- Tuesday
- August 25th, 2026
ಪೆರುವಾಜೆಯ ಭಾವೈಕ್ಯ ಯುವಕ ಮಂಡಲ ಇದರ ಆಶ್ರಯದಲ್ಲಿ ಭಾವೈಕ್ಯ ಟ್ರೋಫಿ 2023 ಸೂಪರ್ ಸಿಕ್ಸ್ ಮಾದರಿಯ 7 ಜನರ ಮುಕ್ತ ಕ್ರಿಕೆಟ್ ಪಂದ್ಯಾಕೂಟ ಡಿ.12 ರಂದು ಪೆರುವಾಜೆ ಶಾಲಾ ಮೈದಾನದಲ್ಲಿ ನಡೆಯಲಿದೆ. ಪ್ರಥಮ ಬಹುಮಾನ ರೂ 8,023, ದ್ವಿತೀಯ 5,023, ಸೆಮಿಫೈನಲ್ ಪರಾಚಿತ ತಂಡಗಳಿಗೆ ಆಕರ್ಷಕ ಟ್ರೋಪಿ ಹಾಗೂ ಇನ್ನಿತರ ವೈಯಕ್ತಿಕ ಬಹುಮಾನ ನೀಡಿ ಗೌರವಿಸಲಾಗುವುದು...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ಶ್ರೀ ದೇವಳದ ಆಡಳಿತಕ್ಕೊಳಪಟ್ಟ ಎಸ್ಎಸ್ಪಿಯು ಕಾಲೇಜಿನಿಂದ ಹಸಿರು ಕಾಣಿಕೆಯನ್ನು ಬುಧವಾರ ಶ್ರೀ ದೇವಳಕ್ಕೆ ಅರ್ಪಿಸಲಾಯಿತು.ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಮತ್ತು ಸಿಬ್ಬಂಧಿ ವರ್ಗ ಒದಗಿಸಿದ ಸುವಸ್ತುಗಳನ್ನು ಸಿಂಗರಿಸಿದ ವಾಹನಗಳಲ್ಲಿ ದೇವಳಕ್ಕೆ ಕೊಂಡೊಯ್ಯಲಾಯಿತು.ವಿದ್ಯಾರ್ಥಿಗಳ ಸೇವೆ:೧೫೦೦ ಕೆಜಿ(೧೫ ಕ್ವಿಂಟಾಲ್) ಸೋನಾಮಸೂರಿ ಅಕ್ಕಿ, ೧೭೦೦ ತೆಂಗಿನಕಾಯಿ, ೩೦೦...
ವಿಶ್ವ ಫಿಟ್ನೆಸ್ ಫೆಡರೇಷನ್ ಆಫ್ ಯೋಗಾಸನ ಸ್ಪೋರ್ಟ್ಸ್WFF ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ - 202310 ಡಿಸೆಂಬರ್ 2023 ಆದಿತ್ಯವಾರ ಬೆಂಗಳೂರಿನಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಸಬ್ ಜೂನಿಯರ್ ಬಾಲಕರ ವಿಭಾಗದಲ್ಲಿ ನಿರಂತರ ಯೋಗ ಕೇಂದ್ರ ಪಂಜದ ವಿದ್ಯಾರ್ಥಿ ತರುಣ್. ಎ ದ್ವಿತೀಯ ಸ್ಥಾನಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ . ಇವರು...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ವ್ಯಾಪ್ತಿಯ ನಾಯಕರ ಮತ್ತು ಕಾರ್ಯಕರ್ತರ ಸಭೆಯು ವಿಧಾನಸಭಾ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸುಳ್ಯದಲ್ಲಿ ಜರುಗಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಭೆಯಲ್ಲಿ ಪಕ್ಷವನ್ನು ಇನ್ನಷ್ಟು ತಲಮಟ್ಟದಲ್ಲಿ ಸಂಘಟಿಸುವ ಬಗ್ಗೆ ಹಾಗೂ ಮುಂಬರುವ ತಾಲ್ಲೂಕು...
2023-24 ನೇ ಸಾಲಿನ ಚಿಣ್ಣರ ವನ ದರ್ಶನ ಕಾರ್ಯಕ್ರಮವನ್ನು ಸಂಪಾಜೆ ವಲಯದ ವತಿಯಿಂದ ಡಿ.12ರಂದು ಆಯೋಜಿಸಲಾಯಿತು. ನಾಗರಹೊಳೆ, ಹಾರಂಗಿ ಹಿನ್ನೀರು, ಮಡಿಕೇರಿ ರಾಜಶೀಟ್ ಮುಂತಾದ ಸ್ಥಳಗಳಿಗೆ ಪೆರಾಜೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಪೆರಾಜೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಪೆರಾಜೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟೆ ಪೆರಾಜೆ. ಸರ್ಕಾರಿ ಕಿರಿಯ...
ಮರ್ಕಂಜ ಗ್ರಾಮದ ಕಟ್ಟಕೋಡಿ, ಚೀಮಾಡು ಜನಬಿಡಿ ಪ್ರದೇಶಗಳಲ್ಲಿ ಕಳೆದ ವಾರದಿಂದ ಚಿರತೆಯೂ ಓಡಾಡುತ್ತಿದ್ದು ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ. ಚೀಮಾಡಿನಲ್ಲಿರುವ ಗಿರೀಶ ಕುದ್ಕುಳಿ ರವರ ಮನೆಯ ಪಕ್ಕದ ದನದ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಚಿರತೆ ಹೊತ್ತೊಯ್ದ ಘಟನೆ ಡಿ.5 ರಂದು ರಾತ್ರಿ ನಡೆದಿದೆ. ಹಾಗೂ ಅಡ್ತಲೆ ಸಮೀಪದ ಗಿರೀಶ್ ರವರ ನಾಯಿಯನ್ನು ಎಳೆದೊಯ್ಯಲು...
ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಜಾನುವಾರು ಸಂವರ್ಧನ ಮತ್ತು ತರಬೇತಿ ಕೇಂದ್ರ ಕೊಯ್ಲದಲ್ಲಿ ಮಲೆನಾಡು ಗಿಡ್ಡ ತಳಿಯ ಹೆಣ್ಣು ಕರು ಮತ್ತು ಪಡ್ಡೆಗಳನ್ನು ಸರಕಾರದ ಅಮೃತ ಸಿರಿ ಯೋಜನೆ ಅಡಿಯಲ್ಲಿ ರೈತರಿಗೆ ಪುಸ್ತಕ ಬೆಲೆಯ ಶೇಕಡ 25ರಷ್ಟು ವೆಚ್ಚದಲ್ಲಿ ನೀಡಲಾಗುತ್ತಿದೆ. ಆಸಕ್ತರು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವಿವಿಧ ಪಶು...
ಸುಳ್ಯದ ಶ್ರೀ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರಕಾರ ಇವರು ಅನೀಮಿಯ ಪೌಷ್ಟಿಕ ಕಾರ್ಯಕ್ರಮದಡಿಯಲ್ಲಿ ಮಕ್ಕಳ ರಕ್ತಹೀನತೆ ತಪಾಸಣೆ ಮತ್ತು ಚಿಕಿತ್ಸೆ ಕಾರ್ಯಕ್ರಮ ನಡೆಯಿತು. ಸುಳ್ಯದ ವೈದ್ಯಾಧಿಕಾರಿ ಡಾ. ಭವ್ಯ, ನೇತ್ರಾಧಿಕಾರಿ ರೋಹಿತ್ ಹಾಗೂ ಸಮುದಾಯ ಆರೋಗ್ಯ ಅಧಿಕಾರಿ ಕ್ರಿಸ್ತಲ್ ಕ್ರಾಸ್ ರಕ್ತ ಪರೀಕ್ಷೆ...
ಸುಬ್ರಹ್ಮಣ್ಯ: ಡಿ.11 ರಂದು ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ಈಶ್ವರಪ್ಪ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.ಕುಟುಂಬ ಸಮೇತ ಆಗಮಿಸಿದ ಅವರು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು . ವ್ಯವಸ್ಥಾಪನಾ ಸಮಿತಿಯವರು, ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು. ಬಳಕ...
ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗಿನ ಮೊದಲನೇ ಮಹಡಿಯಲ್ಲಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಸುಳ್ಯ ಇದರ ವತಿಯಿಂದ 2024ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಸಂಘದ ಕಛೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಮಹೇಶ್ ಮೇರ್ಕಜೆ, ಡಾ. ಪುರುಷೋತ್ತಮ...
Loading posts...
All posts loaded
No more posts
