನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿ – ಮನರಂಜಿಸಿದ ಕೃಷ್ಣವೇಷ ಸ್ಪರ್ಧೆ –  ಮೆಸ್ಕಾಂ ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಸನ್ಮಾನ

ದೇವ ಗೆಳೆಯರ ಬಳಗ, ಜ್ಯೋತಿಲಕ್ಷ್ಮಿ ಮಹಿಳಾ ಮಂಡಲಗಳ ಜಂಟಿ ಆಶ್ರಯದಲ್ಲಿ ಆ.26 ರಂದು ಶ್ರೀ ಕೃಷ್ಣಾ ಜನ್ಮಾಷ್ಠಮಿ ಪ್ರಯುಕ್ತ 34ನೇ ವರ್ಷದ ಮೊಸರು ಕುಡಿಕೆ ಮತ್ತು ಜಾರು ಕಂಬ,ಕೃಷ್ಣ ವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಊರಿನ ಹಿರಿಯರಾದ ಚಿನ್ನಪ್ಪ ಗೌಡ ದೇವ ನೆರವೇರಿಸಿದರು. ಸಂಪಾಜೆ ಹೊರಠಾಣೆಯ ಸಹಾಯಕ ಉಪನಿರೀಕ್ಷಕರಾದ...
Ad Widget

ಸುಳ್ಯ ಪೋಲೀಸ್ ವೃತ್ತ ನಿರೀಕ್ಷಕರಾಗಿ ತಿಮ್ಮಪ್ಪ ನಾಯ್ಕ

ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಪೋಲೀಸ್ ವೃತ್ತ ನಿರೀಕ್ಷಕರಾಗಿರುವ ತಿಮ್ಮಪ್ಪ ನಾಯ್ಕರನ್ನು ಸುಳ್ಯಕ್ಕೆ ವರ್ಗಾಯಿಸಿ ಸರಕಾರ ಆದೇಶ ಮಾಡಿದೆ.ಈ ಹಿಂದೆ ಸುಳ್ಯ ಇನ್ಸ್ ಪೆಕ್ಟರ್ ಆಗಿದ್ದ ಸತ್ಯನಾರಾಯಣ ಕೆ.ಯವರು ವರ್ಗಾವಣೆಗೊಂಡ ಬಳಿಕ ಸುಳ್ಯದ ಚಾರ್ಜ್ ಪುತ್ತೂರಿನವರಿಗೆ ಪ್ರಭಾರ ವಹಿಸಲಾಗಿತ್ತು. ಇದೀಗ ಸುಳ್ಯಕ್ಕೆ ತಿಮ್ಮಪ್ಪ ನಾಯ್ಕರನ್ನು ನೇಮಿಸಿ ಸರಕಾರ ವರ್ಗಾಯಿಸಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

ಮಿಲಿಟರಿ ಗ್ರೌಂಡ್ ಶ್ರೀ ಕೃಷ್ಣಾಷ್ಟಮಿ ಆಚರಣೆ

ಹೊಸಗದ್ದೆ ಮಿಲಿಟರಿ ಗ್ರೌಂಡ್ ನಲ್ಲಿ ಇಂದು ಶ್ರದ್ಧಾ ಭಕ್ತಿಯಿಂದ ಶ್ರೀಕೃಷ್ಣಾಷ್ಟಮಿ ಆಚರಿಸಲಾಯಿತು. ಸಾರ್ವಜನಿಕರಿಗೆ ಹಲವು ರೀತಿಯ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು, ಮದ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ದ ಅಧ್ಯಕ್ಷ ಪುನೀತ್ ಕುಮಾರ್,ಉಪಾಧ್ಯಕ್ಷ ಕೌಶಿಕ್ , ಕಾರ್ಯದರ್ಶಿ, ಸಮಿತಿಯ ಪದಾಧಿಕಾರಿಗಳು,ಎಂ.ಜಿ ಬಾಯ್ಸ್ ತಂಡದವರು ಸದಸ್ಯರು ಪದಾಧಿಕಾರಿಗಳು, ಸ್ಥಳೀಯರು,ಸಾರ್ವಜನಿಕರು ಉಪಸ್ಥಿತರಿದ್ದರು.

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಆಂತರಿಕ ಚುನಾವಣೆ: ರಝಾಕ್ ಕೆನರಾ ಅಧ್ಯಕ್ಷರಾಗಿ ಆಯ್ಕೆ

ಸುಳ್ಯ: ಆಗಸ್ಟ್ 20 ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರತಿನಿಧಿಗಳ ಸಭೆ ಮತ್ತು ಸಮಿತಿಯ ಆಂತರಿಕ ಚುನಾವಣೆಯು ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಅಡ್ಡೂರು ರವರು ಪ್ರತಿನಿಧಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿಯವರಾದ...

ಗಜಾನನ ಭಜನಾ ಮಂದಿರ ಜಯನಗರ ಕೃಷ್ಣ ಜನ್ಮಾಷ್ಟಮಿ ಆಚರಣೆ

ಜಯನಗರ ಗಜಾನನ ಭಜನಾ ಮಂದಿರ ಇದರ ಆಶ್ರಯದಲ್ಲಿ ಅದ್ದೂರಿಯಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಸಲಾಯಿತು.ಸಾರ್ವಜನಿಕರಿಗೆ ವಿವಿದ ಆಟೋಟ ಸ್ಪರ್ಧೆ ನಡೆಸಲಾಯಿತು,ಮದ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಹಳೆಗೇಟುನಿಂದ ಜಯನಗರವರೆಗೂ ರಸ್ತೆಯ ವಿವಿದ ಕಡೆಗಳಲ್ಲಿ ಗೋಪುರ ಕುಡಿಕೆ, ಮೊಸರು ಕುಡಿಕೆ ನೆರವೇರಿಸಿದರು ಅಧ್ಯಕ್ಷರಾದ ವಿಶ್ವನಾಥ ನಾಯ್ಕ, ಕಾರ್ಯದರ್ಶಿ ಅನುರಾಧ ನಾಗರಾಜ್ ಮಹಿಳಾ ಸಮಿತಿ ಅಧ್ಯಕ್ಷ. ಹೇಮಾ...

ದಾಸರಬೈಲು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಯುವಶಕ್ತಿ ಮಿತ್ರ ಬಳಗ ದಾಸರಬೈಲು ಮರ್ಕಂಜ ದ ವತಿಯಿಂದ ದ್ವಿತೀಯ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ವಿವಿದ ಆಟೋಟ ಸ್ಪರ್ಧೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ರೆಂಜಾಳ ದೇವಸ್ಥಾನದ ಸಹ ಅರ್ಚಕ ರಾಜರಾಮ್ ಭಟ್ ಬಳ್ಳಕ್ಕಾನ ನೆರವೇರಿಸಿ ಮಾತನಾಡಿದರು. ಅಧ್ಯಕ್ಷತೆ ಯನ್ನು ಮರ್ಕಂಜ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರಾದ...

ಸುಳ್ಯ ತಾಲೂಕು ಕಚೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಸುಳ್ಯ:ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಳ್ಯ ತಾಲೂಕು ಕಚೇರಿಯಲ್ಲಿ ಕು.ಭಾಗೀರಥಿ ಮುರುಳ್ಯರ ಅಧ್ಯಕ್ಷತೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ತಹಶೀಲ್ದಾರ್ ಜಿ.ಮಂಜುನಾಥ್ ದೀಪ ಬೆಳಗಿ ಉದ್ಘಾಟಿಸಿದರು. ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್‌ ಶೆಟ್ಟಿ ಮೇನಾಲ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ಯಾದವ ಸಮಾಜದ ಅಧ್ಯಕ್ಷ ಕರುಣಾಕರ...

ಸುಳ್ಯ : ಗಾಂಧಿನಗರದಲ್ಲಿ ಅನ್ಯಮತಿಯರಿಂದ ಹಲ್ಲೆ ಆರೋಪ – ಹಿಂದೂ ಯುವಕರಿಂದ ಪೋಲೀಸ್ ದೂರು

ಸುಳ್ಯದ ಗಾಂಧಿನಗರದಲ್ಲಿ ರೂಂ ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಅನ್ಯಧರ್ಮದ ಯುವಕರು ಬಂದು ಅವಾಚ್ಯ ಶಬ್ದಗಳಿಂದ ನಿಂಧಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ರಕ್ಷಿತ್, ನವನೀತ್, ಸಂತೋಷ್, ಸಂಜೀವ ಎಂಬವರು ಪೋಲೀಸ್ ದೂರು ನೀಡಿದ ಘಟನೆ ಆ.25 ರಂದು ನಡೆದಿದೆ. ರೂಮ್ ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಬಳಿ ಬಂದ ಅಪರಿಚಿತ ಯುವಕರು ತಮ್ಮ ದ್ವಿಚಕ್ರ ವಾಹನದಲ್ಲಿ ಕರ್ಕಶವಾದ ಶಬ್ದ...

ನಡುಗಲ್ಲು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್-ಕಿ-ಬಾತ್ ವೀಕ್ಷಣೆ ; ಗಿಡ ನೆಡುವ ಕಾರ್ಯಕ್ರಮ

ನಡುಗಲ್ಲು ಬೂತ್ ವಾರ್ಡ್ ಸಂಖ್ಯೆ 119 ರಲ್ಲಿ ಆ.28 ಆದಿತ್ಯವಾರದಂದು ಆತ್ಮರಾಮ ವಲ್ಪಾರೆ ರವರ ಮನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್-ಕಿ-ಬಾತ್ ವೀಕ್ಷಣೆ ಕಾರ್ಯಕ್ರಮವು ಗಿಡ ನೆಡುವ ಕಾರ್ಯಕ್ರಮದಿಂದ ಆರಂಭವಾಯಿತು. ಈ ಸಂದರ್ಭದಲ್ಲಿ ಚಂದ್ರಶೇಖರ ಬಾಳುಗೋಡು, ವಿಜಯ ಕುಮಾರ್ ಚಾರ್ಮತ, ಆತ್ಮರಾಮ ವಲ್ಪಾರೆ, ಹರೀಶ್ ಅಂಜೇರಿ, ರವೀಂದ್ರ ಕೊರಂಬಟ, ದಯಾನಂದ ಹುದೇರಿ, ಗಿರೀಶ್ ಕಾರ್ಜಾ, ಸುಬ್ರಹ್ಮಣ್ಯ...
Loading posts...

All posts loaded

No more posts

error: Content is protected !!