ಐವರ್ನಾಡು : ಸ್ವಚ್ಛತಾ ಕಾರ್ಯ – ಮಂಜುಶ್ರೀ ಗೆಳೆಯರ ಬಳಗ ಸಾಥ್

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಜು.2 ರಂದು ನಡೆಯಿತು. ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿಯ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದ ಮರ್ವತ್ತಡ್ಕ ವರೆಗೆ ಸ್ವಚ್ಚತಾ ಕಾರ್ಯ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಐವರ್ನಾಡು...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ ಮತ್ತು ಸ್ಕೌಟ್ ಗೈಡ್ ಶಿಕ್ಷಕರ ಮಾಹಿತಿ ಕಾರ್ಯಾಗಾರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ದಿನಾಂಕ 02.07.2023 ಶನಿವಾರ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ ಇವರ ಅಧ್ಯಕ್ಷತೆಯಲ್ಲಿ ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷೆ, ಪಂಜ ಸ್ಥಳೀಯ ಸಂಸ್ಥೆಯ ಎ.ಡಿ.ಸಿ ವಿಮಲ ರಂಗಯ್ಯ ಸ್ಕೌಟ್ ಗೈಡ್ ವಾರ್ಷಿಕ ಕಾರ್ಯಕ್ರಮಗಳಿಗೆ...
Ad Widget

ಸುಳ್ಯದ ಪೊಲೀಸ್ ಕಾನ್ಸ್‌ಟೇಬಲ್ ಗೆ ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ ಮೊದಲ ಸ್ಥಾನ

ಸುಳ್ಯದ ಕಲ್ಲುಗುಂಡಿ ಪೊಲೀಸ್ ಹೊರ ಠಾಣೆಯಲ್ಲಿ ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಮಧು ಜಿ.ಡಿ. ಯವರು ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2021-22 ನೇ ಸಾಲಿನ ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಧು ಜಿ. ಡಿ ರವರು ಮೂಲತ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದವರಾಗಿದ್ದು ಇಂದು ಮೈಸೂರಿನ ಕರಾಮುವಿಯ...

ಆಸಕ್ತ ರೈತರಿಗೆ ಜೇನುಕೃಷಿ ತರಬೇತಿಗೆ ಅರ್ಜಿ ಆಹ್ವಾನ

2023-24 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಜೇನುಕೃಷಿ ತರಬೇತಿ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಲು ಆಹ್ವಾನಿಸಲಾಗಿದ್ದೆ , ಆಸಕ್ತ ರೈತರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜು.15ರ ರೊಳಗಾಗಿ ತೋಟಗಾರಿಕೆ ಇಲಾಖೆ ಸುಳ್ಯ ಕಛೇರಿಯಲ್ಲಿ ಹೆಸರು ನೋಂದಾಯಿಸಲು ತೋಟಗಾರಿಕೆ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.

ಬ್ಯಾಚುಲರ್ ಆಫ್ ಲೈಬ್ರರಿ ಮತ್ತು ಮಾಹಿತಿ ವಿಜ್ಞಾನದಲ್ಲಿ ಫಸ್ಟ್ ರ‍್ಯಾಂಕ್ – ರಾಜ್ಯಪಾಲರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಶ್ರೀಮತಿ ನಾಗಶ್ರೀ ನವೀನ್ ಗುಡ್ಡೆಮನೆ

ಹಾಲೆಮಜಲು ಗುಡ್ಡೆಮನೆ ನವೀನ್ ರವರ ಪತ್ನಿ ಶ್ರೀಮತಿ ನಾಗಶ್ರೀ ನವೀನ್ ಗುಡ್ಡೆಮನೆ ಇವರು ಬ್ಯಾಚುಲರ್ ಆಫ್ ಲೈಬ್ರರಿ ಮತ್ತು ಮಾಹಿತಿ ವಿಜ್ಞಾನದಲ್ಲಿ ಫಸ್ಟ್ ರ‍್ಯಾಂಕ್ ಪಡೆದಿದ್ದು, ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ 18ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣ ಪತ್ರ ಸ್ವೀಕರಿಸಿದರು.ಇವರು ಕಲ್ಲಾಜೆ ಮಣಿಯಾನ ಮನೆ ಬಾಸ್ಕರ ಮತ್ತು ಶ್ರೀಮತಿ ಲಕ್ಷ್ಮಿ ದಂಪತಿಗಳ ಪುತ್ರಿ.(ವರದಿ : ಉಲ್ಲಾಸ್ ಕಜ್ಜೋಡಿ)

ಹಾಡು ಕೋಗಿಲೆ-2023 ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆ – ಶಾಸಕಿ ಭಾಗೀರಥಿ ಮುರುಳ್ಯರಿಗೆ ಸನ್ಮಾನ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಆಯೋಜಿಸಿದ್ದ ಹಾಡು ಕೋಗಿಲೆ ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆಯು ಇತ್ತೀಚಿಗೆ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ನೆರವೇರಿತು . ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರು , ಗಾಯಕರು ಮತ್ತು ಖ್ಯಾತ ಜ್ಯೋತಿಷ್ಯರಾದ ಎಚ್ .ಭೀಮರಾವ್ ವಾಷ್ಠರ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ....

ಕಲ್ಲುಗುಂಡಿ : ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

ಕಲ್ಲುಗುಂಡಿಯ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.1 ರಂದು ಪೋಷಕರ ಸಭೆಯು ನಡೆಯಿತು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ  ಫಾ| ಪಾವ್ಲ್ ಕ್ರಾಸ್ತ ರವರು, ಮುಖ್ಯೋಪಾಧ್ಯಾಯನಿ ಸಿಸ್ಟರ್ ಅನಿತಾ ಫೆರ್ನಾಂಡಿಸ್ ರವರು, ಶಿಕ್ಷಕ-ರಕ್ಷಕ ಕಾರ್ಯಕಾರಿ ಸಮಿತಿಯ ಮಾಜಿ ಅಧ್ಯಕ್ಷ  ಹರೀಶ್ ರವರು, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಸಂಪಾಜೆ ಪದವಿ  ಪೂರ್ವ ಕಾಲೇಜಿನ ಪ್ರಾಂಶುಪಾಲರು ಲೋಕ್ಯ ನಾಯ್ಕ ರವರು,...

ಬಿಳಿನೆಲೆ: ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

ಬಿಳಿನೆಲೆಯ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಮತ್ತು ಶ್ರೀ ವೇದವ್ಯಾಸ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳ ಯಕ್ಷಗಾನ ನಾಟ್ಯ ತರಗತಿ ಇಂದು ಉದ್ಘಾಟನೆಗೊಂಡಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಬಿಳಿನೆಲೆ ಇಲ್ಲಿಯ ಅರ್ಚಕರಾದ ವೆಂಕಟೇಶ್ವರ ಭಟ್ ಇವರು ದೀಪ ಬೆಳಗಿಸಿ ತರಗತಿಯನ್ನು ಉದ್ಘಾಟಿಸಿದರು. ಯಕ್ಷಗಾನ ತರಗತಿಯ ಗುರುಗಳಾಗಿ ಪ್ರಖ್ಯಾತ ವೇಷಧಾರಿಯಾದ ಈಶ್ವರ ಪ್ರಸಾದ್ ನಿಡ್ಲೆಯವರು ಯಕ್ಷಗಾನ, ಯಕ್ಷಗಾನ ತರಗತಿಯ...

ಅರಂತೋಡು ಗ್ರಾಮಸಭೆ : ಖಾಯಂ ಗ್ರಾಮ ಆಡಳಿತಾಧಿಕಾರಿ ನೇಮಿಸಲು ಆಗ್ರಹ

ಅರಂತೋಡು ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ನ ಅಮೃತ ಸಭಾಂಗಣದಲ್ಲಿ ಜು.1ರಂದು ಜರುಗಿತು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ವೀಣಾ ಎಂ.ಟಿ. ಅವರು ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು....

ಮಂಗಳೂರಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ – ಭಾಗವಹಿಸಿದ ಸುಳ್ಯದ ಸೇವಾಭಾರತಿ ಕಾರ್ಯಕರ್ತರು

ಸೇವಾಭಾರತಿ ಹಾಗೂ ಅದಾನಿ ಗ್ರೂಪ್ ಆಫ್ ಕಂಪನಿ ವತಿಯಿಂದ ಮಂಗಳೂರಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ ಇಂದು ನಡೆಯಿತು. ಮಂಗಳೂರಿನ ಗುರುಪುರ ಕೈ ಕಂಬದಲ್ಲಿ ಜಿಲ್ಲಾ ವ್ಯಾಪ್ತಿಯ ಸೇವಾಭಾರತಿ ಹಾಗೂ ಅದಾನಿ ಗ್ರೂಪ್ ಆಫ್ ಕಂಪನಿ ವತಿಯಿಂದ ಒಂದು ದಿನದ ವಿಪತ್ತು ನಿರ್ವಹಣಾ ಪ್ರಶಿಕ್ಷಣ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಹಿತ...
Loading posts...

All posts loaded

No more posts

error: Content is protected !!