- Monday
- August 24th, 2026
ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಇಂದು(ಫೆ.13) ಆರಂಭಗೊಂಡಿದ್ದು ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು ರಾತ್ರಿ ಧ್ವಜಾರೋಹಣ ನಡೆಯಿತು. ನಂತರ ಬಲಿ ಹೊರಟು ಉತ್ಸವ, ಶ್ರೀ...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಇಂದು (ಫೆ.13) ಆರಂಭಗೊಂಡಿದ್ದು, ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು ದೇವಸ್ಥಾನದಲ್ಲಿ ಬೆಳಿಗ್ಗೆ ಉಗ್ರಾಣ ಮುಹೂರ್ತ, ಸಂಜೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ ನಡೆಯಿತು. ರಾತ್ರಿ ಧ್ವಜಾರೋಹಣದ ಮೂಲಕ...
ಫೆ.21ರಂದು ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಪೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಜಬಳೆ, ಡಿಪೋ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ, ಅರಂತೋಡು, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10.00 ರಿಂದ ಸಾಯಂಕಾಲ 6.00 ರ ತನಕ ವಿದ್ಯುತ್...
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವ ನಡೆಯುತ್ತಿದ್ದು, ಇಂದು (ಫೆ.13ರಂದು) ಬೆಳಗ್ಗೆ ದೇವಾಲಯದಲ್ಲಿ ಗಣಪತಿ ಹವನ, ಬೆಳಗಿನ ಪೂಜೆ ನೆರವೇರಿತು. ಬಳಿಕ ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಶ್ರೀ ದೇವರ ಗಂಧಪ್ರಸಾದ ವಿತರಣೆ, ಬಟ್ಟಲು ಕಾಣಿಕೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ....
ವಿಶ್ವ ಹಿಂದೂ ಪರಿಷತ್ ಭಜರಂಗದಳ, ದುರ್ಗಾವಾಹಿನಿ ಸುಳ್ಯ ಪ್ರಖಂಡದ ವತಿಯಿಂದ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ರಕ್ತನಿಧಿ ಘಟಕ, ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆ ಇವರ ಸಹಯೋಗದಲ್ಲಿ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು...
ಸುಳ್ಯ ಗಾಂಧಿನಗರದಲ್ಲಿರುವ ನಾವೂರು ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ಶ್ರೀ ಕಲ್ಕುಡ ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ನೇಮೋತ್ಸವವು ಫೆ.12ರಂದು ನಡೆಯಿತು. ಮುಂಜಾನೆ ಕಲ್ಕುಡ ಮತ್ತು ಕಲ್ಲುರ್ಟಿ ದೈವದ ಕೋಲವು ನಡೆದು ನೆರೆದ ಸಾವಿರಾರು ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಯಿತು. ಬಳಿಕ ಗುಳಿಗ ದೈವದ ಕೋಲ ನಡೆಯಿತು. ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆಯು...
ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಫೆ.18ರಿಂದ ಫೆ.20ರವರೆಗೆ ನಡೆಯಲಿದ್ದು, ಈ ಪ್ರಯುಕ್ತ ಫೆ.12ರಂದು ಗೊನೆ ಮುಹೂರ್ತ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್, ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಗಿರಿಧರ ಗೌಡ ವಿನೋಬನಗರ,...
ವೈದ್ಯಕೀಯ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಸೇವೆಯನ್ನು ನೀಡಬೇಕು. ಯಾರಿಗೆ ಸೇವೆಯ ಅಗತ್ಯವಿದೆಯೋ ಅಂತವರಿಗೆ ನಗು ನಗುತ್ತಾ ಸೇವೆ ನೀಡುವುದು ವೈದ್ಯರ ಕರ್ತವ್ಯ. ನೀವೆಲ್ಲರೂ ಉತ್ತಮ ಸೇವೆ ನೀಡುವುದರ ಮೂಲಕ ನಿಮಗೂ, ನಿಮ್ಮ ಹೆತ್ತವರಿಗೂ ಮತ್ತು ವಿದ್ಯಾರ್ಜನೆ ಮಾಡಿದ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್. ಕೆ.ವಿ...
ಪ್ರಥಮ ವರ್ಷದ ಐವರ್ನಾಡು ಗೌಡ ಕುಟುಂಬ ಕ್ರಿಕೆಟ್ ಪಂದ್ಯಾವಳಿಯು ಇಂದು ನಡೆದಿದ್ದು, ಪಂದ್ಯಾವಳಿಯ ಪ್ರಥಮ ಸ್ಥಾನವನ್ನು ನಿಡುಬೆ ಪೂಜಾರಿಮನೆ ತಂಡವು ಪಡೆದುಕೊಂಡಿದೆ.
ಬಂಗ್ಲೆಗುಡ್ಡೆ : ಶ್ರಮದಾನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಲ್ಲಮೊಗ್ರ ಎ ಒಕ್ಕೂಟದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆಯಲ್ಲಿ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್, ಸುಬ್ರಹ್ಮಣ್ಯ ವಲಯಾಧ್ಯಕ್ಷರು ಹಾಗೂ ಕೊಲ್ಲಮೊಗ್ರ ಎ ಒಕ್ಕೂಟದ ಅಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ, ವಲಯ...
Loading posts...
All posts loaded
No more posts
