- Thursday
- August 20th, 2026
ಕಾಣಿಯೂರು: ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಎ.3,4ರಂದು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ. ಇದರ ಗೊನೆ ಮುಹೂರ್ತ ಕಾರ್ಯಕ್ರಮವು ಮಾ 27ರಂದು ಕ್ಷೇತ್ರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮೊಕ್ತೇಸರ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ,...
ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟೀಯ ಸೇವಾ ಯೋಜನೆ ಮತ್ತು ರೆಡ್ ರಿಬ್ಬನ್ ಕ್ಲಬ್ ಇದರ ವತಿಯಿಂದ ಹೆಚ್ ಐ ವಿ ಮತ್ತು ಯುವಜನತೆ ಕುರಿತು ಉಪನ್ಯಾಸ ಕಾರ್ಯಕ್ರಮವು ಮಾ-೨೫ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಉಪನ್ಯಾಸ ಕರ್ಯಕ್ರಮವನ್ನು ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿಯ ಐಸಿಟಿಸಿ ಸಮಾಲೋಚಕರಾದ ಬಾಲಕೃಷ್ಣ ಕೆ ಇವರು ನಡೆಸಿಕೊಟ್ಟರು. ಕರ್ಯಕ್ರಮದ ಅಧ್ಯಕ್ಷತೆಯನ್ನು...
ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಕ್ಯಾಲ್ಸಿಯಂ ಹಾಗೂ ಕಬ್ಬಿಣಾಂಶವಿರುವ ಔಷಧಿಗಳ ವಿತರಣೆ ನಡೆಯಿತು. ಈ ಔಷಧಿ ಮಹಿಳೆಯರಿಗೆ ಮೂಳೆಗಳ ಸವೆತ ತಡೆಯಲು ಹಾಗೂ ಹಿಮೋಗ್ಲೋಬಿನ್ ರಕ್ತದಾಂಶ ವೃದ್ಧಿಸಲು ಸಹಕಾರಿಯಾಗಲಿದೆ. ಸುಮಾರು 50ಕ್ಕೂ ಹೆಚ್ಚಿನ ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಂಡರು. ಮುಂದಿನ ವಾರ ಮಕ್ಕಳಿಗೆ ವಿಟಮಿನ್ ಡಿ ಹಾಗೂ ಜಂತುಹುಳದ...
ಸುಳ್ಯ ತಾ. ಬ್ರಾಹ್ಮಣ ಸಂಘದ ಮಹಾಸಭೆಯು ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಸಭಾಭವನದಲ್ಲಿ ಮಾ .26 ರಂದು ಸಂಘದ ಅಧ್ಯಕ್ಷ ಪಾಲೆಪ್ಪಾಡಿ ಡಾ|ಬಾಲಸುಬ್ರಹ್ಮಣ್ಯ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿದ್ಯಾರ್ಥಿ ನಿಲಯ ಹಾಗೂ ಸಭಾಭವನದ ಅಭಿವೃದ್ಧಿ ಬಗ್ಗೆ ಸಾಕಷ್ಟು ಚರ್ಚೆ ನಡೆದು ಈ ಕುರಿತು ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಪ್ರಧಾನ ಕಾರ್ಯದರ್ಶಿ ಕೃಷ್ಣ ರಾವ್ ನಾವೂರು ವರದಿ,...
ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ಪ್ರಭುಗಳನ್ನು ಆಯ್ಕೆ ಮಾಡುವ ವಿಶಿಷ್ಟ ಅವಕಾಶ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯಂತ ಮಹತ್ವದ ಮತ್ತು ಪಾವಿತ್ರ್ಯತೆ ಇರುತ್ತದೆ. ಈ ಕಾರಣದಿಂದ ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಆಡಳಿತ ಯಂತ್ರ ಶ್ರಮಿಸುತ್ತದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ...
ಅಯೋದ್ಯ ಕರಸೇವೆಯಲ್ಲಿ ಭಾಗವಹಿಸಿದ ಸಂಘದ ಹಿರಿಯ ಕಾರ್ಯಕರ್ತರಾದ ಮಾವಿನಗೊಡ್ಲು ಗಂಗಾಧರ ರವರು ಮಾ.26 ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ರೋಹಿಣಿ, ಪುತ್ರರಾದ ಶನ್ವಿತ್ ಮತ್ತು ಶೃಜನ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಯೋಗಾಸನ ಸ್ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾ ಇವರು ಆನ್ಲೈನ್ ನಲ್ಲಿ ನಡೆಸಿದ 15ನೇ ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಚಾಂಪಿಯನ್ ಶಿಪ್ -2024ರಲ್ಲಿ 12ವರ್ಷದ ಒಳಗಿನ ವಯೋಮಿತಿ ವಿಭಾಗದಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ಕೇಂದ್ರ ಇದರ ವಿದ್ಯಾರ್ಥಿಗಳಾದ ಹವಿಕ್ಷಾ ಎಸ್. ಆರ್ ಮತ್ತು ಜಿಶಾ. ಕೆ....
ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತದನಂತರ ಹೊಸಳಿಗಮ್ಮ ದೈವದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ .ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ .ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು,...
ಚುನಾವಣಾ ಸಂದರ್ಭದಲ್ಲಿ ರೈತರು ಕೋವಿ ಠೇವಣಾತಿ ಇಡುವುದನ್ನು ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ಕೋವಿ ಪರವಾನಗಿದಾರ ರೈತರ ಹಕ್ಕೊತ್ತಾಯ ಸಭೆ ಮಾ.26ರಂದು ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ನ್ಯಾಯವಾದಿ ಕೃಷಿಕ ಯಂ ವೆಂಕಪ್ಪ ಗೌಡ ಮಾತನಾಡಿ ಬೆಳೆ ರಕ್ಷಣೆಗೆಂದು ನೀಡಿರುವ ಕೋವಿಗಳನ್ನು ಚುನಾವಣಾ ಸಂದರ್ಭದಲ್ಲಿ ಎರಡು ತಿಂಗಳಿಗೂ ಹೆಚ್ಚು ಸಮಯ ಡಿಪಾಸಿಟ್ ಇಡುವುದರಿಂದಕೃಷಿಕರಿಗೆ ಸಮಸ್ಯೆ...
ಕುಕ್ಕೆ ಸುಬ್ರಹ್ಮಣ್ಯ ಮಾ.26: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24*7 ವೈದ್ಯಕೀಯ ಸೇವೆ ಸೌಲಭ್ಯವಾಗುವಂತೆ ಮಾಡಬೇಕೆಂದು ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕರ್ನಾಟಕ ಸರ್ಕಾರ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಮಾರ್ಚ್ 26ರಂದು ಮನವಿ ನೀಡಲಾಯಿತು.ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ನೀಡಲಾಗಿದ್ದು ಮಾನವಿ ಸ್ವೀಕರಿಸಿದ...
Loading posts...
All posts loaded
No more posts
