ಸುಬ್ರಹ್ಮಣ್ಯ : 24*7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ

ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುವಂತಹ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಸುಸಜ್ಜಿತ 24*7 ಆಸ್ಪತ್ರೆ ಸೇವೆಗಾಗಿ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ| ರವಿ ಕಕ್ಕೆಪದವು ಮನವಿ ಸಲ್ಲಿಸಿದರು. ರವಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ವಿಧಾನಸಭೆ ಮಾಜಿ ಸ್ಪೀಕರ್...

ಎರಡು ದಿನಗಳ ಕೆವಿಜಿ ಸುಳ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ

ಸುಳ್ಯದ ನಿರ್ಮಾತೃ ದಿ. ಕೆವಿಜಿ ಅವರ 95 ನೇ ಜಯಂತ್ಯೋತ್ಸವ ಅಂಗವಾಗಿ ಎರಡು ದಿನಗಳ ಕೆವಿಜಿ ಸುಳ್ಯ ಹಬ್ಬಕ್ಕೆ ಶ್ರೀ ಚೆನ್ನಕೇಶವ ದೇವಾಲಯದ ಮುಂಬಾಗದ ವೇದಿಕೆಯಲ್ಲಿ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ಡಾ| ಕುರುಂಜಿ ವೆಂಕಟ್ರಮಣ ಗೌಡರು ಅನೇಕ ವಿದ್ಯಾಸಂಸ್ಥೆಗಳನ್ನು ಕಟ್ಟಿ ಗ್ರಾಮೀಣ ಭಾಗದ ಯಾವುದೇ ವಿದ್ಯಾರ್ಥಿಗಳಿಗೆ...
Ad Widget

ಗುತ್ತಿಗಾರು : ಸೈoಟ್ ಮೇರಿಸ್ ಚರ್ಚಿನಲ್ಲಿ ವಿಜೃಂಭಣೆಯ ಕ್ರಿಸ್ಮಸ್ ಹಬ್ಬ ಆಚರಣೆ

ಪ್ರೀತಿ, ಅನ್ಯೋನತೆ ಹಾಗೂ ಸಾಮರಸ್ಯವನ್ನು ಸಾರಿ ಹೇಳುವ ಕ್ರಿಸ್ಮಸ್ ಕಾರೋಲ್ ಭವ್ಯ ಮೆರವಣಿಗೆ ಗುತ್ತಿಗಾರು ಪೇಟೆಯಲ್ಲಿ ನಡೆಯಿತು. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿ.24 ಸಂಜೆ ಗುತಿಗಾರು ಕೆಳಗಿನ ಪೇಟೆಯಿಂದ ಪ್ರಾರಂಭವಾದ ಭವ್ಯ ಮೆರವಣಿಗೆ ನಿಶ್ಚಲ ದೃಶ್ಯದೊಂದಿಗೆ ಚರ್ಚ್ ವಠಾರಕ್ಕೆ ಬಂದು ಸೇರಿತು. ಮೆರವಣಿಗೆಯಲ್ಲಿ ನೂರಾರು ಕ್ರೈಸ್ತ ಭಾಂದವರು ಭಾಗವಹಿಸಿದರು. ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪೂಜಾ ವಿಧಿಗಳು...

ಚಳಿಗಾಲದಲ್ಲಿ ಮಕ್ಕಳನ್ನು ಕಾಡುವ ಅನಾರೋಗ್ಯ, ಯಾವಾಗ ವೈದ್ಯರ ಸಂಪರ್ಕಿಸಬೇಕು? ಇಲ್ಲಿದೆ ಮಾಹಿತಿ

ಚಳಿಗಾಲ ಶುರುವಾಗಿದ್ದು, ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿಬೇಕು. ವಿಶೇಷವಾಗಿ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಾಗಿ ನಿಗಾವಹಿಸಬೇಕು. ಚಳಿಗಾಲ ಶುರುವಾದಂತೆ ಮಕ್ಕಳನ್ನು ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ಕಾಡುತ್ತಲೇ ಇರುತ್ತವೆ. ಚಳಿಗಾಲದಲ್ಲಿ ಮಕ್ಕಳು ಸೋಂಕುಗಳಿಗೆ ತುತ್ತಾಗುವುದು ಸಾಮಾನ್ಯ. ಫ್ಲೂ, ನೆಗಡಿ, ಗಂಟಲು ನೋವು ಮತ್ತು ಸೈನುಸೈಟಿಸ್‌ನಂತಹ ಉಸಿರಾಟದ ಸೋಂಕುಗಳು ಈ ಸಮಯದಲ್ಲಿ ಕಾಣಿಸಿಕೊಳ್ಳುತ್ತವೆ. ಈ...

ರಾಷ್ಟ್ರಮಟ್ಟದ ಕನ್ನಡ ಕಣ್ಮಣಿ ಪ್ರಶಸ್ತಿಗೆ ಭಾಜನರಾದ ಸಂಧ್ಯಾ ಮಂಡೆಕೋಲು

ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಯಚೂರಿನಲ್ಲಿ ಡಿಸೆಂಬರ್ 24ರಂದು ರಾಜ್ಯಮಟ್ಟದ ಬೆಳಕು ಸಂಭ್ರಮ ಕಾರ್ಯಕ್ರಮದಲ್ಲಿ ಬಹುಮುಖ ಪ್ರತಿಭೆ ಸಂಧ್ಯಾ ಮಂಡಿಕೋಲು ಅವರಿಗೆ ರಾಷ್ಟ್ರಮಟ್ಟದ ಕನ್ನಡ ಕಣ್ಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಳಲಂಬೆ ಶಾಲೆಯಲ್ಲಿ ಶ್ರಮದಾನ

ವಳಲಂಬೆ ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿರುವ ಶಾಲಾ ವಾರ್ಷಿಕೋತ್ಸವ ಹಾಗೂ ಜನಪದ ವೈಭವದ ಪ್ರಯುಕ್ತ ಶಾಲಾ ಆವರಣ ಸ್ವಚ್ಛತಾ ಕಾರ್ಯಕ್ರಮ ಡಿ.24 ರಂದು ನಡೆಯಿತು. ಶ್ರಮದಾನದಲ್ಲಿ ಅಂಗನವಾಡಿ ಹಾಗೂ ಶಾಲಾ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಎನ್.ಎಸ್.ಎಸ್. ಸೇವಾ ಸಂಗಮದ ಸದಸ್ಯರು, ಶಿಕ್ಷಕರು ಹಾಗೂ ವಿವಿಧ ಸಂಘದ ಸದಸ್ಯರು ಭಾಗವಹಿಸಿದ್ದರು.

ಕುಕ್ಕೆಗೆ ಹರಿದು ಬಂದ ಭಕ್ತ ಸಾಗರ : ರಜೆಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರಿಂದ ದೇವರ ದರ್ಶನ

ಸುಬ್ರಹ್ಮಣ್ಯ: ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆದಿತ್ಯವಾರ ಭಕ್ತ ಸಾಗರವೇ ಹರಿದು ಬಂದಿತ್ತು.ಲಕ್ಷಕ್ಕೂ ಅಧಿಕ ಮಂದಿ ಶ್ರೀ ದೇವರ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು.ಜಾತ್ರಾ ಸಮಯಕ್ಕಿಂತಲೂ ಅಧಿಕ ಮಂದಿ ಆದಿತ್ಯವಾರ ಕ್ಷೇತ್ರಕ್ಕೆ ಆಗಮಿಸಿರಬಹುದೆಂದು ಅಂದಾಜಿಸಲಾಗಿದೆ. ಎರಡನೇ ಶನಿವಾರ, ವಾರದ ರಜಾದಿನ, ಕ್ರಿಸ್‌ಮಸ್ ರಜೆಯ ಕಾರಣ ಸೇರಿದಂತೆ ಕ್ಷೇತ್ರದ ಜಾತ್ರೋತ್ಸವ ಸಮಾಪನದ ಪುಣ್ಯ ದಿನವಾದುದರಿಂದ ಕ್ಷೇತ್ರಕ್ಕೆ ಭಕ್ತ ಸಂದೋಹವೇ...

ನವೀನ್ ಚಾತುಬಾಯಿಯವರಿಗೆ ಕೃಷಿ ವಿಜ್ಞಾನ ಕೇಂದ್ರದಿಂದ ಸಾಧಕ ರೈತ ಪುರಸ್ಕಾರ

ಐವರ್ನಾಡಿನ ಪ್ರಗತಿಪರ ಕೃಷಿಕರಾದ ಸಿ.ಕೆ.ನವೀನ್ ಜಾತುಬಾಯಿ ಅವರಿಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯ ಸಂದರ್ಭದಲ್ಲಿ ಸಾಧಕ ರೈತ ಪುರಸ್ಕಾರ ಮಾಡಿ ಗೌರವಿಸಲಾಯಿತು.ಈ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಟಿ.ಜೆ. ರಮೇಶರವರು ಆಯೋಜಿಸಿದ್ದು, ಕೆ.ವಿ.ಕೆ.ಯ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಕುಮಾರ್ ಅಧ್ಯಕ್ಷತೆಯನ್ನು ವಹಿಸಿ ದ್ದರು. ಡಾ. ಕೇದಾರನಾಥ್ ಮತ್ತು ಕೆವಿಕೆಯ...

ಡಿ.29 ರಂದು ಪೆರುವಾಜೆ ಕೊಲ್ಯ ಕೊರಗಜ್ಜ ದೇವಸ್ಥಾನದಲ್ಲಿ ನೇಮೋತ್ಸವ

ಪೆರುವಾಜೆ ಕೊಲ್ಯ ಕೊರಗಜ್ಜ ದೇವಸ್ಥಾನದಲ್ಲಿ ಡಿ.29 ರಂದು ಗಣಹೋಮ ಮತ್ತು ಸತ್ಯನಾರಾಯಣ ಪೂಜೆ ಹಾಗೂ ಕೊರಗಜ್ಜನ ನೇಮೋತ್ಸವ ನಡೆಯಲಿದೆ. ಡಿ.29 ರಂದು ಬೆಳಿಗ್ಗೆ ಗಂಟೆ 8.00ಕ್ಕೆ ಗಣಪತಿಹೋಮ, ಬೆಳಿಗ್ಗೆ ಗಂಟೆ 9.00ಕ್ಕೆ  ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ, ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆಯುವುದು, ರಾತ್ರಿ ಗಂಟೆ 8.00ಕ್ಕೆ  ಅನ್ನಸಂತರ್ಪಣೆ,...

ಹರಿಹರಪಲತ್ತಡ್ಕ : ಅಯ್ಯಪ್ಪ ಮಂದಿರದಲ್ಲಿ ವಾರ್ಷಿಕ ಪೂಜೋತ್ಸವ ಹಾಗೂ  ಶ್ರೀ ಸತ್ಯನಾರಾಯಣ ದೇವರ ಪೂಜೆ

ಹರಿಹರಪಲ್ಲತ್ತಡ್ಕದ ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರದಲ್ಲಿ ಡಿ 24 ರಂದು 28ನೇ ವರ್ಷದ ಪೂಜೋತ್ಸವ ಮತ್ತು ಗಣಹೋಮ ಹಾಗೂ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಡಿ. 24 ರಂದು ಬೆಳಿಗ್ಗೆ ಗಣಹೋಮ ನಂತರ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ...
Loading posts...

All posts loaded

No more posts

error: Content is protected !!