ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ಕರಾಟೆ ತರಬೇತಿ ಉದ್ಘಾಟನೆಗೊಂಡಿತು. ವಿದ್ಯಾಸಂಸ್ಥೆಯ ಅದ್ಯಕ್ಷರಾದ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ದೀಪ ಬೆಳಗಿಸಿ ತರಬೇತಿಯನ್ನು ಉದ್ಘಾಟಿಸಿದರು. ಪ್ರೌಢ ಶಾಲಾ ಮುಖ್ಯಗುರು ಯಶೋಧರ ಎನ್ ಪ್ರಾಸ್ತಾವಿಕ ಮಾತನ್ನಾಡಿದರು. ಶಾಲಾ ಮುಖ್ಯಗುರು ಉದಯ ಕುಮಾರ್ ರೈ ಎಸ್...

ಕುಕ್ಕೆ ಸುಬ್ರಹ್ಮಣ್ಯ :  ರಸ್ತೆ ಮಾರ್ಗಸೂಚಿ ಹಾಗೂ ಪಾರ್ಕಿಂಗ್ ಸಮಾಲೋಚನಾ ಸಭೆ

ಕುಕ್ಕೆ ಸುಬ್ರಹ್ಮಣ್ಯ ಜೂ. 13 : ರಸ್ತೆ ಮಾರ್ಗಸೂಚಿ ಹಾಗೂ ಪಾರ್ಕಿಂಗ್ ಸಮಸ್ಯೆ ಬಗ್ಗೆ ಸಮಾಲೋಚನಾ ಸಭೆಯು ಕುಮಾರಧಾರ ಸಭಾಂಗಣದಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಠಾಣೆ, ಸುಬ್ರಹ್ಮಣ್ಯ ದಲ್ಲಿರುವ ಎಲ್ಲಾ ಇಲಾಖೆ ಅಧಿಕಾರಿಗಳು, ಸಂಘ-ಸಂಸ್ಥೆಗಳು, ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘದ ಅಧ್ಯಕ್ಷರು ಸದಸ್ಯರು ಹಾಗೂ ಸುಬ್ರಹ್ಮಣ್ಯ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕುಕ್ಕೆ...
Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ಗೆ ಪ್ಲಾಟಿನಮ್ ಅವಾರ್ಡ್

ಸುಬ್ರಹ್ಮಣ್ಯ ಜೂನ್ 22 : ಅಂತರಾಷ್ಟ್ರೀಯ ಸಂಸ್ಥೆಯಾದ ಸುಬ್ರಹ್ಮಣ್ಯ ರೋಟರಿ ಕ್ಲಬ್ 2023-24ನೇ ಸಾಲಿನಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಸಮಾಜ ಸೇವೆಗೆ ರೋಟರಿ ಜಿಲ್ಲೆ  31 81 ಇದರ ಅತ್ಯುನ್ನತ  ಪ್ರಶಸ್ತಿ ಪ್ಲಾಟಿನಮ್ ಅವಾರ್ಡ್ ಲಭಿಸಿದೆ. ಜೂನ್ 8 ಹಾಗೂ 9ರಂದು ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸುಬ್ರಹ್ಮಣ್ಯ...

ಸುಬ್ರಹ್ಮಣ್ಯ : ಸೀನಿಯರ್ ಚೇಂಬರ್ ವತಿಯಿಂದ ಕುಲ್ಕುಂದ  ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ      

      ಸುಬ್ರಹ್ಮಣ್ಯ ಜೂನ್ 22 : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇದರ ವತಿಯಿಂದ ಶನಿವಾರ ಕುಲ್ಕುಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.                         ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷ ಡಾ| ರವಿ ಕಕ್ಕೆಪದವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುಸ್ತಕಗಳ ಪ್ರಾಯೋಜಕರಾದ...

ಕಾಂತಮಂಗಲ ಶಾಲೆಯಲ್ಲಿ ಯೋಗ ದಿನಾಚರಣೆ

ಕಾಂತಮಂಗಲ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಆರೋಗ್ಯ ಸಹಾಯಕಿ ಮಾಲಿನಿ ಅವರು ಯೋಗ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಸ್ವರ್ಣಲತಾ ಹಾಗೂ ಸಹಶಿಕ್ಷಕಿಯರು ಉಪಸ್ಥಿತರಿದ್ದರು.

ಅಜ್ಜಾವರ : ಕಂಡದ ಗೌಜಿ ಕೆಸರ್ದ ಪರ್ಬ ಕಾರ್ಯಕ್ರಮಕ್ಕೆ ಮುಹೂರ್ತ

ಮೂರನೇ ವರ್ಷದ ಕಂಡದ ಗೌಜಿ ಕೆಸರ್ದ ಪರ್ಬ ಕಾರ್ಯಕ್ರಮವೂ ಜುಲೈ 14 ರಂದು ಅಜ್ಜಾವರದ ಕೊರಂಗುಬೈಲು ಗದ್ದೆಯಲ್ಲಿ ನಡೆಯಲಿರುವುದು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಹಾಗೂ  ಗದ್ದೆಯ ಮಾಲಕರಾದ ಬಾಲಕೃಷ್ಣ ನಾಯ್ಕ್, ಅಜ್ಜಾವರ ದಂಪತಿಗಳು  ಗದ್ದೆಯ ಮುಹೂರ್ತ ಕಾರ್ಯವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪ್ರತಾಪ ಯುವಕ ಮಂಡಲ ಅಜ್ಜಾವರ ಅಧ್ಯಕ್ಷರಾದ ಗುರುರಾಜ್ ಅಜ್ಜಾವರ, ಚೈತ್ರ ಯುವತಿ...

ಗೋಳ್ಯಾಡಿ ಗುರುಪ್ರಸಾದ್ ನಿಧನ

ಮಡಪ್ಪಾಡಿ ಗ್ರಾಮದ ಗೋಳ್ಯಾಡಿ ದಿ। ಕುಶಾಲಪ್ಪ ಎಂಬವರ ಪುತ್ರ ಗುರುಪ್ರಸಾದ್ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಅವರಿಗೆ 50 ವರ್ಷ ಪ್ರಾಯವಾಗಿತ್ತು. ಮೃತರು ತಾಯಿ, ಪತ್ನಿ, ಒಂದು ಗಂಡು, ಒಂದು ಹೆಣ್ಣು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಸುಳ್ಯ ಎನ್ನೆoಪಿಯುಸಿಯಲ್ಲಿ ಯೋಗ ದಿನಾಚರಣೆ

ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ  ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ವಸ್ಥ ವ್ರತ ವಿಭಾಗದ ಅಸೋಸಿಯೇಟ್ ಪ್ರೊಪೆಸರ್ ಡಾ ಶಬೀನಾ ಟಿ ಟಿ ಅವರು ಆಗಮಿಸಿ ಮನಸ್ಸಿನ ಏಕಾಗ್ರತೆ, ಅರೋಗ್ಯವಂತರಾಗಿರಲು ಅನುಸರಿಸಬೇಕಾದ ಧ್ಯಾನ, ಮುದ್ರಗಳನ್ನು ತಿಳಿಸಿಕೊಟ್ಟರು.ಅಧ್ಯಕ್ಷತೆ ವಹಿಸಿದ್ದಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ...

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಯೋಗ ಉತ್ಸವ

ಯೋಗ ದಿನಾಚರಣೆಯ ಅಂಗವಾಗಿ ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಯೋಗ ಹಾಲ್ ನಲ್ಲಿ "ಯೋಗ ಉತ್ಸವ " ಕಾರ್ಯಕ್ರಮ ನಡೆಯಿತು. ಅಂತಾರಾಷ್ಟ್ರೀಯ ಯೋಗಪಟು ಕು . ತೃಪ್ತಿ  ಎನ್. ಇವರಿಂದ ಯೋಗಾಸನ ಪ್ರದರ್ಶನ ಪ್ರಾತ್ಯಕ್ಷಿಕೆ ನಡೆಯಿತು. ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಖ್ಯಾತ ಆಯುರ್ವೇದ ತಜ್ಞ ವೈದ್ಯ, ಆಯುರ್ವೇದ ವಾಚಸ್ಪತಿ ಡಾ ರಾಘವೇಂದ್ರ...

ಬೆಳ್ಳಾರೆ ಜ್ಞಾನದೀಪದಲ್ಲಿ ಯೋಗದಿನಾಚರಣೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಯೋಗ ತರಬೇತಿ ನಡೆಯಿತು. ಯೋಗ ಶಿಕ್ಷಕಿ ಅಪರ್ಣಾ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿ ಯೋಗದ ಮಹತ್ವದ ಬಗ್ಗೆ ವಿವರಿಸಿದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಉನ್ಯಾಸಕರುಗಳಾದ ವಿಜಿತಾ, ಮಂಜುಶ್ರೀ ಉಪಸ್ಥಿತರಿದ್ದರು. ಉಪನ್ಯಾಸಕ ಯೋಗೀಶ್ ಕಾರ್ಯಕ್ರಮ ನಿರ್ವಹಿಸಿದರು.
Loading posts...

All posts loaded

No more posts

error: Content is protected !!