Ad Widget

ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜರೋಹಣ

ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆ ಅಂಗವಾಗಿ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ಧ್ವಜರೋಹಣ ಕಾರ್ಯಕ್ರಮ ಹಮ್ನಿಕೊಳ್ಳಲಾಗಿದ್ದು ಅದರ ಅಂಗವಾಗಿ ದೇವಚಳ್ಳ ಗ್ರಾಮದ ದೇವ ಬೂತ್ ನಲ್ಲಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ದೇವ ಬೂತ್ ಅಧ್ಯಕ್ಷರಾದ ಲಕ್ಷ್ಮೀಶ ಅಡ್ಡನಪಾರೆ ಯವರ ಮನೆಯಲ್ಲಿ ಪಕ್ಷದ ಧ್ವಜರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ರಮೇಶ್ ಪಡ್ಪು, ಬೂತ್...

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಭೆ – ಸಂಘಟನೆ ಬಲಪಡಿಸಲು ತೀರ್ಮಾನ

ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಸಭೆ ಎ. 5ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಶುಭಾಶ್ಚಂದ್ರ ಕೊಳ್ನಾಡು ಮಾತನಾಡಿ ಪಂಚಾಯತ್ ರಾಜ್ ಸಂಘಟನೆಯನ್ನು...
Ad Widget

ಲಿಂಗಪ್ಪ ಗೌಡ ಮುಂಡಾಜೆ ನಿಧನ

ಹರಿಹರ ಪಳ್ಳತ್ತಡ್ಕ ಗ್ರಾಮದ ಮುಂಡಾಜೆ ಲಿಂಗಪ್ಪ ಗೌಡ ರವರು ಏ.05 ರಂದು ರಾತ್ರಿ 10:00 ಗಂಟೆ ಸುಮಾರಿಗೆ ನಿಧನರಾದರು.ಮೃತರಿಗೆ 95 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಭಾಗೀರಥಿ, ಪುತ್ರ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಪೃಥ್ವಿಚಂದ್ರ ಮುಂಡಾಜೆ, ಪುತ್ರಿ ಶ್ರೀಮತಿ ಪ್ರತಿಮಾ ವಾಸುದೇವ ಗಬ್ಲಡ್ಕ, ಸೊಸೆ ಚಂದ್ರಲತಾ ದಿವಾಕರ ಮುಂಡಾಜೆ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು-ಮಿತ್ರರನ್ನು...

ಜಳಕದಹೊಳೆ ಸೇತುವೆ ದುರಸ್ತಿ ಹಿನ್ನೆಲೆ ತಾತ್ಕಾಲಿಕವಾಗಿ ನಿರ್ಮಿಸಿದ್ದ ರಸ್ತೆ ಮಳೆಗೆ ಹಾನಿ – ಸಂಪರ್ಕ ಕಡಿತ

ಪಂಜ ಜಳಕದಹೊಳೆ ಬಳ್ಳಕ್ಕ ಗುತ್ತಿಗಾರು ಸಂಪರ್ಕಿಸುವ ರಸ್ತೆಯಲ್ಲಿ ಜಳಕದಹೊಳೆ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಹೊಳೆಗೆ ಮಣ್ಣು ಹಾಕಿ ಬದಲಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಇದೀಗ ಮಳೆಯಿಂದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದ್ದು ಸೇತುವೆ ಮೇಲೆ ದ್ವಿಚಕ್ರ ವಾಹನ ಹೊರತು ಪಡಿಸಿ ಇತರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಡಾ. ಹರಿಕೃಷ್ಣ ರೈಯವರಿಗೆ ಅಮೆರಿಕಾದಲ್ಲಿ ನಡೆದ “ಜಿ. ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ”ಯಲ್ಲಿ ಪೀಪಲ್ ಚಾಯ್ಸ್ ಅವಾರ್ಡ್ 2025

ಸುಳ್ಯದ ಡಾ. ಹರಿಕೃಷ್ಣ ರೈ ಯವರು ಬೆಂಗಳೂರಿನ ಜಿ.ಇ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಸೀನಿಯರ್ ಪ್ರಾಡಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ನಿನ್ನೆ ಎ.4 ರಂದು ಅಮೇರಿಕಾದ ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕೀ ನಗರದಲ್ಲಿ ನಡೆದ ಜಿ ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ 2025 ರಲ್ಲಿ ಭಾಗವಹಿಸಿ, ಅವರು ಪ್ರದರ್ಶಿಸಿದ " ಎಂ.ಆರ್.ಐ ಸ್ಕ್ಯಾನರ್...

ಮೂಲೆಮಜಲು ದೋಳ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ ಸಂಪನ್ನ

ಮುಪ್ಪೇರ್ಯ ಗ್ರಾಮದ ಮೂಲೆಮಜಲು ದೋಳ ಗರಡಿಯಲ್ಲಿ ಕಾಲಾವಧಿ ನಡೆಯುವ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ ನಡೆಯಿತು. ಏ.4ರಂದು ಬೆಳಿಗ್ಗೆ ಕೊಡಮಂತಾಯ ದೈವಕ್ಕೆ ನೇಮ, ಬ್ರಹ್ಮರ ಉತ್ಸವ ನಡೆಯಿತು.ಸಂಜೆ ಬೈದರ್ಕಳ ಭಂಡಾರ ತೆಗೆದು ಶ್ರೀ ರಾಮ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಬಳಿಕ ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ಬ್ರಹ್ಮ ಬೈದರ್ಕಳ ಗರಡಿ ಇಳಿಯುವುದು, ಮಾನಿ ಬಾಲೆ...

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರದಲ್ಲಿ ಭಾವ ತೀರ ಯಾನ ರನ್ನಿಂಗ್ – ಏ.06ರಂದು ಸಂಜೆ 3.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.06ರಂದು ಆದಿತ್ಯವಾರ ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಾ ಯಂತ್ರದ ಉದ್ಘಾಟನಾ ಕಾರ್ಯಕ್ರಮ ಕಾಂಗ್ರೆಸ್ ನಾಯಕರ ಒತ್ತಡದಿಂದ ರದ್ದು – ವೆಂಕಟ್ ವಳಲಂಬೆ ಖಂಡನೆ

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಯಂತ್ರ ಉದ್ಘಾಟನಾ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ನಾಯಕರ ಒತ್ತಡದಿಂದ ರದ್ದುಗೊಳಿಸಿರುವುದನ್ನು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಖಂಡಿಸಿದ್ದಾರೆ. ಆರೋಗ್ಯ ಜನಸಾಮಾನ್ಯರ ಅಗತ್ಯತೆಯಲ್ಲೊಂದು ಈ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಯಂತ್ರ ಉದ್ಘಾಟನೆಯಾಗಬೇಕಿತ್ತು ಆದರೆ ಸರ್ಕಾರದಿಂದ ನಾಮ ನಿರ್ದೇಶನಗೊಂಡ ಕಾಂಗ್ರೆಸ್ ನ ಗ್ಯಾರಂಟಿ ಅನುಷ್ಠಾನ...

ರಶ್ಮಿ ನೆಕ್ಕಿಲರಿಗೆ 3ನೇ ರ‌್ಯಾಂಕ್

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ 20ನೇ ಘಟಿಕೋತ್ಸವದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಕುಮಾರಿ ರಶ್ಮಿರವರು ಇತಿಹಾಸ ವಿಭಾಗದಲ್ಲಿ ಮೈಸೂರು ಮುಕ್ತ ವಿಶ್ವವಿದ್ಯಾನಿಲಯಕ್ಕೆ 3ನೇ ರ‌್ಯಾಂಕ್  ಪಡೆದಿದ್ದಾರೆ. ಇವರು ಕಲ್ಲುಗುಂಡಿ ದಂಡೆಕಜೆಯ ನೆಕ್ಕಿಲ ಶ್ರೀ ಎಲ್ಯಣ್ಣ ಗೌಡ ಹಾಗೂ ಶ್ರೀಮತಿ ನಳಿನಿ ದಂಪತಿಗಳ ದ್ವಿತೀಯ ಪುತ್ರಿಯಾಗಿದ್ದು, 1ನೇ ತರಗತಿಯಿಂದ 7ನೇ...

ಗುತ್ತಿಗಾರು : ಕೆ.ಎಸ್.ಎಸ್. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ದಿನಾಂಕ 04/04/25ರಿಂದ 10/04/2025 ರಂದು ವಿಶೇಷ ವಾರ್ಷಿಕ ಶಿಬಿರವನ್ನು ಪದವಿ ಪೂರ್ವ ಕಾಲೇಜು ಗುತ್ತಿಗಾರಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್...
Loading posts...

All posts loaded

No more posts

error: Content is protected !!