- Thursday
- July 30th, 2026
ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಸುಬ್ರಹ್ಮಣ್ಯ ಉಪವಿಭಾಗದ ಪಂಜ ಅರಣ್ಯ ವಲಯದ ವತಿಯಿಂದ ಜೂ.05ರಂದು ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಳ್ಪ, ಗುತ್ತಿಗಾರು ಹಾಗೂ ಏನೆಕಲ್ಲು ವಲಯದ ಉಪ ವಲಯಾರಣ್ಯಾಧಿಕಾರಿಗಳಾದ ಮೊಹಮ್ಮದ್ ಮೆಹಬೂಬ್ ರವರು ಸಸಿಗಳನ್ನು ನೆಡುವ ಮೂಲಕ...
ದಿನಾಂಕ : 06 ಜೂನ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಕಳಂಜ ಗ್ರಾಮದ ಅಯ್ಯನಕಟ್ಟೆ ನಿವಾಸಿ ಇಬ್ರಾಹಿಂ ಅಜಪಿಲ (86)ಎಂಬವರುಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂನ್ 4 ರಂದು ನಿಧನರಾದರು. ಅವರು ಪುತ್ರರಾದ ಮುಹಮ್ಮದ್, ಅಬ್ದುಲ್ ಖಾದರ್, ಅಬೂಬಖರ್ ಸೆಲೆಖ್ಟ್ ಹಾಗೂ ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
ಮೆಸ್ಕಾಂ ನ ಬೆಳ್ಳಾರೆ, ಸುಳ್ಯ ಹಾಗೂ ಬೆಸ್ಕಾಂ ನಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಶಾಪಿ ಹಾಜಿ ಜೂ.05 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಜ್ ಯಾತ್ರೆ ಮುಗಿಸಿ ಅಗಮಿಸುತ್ತಿದ್ದ ಅವರಿಗೆ ಆರೋಗ್ಯದಲ್ಲಿ ಏರುಪೇರು ಆದ ಕಾರಣ ಏರ್ಪೋರ್ಟ್ ನಿಂದ ನೇರ ಚಿಕಿತ್ಸೆ ಗಾಗಿ ಅಸ್ಪತ್ರೆಗೆ ತೆರಳಿದ್ದರು ಅಲ್ಲಿ ಚಿಕಿತ್ಸೆ ಪಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು....
ಬಾಳಿಲ ವಿದ್ಯಾಬೋಧಿನೀ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಸರ್ವ ಪೋಷಕರ ಸಭೆ ಮತ್ತು ವಿಶ್ವ ಪರಿಸರ ದಿನಾಚರಣೆ ಪ್ರೌಢಶಾಲೆಯ ಸಭಾಂಗಣ ದಲ್ಲಿ ನಡೆಯಿತು.ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ (ರಿ )ಬಾಳಿಲ ಇದರ ಅಧ್ಯಕ್ಷ ಶ್ರೀ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದರು. ವಿದ್ಯಾಸಂಸ್ಥೆಗಳ ಸಂಚಾಲಕ ಪಿ ಜಿ ಎಸ್ ಎನ್ ಪ್ರಸಾದ್ ಶುಭಕೋರಿದರು. ವೇದಿಕೆ ಯಲ್ಲಿ ಪ್ರೌಢಶಾಲಾ...
ಸುಬ್ರಹ್ಮಣ್ಯ ಜೂನ್ 05 : ಮಂಗಳೂರಿನ ನಿಟ್ಟೆ ಪಿಜಿಯೋಥೆರಪಿ ಮಹಾವಿದ್ಯಾಲಯ(ಕ್ಷೇಮ) ಆಯೋಜಿಸಿರುವ ವಿಶ್ವ ಪರಿಸರ ದಿನದ ಅಂಗವಾಗಿ ಜೂನ್ 05 ಶುಕ್ರವಾರದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಪರಿಸರದಲ್ಲಿ ಕ್ಲೀನ್ ಕುಮಾರಧಾರ, ಗ್ರೀನ್ ಸುಬ್ರಹ್ಮಣ್ಯ ಎಂಬ ಸ್ಲೋಗನ್ನೊಂದಿಗೆ ಬೃಹತ್ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಸ್ವಚ್ಛತಾ ಅಭಿಯಾನವನ್ನು ಫ್ಲಾಗ್ ಹಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ...
ಸುಬ್ರಹ್ಮಣ್ಯ ಜೂನ್ 05 : ಸುಬ್ರಹ್ಮಣ್ಯದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವವು ಸಂಭ್ರಮದಿಂದ ಜೂನ್ 01 ರಂದು ಜರಗಿತು. ಆರಂಭದಲ್ಲಿ ಎಲ್ಲಾ ವಿದ್ಯಾರ್ಥಿಗಳು ಶಾಲಾ ಆವರಣದಿಂದ ಕಾಶಿಕಟ್ಟೆ ಗಣಪತಿ ದೇವಸ್ಥಾನದ ವೃತ್ತದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದರು. ತದನಂತರ ಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ...
“ರಾಜ್ಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಉಚಿತ ಬಸ್ ಪ್ರಯಾಣ ಯೋಜನೆ ವಿದ್ಯಾರ್ಥಿ ಸಮುದಾಯಕ್ಕೆ ದೊಡ್ಡ ವರದಾನವಾಗಿದೆ” ಎಂದು ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ತಿಳಿಸಿದ್ದಾರೆ. “ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ನೇರ ಪ್ರಯೋಜನವಾಗಲಿದೆ. ವಿಶೇಷವಾಗಿ...
ಬೆಳ್ಳಾರೆಯ ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ಮತ್ತು ತಾಯಂದಿರ ಸಭೆ, ಪೌಷ್ಟಿಕ ಆಹಾರ ಶಿಬಿರ, ಪೋಷನ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಅನ್ನಪ್ರಾಶನ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಮುಖ್ಯೋಪಾಧ್ಯಾಯ ಮಾಯಿಲಪ್ಪ.ಜಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶೈನಿ ಕಿರಣ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಸಹಾಯಕಿ...
ನವೋದಯ ಮತ್ತು ಮೊರಾರ್ಜಿ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಗತಿಗಳು ಜೂ.07 ರಿಂದ ಆರಂಭಗೊಳ್ಳಲಿದೆ. ಪ್ರಸ್ತುತ ಐದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾನಸಿಕ ಸಾಮರ್ಥ್ಯ, ಗಣಿತ ಮತ್ತು ಭಾಷಾ ವಿಷಯಗಳಿಗೆ ಸಂಬಂಧಿಸಿದ ತರಗತಿಗಳು ನಡೆಯಲಿದೆ. ಈಗಾಗಲೇ ಜ್ಞಾನದೀಪ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 223 ವಿದ್ಯಾರ್ಥಿಗಳು...
Loading posts...
All posts loaded
No more posts
