- Sunday
- August 16th, 2026
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಅಡುಗೆದಾರರಾಗಿ 36 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವೆಂಕಟ್ರಮಣ ಬೇರ್ಪಡ್ಕರವರು ಜು.31 ರಂದು ನಿವೃತ್ತಿ ಹೊಂದಲಿದ್ದಾರೆ. 1988 ಮಾರ್ಚ್ 21 ರಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಿನಗೂಲಿ ನೌಕರರಾಗಿ ಕೆಲಸಕ್ಕೆ ಸೇರಿದ್ದರು ಬಳಿಕ 1996 ರಿಂದ ಹುದ್ದೆ ಖಾಯಮಾತಿಗಾಗಿ ನ್ಯಾಯಾಲಯದಲ್ಲಿ ಹೋರಾಟ ನಡೆಸಿ 2016 ಸೆಪ್ಟೆಂಬರ್ನಿಂದ ಸರಕಾರಿ ನೌಕರನಾಗಿ ಪರಿಗಣಿತರಾಗಿದ್ದರು. ಇದೀಗ 60 ವರ್ಷ...
ಸುಳ್ಯ – ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬಸ್ ನಿಲ್ದಾಣದಲ್ಲೇ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ವರದಿಯಾಗಿದೆ.ಬಸ್ ನಲ್ಲಿದ್ದವರನ್ನು ತಕ್ಷಣ ಕೆಳಗೆ ಇಳಿಸಲಾಯಿತು. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.
ಪ್ರತಿಯೊಬ್ಬ ಮನುಷ್ಯನಿಗೂ ತಾನು ಸುಂದರವಾಗಿ ಕಾಣಬೇಕು ಎನ್ನುವುದು ಸಹಜ. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ಹೆಚ್ಚು ಅನಿವಾರ್ಯ ಎಂದು ತಿಳಿದಿದ್ದರೂ, ಜನರು ತಾವು ಚೆನ್ನಾಗಿ ಕಾಣಿಸಿಕೊಳ್ಳಬೇಕು ಎನ್ನುವುದು ಮನುಷ್ಯನ ಸಹಜವಾದ ಮತ್ತು ಪ್ರಾಮಾಣಿಕವಾದ ಅನಿಸಿಕೆ. ಇದು ಖಂಡಿತವಾಗಿಯೂ ತಪ್ಪಲ್ಲ. ಬಾಹ್ಯ ಸೌಂದರ್ಯಕ್ಕೂ ಮನೋಧರ್ಮಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲವೆಂಬುದು ಎಲ್ಲರಿಗೂ ತಿಳಿದ ವಿಚಾರವೇ ಆದರೂ, ಮನುಷ್ಯನಿಗೆ ತಾನು...
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜು.31 ಮತ್ತು ಆ. 01ರಂದು ಭಾರತೀಯ ಹವಾಮಾನ ಇಲಾಖೆಯಿಂದ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯ ಕೆಲವು ರಸ್ತೆ ಸಂಪರ್ಕಗಳು ಅಲ್ಲಲ್ಲಿ ಕಡಿತಗೊಂಡಿದ್ದು, ಜು.31 ಮತ್ತು ಆ. 01ರಂದು ಜಿಲ್ಲೆಗೆ ಭೇಟಿ ನೀಡಲು ಇಚ್ಛಿಸಿರುವ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಸುರಕ್ಷತೆಯ ಹಿತದೃಷ್ಟಿಯಿಂದ ಮುಂದೂಡುವಂತೆ ಕೊಡಗು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ನಾಳೆ 31-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು,...
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಐವರ್ನಾಡು ಗ್ರಾಮದ ಚೆಮ್ನೂರು ತಿಮ್ಮಪ್ಪ ಗೌಡ ಎಂಬವರ ಮನೆ ಸಮೀಪ ಗುಡ್ಡ ಕುಸಿತಗೊಂಡಿದೆ. ಮನೆಯವರು ನೋಡಾ-ನೋಡುತ್ತಿದ್ದಂತೆ ಗುಡ್ಡ ಕುಸಿತಗೊಂಡಿದೆ. ನಿರಂತರ ಮಳೆಯಿಂದಾಗಿ ಮಣ್ಣು ಕುಸಿಯುತ್ತಲೇ ಇದೆ. ಇನ್ನೂ ಗುಡ್ಡ ಕುಸಿದರೇ ರಬ್ಬರ್ ಮರಗಳು ಜತೆಗೆ ಬಿದ್ದರೇ ಮನೆಗೂ ಹಾನಿಯಾಗುವ ಸಾಧ್ಯತೆ ಹೆಚ್ಚಿದೆ.
ಐವರ್ನಾಡು ಗ್ರಾಮದ ದೇರಾಜೆ ಕೋಡ್ತೀಲು ಕೊಪ್ಪತ್ತಡ್ಕ ರಸ್ತೆಯ ಚಂದ್ರಕಾಂತ ಎಂಬವರ ಮನೆಯ ಹಿಂಬದಿ ಬರೆ ಜರಿದು ಬಿದ್ದಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.ರಸ್ತೆ ಬದಿಯ ಬರೆ ಇನ್ನಷ್ಟು ಜರಿದು ಬಿದ್ದರೆ ಸಂಪರ್ಕ ಕಡಿತಗೊಳ್ಳಲಿದೆ.ಈಗ ಘನ ವಾಹನಗಳಿಗೆ ಸಂಚಾರ ನಿಷೇಧಿಸಿದ್ದು ಬೈಕ್ ಗಳು ಮಾತ್ರ ಸಂಚಾರ ಮಾಡಬಹುದು.
ಕಡಬ ತಾಲೂಕು ಕಚೇರಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ಜು.30ರಂದು ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪಿ.ಪಿ.ವರ್ಗೀಸ್,ಗೀತಾ ಕೋಲ್ಚಾರ್,ಹೆಚ್ .ಆದಂ ರಾಮಕುಂಜ ,ಕಡಬ ತಹಶಿಲ್ದಾರ್ ಪ್ರಭಾಕರ ಖಜೂರೆ,ಉಪತಹಶೀಲ್ದಾರರಾದ ಮನೋಹರ, ಗೋಪಾಲ್,ಕಂದಾಯ ನಿರೀಕ್ಷಕ ಪೃಥ್ವಿ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.
ಜನನಿ ಫ್ರೆಂಡ್ಸ್ ಕ್ಲಬ್ ಇದರ ಆಶ್ರಯದಲ್ಲಿ ಕಳೆದ ವರ್ಷದಿಂದ ಆಲೆಟ್ಟಿಯಲ್ಲಿ ಪ್ರಾರಂಭಿಸಿದ ಮೊಸರು ಕುಡಿಕೆ ಉತ್ಸವದ ಎರಡನೇ ವರ್ಷದ ಉತ್ಸವವನ್ನು ಗ್ರಾಮ ಮಟ್ಟದಲ್ಲಿ ಇರುವ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದಿಂದ ಆಚರಿಸುವ ಸಲುವಾಗಿ ನೂತನ ಉತ್ಸವ ಸಮಿತಿಯನ್ನು ಜು.28 ರಂದು ರಚಿಸಲಾಯಿತು.ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜನನಿ ಫ್ರೆಂಡ್ಸ್ ಕ್ಲಬ್ ಗುಂಡ್ಯ...
Loading posts...
All posts loaded
No more posts
