ಸುಳ್ಯ : ಎನ್.ಎಂ ಪಿಯುಸಿ ಯಲ್ಲಿ ನೂತನ ದೃಕ್ ಶ್ರವಣೋಪಕರಣ ಕೊಠಡಿ ಉದ್ಘಾಟನೆ

ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆಧುನಿಕ ತಾಂತ್ರಿಕತೆ, ವಿನ್ಯಾಸಗಳನ್ನು ಒಳಗೊಂಡ ದೃಕ್ ಶ್ರವಣೋಪಕರಣ ಕೊಠಡಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಎ.ಓ.ಎಲ್.ಇ(ರಿ.) ಉಪಾಧ್ಯಕ್ಷರಾದ ಶೋಭಾ ಚಿದಾನಂದ ಉದ್ಘಾಟಿಸಿದರು. ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್ ಅಕ್ಷಯ್ ಕೆ ಸಿ ಅವರು ದೀಪ ಪ್ರಜ್ವಲನಗೈದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಚಾರ್ಯರಾದ ಡಾ....

ಮಂಗಳೂರಿನ ಕದ್ರಿಯಲ್ಲಿ ಎಂ.ಎ ಮುಸ್ತಫಾ ಬೆಳ್ಳಾರೆ ಚುಟುಕು ವಾಚನ

ರಾಷ್ಟ್ರೀಯ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಬೆಂಗಳೂರು ಇದರ ಸಹಕಾರದೊಂದಿಗೆ ಸಂಸ್ಕೃತಿ ಸಂಭ್ರಮವು ವಿಚಾರಗೋಷ್ಠಿ, ಚುಟುಕು ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜು.26 ರಂದು ಮಂಗಳೂರಿನ ಕದ್ರಿಯ ಬಾಲಭವನದಲ್ಲಿ ಜರುಗಿತು. ಶಿಕ್ಷಕಿ, ಕವಿಯಿತ್ರಿ ಕು.ಶರಣ್ಯ ಬೆಳುವಾಯಿ ಅಧ್ಯಕ್ಷತೆಯಲ್ಲಿ ಜರುಗಿದ ಚುಟುಕು ಕವಿಗೋಷ್ಠಿಯಲ್ಲಿ ಯುವಕವಿ‌ ಎಂ.ಎ ಮುಸ್ತಫಾ ಬೆಳ್ಳಾರೆಯವರು...
Ad Widget

ಸುಳ್ಯ: ಡಾ. ಅನುರಾಧಾ ಕುರುಂಜಿಯವರಿಗೆ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ

ಸಾಹಿತಿ, ವ್ಯಕ್ತಿತ್ವ ವಿಕಸನ ತರಬೇತುದಾರರು ಆದಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಅನುರಾಧ ಕುರುಂಜಿಯವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026” ನ್ನು ಜುಲೈ 26ರಂದು ಗಡಿನಾಡು ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ವೇದಿಕೆಯಲ್ಲಿ ಪ್ರದಾನ ಮಾಡಲಾಯಿತು. ಶಿಕ್ಷಣ...

ಸರಕಾರಿ ಪ್ರೌಢಶಾಲೆ ಎಣ್ಮೂರಿನಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಯಕ್ಷ ಕಲಾಬೋಧಿನೀ ಬೆಳ್ಳಾರೆ ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕ್ಷಯ ಮುಕ್ತ ಭಾರತ ಮತ್ತು ವ್ಯಸನ ಮುಕ್ತ ಭಾರತ ಎಂಬ ಧ್ಯೇಯ ವಾಕ್ಯದೊಂದಿಗೆ ವಿದ್ಯಾರ್ಥಿಗಳಿಗೆ ನಡೆದ ಮಾಹಿತಿ ಕಾರ್ಯಾಗಾರವನ್ನು ಶಾಲಾ ಮುಖ್ಯ ಶಿಕ್ಷಕರಾದ ಟೈಟಸ್ ವರ್ಗಿಸ್ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...

ಸುಬ್ರಹ್ಮಣ್ಯ ಸ್ವಾಮೀಜಿಯವರಿಂದ ತಪ್ತ ಮುದ್ರಾ ಧಾರಣೆ

ಸುಬ್ರಹ್ಮಣ್ಯ ಜುಲೈ 26 : ಶನಿವಾರ ಶಯನಿ ಏಕಾದಶಿ ಪ್ರಯುಕ್ತ ಪ್ರತೀವರ್ಷದಂತೆ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ಶ್ರೀ ಡಾ. ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರಿಂದ ತಪ್ತ ಮುದ್ರಾಧಾರಣೆ ಜನಾರ್ದನ ದೇವಸ್ಥಾನ ಉಜಿರೆ, ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಕೆಮ್ಮಿಂಜೆ, ಉಮಾಮಹೇಶ್ವರ ದೇವಸ್ಥಾನ ಮಜಲುಮಾರು ದೇವಸ್ಥಾನ, ಶ್ರೀಸುಬ್ರಹ್ಮಣ್ಯ ಮಠ, ಸುಬ್ರಹ್ಮಣ್ಯ ಹಾಗೂ ರಾಯರ ಮಠ ಸುಳ್ಯ...

ಸುಬ್ರಹ್ಮಣ್ಯ : ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಜುಲೈ 26 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ವತಿಯಿಂದ ಇಂದು ರವಿವಾರ ಕುಮಾರಧಾರ ಸ್ನಾನಘಟ್ಟ, ಸೇತುವೆ, ಹಾಗೂ ಕುಲ್ಕುಂದ ಕಾಲನಿವರೆಗೆ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಕುಮಾರಧಾರ ಸ್ಥಾನಗಟ್ಟದಲ್ಲಿ ಕ್ಷೇತ್ರಕ್ಕೆ ಬಂದ ಊರ ಹಾಗೂ ಪರವೂರ ಭಕ್ತರಿಗೆ ತೀರ್ಥ ಸ್ನಾನ ಮಾಡಲು ನದಿಯಲ್ಲಿ ಅವಕಾಶವಿಲ್ಲದೆ ಪಕ್ಕದಲ್ಲಿ...

ಮಳೆಯಲ್ಲೂ ಅಧಿಕ ಸಂಖ್ಯೆಯಲ್ಲಿ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ ಭಕ್ತರು

ಸುಬ್ರಹ್ಮಣ್ಯ ಜುಲೈ 26 : ದಕ್ಷಿಣ ಭಾರತದ ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇಂದು ಜಿನಿಗುಟ್ಟುತ್ತಿರುವ ಮಳೆಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತಾದಿಗಳು ಆಗಮಿಸಿರುತ್ತಾರೆ. ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದರೂ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯಲ್ಲಿ ಕಡಿಮೆ ಆಗಿಲ್ಲ. ಅತ್ಯಧಿಕ ಸಂಖ್ಯೆಯ ಭಕ್ತಾದಿಗಳು ಪ್ರಮುಖ ಸೇವೆಗಳಾದ ಸರ್ಪ ಸಂಸ್ಕಾರ,...

ಚೊಕ್ಕಾಡಿ:  ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ

ಯಕ್ಷ ಕಲಾಬೋಧಿನೀ ಬೆಳ್ಳಾರೆ ಇದರ ವತಿಯಿಂದ ಭಗವಾನ್ ಶ್ರೀ ಸತ್ಯ ಸಾಯಿ ವಿದ್ಯಾ ಕೇಂದ್ರ ಚೊಕ್ಕಾಡಿ ಇಲ್ಲಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ನಡೆಯಿತು.ಕ್ಷಯ ಮುಕ್ತ ಭಾರತ ಮತ್ತು ವ್ಯಸನ ಮುಕ್ತ ಭಾರತ ಎಂಬ ಧ್ಯೇಯ ವಾಕ್ಯದೊಂದಿಗೆ ವಿದ್ಯಾರ್ಥಿಗಳಿಗೆ ನಡೆದ ಮಾಹಿತಿ ಕಾರ್ಯಾಗಾರವನ್ನು ಭಗವಾನ್ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ಚೊಕ್ಕಾಡಿ ಇದರ ಅಧ್ಯಕ್ಷ ಮಹಾಬಲೇಶ್ವರ...

ಮೈಸೂರಿನಲ್ಲಿ ಬೈಕ್ ಅಪಘಾತ – ಕಾಂತಮಂಗಲದ ಯುವಕ ಮೃತ್ಯು

ಮೈಸೂರಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಅಜ್ಜಾವರ ಕಾಂತಮಂಗಲ ಯುವಕ ನಿಕೇಶ್ ಮೃತಪಟ್ಟ ಘಟನೆ ಜು.26 ನಡೆದಿದೆ. ಜು.24ರಂದು ಮೈಸೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿದ್ದು ಗಂಭೀರ ಗಾಯಗೊಂಡ ನಿಕೇಶ್ ರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಮುಂಜಾನೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಿಕೇಶ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ಮನೆಗೆ ಬರುತ್ತಿರುವ ವೇಳೆ ಈ ಘಟನೆ ನಡೆದಿದೆ. ಮೃತರು ತಂದೆ ಜಗದೀಶ್,...

ತೋಟಗಾರಿಕೆ ಇಲಾಖೆ ಪ್ರಕಟಣೆ : ಕೃಷಿ ಯಂತ್ರೋಪಕರಣ ಹಾಗೂ ರೋಗನಾಶಕ ಖರೀದಿಗೆ ಸಹಾಯಧನ – ಅರ್ಜಿ ಸಲ್ಲಿಸಲು ಆ.07 ಕೊನೆಯ ದಿನಾಂಕ

ತೋಟಗಾರಿಕೆ ಇಲಾಖೆಯಲ್ಲಿ ಕೃಷಿಕರಿಗೆ ಸಿಗುವಂತಹ ವಿವಿಧ ಸವಲತ್ತುಗಳ ಕುರಿತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದು, 2026-27ನೇ ಸಾಲಿನಲ್ಲಿ ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಬಳಸುವ ರೋಗ ನಾಶಕಗಳಾದ ಪ್ರೋಪಿಕೋನಜಾಲ್, ಟ್ಯುಬಿಕೊನಾಜಾಲ್, ಪ್ರೋಪಿನೆಬ್, ಕಾರ್ಬನ್ ಡೈಜಿಮ್ + ಮ್ಯಾಂಕೇಜೆಬ್, ಕಾಪರ್ ಸಲ್ಫೇಟ್(ಮೈಲುತುತ್ತು) ಖರೀದಿಗೆ ಶೇಕಡಾ 30 ರಂತೆ ಪ್ರತೀ ಎಕರೆಗೆ 600 ರೂಪಾಯಿ...
Loading posts...

All posts loaded

No more posts

error: Content is protected !!