ಹರಿಹರಪಲ್ಲತ್ತಡ್ಕ : ಖ್ಯಾತ ವೈದ್ಯ ಡಾ.ಚಂದ್ರಶೇಖರ ಕಿರಿಭಾಗ ಅವರಿಗೆ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ

ಗಾಂಧಿ ಜಯಂತಿ ಪ್ರಯುಕ್ತ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಹಾಗೂ ಸುಳ್ಯದ ಯುವಜನ ಸೇವಾ ಸಂಸ್ಥೆ ಕೊಡ ಮಾಡುವ ಗಾಂಧಿ ಸ್ಮೃತಿ ಪ್ರಶಸ್ತಿಗೆ ಖ್ಯಾತ ವೈದ್ಯ, ಹರಿಹರಪಲ್ಲತಡ್ಕದ ಡಾ.ಚಂದ್ರಶೇಖರ ಕಿರಿಭಾಗ ಅವರು ಭಾಜನರಾಗಿದ್ದು, ಅವರಿಗೆ ಅ.7ರಂದು ಹರಿಹರಪಲ್ಲತಡ್ಕದ ಹರಿಹರೇಶ್ವರ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆದ ಪ್ರಶಸ್ತಿ...

ಖಾಸಗಿ ಬಸ್ ನಿರ್ವಾಹಕನಿಂದ ರಿಕ್ಷಾ ಚಾಲಕನ ಮೇಲೆ ಹಲ್ಲೆ , ರಿಕ್ಷಾ ಚಾಲಕ-ಮಾಲಕರು ಠಾಣೆ ಮುಂದೆ ಜಮಾವಣೆ

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ರಿಕ್ಷಾ ಚಾಲಕ ಹೊಟ್ಟೆಪಾಡಿಗಾಗಿ ತಮ್ಮಷ್ಟಕ್ಕೆ ತಾವೇ ಖುದ್ದಾಗಿ ಕೆಲಸ ನಿರ್ವಹಿಸಿ ಮನೆ ಸಾಕುತ್ತಿದ್ದಾರೆ ಆದರೆ ಇದೀಗ ಇದೇ ಬಡ ಅಟೋ ಚಾಲಕನ ಮೇಲೆ ಖಾಸಗಿ ಬಸ್ಸಿನ ನಿರ್ವಾಹಕ ಮತ್ತೊಮ್ಮೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ನಿನ್ನೆ ಸಂಜೆ ವಿವೇಕಾನಂದ ವೃತ್ತದ ಬಳಿ ಪ್ರಸನ್ನ ಎಂಬುವವರ ಮೇಲೆ ಖಾಸಗಿ ಬಸ್ ನಿರ್ವಾಹಕ...
Ad Widget

ಕಾಲೇಜಿಗೆ ಅಕ್ರಮ ಪ್ರವೇಶ ಆರೋಪ : ಡಾ| ಜ್ಯೋತಿ ಆರ್.ಪ್ರಸಾದ್ ರಿಂದ ಸುಳ್ಯ ಠಾಣೆಯಲ್ಲಿ ದೂರು ದಾಖಲು

ಸುಳ್ಯದ ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್‌‌ ಕಾಲೇಜಿಗೆ ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ| ಜ್ಯೋತಿ ಆರ್‌‌ ಪ್ರಸಾದ್‌‌ ಅವರು ನೀಡಿದ ದೂರಿನಂತೆ ಐಪಿಸಿ ಕಲಂ 448, 506 ಜೊತೆಗೆ 34 ಯಂತೆ ಪ್ರಕರಣ ದಾಖಲಾಗಿದೆ.ಡಾ |ಚಿದಾನಂದ, ಅವರ...

ಸುಳ್ಯ : ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ಲಯನ್ಸ್ ಕ್ಲಬ್ ಸುಳ್ಯ ಹಾಗೂ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಅಂಗ ಸಂಸ್ಥೆಯಾದ ಪ್ರಣವ ಚಾರಿಟೇಬಲ್ ಟ್ರಸ್ಟ್ ಇವರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದೊಂದಿಗೆ ಆಧಾರ್ ನೋಂದಣಿ ಮತ್ತು ಪರಿಷ್ಕರಣಾ ಶಿಬಿರ ಹಾಗೂ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ...

ವಿಶ್ವಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಶೌರ್ಯ ಜಾಗರಣ ರಥಯಾತ್ರೆ ಹಾಗೂ ಬೃಹತ್ ಸಾರ್ವಜನಿಕ ಸಭೆ

ಭಾಗವಹಿಸಿದ್ದರುಭಾಗವಹಿಸಿದ್ದರುವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಹಾಗೂ ಕಡಬ ಪ್ರಖಂಡ ವತಿಯಿಂದ ಶೌರ್ಯ ಜಾಗರಣ ರಥಯಾತ್ರೆಯ ಬೃಹತ್ ಶೋಭಾಯಾತ್ರೆ ಹಾಗೂ ಬೃಹತ್ ಸಾರ್ವಜನಿಕ ಸಭೆ, ಬೃಹತ್ ಹಿಂದೂ ಶೌರ್ಯ ಸಂಗಮ ಕಾರ್ಯಕ್ರಮ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ‌ ಮುಂಭಾಗದಲ್ಲಿ ನಡೆಯಿತು.ಬೃಹತ್ ಶೋಭಾಯಾತ್ರೆ ಸಂಪಾಜೆಯಿಂದ ಹೊರಟು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗಕ್ಕೆ ಆಗಮಿಸಿತು. ಬಳಿಕ ಅಲ್ಲಿ ಬೃಹತ್...

ಪಂಜ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರವಿತರಣೆ

ಪಂಜ ಲಯನ್ಸ್ ಕ್ಲಬ್ ವತಿಯಿಂದ ಅ. 6 ರಂದು ಹೇಮಳ ಸ. ಕಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಪಂಜ ಇದರ ಅಧ್ಯಕ್ಷರಾದ ದಿಲೀಪ್ ಬಾಬ್ಲುಬೆಟ್ಟು ರವರು ವಹಿಸಿದ್ದರು, ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಬಾಲಕೃಷ್ಣ ಗೌಡ ಹೇಮಳ, ಎಸ್ ಡಿ ಎಂ ಸಿ...

ಡಾ. ಕೆ.ವಿ‌.ರೇಣುಕಾ ಪ್ರಸಾದ್ ಅವರ ಉದ್ಯೋಗಿಗಳಿಗೆ ಯಾವುದೇ ರೀತಿಯ ದಬ್ಬಾಳಿಕೆ ಮಾಡಿರುವುದಿಲ್ಲ, ಸಂಸ್ಥೆಯ ಮುಂದಿನ ಬೆಳವಣಿಗೆ ಬಗ್ಗೆ ಚರ್ಚಿಸಿದ್ದೇವೆ : ಎ.ಓ.ಎಲ್.ಇ. ಅಧ್ಯಕ್ಷ ಡಾ| ಚಿದಾನಂದ ಕೆ.ವಿ ಸ್ಪಷ್ಟನೆ

ರಾಮಕೃಷ್ಣ ಕೊಲೆ ಪ್ರಕರಣದ ಹೈಕೋರ್ಟ್ ತೀರ್ಪನಿಂದ ಡಾ.ರೇಣುಕಾಪ್ರಸಾದ್ ಅವರಿಗೆ ಶಿಕ್ಷೆ ಘೋಷಣೆಯಾದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ರೇಣುಕಾಪ್ರಸಾದ್ ಪತ್ನಿ ಜ್ಯೋತಿ ಆರ್ ಪ್ರಸಾದ್ ಪತ್ರಿಕಾಗೋಷ್ಠಿ ನಡೆಸಿ ಅಕಾಡೆಮಿ ಅಧ್ಯಕ್ಷರ ವಿರುದ್ಧ ಆರೋಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಆಕಾಡೆಮಿ ಆಫ್ ಲಿಬರಲ್‌ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ರವರು ಕೂಡ ಪತ್ರಿಕಾಗೋಷ್ಠಿ ಕರೆದು...

ಅ.07: ಕುಮಾರ ಪರ್ವತ ಚಾರಣಕ್ಕೆ ಚಾರಣಕ್ಕೆ ಮತ್ತೆ ಗ್ರೀನ್ ಸಿಗ್ನಲ್

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಪ್ರಸಿದ್ಧ ಚಾರಣ ತಾಣ ಕುಮಾರಪರ್ವತಕ್ಕೆ ಚಾರಣಕ್ಕೆ ಅ.7 ಶನಿವಾರದಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಮತ್ತೆ ಚಾರಣಿಗರಿಗೆ ಚಾರಣ ಮಾಡಲು ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ.ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಬಾರೀ ಮಳೆಯ ಕಾರಣ ಹಾಗೂ ಹವಾಮಾನ...

ಅ.7 : ಗುತ್ತಿಗಾರಿನಲ್ಲಿ ಕುಣಿತ ಭಜನೆ ತರಬೇತಿ ಆರಂಭ

ಗುತ್ತಿಗಾರು : ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ಕುಣಿತ ಭಜನಾ ತರಬೇತಿ ಭಜನಾ ಮಂದಿರದ ವಠಾರದಲ್ಲಿ ಅ.7 ರಿಂದ ಆರಂಭಗೊಳ್ಳಲಿದ್ದು, ಪ್ರತಿ ಶನಿವಾರ ಸಂಜೆ ಐದು ಘಂಟೆಯಿಂದ ಆರು ಘಂಟೆಯ ತನಕ ನಡೆಯಲಿದೆ. ಮಕ್ಕಳು, ಪುರುಷರು ಹಾಗೂ ಮಹಿಳೆಯರಿಗೂ  ಮುಕ್ತ ಅವಕಾಶ ಇದೆ ಎಂದು  ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೋವಿನ ಸಂದರ್ಭದಲ್ಲಿ ನಮ್ಮ ಸಂಸ್ಥೆಗಳ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಸರಿಯಲ್ಲ : ಡಾ. ಜ್ಯೋತಿ ಆರ್. ಪ್ರಸಾದ್ ಹೇಳಿಕೆ

ಸುಳ್ಯದ ಪ್ರತಿಷ್ಠಿತ ಕೆವಿಜಿ ಶಿಕ್ಷಣ ಸಂಸ್ಥೆಗಳಲ್ಲಿ ಓರ್ವರಾದ ಕೆ ವಿ ರೇಣುಕಾ ಪ್ರಸಾದ್ ರವರಿಗೆ ನಿನ್ನೆ ಕರ್ನಾಟಕ ಹೈ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದ ಬೆನ್ನಲ್ಲೆ ಆಂತರಿಕ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಇಂದು ಡಾ.ರೇಣುಕಾ ಪ್ರಸಾದ್ ರವರ ಪತ್ನಿ ಡಾ. ಜ್ಯೋತಿ ಆರ್. ಪ್ರಸಾದ್ ರವರು ಪತ್ರಿಕಾಗೋಷ್ಠಿ ಕರೆದು ನೋವು ಹಂಚಿಕೊಂಡರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ...
Loading posts...

All posts loaded

No more posts

error: Content is protected !!