ಅರಂತೋಡು : ಅಣ್ಣನ ಸಾವಿನ ವಿಚಾರ ತಿಳಿದು ತಮ್ಮ ಕುಸಿದು ಬಿದ್ದು ಸಾವು, ಸಾವಿನಲ್ಲು ಜತೆಯಾದ ಸಹೋದರರು

ಅರಂತೋಡು: ಅಣ್ಣ ನಿಧನರಾದ ವಿಷಯ ತಿಳಿದು‌ ತಮ್ಮನು ಕುಸಿದು ಬಿದ್ದು ಮೃತಪಟ್ಟ ಧಾರುನ ಘಟನೆ ಇಂದು ನಡೆದಿದೆ.  ಅರಂತೋಡು ಗ್ರಾಮದ ನಿವಾಸಿ ಅಬ್ದುಲ್ಲ ರವರು (82) ರವರು ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಈ ವಿಷಯ ತಿಳಿಯುತಿದ್ದಂತೆ ಸಹೋದರ ಉದಯನಗರದ ನಿವಾಸಿ ಮಹಮ್ಮದ್ (76) ಅವರು ಮನೆಯಲ್ಲಿ ಕುಸಿದುಬಿದ್ದರು.ಮನೆಯವರು ತಕ್ಷಣ ಮಹಮ್ಮದ್ ರನ್ನು ಸುಳ್ಯ ಆಸ್ಪತ್ರೆಗೆ...

ಮರ ಕಡಿಯುವಾಗ ಕೇರ್ಪಳ ವ್ಯಕ್ತಿ ಕೊಂಬೆಯ ನಡುವೆ ಸಿಲುಕಿ ವ್ಯಕ್ತಿ ಸಾವು .

ಸುಳ್ಯ: ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ವ್ಯಕ್ತಿಯೋರ್ವರು ಮರ ಕಡಿಯುವ ಸಂದರ್ಭದಲ್ಲಿ ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ತಲುಪಿದ ಸಂದರ್ಭದಲ್ಲಿ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ . ಮೃತ ವ್ಯಕ್ತಿಯನ್ನು ಚಿನ್ನಪ್ಪ ನಾಯ್ಕ್ ಕೇರ್ಪಳ್ಳ ಮನೆ ಎಂದು ತಿಳಿದು ಬಂದಿದ್ದು ಗಂಭೀರವಾಗಿ ಗಾಯಗೊಂಡ ವಿಚಾರ ತಿಳಿಯುತ್ತಿದ್ದಂತೆ ಅಚ್ಚು ಪ್ರಗತಿ ತೆರಳಿ ಅವರನ್ನು ಆಸ್ಪತ್ರೆಗೆ...
Ad Widget

ಜಾನಕಿ ಅಂಬೆಕಲ್ಲು ನಿಧನ

ದೇವಚಳ್ಳ‌ ಗ್ರಾಮದ ಅಂಬೆಕಲ್ಲು ಮನೆತನದ ವಿಷ್ಣುಗೌಡ ಇವರ ಧರ್ಮಪತ್ನಿ ಜಾನಕಿ(72) ಎ.29ರಂದು ಕಡಿಮೆ ರಕ್ತದೊತ್ತಡ ಸಂಭವಿಸಿ ನಿಧನರಾದರು. ಮೃತರು ಪುತ್ರರಾದ ಬಾಲಚಂದ್ರ, ಜಗದೀಶ, ಮಧುಸೂಧನ, ಪುತ್ರಿ ಶೈಲಾ ದಿವಾಕರ್ ಹಾಗೂ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ,ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ.

ನಾನೆಂಬ ಅಹಂಕಾರ, ಆಸೆ ಇರುವಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ- ಒಡಿಯೂರು ಶ್ರೀ ಗುರುದೇವಾನಂದ ಮಹಾಸ್ವಾಮೀಜಿ ಸುಳ್ಯ: ನಾನು ಎಂಬ ಅಹಂಭಾವ ಹಾಗೂ ಆಸೆ ಇರುವಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಮಹಾಸ್ವಾಮೀಜಿ ಹೇಳಿದರು. ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ಆಯೋಜಿಸಲಾದ ಮೂರನೇ ದಿನದ...

ಚುನಾವಣೆ ಹಿನ್ನಲೆಯಲ್ಲಿ ಡೆಪಾಸಿಟ್ ಇರಿಸಿದ ಕೋವಿ ರೈತರಿಗೆ ಷರತ್ತಿನೊಂದಿಗೆ ನೀಡಲು ಆದೇಶ.

ಸುಳ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಕೃಷಿಕರ ಉಪಯೋಗಕ್ಕೆ ನೀಡಿದ್ದ ಮತ್ತು ಆತ್ಮ ರಕ್ಷಣೆಗೆ ನೀಡಲಾದ ಗನ್ ಗಳನ್ನು ಡೆಪಾಸಿಟ್ ಇಡಲು ಆದೇಶಿಸಿದ್ದರು ಅಲ್ಲದೇ ಕೆಲವು ಕಡೆಗಳಲ್ಲಿ ಕಾಡು ಪ್ರಾಣಿಗಳ ಹಾವಳಿಯನ್ನು ಮನಗಂಡು ಜಿಲ್ಲಾಧಿಕಾರಿಗಳು ಇಂದು ಠೇವನಿ ಇರಿಸಲಾದ ಕೋವಿ ಮತ್ತು ಗನ್ ಗಳನ್ನು ಮರಳಿ ರೈತರಿಗೆ ನೀಡಲು ಷರತ್ತಿನೊಂದಿಗೆ ಆದೇಶಿಸಿದ್ದಾರೆ ಆದೇಶದಲ್ಲಿ ಏನಿದೆ ಷರತ್ತುಗಳು...

ಬೊಳುಬೈಲ್ ಬಳಿ ಕಾರು ಬೈಕ್ ಅಪಘಾತ ಪ್ರಕರಣ ಮಹಿಳೆಯನ್ನು ಮಂಗಳೂರಿಗೆ ವರ್ಗಾವಣೆ ಸಾಧ್ಯತೆ.

ಸುಳ್ಯ: ಸುಳ್ಯ ನಗರಸ ಬೋಳುಬೈಲ್ ಬಳಿಯಲ್ಲಿ ನಡೆದ ಕಾರು ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡವರನ್ನು ವಿಟ್ಲ ಮೂಲದ ಬಾಯರ್ ಎಂಬಲ್ಲಿಯ ಗುರು ಮತ್ತು ಶಶಿಕಲಾ ಎಂದು ಗುರುತಿಸಲಾಗಿದ್ದು ಗಾಯಗೊಂಡ ಮಹಿಳೆ ಶಶಿಕಲಾರಿಗೆ ತಲೆಗೆ ಗಾಯಗಳಾಗಿರುವ ಹಿನ್ನಲೆಯಲ್ಲಿ ಮಂಗಳೂರಿಗೆ ವರ್ಗಾವಣೆ ಸಾಧ್ಯೆಗಳಿದೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ಬೊಳುಬೈಲ್ ಅಪಘಾತ ಪ್ರಕರಣ ಮಹಿಳೆಯನ್ನು ಮಂಗಳೂರಿಗೆ ವರ್ಗಾವಣೆ ಸಾಧ್ಯತೆ

ಸುಳ್ಯ: ಸುಳ್ಯ ನಗರದ ಬೋಳುಬೈಲ್ ಬಳಿಯಲ್ಲಿ ನಡೆದ ಕಾರು ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡವರನ್ನು ವಿಟ್ಲ ಮೂಲದ ಬಾಯರ್ ಎಂಬಲ್ಲಿಯ ಗುರು ಮತ್ತು ಶಶಿಕಲಾ ಎಂದು ಗುರುತಿಸಲಾಗಿದ್ದು ಗಾಯಗೊಂಡ ಮಹಿಳೆ ಶಶಿಕಲಾರಿಗೆ ತಲೆಗೆ ಗಾಯಗಳಾಗಿರುವ ಹಿನ್ನಲೆಯಲ್ಲಿ ಮಂಗಳೂರಿಗೆ ವರ್ಗಾವಣೆ ಸಾಧ್ಯೆಗಳಿದೆ ಎಂದು ತಿಳಿದು ಬಂದಿದೆ.

ಕುಕ್ಕೆಸುಬ್ರಹ್ಮಣ್ಯನ ಕೃಪಾಶೀರ್ವಾದ ವಿದ್ಯಾಸಂಪತ್ತಿನ ಔನತ್ಯಕ್ಕೆ ಅಡಿಗಲ್ಲು –  ರಾಜ್ಯಕ್ಕೆ 5ನೇ ಸ್ಥಾನ ಪಡೆದ ದುರ್ಗಾಲಕ್ಷ್ಮೀ  ಅವರನ್ನು ಸನ್ಮಾನಿಸಿ ಮಾತನಾಡಿದ ಸೋಮಶೇಖರ ನಾಯಕ್

  ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ವಿದ್ಯಾಸಂಸ್ಥೆಯಲ್ಲಿ ಅಧ್ಯಾಯನ ಮಾಡಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿರುವುದು ಶ್ಲಾಘನೀಯ. 5 ದಶಕಗಳಿಗೂ ಅಧಿಕ ಸಮಯದಿಂದ ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶ್ರೀ ದೇವಳದ ವಿದ್ಯಾಸಂಸ್ಥೆಯಲ್ಲಿ ಅಧ್ಯಾಯನ ಮಾಡುವುದು ಭಾಗ್ಯ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕೃಪಾಶೀರ್ವಾದವೇ ವಿದ್ಯಾಸಂಪತ್ತಿನ ಔನತ್ಯಕ್ಕೆ ಅಡಿಗಲ್ಲು.ದೇವರ ಸಂಸ್ಥೆಯಲ್ಲಿ ಶ್ರೀದೇವರ...

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ, ಪ್ರಸಾದ ಸ್ವೀಕಾರ

ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಸೋಮವಾರ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಪಡೆದು ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಅನ್ನಪ್ರಸಾದ ಸ್ವೀಕರಿಸಿ ತೆರಳಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ...

ಬೊಳುಬೈಲ್ ಬಳಿ ಕಾರ್ ಬೈಕ್ ಡಿಕ್ಕಿ , ದಂಪತಿಗಳು ಗಂಭೀರ ಗಾಯ.

ಸುಳ್ಯ ಬೊಳುಬೈಲ್ ಕಬ್ಬು ಜ್ಯೂಸ್ ಅಂಗಡಿ ಬಳಿಯಲ್ಲಿ ಇದೀಗ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿದ್ದ ದಂಪತಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಇದೀಗ ವರದಿಯಾಗಿದ್ದು ದಂಪತಿಗಳ ವಿವರ ಇನ್ನಷ್ಟೆ ಬರಬೇಕಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಗಂಭೀರವಾಗಿ ಗಾಯಗೊಂಡವರನ್ನು ಶಿವ ಆ್ಯಂಬುಲೆನ್ಸ್ ಮಾಲಕರಾದ ಶಿವರವರು ಕೆವಿಜಿ ಆಸ್ಪತ್ರೆಗೆ ಸಾಗಿಸಿರುವುದಾಗಿ ತಿಳಿದು ಬಂದಿದೆ.
Loading posts...

All posts loaded

No more posts

error: Content is protected !!