ವಿಟ್ಲದಲ್ಲಿ ಗಾಂಜಾ ವಶ – ಆರೋಪಿ ಸುಳ್ಯದ ವ್ಯಕ್ತಿ ಬಂಧನ

ರಿಕ್ಷಾವೊಂದರಲ್ಲಿ ಅಕ್ರಮವಾಗಿ ನಿಷೇದಿತ ಗಾಂಜಾ ಸಾಗಾಟ ಮಾಡುತ್ತಿದ್ದ ಸುಳ್ಯದ ವ್ಯಕ್ತಿ ಹಾಗೂ ರಿಕ್ಷಾದಲ್ಲಿದ್ದ 6 ಕೆ ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಸೆ.16 ರಂದು ವಿಟ್ಲ ಸಮೀಪ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ, KA-21-B-7248 ನಂಬರಿನ ಅಟೋರಿಕ್ಷಾದಲ್ಲಿ ಸುಳ್ಯ ಕಸಬಾ ಗ್ರಾಮ ಸುಳ್ಯ ನಿವಾಸಿಯಾದ ಎನ್ ಎಂ ಮಹಮ್ಮದ್ ಕಲಂದರ್ ಶಾ (36) ...

ಗಾಯಗೊಂಡ ಹಸುವಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಪಶುವೈದ್ಯ ವೆಂಕಟಾಚಲಪತಿ

ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇಮಠ ಎಂಬಲ್ಲಿ ಗಾಯಗೊಂಡು ನಡೆದಾಡಲಾಗದ ಸ್ಥಿತಿಯಲ್ಲಿದ್ದ ಹಸುವಿಗೆ ಪಶುವೈದ್ಯರಾದ ವೆಂಕಟಾಚಲಪತಿ ಅವರು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.ಸೆ.15 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಉಚಿತ ಹುಚ್ಚುನಾಯಿ ರೋಗನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ ನಡೆದಿದ್ದು, ಲಸಿಕೆ ನೀಡಲು ಪಶುವೈದ್ಯರಾದ ವೆಂಕಟಾಚಲಪತಿ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಲ್ಲೇಮಠ ಎಂಬಲ್ಲಿ ಹಸುವೊಂದು...
Ad Widget

ಹರಿಹರ ಪಲ್ಲತ್ತಡ್ಕ : ಸೆ.18 ರಿಂದ ಸೆ.20 ರವರೆಗೆ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ಆಶ್ರಯದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಭಾಗಿತ್ವದೊಂದಿಗೆ ಸೆ.18 ರಿಂದ ಸೆ.20 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ 14ನೇ ವರ್ಷದ ಶ್ರೀ ಗಣೇಶೋತ್ಸವವು ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸೆ.18 ಸೋಮವಾರದಂದು ಬೆಳಿಗ್ಗೆ 9:05 ಕ್ಕೆ ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ನಂತರ...

ಗಣೇಶ ಚತುರ್ಥಿ ಅಂಗವಾಗಿ ದ.ಕ.ಜಿಲ್ಲೆಯಲ್ಲಿ ಸೆ.19 ರಂದು ಸರಕಾರಿ ರಜೆ ಘೋಷಣೆ

ರಾಜ್ಯಾದ್ಯಂತ ಸೆ.18 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಆದರೆ ದ.ಕ. ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಸೆ.18 ರ ಬದಲಿಗೆ ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ತೀರ್ಮಾನ ತೆಗೆದುಕೊಳ್ಳುವಂತೆ ಆದೇಶದಲ್ಲಿ ತಿಳಿಸಿದೆ.

ಸುಳ್ಯ : ಕಸ ಎಸೆದವರಿಗೆ 2 ಸಾವಿರ ದಂಡ ವಿಧಿಸಿದ ನಗರ ಪಂಚಾಯತ್

ಸುಳ್ಯದ ರಥಬೀದಯಲ್ಲಿ ಕಸ ಎಸೆದ ವ್ಯಕ್ತಿಯನ್ನು ಪತ್ತೆ ಹಚ್ಚಿದ ನಗರ ಪಂಚಾಯತ್ ಅವರಿಗೆ ರೂ.2 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಿರುವ ಘಟನೆ ವರದಿಯಾಗಿದೆ. ಜು.12 ರಂದು ರಾತ್ರಿ ಸುಳ್ಯದ ರಥಬೀದಿಯಲ್ಲಿ ವ್ಯಕ್ತಿಯೊಬ್ಬರು ಕಸವನ್ನು ಪ್ಲಾಸ್ಟಿಕ್ ನಲ್ಲಿ ಕಟ್ಟಿ ಎಸೆದಿದ್ದರು. ಅಲ್ಲೇ ಪಕ್ಕದಲ್ಲಿದ್ದ ರಿಕ್ಷಾ ಚಾಲಕರು ಆ ಪ್ಲಾಸ್ಟಿಕ್ ಕಟ್ಟನ್ನು ಪರೀಕ್ಷಿಸಿದಾಗ ಅದರಲ್ಲಿ ವಂಶಿಕೃಷ್ಣ ಎಂದು ಬರೆದಿರುವ...

ಪೇರಡ್ಕ ಜುಮಾ ಮಸೀದಿ ಅಧ್ಯಕ್ಷರಾಗಿ ಟಿ.ಎಂ ಶಹೀದ್ ತೆಕ್ಕಿಲ್ ಆಯ್ಕೆ

ಅತ್ಯಂತ ಪುರಾತನ ಇತಿಹಾಸ ಪ್ರಸಿದ್ಧವಾದ ಸಂಪಾಜೆ ಗ್ರಾಮದ ಪೇರಡ್ಕ ಮುಹಿದ್ಧೀನ್ ಜುಮಾ ಮಸೀದಿ ಅಧ್ಯಕ್ಷರಾಗಿ ಟಿ.ಎಂ ಶಹೀದ್ ತೆಕ್ಕಿಲ್ ರವರು ಪುನರಾಯ್ಕೆಯಾಗಿದ್ದಾರೆ. 2006ರಲ್ಲಿ ಪೇರಡ್ಕ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ, ಗೌರವಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ಗೂನಡ್ಕ ಪೇರಡ್ಕ ಮದರಸ ಮಸೀದಿಯ ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿರುತ್ತಾರೆ. ಭಾರತ ಸರಕಾರದ ಕೊಯರ್...

ಸುಬ್ರಹ್ಮಣ್ಯ :  ಠಾಣೆಯಲ್ಲಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ  ಠಾಣಾಧಿಕಾರಿ ಕಾರ್ತಿಕ್ ಅವರ ಉಪಸ್ಥಿತಿಯಲ್ಲಿ ಶಾಂತಿ ಸಭೆ ಸೆ.16 ರಂದು ನಡೆಯಿತು‌. ಗಣೇಶೋತ್ಸವ ಹಬ್ಬವನ್ನು ಇಲಾಖೆಯ ಅನುಮತಿಯೊಂದಿಗೆ ಆಚರಿಸಬೇಕು. ಮೂರ್ತಿಯನ್ನು ವಿವಾದಿತ ಸ್ಥಳದಲ್ಲಿ ಸ್ಥಾಪನೆ ಮಾಡಬಾರದು. ಸಾರ್ವಜನಿಕರಿಗೆ ತೊಂದರೆಯಾಗುವ ಸ್ಥಳದಲ್ಲಿ ಕಾರ್ಯಕ್ರಮ ನಡೆಸಬಾರದು. ಶಾಂತಿಯುತವಾಗಿ ಹಬ್ಬವನ್ನು ನಡೆಸಬೇಕು.ಅಗ್ನಿಶಾಮಕ ದಳ,ತುರ್ತು ಚಿಕಿತ್ಸಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ರಾತ್ರಿ 10 ಗಂಟೆಯೊಳಗೆ ಕಾರ್ಯಕ್ರಮವನ್ನು ಮುಗಿಸಬೇಕು ಎಂದು...

ಬೆಳಂದೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ,ಎನ್ ಎಸ್ ಎಸ್ ಮತ್ತು ಇತಿಹಾಸ ಹಾಗೂ ರಾಜ್ಯಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯ ಪ್ರಯುಕ್ತ ಭಾರತ ಸಂವಿಧಾನದ ಪೀಠಿಕೆ ಯನ್ನು ಸಾಮೂಹಿಕವಾಗಿ ಓದುವ ಕಾರ್ಯಕ್ರಮ ಏರ್ಪಡಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಶಂಕರ ಭಟ್ ವಹಿಸಿ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗೆ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು .ದಿನದ...

ಸುಳ್ಯ : ಶ್ರೀ ವೆಂಕಟರಮಣ ಕ್ರೆ.ಕೋ.ಆ ಸೊಸೈಟಿ ಮಹಾಸಭೆ – 1.51 ಕೋಟಿ ಲಾಭ ; ಶೇ.20 ಡಿವಿಡೆಂಡ್

ಗೌಡರ ಯುವ ಸೇವಾಸಂಘ ಸುಳ್ಯ ಪ್ರವರ್ತಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆ. ಸೊಸೈಟಿಯ ವಾರ್ಷಿಕ ಮಹಾಸಭೆ ಸೆ.16ರಂದು ಗೌಡ ಸಮುದಾಯ ಭವನ ಕೊಡಿಯಾಲಬೈಲು ಇಲ್ಲಿ ನಡೆಯಿತು, ಸಂಘವು 2022-23 ನೇ ಆರ್ಥಿಕ ವರ್ಷದಲ್ಲಿ 1.51 ಕೋಟಿ ಲಾಭ ಗಳಿಸಿದ್ದು, ಶೇ.20 ಲಾಭಾಂಶ ಹಂಚಿಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ ಜಯರಾಮ ಘೋಷಿಸಿದರು. ಸಭೆಯಲ್ಲಿ ಉಪಾಧ್ಯಕ್ಷ...

ಪೆರ್ಲಂಪಾಡಿಯಲ್ಲಿ ಡಾ. ಅನುರಾಧಾ ಕುರುಂಜಿಯವರಿಗೆ ಸನ್ಮಾನ

ನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ "ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023" ಕ್ಕೆ ಆಯ್ಕೆಯಾದಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರನ್ನು ಯುವಕ ಮಂಡಲ (ರಿ) ಕೊಳ್ತಿಗೆ ಪೆರ್ಲಂಪಾಡಿ...
Loading posts...

All posts loaded

No more posts

error: Content is protected !!