- Saturday
- August 1st, 2026
ಸುಳ್ಯ : ರಸ್ತೆ ಇಕ್ಕೆಲಗಳನ್ನು ಅಗೆದು ಸರಿಪಡಿಸದೇ ಅಪಘಾತಕ್ಕೆ ಆಹ್ವಾನ – ವಾರದೊಳಗೆ ಸರಿಪಡಿಸಲು ಡಿ.ಎಂ.ಶಾರೀಖ್ ಒತ್ತಾಯ
ಅಮೃತ್ 2.0 ಯೋಜನೆ ಪ್ರಕಾರ ಕುಡಿಯುವ ನೀರಿನ ಪೈಪ್ ಅಳವಡಿಸಲು ರಾಷ್ಟ್ರೀಯ ಹೆದ್ದಾರಿ 275 ರ ಇಕ್ಕೆಲಗಳಲ್ಲಿ ಅಗೆದಿದ್ದು, ಜನ, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಆದುದರಿಂದ ಕೂಡಲೇ ಸಂಬಂಧಪಟ್ಟ ಇಲಾಖೆ(KUWS) ನವರು ಒಂದು ವಾರದೊಳಗೆ ಡಾಮರೀಕರಣಗೊಳಿಸಬೇಕು. ಇಲ್ಲದಿದ್ದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ದೂರು ದಾಖಲಿಸಲಾಗುವುದು ಎಂಬುದಾಗಿ...
ಮಡಪ್ಪಾಡಿ ಗ್ರಾಮದ ಬಲ್ಕಜೆ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ 26 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ, ಇದೀಗ ವರ್ಗಾವಣೆ ಗೊಳ್ಳುತ್ತಿರುವ ಬೆಳ್ಯಪ್ಪ ಗೌಡ.ಜೆ ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಏ.19ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಇಂದ್ರಪ್ರಸಾದ್ ಕೇವಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮಡಪ್ಪಾಡಿ...
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಪರ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಫಾತಿಮಾತ್ ಶಹ್ಲಾ ರನ್ನು ಕರ್ನಾಟಕ ರಾಜ್ಯದ...
ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಕಮಿಲ-ಬಳ್ಪ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, “ಎಲೆಕ್ಷನ್ ಮತ್ತು ಕಲೆಕ್ಷನ್ ನವರಿಗೆ ಕಡ್ಡಾಯವಾಗಿ ಒಳಗೆ ಪ್ರವೇಶವಿಲ್ಲ. ಕಚ್ಚುವ ನಾಯಿಗಳಿವೆ ಜಾಗ್ರತೆ!” ಎಂದು ಈ ಬ್ಯಾನರ್ ನಲ್ಲಿ ಬರೆಯಲಾಗಿದೆ. ಗುತ್ತಿಗಾರಿನ ಲಕ್ಷ್ಮಣ ದೇವಶ್ಯ ಎಂಬುವವರು ತಮ್ಮ ಮನೆಯ ಸಮೀಪ ಈ ಬ್ಯಾನರ್ ಅನ್ನು...
ಸುಳ್ಯಸೀಮೆ ಮಹತೋಭಾರ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪೂರ್ವಸಂಪ್ರದಾಯದಂತೆ ಕಾಲಾವಧಿ ಜಾತ್ರೆಯು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಭಕ್ತಿಸಡಗರದೊಂದಿಗೆ ನಡೆಯುತ್ತಿದ್ದು, ಎ.17ರಂದು ಬೆಳಿಗ್ಗೆ ಶ್ರೀ ದೇವರ ಉತ್ಸವ ಬಲಿ, ಮಧ್ಯಾಹ್ನ ಪಯ್ಯೋಳಿ, ರಾತ್ರಿ ದೊಡ್ಡಬೆಳಗು ಉತ್ಸವ ನಡೆಯಿತು.ಎ.18ರಂದು ಬೆಳಿಗ್ಗೆ ಶ್ರೀದೇವರ ದೊಡ್ಡ ದರ್ಶನಬಲಿ, ಬಟ್ಟಲುಕಾಣಿಕೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ದೇವರ ವಾಲಸಿರಿ ಉತ್ಸವ ಜರುಗಲಿದೆ. ಎ.19ರಂದು...
ಉಬರಡ್ಕ ಮಿತ್ತೂರು ಗ್ರಾಮದ ಸೂಂತೋಡು ನಿವಾಸಿ ಅಪ್ಪಯ್ಯ ಸೂಂತೋಡು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ ಸುಮಾರು 55 ವರ್ಷ ವಯಸ್ಸಾಗಿತ್ತು ಮೃತರು ಪತ್ನಿ ಉಬರಡ್ಕ ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ಪುತ್ರಿಯರಾದ ಅನನ್ಯ ಹಾಗೂ ಅನ್ವಿತಾರನ್ನು ಅಗಲಿದ್ದಾರೆ.
ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ, ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಎಲ್ಲಾ ಘಟಕಗಳ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಮತ್ತು ಗ್ಯಾಸ್ ಸಮಸ್ಯೆ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ಸುಳ್ಯದ...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀ ದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು ಸುಳ್ಯ ಶಾಖೆ” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಮಾರುಕಟ್ಟೆ ಧಾರಣೆಯ ವಿವರವನ್ನು ಪಡೆದುಕೊಂಡು ನಮ್ಮ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಿದ್ದು, ಈ ವಾರ ಏ.13 ಸೋಮವಾರದಿಂದ ಏ.18 ಶನಿವಾರದವರೆಗೆ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ...
ಹತ್ತೂರ ಒಡೆಯ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ವರ್ಷಾವಧಿ ಜಾತ್ರೋತ್ಸವವು ಭಕ್ತಿ ವಿಜೃಂಭಣೆಯಿಂದ ಜರುಗುತ್ತಿದ್ದು, ಎ.17ರಂದು ರಾತ್ರಿ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಹಾಗೂ ಪುತ್ತೂರು ಬೆಡಿ ಉತ್ಸವವು ಸೇರಿದ ಅಪಾರ ಮಂದಿ ಭಕ್ತವೃಂದದ ಸಮ್ಮುಖದಲ್ಲಿ ನೆರವೇರಿತು.ಎ.17ರಂದು ಬೆಳಿಗ್ಗೆ ಉತ್ಸವ ಬಲಿ, ವಸಂತಕಟ್ಟೆಪೂಜೆ, ದೇವರ ದರ್ಶನಬಲಿ, ಬಟ್ಟಲುಕಾಣಿಕೆ ನಡೆಯಿತು. ಮಧ್ಯಾಹ್ನ ಬ್ರಹ್ಮರಥದ ದಾನಿ ದಿ.ನೆಟ್ಟಾಳ...
ದಿನಾಂಕ : 18 ಏಪ್ರಿಲ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-477/480ಹಳೆ ಅಡಿಕೆ...
Loading posts...
All posts loaded
No more posts
