ಅಪಾಯಕಾರಿ ಮರ ತೆರವು ಹಿನ್ನೆಲೆ ಸುಳ್ಯದಲ್ಲಿ (ಜು.24)ನಾಳೆ ವಿದ್ಯುತ್ ವ್ಯತ್ಯಯ

ಸುಳ್ಯಕ್ಕೆ 33ಕೆ.ವಿ. ವಿದ್ಯುತ್ ಲೈನ್ ಹಾದು ಬರುವ ಕನಕಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತುರ್ತಾಗಿ ತೆರವುಗೊಳಿಸುವ ಹಿನ್ನೆಲೆಯಲ್ಲಿ ಜು. 24 ಬುಧವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್ ಗಳಾದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ,...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಗಲಭೆಯಲ್ಲಿ ಭಾಗಿಯಾಗಿಲ್ಲವೆಂದು ಯುವಕರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ನಂತರದ ಯಾವುದೇ ಗಲಭೆಗಳಲ್ಲಿ ನಾವು ಭಾಗಿಯಾಗಿರುವುದಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ‌ ಎಂದು13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಜು.22ರಂದು ಪ್ರಾರ್ಥನೆ ಸಲ್ಲಿಸಿದ್ದಾರೆ.  ಕಮಲಾಕ್ಷ, ಅರುಣ್ ರೈ, ನಂದಕುಮಾರ್, ಹರೀಶ್ ಬಾಳಿಲ,  ಪದ್ಮನಾಭ ತಡಗಜೆ, ಪ್ರಶಾಂತ್, ಆನಂದ ಯು.,ಧರ್ಮಪಾಲ, ಚಿದಾನಂದ ಬಾಳಿಲ, ಡಿಪಿನ್ ಎಡಮಂಗಲ, ಶಿವಾನಂದ,...
Ad Widget

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ “ಮಿನಿ ಪಾಜೆಕ್ಟ್ ಎಕ್ಸ್ ಪೋ–2024”

ರಾಷ್ಟ್ರೀಯ ಶಿಕ್ಷಣ ನೀತಿ (NEP) ಒಂದು ದೇಶದ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗೆ ಸಾರ್ವತ್ರಿಕವಾಗಿ ಹರಡುವ ನೀತಿ ಕಾರ್ಯಕ್ರಮ- ಡಾ. ಉಜ್ವಲ್ ಯು.ಜೆಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ತೃತೀಯ ವರ್ಷದ ವಿದ್ಯಾರ್ಥಿಗಳಿಂದ ೨೦೨೪ನೇಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ, “ಮಿನಿಪ್ರಾಜೆಕ್ಟ್ ಎಕ್ಸ್ಪೋ–೨೦೨೪” ಜುಂ. ೨೩ರಂದು ನಡೆಯಿತು.ಪ್ರದರ್ಶನದ ಉದ್ಘಾಟನೆಯನ್ನು ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಹಾಗೂ ಕಂಪ್ಯೂಟರ್ ಸೈನ್ಸ್ &...

ಸಾಹಿತಿ ಭೀಮರಾವ್ ವಾಷ್ಠರ್ ಅವರಿಗೆ ಪುತ್ತೂರಲ್ಲಿ ಸನ್ಮಾನ

ಪುತ್ತೂರಿನ ಮಕ್ಕಳ ಮಂಟಪ ವೇದಿಕೆಯಲ್ಲಿ ಉಪತಹಸೀಲ್ದಾರ್ ಮತ್ತು ಕವಯತ್ರಿಯಾದ ಕು || ಸುಲೋಚನಾ ಪಿ ಕೆ ಅವರ ಜೋಡಿ ಸಾಹಿತ್ಯ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದ ಸುಳ್ಯದ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕರಾದ ಎಚ್. ಭೀಮರಾವ್ ವಾಷ್ಠರ್ ಅವರನ್ನು ವೇದಿಕೆಯ ಗಣ್ಯರ ಜೊತೆ ಭಾಗವಹಿಸಿದ ಎಲ್ಲಾ ಕವಿಗಳು ಜೊತೆಯಾಗಿ ಸಮ್ಮಾನಿಸಿ ಗೌರವಿಸಿದರು. ಸಮಾರಂಭದ...

ಶಾಲಾ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ನಿರ್ಬಂಧ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ – ರಾಜ್ಯಪಾಲರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಕೆ

ಶಾಲಾ ವರಾಂಡದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿರ್ಭಂಧಿಸಿ ಸರಕಾರ ಸುತ್ತೋಲೆ ಹೊರಡಿಸಿರುವುದನ್ನು ಖಂಡಿಸಿ ಸರ್ಕಾರದ ಧೋರಣೆ ವಿರುದ್ಧ ಸುಳ್ಯ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ ಅಧಿವೇಶನ ಮುಕ್ತಾಯಕ್ಕೆ ಮುನ್ನ ಈ ಆದೇಶವನ್ನು ಹಿಂಪಡೆಯಬೇಕು ಎಂದು ಅಲ್ಲದೇ , ಈ ಭಾಗ ಕಾಂಗ್ರೆಸ್...

ಸುಳ್ಯ : ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೊಡೆ,ಪೆನ್ಸಿಲ್ ಹಾಗೂ ದತ್ತಿನಿಧಿ ವಿತರಣೆ

ಸುಳ್ಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.22 ರಂದು ಗ್ರೀನ್ ಹೀರೋ ಆಫ್ ಇಂಡಿಯಾ2023 ಪ್ರಶಸ್ತಿ ಪಡೆದ ಶ್ರೀಯುತ ಆರ್.ಕೆ.ನಾಯರ್ ರವರು ಹಲವು ವರ್ಷಗಳಿಂದ ನೀಡುತ್ತಿರುವ ಕೊಡೆ ಹಾಗೂ ಪೆನ್ಸಿಲ್ ಬಾಕ್ಸ್ ವಿತರಣೆ ಹಾಗೂ ದತ್ತಿನಿಧಿ ವಿತರಣಾ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರವಿರಾಜ ಕಮಿಲಡ್ಕ ವಹಿಸಿದ್ದರು. ವೇದಿಕೆಯಲ್ಲಿ ದತ್ತಿನಿಧಿ ಇರಿಸಿರುವ ರಾಜ್ಯ...

ತಾಲೂಕು ಮಟ್ಟದ ಕ್ರೀಡಾಕೂಟ- ಪೂರ್ವಭಾವಿ ಸಭೆ

ಜು. 20ನೇ ಶನಿವಾರದಂದು ಸರಕಾರಿ ಪ್ರೌಢಶಾಲೆ ಎಲಿಮಲೆ ಸುಳ್ಯ ತಾಲೂಕು ದ.ಕ. ಇಲ್ಲಿ 2024-25ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವನ್ನು ಆಯೋಜಿಸುವ ಬಗ್ಗೆ ಪೂರ್ವಭಾವಿ ಸಭೆಯು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶೈಲೇಶ್ ಅಂಬೆಕಲ್ಲುರವರ ಅಧ್ಯಕ್ಷತೆಯಲ್ಲಿ ನಡೆಯಿತು.        ಸಭೆಯಲ್ಲಿ ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷರಾಗಿ ಶ್ರೀ...

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿಮನೆ ಮದ್ದು ಶಿಬಿರ

ಆಯುರ್ವೇದ ಚಿಕಿತ್ಸೆಗೆ ಪ್ರಖ್ಯಾತಿ ಹೊಂದಿದ ಪಂಚಕರ್ಮ ಚಿಕಿತ್ಸೆ ನೀಡುವ ,ಕೆ .ಪಿ .ಎಂ .ಇ . ನೋಂದಾಯಿತ , ಐ.ಎಸ್ .ಓ. ಸರ್ಟಿಫಿಕೇಟ್ ಹೊಂದಿದ , ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ, ನರಿಮೊಗರು , ಪುತ್ತೂರು ಇದರ ಆಶ್ರಯದಲ್ಲಿ ಹಾಗೂ ಅರೋಗ್ಯ ಭಾರತಿ , ಪುತ್ತೂರು ಜಿಲ್ಲೆ ಇದರ ಸಹಯೋಗದಲ್ಲಿ ಮನೆ ಮದ್ದು ಶಿಬಿರವು ಪ್ರಸಾದಿನೀ...

ಕಲ್ಲುಗುಂಡಿ: ಪಾದಾಚಾರಿಗೆ ಬೈಕ್ ಢಿಕ್ಕಿ – ಗಾಯ

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ಜು.22ರಂದು ರಾತ್ರಿ ಸಂಭವಿಸಿದೆ. ಕಲ್ಲುಗುಂಡಿಯ ಬಾಚಿಗದ್ದೆ ನಿವಾಸಿ ಸಂಜೀವ ಪೂಜಾರಿ ಎಂಬವರು ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದ್ದು, ರಸ್ತೆಯ ಎಸೆಯಲ್ಪಟ್ಟ ಸಂಜೀವ ಪೂಜಾರಿ ಅವರ...

ಬೆಳ್ಳಾರೆ ಠಾಣೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್ ಭೇಟಿ

ಬೆಳ್ಳಾರೆ ಠಾಣೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರು ಜು.22 ರಂದು ಭೇಟಿ ನೀಡಿದರು. ಠಾಣಾ ದಾಖಲಾತಿ ,ಕಡತಗಳ ನಿರ್ವಹಣೆ, ಠಾಣೆಯ ಪರಿಸರದ ಸ್ವಚ್ಚತೆ, ಪ್ರಕರಣಗಳಿಗೆ ಸಂಬಂಧಿಸಿದ ವಾಹನಗಳ ವಿಲೇವಾರಿ ಬಗ್ಗೆ ಪರಿಶೀಲಿಸಿದರು. ಬಳಿಕ ಅಧಿಕಾರಿ/ಸಿಬ್ಬಂದಿಗಳಿಗೆ ಬ್ರೀಫಿಂಗ್ ನಡೆಸಿ, ಠಾಣಾ ಕರ್ತವ್ಯಗಳ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದರು.
Loading posts...

All posts loaded

No more posts

error: Content is protected !!