- Sunday
- August 16th, 2026
ಗುತ್ತಿಗಾರು ಗ್ರಾಮದ ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ಕ್ಷೀರಾಭಿಷೇಕ, ಸೀಯಾಳ ಅಭಿಷೇಕ, ನಾಗ ತಂಬಿಲ ನಡೆಯಿತು. ಮಧ್ಯಾಹ್ನ ದೇವಸ್ಥಾನದಲ್ಲಿ ಆಶ್ಲೇಷ ಪೂಜೆ ನೆರವೇರಲಿದೆ.
ಕೊಡಿಯಾಲ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದೇವಾಲಯದ ಅರ್ಚಕರಾದ ಶಂಕರನಾರಾಯಣ ಮಯ್ಯರ ನೇತೃತ್ವದಲ್ಲಿ ನಾಗರಪಂಚಮಿ ಅಂಗವಾಗಿ ಹಾಲು,ಸೀಯಾಳ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.
ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಆ.8ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕುಮಾರಸ್ವಾಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಹಾಗೂ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರ ...
ಸುಳ್ಯ ತಾಲೂಕು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂನಡ್ಕ ಪೇರಡ್ಕ ರಸ್ತೆಯಲ್ಲಿ ಸಂಪರ್ಕ ಕಲ್ಪಿಸುವ ದರ್ಕಸ್ ಮುಳುಗು ಸೇತುವೆ ಮಳೆಗಾಲದಲ್ಲಿ ಪಯಸ್ವಿನಿ ನದಿಯಲ್ಲಿ ಪ್ರವಾಹ ಹೆಚ್ಚಾದಾಗ ಆಗಾಗ ಮುಳುಗಡೆಯಗುತ್ತಿದ್ದು ಈ ರಸ್ತೆಯಲ್ಲಿ ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ನಿತ್ಯ ಸಂಚಾರ ಮಾಡುತ್ತಿದ್ದು ನೂರಾರು ಮನೆಗಳಿಗೆ ಸಂಪರ್ಕ ಕಲ್ಪಿಸುವ ಮಂದಿರ ಮಸೀದಿ ಶಾಲಾ ವಿದ್ಯಾರ್ಥಿಗಳಿಗೆ ಸಂಪರ್ಕ ಕಲ್ಪಿಸುವ...
ಬಾಳುಗೋಡು ಗ್ರಾಮದ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ನಾಗಪ್ಪ ಗೌಡ ಕೂಜುಗೋಡು ಕಟ್ಟೆಮನೆ ಅವರು ಇಂದು ನಿಧನರಾದರು.ಅವರಿಗೆ 94 ವರ್ಷ ವಯಸ್ಸಾಗಿತ್ತು. ಇವರು ಸುಳ್ಯ ತಾಲೂಕು ಶಿಕ್ಷಣ ಇಲಾಖೆಯಲ್ಲಿ ನಿರೀಕ್ಷಕರಾಗಿದ್ದರು.ಮೃತರು ಪುತ್ರರಾದ ಗುತ್ತಿಗೆದಾರರಾದ ದಿನೇಶ್, ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಯತೀಶ್, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು ಮಿತ್ರರರನ್ನು ಅಗಲಿದ್ದಾರೆ.ಮೃತರ ಸದ್ಗತಿ ಕಾರ್ಯಕ್ರಮ...
ಸುಬ್ರಹ್ಮಣ್ಯ ಆಗಸ್ಟ್ 8: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಯಾಗಿ ಅರವಿಂದ ಅಯ್ಯಪ್ಪ ಸತಗುಂಡಿ ಇಂದು ಗುರುವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಅವರು ಹುಲಿಗಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಗೋವಿಂದ ನಾಯ್ಕ ಅವರು ಅಧಿಕಾರ ಹಸ್ತಾಂತರಿಸಿ ಮಾತೃ ಸಂಸ್ಥೆ ಹಿಂದೂ...
ಪಂಜ ಲಯನ್ಸ್ ಕ್ಲಬ್ ಮತ್ತು ಅರಣ್ಯ ಇಲಾಖೆ ಪಂಜ ವಲಯ ಇದರ ಆಶ್ರಯದಲ್ಲಿ ವನಮಹೋತ್ಸವ ಹಾಗೂ ಹಣ್ಣಿನ ಗಿಡಗಳ ವಿತರಣೆ ಮತ್ತು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಆ.10 ರಂದು ಬೆಳಿಗ್ಗೆ ವಳಲಂಬೆ ಹಿ. ಪ್ರಾ. ಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಜ ವಲಯಾರಣ್ಯಾಧಿಕಾರಿ ಸಂತೋಷ ರೈ ನೆರವೇರಿಸಲಿದ್ದಾರೆ. ಲಯನ್ಸ್ ಕ್ಲಬ್ ಅಧ್ಯಕ್ಷ ಲ|ಕುಶಾಲಪ್ಪ...
ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ವತಿಯಿಂದ ಆಗಸ್ಟ್ 7ರಂದು , ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ವತಿಯಿಂದ ಆಗಸ್ಟ್ 7ರಂದು , ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
Loading posts...
All posts loaded
No more posts
