🚫ಬೈಕ್ ಅಪಘಾತ ಓರ್ವ ಮೃತ್ಯು🚫

ಸುಳ್ಯ; ಬೈಕ್ ಅಪಘಾತ ಓರ್ವ ಮೃತ್ಯುಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸುಳ್ಯದ ಪಾಲಡ್ಕ ಎಂಬಲ್ಲಿ ಮೇ.22 ರಂದು ಸಂಭವಿಸಿದೆ.ಮೃತಪಟ್ಟಾತ ಕೆವಿಜಿ ಆಯುರ್ವೇದ ಕಾಲೇಜು ವಿಧ್ಯಾರ್ಥಿ ಸ್ವರೂಪ್(22) ಎಂದು ಗುರುತಿಸಲಾಗಿದೆ.ಈತ ಬೈಕ್ ನಲ್ಲಿ ತೆರಳುತ್ತಿದ್ದು ಓವರ್ ಟೇಕ್ ಮಾಡುವ ರಭಸದಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು...

🔴ನವೀನ್ ರೈ ಮೇನಾಲರಿಗೆ ಬಿಜೆಪಿ‌ ಕಚೇರಿಯಲ್ಲಿ ಶ್ರದ್ಧಾಂಜಲಿ “ನವೀನ್ ರೈ ಓರ್ವ ಅಜಾತಶತ್ರು”.🔴

ಸುಳ್ಯ: ಪಕ್ಷನಿಷ್ಠೆ, ಶ್ರದ್ಧೆ ಧಾರ್ಮಿಕ ನಂಬಿಕೆ ಹಾಗೂ ಎಲ್ಲರೊಡನೊಂದಾಗಿ ಬೆರೆತು ಬದುಕಿದ ನವೀನ್ ಕುಮಾರ್ ಮೇನಾಲ ಓರ್ವ ಅಜಾತಶತ್ರು. ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ ಎಂದು ಸುಳ್ಯದ ಬಿಜೆಪಿ ಮುಂದಾಳುಗಳು ಹೇಳಿದ್ದಾರೆ. ಮೆ.18ರಂದು‌ ದುರಂತಕ್ಕೀಡಾಗಿ ನಿಧನರಾದ ಬಿಜೆಪಿ‌ ಧುರೀಣ ‌ನವೀನ್ ರೈ ಮೇನಾಲರಿಗೆ ಸೋಮವಾರ ಬಿಜೆಪಿ ಮಂಡಲ ಸಮಿತಿ ವತಿಯಿಂದ ಶ್ರದ್ಧಾಂಜಲಿ ಹಾಗೂ ಕಾರ್ಯಕ್ರಮದಲ್ಲಿ...
Ad Widget

♦️”ಸ್ವಾರ್ಥಕೆಯಲ್ಲಿ ಪರಮಾರ್ಥತೆ ಇರಬೇಕು” ಸೂರ್ತಿಲ ರಕ್ತೇಶ್ವರಿ ಕ್ಷೇತ್ರದ ಪ್ರತಿಷ್ಟಾ ಬ್ರಹ್ಮಕಲಶೋತ್ಸದಲ್ಲಿ: ಆರ್.ಕೆ. ನಾಯರ್♦️

ಸುಳ್ಯ: ಸ್ವಾರ್ಥತೆಯಲ್ಲಿ ಪರಮಾರ್ಥತೆ ಇರಬೇಕು. ಮನುಷ್ಯತ್ವ ಇದ್ದರೆ ಮಾತ್ರ ಆತ ಮನುಷ್ಯನಾಗುತ್ತಾನೆ. ಆಗ ಜಾತಿ‌, ಧರ್ಮ, ಕುಲ, ಬಣ್ಣಗಳ ಭೇದವಿಲ್ಲದೆ ನದಿ ನೀರುಣಿಸುವಂತೆ ದೇವರು ನಮ್ಮನ್ನು ಕಾಪಾಡುತ್ತಾನೆ. ಸನಾತನ ಹಿಂದೂ ಧರ್ಮ ಈ ನಾಡಿನ ಎಲ್ಲ ಧರ್ಮದವರನ್ನು ಕಾಪಾಡುತ್ತದೆ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಡಾ. ಆರ್. ಕೆ ನಾಯರ್ ಹೇಳಿದರು. ಅವರು ಸೋಮವಾರ...

ಕೊಲ್ಲಮೊಗ್ರ : ಸಾರ್ವಜನಿಕ ಆಸ್ತಿಗೆ ಹಾನಿ, ಕ್ರಮ ಕೈಗೊಳ್ಳಲು ಊರವರ ಒತ್ತಾಯ

ಕೊಲ್ಲಮೊಗ್ರದ ಹಾಲಿನ ಡೈರಿ‌ ಹಾಗೂ ಪಶು ಆಸ್ಪತ್ರೆಯ ತಡೆಗೋಡೆಗೆ ಕಾಂಕ್ರೀಟ್ ಮಿಕ್ಸಿಂಗ್ ವಾಹನ ಗುದ್ದಿದ ಪರಿಣಾಮ ತಡೆಗೋಡೆ ಕುಸಿದ ಘಟನೆ ನಡೆದಿದೆ.‌ ಈ ಹಿಂದೆ ರಸ್ತೆ ಕಾಮಗಾರಿ ನಡೆಸಲು ಬಂದ ಮಿಲನ್ ಸಂಸ್ಥೆ ಗೆ ಸೇರಿದ ಅಜೆಕ್ಸ್ ವಾಹನವು ತಡೆಗೋಡೆಗೆ ಗುದ್ದಿ ಎರಡು ಕಡೆ ಹಾನಿಗೊಳಿಸಿದ್ದರೆನ್ನಲಾಗಿದ್ದು, ಇದನ್ನು ಗ್ರಾಮಸ್ಥರು ಹಲವು ಸಲ ಪ್ರಶ್ನಿಸಿದ್ದರೂ ಯಾವುದೇ ರೀತಿಯ...

ವಳಲಂಬೆ : ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಬ್ಯಾನರ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ನೂತನ ಮುಖ್ಯಮಂತ್ರಿಯಾಗಿ ವಹಿಸಿಕೊಂಡ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದಿಸಿ ಹಾಕಲಾಗಿದ್ದ ಬ್ಯಾನರ್ ಗೆ ಬೆಂಕಿ ಹಾಕಿದ ಘಟನೆ ವಳಲಂಬೆಯಲ್ಲಿ ನಡೆದಿದೆ.ಮೇ.20 ರಂದು ವಳಲಂಬೆ ಹಾಗೂ ಪೈಕ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಬ್ಯಾನರ್ ಗೆ ಅಂದೇ ರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ.‌ ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾಧಿಕಾರಿ ಹಾಗೂ ಪೊಲೀಸರು ಭೇಟಿ ನೀಡಿ...

♻️ಪ್ರಮಾಣ ವಚನ: ಸುಳ್ಯದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ♻️

ಸುಳ್ಯ:ಕರ್ನಾಟಕದಲ್ಲಿ ಕಾಂಗ್ರೆಸ್ ನೂತನ ಸರಕಾರ ರಚಿಸಿ, ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಮತ್ತಿತರ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸುಳ್ಯ ಬಸ್ ನಿಲ್ದಾಣದ ಬಳಿ ಸಂಭ್ರಮಾಚರಣೆ ಆಚರಿಸಿದರು. ಸುಳ್ಯ ಬಸ್ ನಿಲ್ದಾಣದ ಬಳಿ ಅಳವಡಿಸಲಾದ ಎಲ್‌ಸಿಡಿ ಪರದೆಯಲ್ಲಿ ಪ್ರಮಾಣವಚನದ ನೇರ ಪ್ರಸಾರವನ್ನು ವೀಕ್ಷಿಸಿದ ಕಾರ್ಯಕರ್ತರುಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆ...

ಕುಕ್ಕುಜಡ್ಕ: ತಂದೆ ಮಗನ ಹೊಡೆದಾಟ ತಂದೆ ಮೃತ್ಯು

ಅಮರ ಮುಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿ ತಂದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ. ಕಿಟ್ಟುರವರ ಮೊದಲನೆ ಹೆಂಡತಿಯ ಮಗ ಹರ್ಷಿತ್ ಎಂಬಾತನು ಮನೆಗೆ ಬಂದು ಅಡಿಕೆ ಮರದ ಸಲಾಕೆಯಿಂದ ತಂದೆಗೆ ಹೊಡೆದಿದ್ದರು. ಗಾಯಗೊಂಡಿದ್ದ ಕಿಟ್ಟುರವರನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಹೆಚ್ಚಿನ...

2,000 ರೂ. ನೋಟನ್ನು ಸ್ಥಗಿತಗೊಳಿಸಿದ ಆರ್ ಬಿಐ

2000 ರೂಪಾಯಿ ಮುಖಬೆಲೆಯ ನೋಟನ್ನು ಹಿಂತೆಗೆದುಕೊಂಡು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲಾ ಬ್ಯಾಂಕುಗಳಲ್ಲಿ ಸೆಪ್ಟೆಂಬರ್ 30, 2023 ರೊಳಗೆ ರೂ. 2000 ಮುಖಬೆಲೆಯ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು. ಮೇ 23 ರಿಂದ ನೋಟು ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್...

ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಶಾಸಕಿ ಭಾಗೀರಥಿ ಭೇಟಿ

ಸುಳ್ಯ: ಪುತ್ತೂರಿನಲ್ಲಿ ಅವಮಾನಕರ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮೇ.19ರಂದು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ನೀಡಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿ ಅವರು ಹಿಂದೂ ಯುವಕರ ಮೇಲೆ ಈ ರೀತಿ ದೌರ್ಜನ್ಯ ನಡೆದಿರುವುದು ಖಂಡನೀಯ. ಸರಕಾರ ಬದಲಾಗಿ...

ಸಂಶುದ್ದೀನ್ ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ ಬೆಂಗಳೂರಿನಲ್ಲಿ ಆರೋಪಿಗಳ ಬಂಧನ

ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ದೀನ್ ರವರ ಮನೆಗೆ ಮೇ. 3 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬೆಂಗಳೂರು ಗೋವಿಂದರಾಜನಗರ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಕಳ್ಳತನ ಮಾಡಿದ ಚಿನ್ನವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ, ಸಂಶಯಗೊಂಡ ಚಿನ್ನದಂಗಡಿಯವರು ಪೋಲೀಸರಿಗೆ ಮಾಹಿತಿ ನೀಡಿದರೆನ್ನಲಾಗಿದೆ....
Loading posts...

All posts loaded

No more posts

error: Content is protected !!