ಗುತ್ತಿಗಾರು : ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಪ್ರಾರಂಭ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗುತ್ತಿಗಾರು, ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇವುಗಳ ಆಶ್ರಯದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಸೆ.03 ರಂದು ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಪ್ರಾರಂಭಗೊಂಡಿತು. ಗ್ರಂಥಾಲಯ...

ವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ‌ಪದಾಧಿಕಾರಿಗಳ ಆಯ್ಕೆ :
ಅಧ್ಯಕ್ಷರಾಗಿ ಸೋಮಶೇಖರ ಪೈಕ, ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಕೇಪಳಕಜೆ, ಖಜಾಂಜಿಯಾಗಿ ಮಧು ಕಿರಣ್

ಸುಳ್ಯ : ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ 2023- 2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸೆ.2 ರಂದು ಸುಳ್ಯದ ಸಂಘದ ಕಛೇರಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಮಾಯಿಲಪ್ಪ ಸಂಕೇಶ, ನಿಕಟ ಪೂರ್ವ ಅಧ್ಯಕ್ಷ ಶ್ರೀಧರ ಕೆ.ಎಸ್ ಉಪಸ್ಥಿತರಿದ್ದರು. ನೂತನ ಅಧ್ಯಕ್ಷರಾಗಿ ಸೋಮಶೇಖರ್ ಪೈಕ...
Ad Widget

ಸುಬ್ರಹ್ಮಣ್ಯ: ಸರ ಕಳ್ಳತನ- ದೂರು ದಾಖಲು

ಸುಬ್ರಹ್ಮಣ್ಯ : ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ವಾಪಾಸ್ ಬಸ್ ಹತ್ತುವ ವೇಳೆ ಕೊಡಗು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಕರಿಮಣಿ ಸರ ಕಳ್ಳತನವಾದ ಬಗ್ಗೆ ವರದಿಯಾಗಿದೆ. ಕೊಡಗು ಜಿಲ್ಲೆಯ ಸೋಮವಾರ ಸಂತೆ ನಿವಾಸಿಯಾದ ಶ್ರೀಮತಿ ಲೀಲಾ (55) ಎಂಬವರು ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರಿಗೆ ನೀಡಿದ್ದು, ಸೆ.3ರಂದು ಬೆಳಿಗ್ಗೆ ಊರಿನ ಇತರರೊಂದಿಗೆ ಕುಕ್ಕೇ ಶ್ರೀ ಸುಬ್ರಹ್ಮಣ್ಯ...

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023

ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಐ.ಆರ್.ಸಿ.ಎಂ.ಡಿ ಕಂಪ್ಯೂಟರ್ ಮತ್ತು...

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ – ತಾಲೂಕಿನ ಶಿಕ್ಷಕರಾದ ಹನುಮಂತಪ್ಪ, ಉದಯಕುಮಾರ್ ಹಾಗೂ ರಾಧಾಮ್ಮ ಆಯ್ಕೆ

ಸೆ.೫ ರ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಕೊಡಮಾಡುವ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಬೊಳುಬೈಲು ಕಿರಿಯ ಪ್ರಾಥಮಿಕ ಶಾಲೆಯ ಶ್ರೀಮತಿ ರಾಧಾಮ್ಮ, ಪ್ರಾಥಮಿಕ ಶಾಲಾ ವಿಭಾಗದಿಂದ ಗೂನಡ್ಕ ಶ್ರೀ ಶಾರದಾ ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹನುಮಂತಪ್ಪ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ರಾಜಣ್ಣ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ರಾಜಣ್ಣ ಅಧಿಕಾರ ವಹಿಸಿಕೊಂಡಿರುತ್ತಾರೆ. ಅವರು ಈ ಹಿಂದೆ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಇದ್ದ ಎಇಓ ಪುಷ್ಪಲತಾ ಅವರು ಕೊಲ್ಲೂರಿಗೆ ವರ್ಗಾವಣೆಗೊಂಡಿದ್ದರು.

ಭಾರತೀಯ ತೀಯ ಸಮಾಜ ಬಾಂಧವರ ಓಣಂ ಆಚರಣೆ

ಸುಳ್ಯ ಭಾರತೀಯ ತೀಯ ಸಮಾಜ ಬಾಂಧವರ ನಗರ ಸಮಿತಿ ಹಾಗೂ ಗ್ರಾಮ ಸಮಿತಿಯ ಆಶ್ರಯದಲ್ಲಿ ಓಣಂ ಆಚರಣೆಯು ಇಂದು ಸುಳ್ಯ ಅಂಬಟೆಡ್ಕ ಗಿರಿದರ್ಶಿನಿ ಮರಾಠಿ ಸಮಾಜ ಮಂದಿರದಲ್ಲಿ ನಡೆಯಿತು. ಬೆಳಗ್ಗೆ ಓಣಂ ಆಚರಣೆಯ ಉದ್ಘಾಟನಾ ಸಮಾರಂಭವು ವಲಯ ಸಮಿತಿ ಅಧ್ಯಕ್ಷ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ಕುಂಞಕಣ್ಣನ್ ಕಲ್ಲುಮುಟ್ಟು, ಶ್ರೀಮತಿ ಸುಂದರಿ...

ತಾಲೂಕಿನ ಅತ್ಯುತ್ತಮ ಯುವಕ ಮಂಡಲವಾಗಿ ಹೊರಹೊಮ್ಮಿದ ಪ್ರತಾಪ ಯುವಕ ಮಂಡಲ ಅಜ್ಜಾವರ .ಚೈತ್ರ ಯುವತಿಮಂಡಲಕ್ಕು ಪ್ರಶಸ್ತಿ.

ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವತಿಯಿಂದ ನಡೆದ ನಲಿಪು ಜನಪದ ಮುಕ್ತ ನೃತ್ಯ ಸ್ಪರ್ಧೆಯ ಸಂದರ್ಭದಲ್ಲಿ 2022-23 ನೇ ಸಾಲಿನ ಸುಳ್ಯ ತಾಲೂಕಿನ ಅತ್ಯುತ್ತಮ ಯುವಕ- ಯುವತಿ ಮಂಡಲಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. 2022-23 ನೇ ಸಾಲಿನ ತಾಲೂಕಿನ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿಯನ್ನು ಪ್ರತಾಪ ಯುವಕ ಮಂಡಲ ಅಜ್ಜಾವರ ಹಾಗೂ ಮಯೂರಿ ಯುವತಿ...

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶುಭಾ.ಡಿ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ದ್ವಿತೀಯ

ಜಾನಪದ ತಜ್ಞರು, ನಾಡೋಜ ಪುರಸ್ಕೃತರು ಡಾ.ಗೊ.ರು.ಚನ್ನಬಸಪ್ಪ ನಾಮಂಕಿತದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ದಕ್ಷಿಣ ಕನ್ನಡ ನಡೆಸಿದ ಜಿಲ್ಲಾ ಮಟ್ಟದ ಗೈಡ್ ವಿಭಾಗದ ಶಿಕ್ಷಕಿಯರ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಪಂಜ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ಬಾಳಿಲ ವಿದ್ಯಾಭೋದಿನೀ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಶುಭಾ ಡಿ ರವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಆಶ್ರಯದಲ್ಲಿ ರೇಬಿಸ್ ಲಸಿಕೆ , ರಬ್ಬರ್ ನೆಲಹಾಸು, ಪಶು ಸಖಿಯರಿಗೆ ಬ್ಯಾಗ್ ಕಿಟ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಆಶ್ರಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ರಬ್ಬರ್ ನೆಲಹಾಸು ವಿತರಣೆ, ಉಚಿತ ರೇಬಿಸ್ ಲಸಿಕೆ, ಮತ್ತು ಪಶು ಸಕೀಯರಿಗೆ ಬ್ಯಾಗ್ ಕಿಟ್ಟ್ ಗಳ ವಿತರಣೆ ಪಶು ಆಸ್ಪತ್ರೆ ಸುಳ್ಯದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಭಾಗೀರಥಿ ಮುರುಳ್ಯ ದೀಪ ಬೆಳಗುವುದರ ಮೂಲಕ ಉದ್ಘಾಟಸಿದರು....
Loading posts...

All posts loaded

No more posts

error: Content is protected !!