- Monday
- August 24th, 2026
ಗಡಿಕಲ್ಲು : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲ ಉತ್ಸವ ಸಂಪನ್ನ ಕೊಲ್ಲಮೊಗ್ರ ಗ್ರಾಮದ ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಸೆ.15 ಮತ್ತು ಸೆ.16 ರಂದು ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಉತ್ಸವ ನಡೆಯಿತು. ಸೆ.15 ರಂದು ಪ್ರಾತಃಕಾಲ ಅಗ್ನಿಕುಂಡ ಜೋಡಣೆ ಪ್ರಾರಂಭ, ಬೆಳಿಗ್ಗೆ ಗಣಪತಿ ಹೋಮ, ಉಗ್ರಾಣ ಮುಹೂರ್ತ, ಮದ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು....
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ ಹಾಗೂ ಎಂ.ಟೆಕ್. ಸ್ನಾತಕೋತ್ತರ ಪದವಿಯ ಮೊದಲನೆಯ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ.ಸಿ.ಇ. ಸಂಸ್ಥೆಯ ಸಭಾಂಗಣದಲ್ಲಿ ಫೆ.15ರಂದು ನಡೆಯಿತು.ಎಂ.ಬಿ.ಎ. ವಿದ್ಯಾರ್ಥಿನಿಯರಾದ ಕು. ಅನುಷಲಕ್ಷ್ಮಿ ಮತ್ತು ಕು. ದೀಕ್ಷ ಎಸ್. ಪ್ರಾರ್ಥನೆ ಮಾಡುವುದರೊಂದಿಗೆ ಆರಂಭವಾದ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯ ಅತಿಥಿಯರಾದ ಕಮಿಲ ಕೆಮಿಕಲ್ ಸಂಸ್ಥೆಯ ಮಾಲಕರಾದ ಶ್ರೀ ಕೆ.ವಿ. ಸುರೇಶ್ಚಂದ್ರ ಇವರು...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗುತ್ತಿದ್ದು, ಇಂದು (ಫೆ.17) ಬೆಳಿಗ್ಗೆ ಕವಾಟೋದ್ಘಾಟನೆ, ತೈಲಾಭ್ಯಂಜನ, ಉಷಾಃಪೂಜೆ, ಆರಾಟುಬಲಿ ನಂತರ ಅವಭೃತ ಸ್ನಾನ ನಡೆಯಿತು. ಬಳಿಕ ಶ್ರೀದೇವರ ದರ್ಶನ ಬಲಿ, ರಾಜಾಂಗಣ ಪ್ರಸಾದ, ಬಟ್ಟಲುಕಾಣಿಕೆ, ಧ್ವಜ ಅವರೋಹಣ ,ಸಂಪ್ರೋಕ್ಷಣೆ, ಮಹಾಪೂಜೆ, ಮಂತ್ರಾಕ್ಷತೆ,...
ಕಸಾಪ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಯ್ಕೆ - ಡಾ. ಮುರಳೀಮೋಹನ ಚೂಂತಾರು ಅವರ ಕೃತಿ ಆಯ್ಕೆ ಕನ್ನಡ ಸಾಹಿತ್ಯ ಪರಿಷತ್ತು 2021ನೇ ಸಾಲಿನ ವಿವಿಧ ದತ್ತಿಗಾಗಿ 49 ವಿಭಾಗಕ್ಕೆ 53ಕೃತಿಗಳ ಆಯ್ಕೆ ಮಾಡಲಾಗಿದೆ. ಸುಳ್ಯದ ಹಿರಿಯ. ಸಾಹಿತಿ ಡಾ.ಚಂದ್ರಶೇಖರ ದಾಮ್ಲೆ, ಲೇಖಕಿ ಸ್ಮಿತಾ ಅಮೃತರಾಜ್ ಸಂಪಾಜೆ ಹಾಗು ಡಾ. ಮುರಳೀಮೋಹನ ಚೂಂತಾರು ಅವರ ಕೃತಿಗಳು...
ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.13ರಂದು ಆರಂಭಗೊಂಡಿದ್ದು ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಫೆ.16ರಂದು ಬೆಳಗ್ಗೆ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಬಲಿ ಹೊರಟು...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13ರಂದು ಆರಂಭಗೊಂಡಿದ್ದು, ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು (ಫೆ.16ರಂದು) ಬೆಳಿಗ್ಗೆ ಗಣಪತಿ ಹವನ, ಉಷಾಃಪೂಜೆ, ಶಿವೇಲಿ, ನವಕ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಶಿವೇಲಿ, ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ...
ಚಿರಾಯು ಆರ್ಟ್ಸ್ &ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಪ್ರವೀಣ್ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ಮನೋಜ್ ದೇವ, ಕಾರ್ಯದರ್ಶಿ ಯಾಗಿ ಶಿವರಾಜ್, ಸಂಘಟನಾ ಕಾರ್ಯದರ್ಶಿಯಾಗಿ ರಿಯಾಜ್ ಮಾವಿನಕಟ್ಟೆ ಇವರುಗಳು ಆಯ್ಕೆಯಾಗಿರುತ್ತಾರೆ. ಈ ಸಂದರ್ಭದಲ್ಲಿ ಕ್ಲಬ್ ನ ಗೌರವ ಸಲಹೆಗಾರರಾದ ಶೈಲೇಶ್ ಅಂಬೆಕಲ್ಲು, ದುರ್ಗಾದಾಸ್ ಮೆತ್ತಡ್ಕ, ರಾಜೇಶ್ ಅಂಬೆಕಲ್ಲು ಹಾಗೂ ಎಲ್ಲಾ...
ಚಾಲೆಂಜಿಂಗ್ ಸ್ಟಾರ್ ತೂಗುದೀಪ ದರ್ಶನ್ ಅವರ ಹುಟ್ಟು ಹಬ್ಬದ ಅಂಗವಾಗಿ ಸುಳ್ಯ ತಾಲೂಕು ಅಮರ ಮುಡ್ನೂರು ಗ್ರಾಮದ ಸಂಕೇಶ ಇಲ್ಲಿಯ "ಡಿ ಬಾಸ್ ಗಜಪಡೆ ಸಂಕೇಶ " ಅಭಿಮಾನಿ ಬಳಗದ ವತಿಯಿಂದ ಕುಕ್ಕುಜಡ್ಕ ಅಂಗನವಾಡಿ ಮಕ್ಕಳಿಗೆ ಪುಸ್ತಕ ಮತ್ತು ಪೆನ್ಸಿಲ್ ಅನ್ನು ನೀಡಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿಯಾದ ಚಂದ್ರಾವತಿ, ಅಂಗನವಾಡಿ...
ದೇವಚಳ್ಳ ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಸಾದ್ ನೇತ್ರಾಲಯ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಫೆ.19 ರಂದು ಉಚಿತ ನೇತ್ರ ತಪಾಸಣಾ ಶಿಬಿರ ದೇವಚಳ್ಳ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪೂ.9 ರಿಂದ ಮಧ್ಯಾಹ್ನ 1 ರತನಕ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಶೈಲೇಶ್ ಅಂಬೆಕಲ್ಲು 9448164618 ಇವರನ್ನು ಸಂಪರ್ಕಿಸಬಹುದು.
Loading posts...
All posts loaded
No more posts
