- Tuesday
- August 25th, 2026
ಡಿಕೆ ಶಿವಕುಮಾರ್ ಅವರ ಮೇಲಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ ಆದೇಶವನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ನಿರ್ಣಯ ಸ್ವಾಗತಾರ್ಹ ಮತ್ತು ಸಮರ್ಥನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಡಂಗಾಯ ಇಂದು ಸುಳ್ಯ ಪ್ರೆಸ್ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಹಿಂದೆ ಗುಜರಾತ್ನಲ್ಲಿ ರಾಜ್ಯಸಭಾ ಚುನಾವಣೆ ನಡೆಯುವಾಗ ಕಾಂಗ್ರೆಸ್ನ ಹಿರಿಯ...
ಸುಳ್ಯ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತದಾರರ ಸಾಕ್ಷರತಾ ಸಂಘ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಮತದಾನದ ಸಾಕ್ಷರತೆಯ ಬಗ್ಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಕಾಲೇಜಿನಲ್ಲಿ ಯೋಜಿಸಲಾಗಿದೆ.ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ದೀಪರವರು...
ವಿಶ್ವ ಹಿಂದೂ ಪರಿಷದ್ ಬಜರಂಗದಳ ಅಯೋಧ್ಯೆ ಶಾಖೆ ಎಲಿಮಲೆ ಘಟಕ ಇದರ ವತಿಯಿಂದ ಸಾರ್ವಜನಿಕ ಗೋ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನ.25 ರಂದು ನಡೆಯಿತು. ಮಾತೆಯರಿಂದ ಗೋಪೂಜೆ ನಡೆದ ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಎಲಿಮಲೆ ಘಟಕದ ಅಧ್ಯಕ್ಷರಾದ ಬೋಜಪ್ಪ ಹರ್ಲಡ್ಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿಕ್ಸೂಚಿ ಭಾಷಣಕಾರರಾಗಿ ವಾಗ್ಮಿ ಶ್ರೀಕಾಂತ್...
ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರ ಜ.31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಡಿ.31 ವಧು-ವರರು ನಿಗದಿ ದಾಖಲೆಗಳೊಂದಿಗೆ ಶ್ರೀ ದೇವಳಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆದುದರಿಂದ...
ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ, ಜ್ಯೋತಿಷಿ, ಗಾಯಕರಾದ ಎಚ್ ಭೀಮರಾವ್ ವಾಷ್ಠರ್ ಅವರನ್ನು ಇತ್ತೀಚಿಗೆ ಕಾಸರಗೋಡಿನ ಬದಿಯಡ್ಕದ ಸಂಸ್ಕೃತಿ ಸಭಾಂಗಣದಲ್ಲಿ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆಯ ವತಿಯಿಂದ ಜರುಗಿದ ಕನ್ನಡ ರಾಜ್ಯೋತ್ಸವ ಮತ್ತು ಕರೋಕೆ ಸಂಗೀತ ಸ್ಪರ್ಧೆಯ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆಯ ಅಧ್ಯಕ್ಷ ವಸಂತ್...
ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೊಡಗು ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹರ್ಷಾನ ಹೆಚ್. ಹ್ಯಾಮರ್ ಥ್ರೋ(ಬಾಲಕಿಯರ ವಿಭಾಗ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ ಬಾಲಕರ ವಿಭಾಗದ ಹ್ಯಮರ್ ಥ್ರೋ ಸ್ಪರ್ಧೆಯಲ್ಲಿ ಜಗನ್ ಡಿ .ಹೆಚ್. ದ್ವಿತೀಯ ಸ್ಥಾನವನ್ನು ಪಡೆದು ಈ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ...
ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಗ್ರಂಥಾಲಯ ಸಭಾಭವನದಲ್ಲಿ ನ.28 ರಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರಿಗೆ ಜೇನು ಕೃಷಿ, ತಾಳೆ ಕೃಷಿ ಹಾಗೂ ಹನಿ ನೀರಾವರಿ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಪ್ಪೆ ಜಕ್ಕೆಲ್ ಯುವಕ ವೃಂದ ಕಲ್ಲುಗುಡ್ಡೆ - ನೂಜಿಬಾಳ್ತಿಲ ಇವರ ಆಶ್ರಯದಲ್ಲಿ ಕಡಬ ತಾಲೂಕು ಅಮೇಚೂರ್ ಕಬಡ್ಡಿ ಅಸೋಷಿಯೇಶನ್ ಇವರ ಮಾರ್ಗದರ್ಶನದಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಲುಗುಡ್ಡೆ, ನೂಜಿಬಾಳ್ತಿಲದಲ್ಲಿ ನಡೆದ ನಲಿಕೆ ಸ್ವಜಾತಿ ಬಾಂಧವರ ಸೂರ್ಯ ಬೆಳಕಿನ ಪುರುಷರ ಮುಕ್ತ ಹಾಗೂ 60 ಕೆ ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ...
ವಿಶ್ವ ಹಿಂದೂ ಪರಿಷತ್ ಬಜರಂಗದಳ ವಜ್ರಕಾಯ ಶಾಖೆ ಚೊಕ್ಕಾಡಿ ಇದರ ವತಿಯಿಂದ 7ನೇ ವರ್ಷದ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ನ.26ರಂದು ಪದವು ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣಪಯ್ಯ ಆನೇಕಾರ್ ವಹಿಸಲಿದ್ದಾರೆ. ಆರ್ಶೀವಚನವನ್ನು ಶ್ರೀ ವಜ್ರದೇಹಿ ಸ್ವಾಮೀಜಿ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಬಜರಂಗದಳದ ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲು, ಕುಕ್ಕುಜಡ್ಕ ಪ್ರಾ.ಕೃ.ಪ.ಸ.ಸಂಘ ಉಪಾಧ್ಯಕ್ಷರಾದ ಪ್ರವೀಣ್...
ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಸ್ವಾಗತಿಸಿ ವರದಿ ಹಾಗೂ ಲೆಕ್ಕ ಪತ್ರವನ್ನು ಕಾರ್ಯದರ್ಶಿ ಪದ್ಮಾವತಿ ಮಂಡಿಸಿದರು ಮಾಜಿ ಪಂಚಾಯತ್ ಸದಸ್ಯರಾಗಿ ಮೃತರಾದ ಷಣ್ಮುಗಂ ರವರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಿ ಶ್ರದ್ದಾಂಜಲಿ ಅರ್ಪಿಸಲಾಯಿತು. ಸಭೆಯಲ್ಲಿ ಕುಡಿಯುವ ನೀರು,...
Loading posts...
All posts loaded
No more posts
