ಬೆಳ್ಳಾರೆ : ಪ್ರೀತಿಸಿ ವಂಚನೆಗೆ ಯತ್ನ – ಯುವಕನ ವಿರುದ್ಧ ದೂರು ನೀಡಿದ ಯುವತಿ

ಯುವಕನೋರ್ವ ಕಳೆದೆರಡು ವರ್ಷಗಳಿಂದ ತನ್ನನ್ನು ಪ್ರೀತಿಸಿ ಇದೀಗ ಸಂಪರ್ಕಕ್ಕೆ ಸಿಗದೇ ವಂಚಿಸಿ ನಾಪತ್ತೆಯಾಗಿದ್ದಾನೆ ಎಂದು ಯುವತಿಯೋರ್ವಳು ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ ಘಟನೆ ವರದಿಯಾಗಿದೆ. ಎಣ್ಮೂರು ಗ್ರಾಮದ ನಿಂತಿಕಲ್ಲು ಕಾಲನಿ ನಿವಾಸಿ ಅಶ್ವಿತ್ ಎಂಬ ಯುವಕ ಹಾಗೂ ಬೆಳ್ಳಾರೆ ಮೂಲದ ಯುವತಿ ಪರಸ್ಪರ ಕಳೆದೆರಡು ವರ್ಷಗಳಿಂದ ಪ್ರೀತಿಸುತ್ತಿದ್ದರೆನ್ನಲಾಗಿದೆ. ಇದೀಗ ಫೋನ್ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿರುವುದಾಗಿ...

ಸುಳ್ಯ: ಶಾಸಕಿ ಕು. ಭಾಗೀರಥಿ ಮುರುಳ್ಯ ಸೋಮವಾರ ಮಂಗಳವಾರ ಕಛೇರಿಯಲ್ಲಿ ಲಭ್ಯ

ಸುಳ್ಯ: ಸುಳ್ಯ ಶಾಸಕರು ಪ್ರತಿ ಸೋಮವಾರ ಸುಳ್ಯ ತಾಲ್ಲೂಕು ಪಂಚಾಯತ್‌ ನ ತಮ್ಮ ಕಛೇರಿಯಲ್ಲಿ ಮತ್ತು ಪ್ರತಿ ಮಂಗಳವಾರ ಕಡಬ ಮಿನಿವಿಧಾನ ಸೌಧ ಕಛೇರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 3ಗಂಟೆಯವರೆಗೆ  ಸಾರ್ವಜನಿಕರಿಗೆ ತಮ್ಮ ಕುಂದು ಕೊರತೆಗಳನ್ನು ಆಲಿಸಲು ಕಛೇರಿಯಲ್ಲಿ ಲಭ್ಯರಿದ್ದಾರೆ ಎಂದು ಶಾಸಕರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ad Widget

KPS ಶಾಲೆ ಗಾಂಧಿನಗರ ಸುಳ್ಯ ಇಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಶಾಸಕರು ಭಾಗಿ

ಸುಳ್ಯ ಗಾಂಧಿನಗರದ ಕೆಪಿಎಸ್ ಶಾಲೆಯಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ  ಸುಳ್ಯ ವಿಧಾನ ಸಭಾಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ  ಭಾಗವಹಿಸಿದರು.ಕೋಟೆ ಫೌಂಡೇಶನ್ ವತಿಯಿಂದ ಕೊಡಲ್ಪಟ್ಟ ಡೆಸ್ಕ್ ಮತ್ತು ಬೆಂಚುಗಳನ್ನು ಮತ್ತು ಸರಕಾರದ ಅನುದಾನದಿಂದ ರಚಿಸಿದ‌ ಸುಸಜ್ಜಿತ ಗಣಕಯಂತ್ರ ವಿಭಾಗ ಹಾಗೂ 2023-2024ರಲ್ಲಿ ಹತ್ತನೆತರಗತಿಯಲ್ಲಿ ವಿಶಿಷ್ಟ ಸಾಧನೆಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನ ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಮಾತನಾಡಿದ ಶಾಸಕರು  ಹಿಂದಿನ ಕಾಲದಲ್ಲಿ...

ಕಾಳುಮೆಣಸು ಬೆಳೆಗಾರರಿಗೆ ಸಂತಸ – 680 ಕ್ಕೆ ಏರಿದ ಬೆಲೆ

ಕಾಳುಮೆಣಸಿನ ದರ ಏರಿಕೆಯ ಹಾದಿಯಲ್ಲಿದ್ದು, ಬೆಳೆಗಾರರು ನಿರೀಕ್ಷೆಯಲ್ಲಿದ್ದಾರೆ. ಹವಾಮಾನದ ಕಾರಣ ಕಾಳುಮೆಣಸಿನ ಇಳುವರಿ ಕಡಿಮೆ ಆಗಿದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಾಳುಮೆಣಸಿನ ಧಾರಣೆ ಏರುತ್ತಿದೆ ಎನ್ನಲಾಗಿದೆ. ಖಾಸಗಿ ಮಾರುಕಟ್ಟೆಗಳಲ್ಲಿ ಕಾಳುಮೆಣಸು ಕೆ.ಜಿ. ಗೆ ರೂ. 680 ರ ವರೆಗೆ ಏರಿಕೆಯಾಗಿದ್ದು, ಕಳೆದ 6 ವರ್ಷಗಳಲ್ಲಿ ಇದು ಗರಿಷ್ಠ ಧಾರಣೆ ಆಗಿದೆ. ಆದರೆ, 2018 ರಲ್ಲಿ ಕೆ.ಜಿ...

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಶಿಕ್ಷಕಿಯರು ವಿವಿಧ ಶಾಲೆಗಳಲ್ಲಿ ಶಿಕ್ಷಕಿಯರುಗಳಾಗಿ ಆಯ್ಕೆ

ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ ಸಮಾಜದ ಅಂಗೀ ಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ(ಡಿ.ಎಂ.ಇ.ಡಿ)  ಪೂರ್ಣಿಗೊಳಿಸಿದ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯದ ವಿವಿಧ ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಕಿಯರುಗಳಾಗಿ ಆಯ್ಕೆಯಾಗಿದ್ದಾರೆ.  ಕಾಂಚನ ಕೆವಿಜಿ ಐ.ಪಿ.ಎಸ್ ಸುಳ್ಯ, ಪೂರ್ಣಿಮಾ ವಿದ್ಯಾರಶ್ಮಿ ವಿದ್ಯಾಲಯ ಸವಣೂರು,...

ಸುಳ್ಯ : ಮಾತೃಶಕ್ತಿ ಹಾಗೂ ದುರ್ಗಾವಾಹಿನಿಯ ನೂತನ ಸಮಿತಿ ರಚನೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ನಗರ ಜೂ.09ರಂದು ಮಾತೃಶಕ್ತಿ, ದುರ್ಗಾವಾಹಿನಿಯ ನೂತನ ಸಮಿತಿ ರಚನೆಯಾಯಿತು.ಮಾತೃಶಕ್ತಿಯ ಸಂಚಾಲಕಿಯಾಗಿ ಲತಾ.ಯಂ ರೈ, ಸಹ ಸಂಚಾಲಕಿಯಾಗಿ ಸುಜಾತ ಕುರುಂಜಿ ಹಾಗೂ ಹರಿಣಾಕ್ಷಿ ರೈ ಮೇನಾಲ.ದುರ್ಗಾ ವಾಹಿನಿ ಸಂಚಾಲಕಿಯಾಗಿ  ಪ್ರೀತಿಕಾ ಚೆಮ್ನೂರು, ಸಹ ಸಂಚಾಲಕಿ ಯಾಗಿ ಚಂದ್ರಿಕಾ ಹೋದ್ದೇಟಿ ಹಾಗೂ ಗೀತಾಶ್ರಿ ಕಾಯರ್ತೋಡಿ  ಆಯ್ಕೆಯಾದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ...

ಸುಳ್ಯ : ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೋರ್ ಕಮಿಟಿ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ. ಇದರ ವತಿಯಿಂದ ಸುಳ್ಯ ಯೋಜನಾ ಕಛೇರಿ ಸಭಾಂಗಣದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೋರ್ ಕಮಿಟಿ ಸಭೆಯನ್ನು ತಾಲೂಕು ಕ್ಷೇತ್ರ ಯೋಜನಾಧಿಕಾರಿಯವರಾದ ಮಾಧವರವರು ದೀಪ ಬೆಳಗಿಸಿ...

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ನಾಯಕನಾಗಿ ಗಗನ್ – ಮತ ಯಂತ್ರದ ಮೂಲಕ ನಡೆದ ಚುನಾವಣೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ2024 25 ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲದ ರಚನೆಗಾಗಿ ಚುನಾವಣೆ ನಡೆಯಿತು. ವಿದ್ಯಾರ್ಥಿಗಳು ಇವಿಎಂ ಮೂಲಕ ತಮ್ಮ ಮತವನ್ನು ಚಲಾಯಿಸಿದರು. ಆರನೇ ತರಗತಿಯಿಂದ ಹತ್ತನೇ ತರಗತಿವರೆಗೆ ವಿದ್ಯಾರ್ಥಿಗಳು ಮತವನ್ನು ಹಾಕಲು ಅರ್ಹತೆಯನ್ನು ಪಡೆದಿದ್ದರು. ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಚುನಾವಣೆ ಪ್ರಕ್ರಿಯೆ ಹೇಗೆ ನಡೆಯುತ್ತಿದೆ ಎಂಬುದನ್ನು ತಿಳಿಸಿಕೊಡಲು ಈ ವಿಧಾನವನ್ನು ಶಾಲೆಯಲ್ಲಿ ಅಳವಡಿಸಿಕೊಂಡಿದ್ದರು. ಮುಖ್ಯಮಂತ್ರಿ...

ಸುಳ್ಯ : ಶಾರದಾ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಡಾ. ಎ.ಎನ್. ಕುಮಾರ್  ರವರು  ನಡೆಸಿಕೊಟ್ಟರು. ಶ್ರೀಯುತರು ಬಿ ಟೆಕ್, ಎಮ್ ಟೆಕ್ ಪದವೀಧರರಾಗಿದ್ದು ಹಾಗೂ ಐಐಟಿ ಮುಂಬೈ ಯಲ್ಲಿ ಅಧ್ಯಯನವನ್ನು ನಡೆಸಿ ಡಾಕ್ಟರೇಟ್ ಪದವಿಯನ್ನು ಪಡೆದಿದ್ದು ತಮ್ಮ ಅನುಭವವನ್ನು ವಿದ್ಯಾರ್ಥಿಗಳಿಗೆ ಹಂಚಿದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಗುರಿ...

ಊರುಬೈಲು : ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ!

ನಿನ್ನೆ ರಾತ್ರಿ ಸುರಿದ ಗಾಳಿ ಮಳೆಗೆ ಚೆಂಬು ಗ್ರಾಮದ ಊರುಬೈಲಿನಲ್ಲಿ ಮನೆಯೊಂದರ ಮೇಲೆ ತೆಂಗಿನಮರ ಬಿದ್ದು ಹಾನಿಯಾದ ಘಟನೆ ವರದಿಯಾಗಿದೆ. ಊರುಬೈಲಿನ  ಕೊರಗಪ್ಪರ ಮನೆಯ ಸಮೀಪ ಇದ್ದ ಬೃಹದಾಕಾರದ ಮರ ತೆಂಗಿನ ಮರದ ಮೇಲೆ ಬಿದ್ದು ತೆಂಗಿನಮರ ಮನೆ ಮೇಲೆ‌ ಮಗುಚಿ ಮನೆಯ ಛಾವಣಿ ಹಾಗೂ ಗೋಡೆ ಬಿರುಕು ಬಿಟ್ಟಿದೆ, ಹಾಗೂ ಎರಡು ವಿದ್ಯುತ್ ಕಂಬ...
Loading posts...

All posts loaded

No more posts

error: Content is protected !!