ಸುಳ್ಯ : ರಂಗೇರುತ್ತಿದೆ ಚುನಾವಣಾ ಕಾವು

224 ಸದಸ್ಯ ಬಲವಿರುವ 16ನೇ ಕರ್ನಾಟಕ ರಾಜ್ಯ ವಿಧಾನಸಭೆಯ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುತ್ತಿದ್ದು, ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ.ಮೀಸಲು ಕ್ಷೇತ್ರವಾದ ನಮ್ಮ ಸುಳ್ಯ ತಾಲೂಕಿನಲ್ಲಿ ಕೂಡ ಚುನಾವಣಾ ಕಾವು ರಂಗೇರುತ್ತಿದ್ದು, ಈ ಬಾರಿ ಸುಳ್ಯ ತಾಲೂಕಿನಲ್ಲಿ ಬಿ.ಜೆ.ಪಿ ಯಿಂದ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ನಿಂದ ಜಿ.ಕೃಷ್ಣಪ್ಪ,...

ಅರಂತೋಡು : ಬಿರುಸಿನ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರ ಪರವಾಗಿ ಚುನಾವಣಾ ಪ್ರಚಾರ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಅರಂತೋಡಿನಲ್ಲಿ ನಡೆಯಿತು .ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ,ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ್,ಕೆಪಿಸಿಸಿ ವಕ್ತಾರ ಟಿ.ಎಮ್.ಶಹೀದ್ ತೆಕ್ಕಿಲ್, ಸುಳ್ಯ ವಿಧಾನಸಭಾ ಚುನಾವಣಾ ಉಸ್ತುವಾರಿ ವೆಂಕಪ್ಪ...
Ad Widget

ಐನೆಕಿದು : ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಅವರಿಂದ ಮತಯಾಚನೆ

ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಅವರು ಐನೆಕಿದು ಗ್ರಾಮದಲ್ಲಿ ಮೇ.3 ರಂದು ಮತಯಾಚನೆ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ವಿನಯ್ ಮುಳುಗಾಡು, ವಾಡ್ಯಪ್ಪ ಗೌಡ ಎರ್ಮೈಲ್, ಶಿವಪ್ರಸಾದ್ ನಡ್ತೋಟು, ಕಿಶೋರ್ ಕುಮಾರ್ ಕೂಜುಗೋಡು, ಮಧುಸೂದನ್ ಕೊಂಬಾರು ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು...

ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಪ್ರಣಾಳಿಕೆಯ ಎಲ್ಲಾ ಯೋಜನೆಗಳ ಜಾರಿ ನಿಶ್ಚಿತ- ಭರತ್ ಮುಂಡೊಡಿ

ಈ ಬಾರಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೆ ಕೃಷಿಕರಿಗೆ, ಯುವಕರಿಗೆ, ಅಸಂಘಟಿತ ಕಾರ್ಮಿಕರಿಗೆ ಹಾಗೂ ಎಲ್ಲಾ ವರ್ಗಗಗಳ ಜನತೆಯ ಅಭಿವೃದ್ಧಿಗಾಗಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಕೆಪಿಸಿಸಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದರು.ಇಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ವಿವರಣೆಯನ್ನು ನೀಡಿದರು.ಭ್ರಷ್ಟಾಚಾರ ಕಾಯ್ದೆಗೆ ಕಠಿಣ ನಿಯಮ ಹಾಗೂ ಲೋಕಾಯುಕ್ತ ಬಲವರ್ಧನೆಗೆ...

ಸಂಪಾಜೆ : ಕಾಂಗ್ರೆಸ್ ಭದ್ರಕೋಟೆಯಲ್ಲಿ ಅಭ್ಯರ್ಥಿ ಜಿ. ಕೃಷ್ಣಪ್ಪ ಮತಯಾಚನೆ

ಕಾಂಗ್ರೆಸ್ ನ ಭದ್ರಕೋಟೆಯಾಗಿರುವ ಸಂಪಾಜೆಯಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಬಿರುಸಿನ ಪ್ರಚಾರ ನಡೆಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಜತೆ ಸಂಪಾಜೆ ಭಾಗದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು.

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 (EPL2023)ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ ದಿನಾಂಕ30-04-2023ರಂದು ಕೆ.ವಿ.ಜಿ. ಆಟದ ಮೈದಾನದಲ್ಲಿ ನಡೆಯಿತು. ರಂಜಿತ್ ಎನ್.ಆರ್. ಇನ್ಫೋಸಿಸ್ ಉದ್ಯೋಗಿ ಹಾಗೂ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಹಳೆವಿದ್ಯಾರ್ಥಿ ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ಕಠಿಣ ಪರಿಶ್ರಮ, ಶಿಸ್ತು, ಶ್ರದ್ಧೆ ಇವೇ ಮುಂತಾದವುಗಳನ್ನು ಒಳಗೊಂಡ ಅಧ್ಯಯನವು...

ಕಾಂಗ್ರೆಸ್ ಪ್ರಣಾಳಿಕೆ: ಭಜರಂಗದಳ ನಿಷೇಧ ಉಲ್ಲೇಖ – ಸುಳ್ಯ ಭಜರಂಗದಳ, ವಿ.ಹಿಂ.ಪ ಖಂಡನೆ

ಕಾಂಗ್ರೆಸ್ ಪಕ್ಷವು ಮೇ.2ರಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ಸಂಘಟನೆ ನಿಷೇಧಿಸುವ ಉಲ್ಲೇಖವನ್ನು ಮಾಡಿದೆ. ಇದನ್ನು ಸುಳ್ಯ ಭಜರಂಗದಳ ಸಂಚಾಲಕ ಹರಿಪ್ರಸಾದ್ ಎಲಿಮಲೆ ಹಾಗೂ ವಿಶ್ವ ಹಿಂದೂ ಪರಿಷತ್ ಸಹಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ ಖಂಡಿಸಿದ್ದಾರೆ. ಲಿಖಿತ‌ ಹೇಳಿಕೆ ನೀಡಿರುವ ಅವರು ರಾಷ್ಟ್ರ ವಿರೋಧಿ ಶಕ್ತಿಗಳನ್ನು ಓಲೈಸುವ ಭರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು...

ಸುಳ್ಯದ ಅಭಿವೃದ್ಧಿಗೆ ಆಪ್ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಬೆಂಬಲಿಸಿ: ಬೆಳ್ಳಾರ್ಕರ್ ಗೆಳೆಯರ ಬಳಗದಿಂದ ಮನವಿ

ಸುಳ್ಯ ನಗರ ಅಭಿವೃದ್ಧಿಗೊಂಡಿದ್ದರೂ ಗ್ರಾಮೀಣ ಭಾಗದ ಜನರ ಜೀವನ ಇನ್ನೂ ದುಸ್ತರದಲ್ಲಿಯೇ ಇದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ, ಜನಪರ ಕಾಳಜಿಯುಳ್ಳ ಸುಮನಾ ಬೆಳ್ಳಾರ್ಕರ್ ಅವರನ್ನು ಚುನಾವಣೆಯಲ್ಲಿ ಬೆಂಬಲಿಸಬೇಕು ಎಂದು ಸುಮನಾ ಬೆಳ್ಳಾರ್ಕರ್ ಅವರ ಗೆಳೆಯರ ಬಳಗ ಮನವಿ ಮಾಡಿಕೊಂಡರು.ಮೆ.೧ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಪ್ರದೀಪ್ ತುಂಕೂರು ಕಳೆದ ೧೫-೨೦...

ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಪರವಾಗಿ ಬಿ. ಕೆ. ಹರಿಪ್ರಸಾದ್ ಬಿರುಸಿನ ಪ್ರಚಾರ

ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ರವರು ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಭೇಟಿ ನೀಡಿ ಐವರ್ನಾಡು ನಿಡುಬೆ ಸಿಆರ್ ಸಿ ಕಾಲೋನಿಗೆ ಭೇಟಿ ನೀಡಿ ಮತದಾರರನ್ನು ಭೇಟಿಯಾದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾo, ಕೆಪಿಸಿಸಿ ಮಾಧ್ಯಮ ವಕ್ತಾರ ಟಿ. ಎಂ....

ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಸರಕಾರದಿಂದ ವಿಶೇಷ ಪ್ಯಾಕೇಜ್: ಟಿ.ಎಂ.ಶಹೀದ್

ಈ ಬಾರಿಯ ವಿಧಾನಸಭಾ ಚುನಾವಣೆಯಲಿ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಂಡಿತ. ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಸುಳ್ಯಕ್ಕೆ ವಿಶೇಷ ಪ್ಯಾಕೇಜ್ ತಂದು ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಎಂ.ಶಹೀದ್‌ರವರು ಮೆ.೧ರಂದು ಪತ್ರಿಕಾಗೋಷ್ಠಿ ನಡೆಸಿ ಹೇಳಿದರು. ರೂ.20 ಕೋಟಿ ಅನುದಾನದಲ್ಲಿ ಅರಂತೋಡು - ತೊಡಿಕಾನದ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದ...
Loading posts...

All posts loaded

No more posts

error: Content is protected !!