ಮಂಡೆಕೋಲು ಸ.ಉ.ಹಿ. ಪ್ರಾ. ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿ ರಚನೆ, ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು, ಪ್ರ.ಕಾರ್ಯದರ್ಶಿಯಾಗಿ ಜಾನಕಿ ಕಣೆಮರಡ್ಕ, ಕೋಶಾಧಿಕಾರಿಯಾಗಿ ಹಸೀಸ್ ಶಾಲೆಕ್ಕಾರ್ ಆಯ್ಕೆ

ಸುಳ್ಯ: ತಾಲೂಕಿನ ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಜಾನಕಿ ಕಣೆಮರಡ್ಕ ಹಾಗೂ ಕೋಶಾಧಿಕಾರಿಯಾಗಿ ಹಸೀಸ್ ಶಾಲೆಕ್ಕಾರ್ ಆಯ್ಕೆಯಾಗಿದ್ದಾರೆ. ಗುರುವಾರ ಶಾಲಾ ಸಭಾಂಗಣದಲ್ಲಿ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಗೌರವಾಧ್ಯಕ್ಷರಾಗಿಅನಂತಕೃಷ್ಣ ಚಾಕೋಟೆ, ಉಪಾಧ್ಯಕ್ಷರಾಗಿ ಸಂಧ್ಯಾ ಮಾವಂಜಿ, ಶ್ರೀಹರಿ ಬೊಳುಗಲ್ಲು, ಮಧುರ...

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿ ಪವಿತ್ರ ಗೆ ಬಹುಮಾನ

ಯುವಜನ ಸಂಯುಕ್ತ ಮಂಡಳಿ (ರಿ )ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿ ಇವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ದೇಶ ಭಕ್ತಿ ಗೀತೆ, ಭಾಷಣ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ದ್ವಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪವಿತ್ರ ಆರ್  ದ್ವಿತೀಯ ಸ್ಥಾನ ಗಳಿಸಿದ್ದಾರೆ.ಈ ಸಾಧಕಿಯನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
Ad Widget

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ ಎಲ್ಲರ ಗಮನಸೆಳೆಯಿತು. ಪ್ರತಿವರ್ಷ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಈ ಮೂಲಕ ತುಳುನಾಡಿನ ಸಂಸ್ಕೃತಿ ಅರಿವು ಮೂಡಿಸಲಾಗುತ್ತಿದೆ.ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. ಶಾಲಾ ಸಂಚಾಲಕರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ, ಉಪಾಧ್ಯಕ್ಷೆ...

ಕೆಎಸ್ಎಸ್ ಕಾಲೇಜಿನ ಉಪನ್ಯಾಸಕರಾದ ವಿನ್ಯಾಸ್ ಹೊಸೋಳಿಕೆ ಯವರಿಗೆ ಪಿ ಎಚ್ ಡಿ ಪದವಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ವಿನ್ಯಾಸ್ ಹೊಸೋಳಿಕೆ ಇವರು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಂಶುಪಾಲರಾದ ಪ್ರೋ. ಡಾ. ಉದಯ್ ಕುಮಾರ್ ಇರ್ವತ್ತೂರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ "ಮಾರ್ಕೆಟಿಂಗ್ ಸ್ಟ್ರಾಟಜಿಸ್ ಆಫ್ ಸೋಷಿಯಲ್ ಎಂಟರ್ಪ್ರೈಸಸ್ - ಎ ಸ್ಟಡಿ...

ಶ್ರಮದಾನ ನಡೆಸುವ ಮೂಲಕ ಸ್ವಾತಂತ್ರ್ಯೋತ್ಸವ ಆಚರಿಸಿದ ನಿಡ್ವಾಳದ ವಿಷ್ಣುಸೇವಾ ಶಕ್ತಿ ಸಂಘಟನೆಯ ಸದಸ್ಯರು

ಕರಿಕ್ಕಳ : 78ನೇ ಸ್ವಾತಂತ್ರ್ಯೋತ್ಸವವನ್ನು ಶ್ರಮದಾನ ಮಾಡುವ ಮೂಲಕ ವಿಷ್ಣುಸೇವಾ ಶಕ್ತಿ ನಿಡ್ವಾಳ ಸಂಘಟನೆಯವರು ಆಚರಿಸಿದರು. ನಿಡ್ವಾಳ ದಿಂದ ಅಲೆಂಗಾರ, ಮೇಲ್ಪಾಡಿ, ಅತ್ಯಡ್ಕಕ್ಕೆ ಸಂಪರ್ಕಿಸುವ ರಸ್ತೆಯನ್ನು ಸ್ವಚ್ಛ ಮತ್ತು ದುರಸ್ತಿ ಗೊಳಿಸಿದರು.

ಎಲಿಮಲೆ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃ ಶಕ್ತಿ ಹಾಗೂ ದುರ್ಗಾ ವಾಹಿನಿ ಅಯೋಧ್ಯೆ ಶಾಖೆ ಎಲಿಮಲೆ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಬೃಹತ್ ಪಂಜಿನ ಮೆರವಣಿಗೆ ಆ. 13 ರಂದು ಎಲಿಮಲೆ ಯಲ್ಲಿ ನಡೆಯಿತು. ಹಿರಿಯ ಸ್ವಯಂ ಸೇವಕರಾದ ಧರ್ಮಪಾಲ ಗಟ್ಟಿಗಾರು ಮೆರವಣಿಗೆಗೆ ಚಾಲನೆ ನೀಡಿದರು. ಪಂಜಿನ ಮೆರವಣಿಗೆ ನಂತರ ಸಭಾ ಕಾರ್ಯಕ್ರಮ...

ನಡುಗಲ್ಲು ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮೊದಲಿಗೆ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದರ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪಾರೆಪ್ಪಾಡಿಯವರು ಸರ್ವರನ್ನು ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಅಮೃತ ಇವರು 78ನೇ ಧ್ವಜಾರೋಹಣ ಮಾಡುವರೆ "ಎಸ್ ಡಿ ಎಂ ಸಿ" ಅಧ್ಯಕ್ಷರಾದ ಶ್ರೀ ಶಿವರಾಮ ಉತ್ರoಬೆ...

ಹರಿಹರ ಪಲ್ಲತ್ತಡ್ಕ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ದ್ವಜಾರೋಹಣವನ್ನು ನೆರವೇರಿಸಿದರು.ನಂತರ ಶಾಲಾ ವಿದ್ಯಾರ್ಥಿಗಳಿಂದ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಾರಾ ಮಲ್ಲಾರ ಅವರು ಉಪಸ್ಥಿತರಿದ್ದರು.ಮಕ್ಕಳಿಗೆ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶಾಲೆಯ ವತಿಯಿಂದ ಸಿಹಿತಿಂಡಿಯನ್ನು...

ಮಿಥುನ್ ಮಲ್ಲಾರ ಬೀಚ್ ಕಬಡ್ಡಿ ಇಂಡಿಯಾ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆ

ಏನೆಕಲ್ಲು ಗ್ರಾಮದ ಮಿಥುನ್ ಮಲ್ಲಾರ ರವರು ಬೀಚ್ ಕಬಡ್ಡಿ ಇಂಡಿಯಾ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.ಇವರು ಇತ್ತೀಚೆಗೆ ಬಿಹಾರದ ಬೋಧಗಯದಲ್ಲಿ ನಡೆದ ಅಖಿಲ ಭಾರತ ರಾಷ್ಟ್ರೀಯ ಬೀಚ್ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡದಿಂದ ಪ್ರತಿನಿಧಿಸಿದ್ದರು. ಇವರು ಏನೆಕಲ್ಲು ಗ್ರಾಮದ ಮಲ್ಲಾರ ಮನೆ ಸುಂದರ ಗೌಡ ಮತ್ತು ವಸಂತಿ ದಂಪತಿ ಪುತ್ರ.

ಕೊಲ್ಲಮೊಗ್ರು : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಶ್ವಥ್ ಯಳದಾಳು ಹಾಗೂ ಸದಸ್ಯರುಗಳಾದ ಮಾಧವ ಚಾಂತಾಳ, ಪುಷ್ಪರಾಜ್ ಪಡ್ಪು, ಶ್ರೀಮತಿ ಶಿವಮ್ಮ ಕಟ್ಟ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಸಂತೋಷ್ ನಾಯ್ಕ್ ಗಡಿಕಲ್ಲು, ಲೀಲಾವತಿ...
Loading posts...

All posts loaded

No more posts

error: Content is protected !!